Homeಮುಖಪುಟಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನವಿಂದು!

ಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನವಿಂದು!

ಎರಡು ದಿನ ಮುಂಚೆ ಇಟಲಿಯ ಸರ್ವಾಧಿಕಾರಿ ಮುಸ್ಸಲೋನಿಯನ್ನು ಕೊಂದು ತಲೆಕೆಳಗಾಗಿ ನೇತುಹಾಕಿ ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು.

- Advertisement -
- Advertisement -

ಎಪ್ಪತ್ತೈದು ವರ್ಷಗಳ ಹಿಂದೆ,  1945 ಏಪ್ರಿಲ್ 30 ರ ಇದೇ ದಿನ ಜಗತ್ತನ್ನೇ ಕಾಡಿದ್ದ ಸರ್ವಾಧಿಕಾರಿ, ನಾಝಿ ದಂಡ ನಾಯಕ ಅಡಾಲ್ಫ್‌ ಹಿಟ್ಲರ್‌ ತನ್ನ ಪತ್ನಿ ಇವಾ ಬ್ರಾನ್‌‌ನೊಂದಿಗೆ ಮಧ್ಯಾಹ್ನ 3:15 ರ ಹೊತ್ತಿಗೆ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಮೂಲಕ ವಿಶ್ವದಾದ್ಯಂತ ಹರಡಿದ್ದ ಎರಡನೆ ವಿಶ್ವ ಯುದ್ದದ ಕರಾಳ ಛಾಯೆಯೊಂದು ಮುಗಿದ ದಿನವಿಂದು.

ತನ್ನ ಆತ್ಮಹತ್ಯೆಗಿಂತಲೂ ಮುಂಚೆ ಅಡಾಲ್ಫ್ ಹಿಟ್ಲರ್ ತನ್ನ ಪತ್ನಿ ಇವಾ ಬ್ರಾನ್‌ನೊಂದಿಗೆ ಭೂಗತ ಬಂಕರ್‌ವೊಂದಕ್ಕೆ ತೆರಳಿದ್ದ. ಅದಕ್ಕಿಂತ ಮುಂಚೆಯೆ ಅವನು ತನ್ನ ಸೇವಕರಿಗೆ ವಿದಾಯ ಹೇಳಿ ತನ್ನ ನಾಯಿಗೆ ವಿಷ ಕೊಟ್ಟಿದ್ದ. ಭೂಗತ ಬಂಕರ್‌ಗೆ ತೆರಳುವ ಮುಂಚೆ ಅವನ ಬಳಿ ಪಿಸ್ತೂಲ್ ಮತ್ತು ಇವಾ ಬ್ರಾನ್ ಬಳಿ ಸೈನೈಡ್ ಇತ್ತು. ಅವರಿಬ್ಬರು ಮದುವೆಯಾಗಿ ಕೇವಲ ಒಂದುವರೆ ದಿನವಷ್ಟೇ ಆಗಿತ್ತು.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಆತ್ಮಹತ್ಯೆ ಮಾಡಿದ ದಿನ ಹಿಟ್ಲರ್‌ ನಾಝಿ ಸಮವಸ್ತ್ರವಾದ ಜಾಕೆಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದ. ಇವಾ ಬ್ರಾನ್ ಬಿಳಿ ಬಣ್ಣದಲ್ಲಿ ಟ್ರಿಮ್ ಮಾಡಿದ ನೀಲಿ ಉಡುಪನ್ನು ಧರಿಸಿದ್ದಳು. ಸಾಯುವ ಹೊತ್ತಿಗೆ ಹಿಟ್ಲರ್‌ ವಯಸ್ಸು 56 ಹಾಗೂ ಪತ್ನಿಯ ವಯಸ್ಸು 33.

ಮಧ್ಯಾಹ್ನ 3:15 , ಏಪ್ರಿಲ್ 30, 1945 ರ ಗುರುವಾರ.

ಬರ್ಲಿನ್‌ ಅನ್ನು ನೆಲಸಮ ಮಾಡಿದ ರಷ್ಯಾದ ಪಿರಂಗಿದಳವು ಆರು ವರ್ಷಗಳ ಹಿಟ್ಲರ್‌‌ನ ಹತ್ಯಾಕಾಂಡದ ರಕ್ತಸಿಕ್ತ ಅಧ್ಯಾಯವನ್ನು ಮುಗಿಸಿದರು.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಲಕ್ಷಾಂತರ ಜನರ ಹತ್ಯೆಗೆ ಕಾರಣವಾದ, ಇಡೀ ಯುರೋಪ್‌ ಖಂಡವನ್ನು ಎರಡನೆಯ ಮಹಾಯುದ್ಧದಲ್ಲಿ ಮುಳುಗಿಸಿದ, ವಿಶ್ವದಾದ್ಯಂತ ದುಃಖ ಮತ್ತು ವಿನಾಶವನ್ನು ಹರಡಿದ, ತನ್ನನ್ನು ತಾನು ಆರ್ಯ ಜನಾಂಗೀಯ ಎಂದು ಘೋಷಿಸಿದ್ದ, ಜನಾಂಗೀಯವಾದಿ ಕ್ರೂರಿ ವ್ಯಕ್ತಿಯೊಬ್ಬ ಕೊನೆಗೂ ತನ್ನನ್ನು ತಾನೆ ಕೊಂದುಕೊಂಡು ಬಿಟ್ಟಿದ್ದ.

ಮಹಿಳೆ, ಮಕ್ಕಳು ಸೇರಿದಂತೆ ಹಿಟ್ಲರನ ಅಟ್ಟಹಾಸಕ್ಕೆ ಜೀವ ತೆತ್ತಿದ್ದು ಅಮಾಯಕ 60 ಲಕ್ಷ ಜೀವಗಳು!

ಇದಕ್ಕಿಂತಲೂ ಎರಡು ದಿನ ಮುಂಚೆ ಆಸ್ಟ್ರೀಯಾಕ್ಕೆ ಪಲಾಯನಕ್ಕೆ ಹೊರಟಿದ್ದ ಇಟಲಿಯ ಸರ್ವಾಧಿಕಾರಿ ಮುಸ್ಸಲೋನಿ ಮತ್ತು ಆತನ ಪತ್ನಿಯನ್ನು ಕಮ್ಯುನಿಷ್ಟ್‌ ಪಕ್ಷದ ಕಾರ್ಯಕರ್ತರು ಸೆರೆ ಹಿಡಿದಿದ್ದರು. ನಂತರ  ಅವರನ್ನು ಗುಂಡು ಹಾರಿಸಿ ಕೊಲ್ಲಲಾಗಿತ್ತು. ಅವರ ಮೃತದೇಹವನ್ನು ಟ್ರಕ್ ಮೂಲಕ ಇಟಲಿಯ ನಗರವಾದ ಮಿಲನ್‌ಗೆ ಸಾಗಿಸಿ, ಅಲ್ಲಿ ತಲೆಕೆಳಗಾಗಿ ನೇತುಹಾಕಿ ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇತಿಹಾಸ ಮರುಕಳಿಸುವ ದಿನಗಳು ಸಮೀಪಿಸಿವೆ. ಭಾರತ ದೇಶಕ್ಕೆ ರಾಹುವಿನಂತೆ ಅಂಟಿಕೊಂಡಿರುವ ಮೋ(ದಿ)ರಿ ಕಳಂಕವೊಂದು ಇದೇ ರೀತಿಯ ಅಂತ್ಯ ಕಾಣಬೇಕಿದೆ.

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...