Homeಅಂಕಣಗಳುದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ಹಿಟ್ಲರನ ಜರ್ಮನಿಯೂ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಿತ್ತು; ಯಹೂದಿಗಳಿಗೆ ನಾಗರಿಕತೆ ನಿರಾಕರಿಸಿತ್ತು.. ಅದೇ ಈಗ ಭಾರತದಲ್ಲಿಯೂ ನಡೆಯುತ್ತಿದೆ

- Advertisement -
- Advertisement -

ಮುಸ್ಲಿಮರನ್ನು ಬಹುಸಂಖ್ಯಾತ ಹಿಂದೂ ರಾಷ್ಟ್ರದ ಎರಡನೆಯ ದರ್ಜೆಯ ಪ್ರಜೆಗಳನ್ನಾಗಿಸಿ ಸಮಾನತೆಯನ್ನು ನಿರಾಕರಿಸುವುದು ಪೌರತ್ವ ಕಾಯಿದೆ ತಿದ್ದುಪಡಿ ಮತ್ತು ಎನ್‍ಆರ್‌ಸಿಯ ಮೂಲ ಉದ್ದೇಶವಾಗಿತ್ತು. ಈ ಕಾಯಿದೆ ಹತ್ತಾರುಗಳ ಪ್ರಯೋಗ ಆರಂಭವಾಗಿದೆ.

ಸಮಾನತೆ ನಿರಾಕರಿಸುವ ಮತ್ತೊಂದು ಕಾನೂನನ್ನು ಬಿಜೆಪಿ ಆಡಳಿತ ರಾಜ್ಯ ಸರ್ಕಾರಗಳು ಒಂದರ ನಂತರ ಮತ್ತೊಂದರಂತೆ ಜಾರಿಗೆ ತರತೊಡಗಿವೆ. ಮಧ್ಯಪ್ರದೇಶದ ನಂತರ ಮಂಗಳವಾರ ರಾತ್ರಿ ಉತ್ತರಪ್ರದೇಶವೂ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಿತು. ಮುಸಲ್ಮಾನ ಯುವಕರು ಹಿಂದೂ ಯುವತಿಯರನ್ನು ಪ್ರೇಮಪಾಶಕ್ಕೆ ಸಿಲುಕಿಸಿಕೊಂಡು ಮುಸ್ಲಿಮ್ ಧರ್ಮಕ್ಕೆ ಮತಾಂತರಗೊಳಿಸುವರು ಎಂಬ ಆಪಾದನೆಗೆ ಹಿಂದುತ್ವವಾದ ಇರಿಸಿರುವ ಹೆಸರು ‘ಲವ್ ಜಿಹಾದ್’. ಅಂತರಧರ್ಮೀಯ ವಿವಾಹಗಳ ನಿಷೇಧವನ್ನು ಲವ್ ಜಿಹಾದ್ ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ ಎಂಬುದು ಹಿಂದುತ್ವವಾದ ಮಂಡಿಸುವ ವಾದ.

ಆದರೆ ವಾಸ್ತವವಾಗಿ ಅಲ್ಪಸಂಖ್ಯಾತರನ್ನು ಎರಡನೆ ದರ್ಜೆಯ ಪ್ರಜೆಗಳನ್ನಾಗಿಸುವ ಕ್ರಮದ ಮುಂದುವರಿಕೆಯಿದು. ಹಿಟ್ಲರ್ ಸತ್ತಿದ್ದಾನೆ ಎಂದು ಯಾರು ಹೇಳುತ್ತಾರೆ? ಜರ್ಮನಿಯಲ್ಲಿ ದಫನಾದದ್ದು ಅವನ ಭೌತಿಕ ಶರೀರ ಮಾತ್ರ. ಕುಲೀನ ಹಸಿರು ರಕ್ತದ ಆರ್ಯ ಜನಾಂಗೀಯ ಮೇಲ್ಮೆಯನ್ನು ಮತ್ತೆ ಸ್ಥಾಪಿಸುವ ಅವನ ಧೋರಣೆಗಳು ದಫನಾಗಿಲ್ಲ. ಅವು ಗಾಳಿಯಲ್ಲಿ ನೀರಿನಲ್ಲಿ ತೇಲಿ ದೇಶ ದೇಶಗಳನ್ನು ಮುಟ್ಟಿವೆ. ಪ್ರಚಂಡ ನಾಯಕರ ಒಡಲುಗಳನ್ನು ಮೆದುಳುಗಳನ್ನು ಸೇರಿ ಹೋಗಿವೆ. ಜನಾಂಗೀಯ ಶ್ರೇಷ್ಠತೆಯ ಹುಸಿ ಹೆಮ್ಮೆಯನ್ನೂ, ಅನಾರ್ಯ ರಕ್ತದ ಮೇಲೆ ದ್ವೇಷದ ಕಿಚ್ಚನ್ನೂ ಹೊತ್ತಿಸಿ ಉರಿಸತೊಡಗಿವೆ.

ಈ ಅಂಕಣದಲ್ಲಿ ಈ ಹಿಂದೆ ಹೇಳಿರುವ ಹಲವು ಮಾತುಗಳನ್ನು ಪುನಃ ಹೇಳಲೇಬೇಕಿದೆ.

ಕಳೆದ ಆರು ವರ್ಷಗಳಿಂದ ದೇಶದುದ್ದಗಲಕ್ಕೆ ರಸ್ತೆ ರಸ್ತೆಗಳಲ್ಲಿ ಮುಸಲ್ಮಾನರು ದಲಿತರು ಈ ಕಿಚ್ಚಿಗೆ ಬಲಿಯಾದರು. ಕೊರೊನಾ ಮಹಾಮಾರಿ ಹಾಕಿರುವ ಅಲ್ಪವಿರಾಮ ತೆರವಾದ ನಂತರ ಈ ಕಿಚ್ಚು ಹೊಸ ಎಣ್ಣೆ ಎರೆಸಿಕೊಂಡು ಭುಗಿಲೇಳುವಲ್ಲಿ ಯಾವ ಅನುಮಾನವೂ ಇಲ್ಲ.

ಶ್ರೇಷ್ಠ ಆರ್ಯ ರಕ್ತ ಮತ್ತು ಕನಿಷ್ಠ ಅನಾರ್ಯ ರಕ್ತ ಅಥವಾ ಶ್ರೇಷ್ಠ ಆರ್ಯ ತಳಿ ಮತ್ತು ಕನಿಷ್ಠ ಅನಾರ್ಯ ತಳಿ ಎಂಬ ಹುಸಿ ಭೇದಭಾವವು ಹಿಟ್ಲರನ ಜರ್ಮನಿ ಮತ್ತು ಜರ್ಮನಿ ಆಕ್ರಮಿತ ಪ್ರದೇಶಗಳಲ್ಲಿ 60 ಲಕ್ಷ ಯಹೂದಿಗಳ ಮಾರಣಹೋಮಕ್ಕೆ ಕಾರಣವಾಯಿತು. ಹಲವು ಹತ್ತು ಲಕ್ಷಗಳಷ್ಟು ಇತರರೂ ಬಲಿಯಾದರು.

ನಾಜಿ ಜರ್ಮನಿಯ ಇತಿಹಾಸ ಭಾರತದಲ್ಲಿ ಸುರುಳಿ ಬಿಚ್ಚತೊಡಗಿದೆ. ಅನುಮಾನವೇ ಇಲ್ಲ.

“ಹಿಂದೂ ಜನಾಂಗ ಮತ್ತು ಹಿಂದೂ ರಾಷ್ಟ್ರವನ್ನು ತಮ್ಮ ಹೃದಯಕ್ಕೆ ಹತ್ತಿರ ಇರಿಸಿಕೊಂಡು ವೈಭವೀಕರಿಸಿ ಆ ಧ್ಯೇಯದೆಡೆಗೆ ಸಾಗುವ ಆಶೋತ್ತರ ಉಳ್ಳವರು ಮಾತ್ರವೇ ರಾಷ್ಟ್ರವಾದೀ ದೇಶಭಕ್ತರು. ಉಳಿದವರೆಲ್ಲ ದೇಶದ್ರೋಹಿಗಳು ಮತ್ತು ರಾಷ್ಟ್ರೀಯತೆಯ ವೈರಿಗಳು” ಎಂದು ಮೂರು ದಶಕಗಳ ಕಾಲ ಆರ್‌ಎಸ್‍ಎಸ್ ಮುಖ್ಯಸ್ಥರಾಗಿದ್ದ ಮಾಧವರಾವ್ ಸದಾಶಿವರಾವ್ ಗೋಲ್ವಲ್ಕರ್ ಹೇಳಿದ್ದರು. We or Our Nationhood Defined (1939) ಕೃತಿಯಲ್ಲಿ ರಾಷ್ಟ್ರೀಯತೆ ಕುರಿತ ಅವರ ವಿಚಾರದ ಸವಿವರ ಪ್ರಸ್ತಾಪವಿದೆ.

“ಹಿಂದುಸ್ತಾನದ ಪರಕೀಯ ಜನಾಂಗಗಳು ಹಿಂದು ಸಂಸ್ಕೃತಿ ಮತ್ತು ಭಾಷೆಯನ್ನು ಅಳವಡಿಸಿಕೊಳ್ಳಬೇಕು, ಹಿಂದು ಧರ್ಮವನ್ನು ಭಕ್ತಿ ಗೌರವದಿಂದ ಕಾಣಬೇಕು, ಹಿಂದೂ ಜನಾಂಗ ಮತ್ತು ಸಂಸ್ಕೃತಿಯನ್ನು ವೈಭವೀಕರಿಸುವುದರ ವಿನಾ ಬೇರೆ ಯಾವ ವಿಚಾರವನ್ನೂ ನೆಚ್ಚಕೂಡದು. ಪ್ರತ್ಯೇಕ ಅಸ್ತಿತ್ವವನ್ನು ಬಿಟ್ಟುಕೊಟ್ಟು ಹಿಂದು ಜನಾಂಗದೊಳಕ್ಕೆ ವಿಲೀನಗೊಳ್ಳಬೇಕು, ಇಲ್ಲವಾದರೆ ಹಿಂದು ರಾಷ್ಟ್ರಕ್ಕೆ ಸಂಪೂರ್ಣ ಅಧೀನವಾಗಿ ನಾಗರಿಕ ಹಕ್ಕುಗಳನ್ನು ಕೂಡ ಕೇಳದಂತೆ ಈ ದೇಶದಲ್ಲಿ ಜೀವಿಸಬೇಕು. ನಮ್ಮದು ಪ್ರಾಚೀನ ರಾಷ್ಟ್ರ. ತಮ್ಮ ದೇಶದಲ್ಲಿ ನೆಲೆಸಲು ಬಂದ ಪರಕೀಯ ಜನಾಂಗಗಳನ್ನು ಪ್ರಾಚೀನ ದೇಶಗಳು ಹೇಗೆ ನಡೆಸಿಕೊಳ್ಳುತ್ತವೆಯೋ ಅದೇ ರೀತಿ ನಡೆಸಿಕೊಳ್ಳೋಣ” ಎಂಬುದು ಗೋಲ್ವಲ್ಕರ್ ಅವರ ಪ್ರತಿಪಾದನೆಯಾಗಿತ್ತು.

ಆದರೆ ಸಂವಿಧಾನ ರಚನಾ ಸಭೆಯು ಗೋಲ್ವಲ್ಕರ್ ಅವರ ಈ ಪ್ರತಿಪಾದನೆಗಳನ್ನು ತಿರಸ್ಕರಿಸಿತು. ಪೌರತ್ವದ ತಳಹದಿ ಧರ್ಮ ಅಲ್ಲ ಎಂದು ಸಾರಿತು. ಭಾರತವನ್ನು ಹಿಂದೂ ಬಹುಸಂಖ್ಯಾತ ದೇಶ ಎಂದು ಘೋಷಿಸದೆ ಜಾತ್ಯತೀತ ಮೌಲ್ಯ ವ್ಯವಸ್ಥೆಯನ್ನು ಅಳವಡಿಸಿಕೊಂಡಿತು.

ಮನುಷ್ಯ ಮನುಷ್ಯನನ್ನು ಜಾತಿಯ ಕಾರಣಕ್ಕೆ, ಧರ್ಮದ ಕಾರಣಕ್ಕೆ, ತೊಗಲಿನ ಬಣ್ಣದ ಕಾರಣಕ್ಕೆ ದ್ವೇಷಿಸಿ ಹಿಂಸಿಸತೊಡಗಿದ್ದಾನೆ. ಮಾನವೀಯತೆಯನ್ನು ಮರೆತಿದ್ದಾನೆ. ಆಳದಲ್ಲಿ ಮಲಗಿರುವ ಪಾಶವಿಕ ಹಿಂಸಾ ಪ್ರವೃತ್ತಿ ಮೇಲೆದ್ದು ಹೆಡೆಯೆತ್ತಿ ಭುಸುಗುಡುತ್ತಿದೆ. ಸಾವಿರ ಸಾವಿರ ವರ್ಷಗಳಿಂದ ನಾಗರಿಕತೆಯ ವಿಕಾಸದ ಹಾದಿಯಲ್ಲಿ ಮಾನವೀಯ ಸಾಮಾಜಿಕ ನಡವಳಿಕೆಗಳು ಕೆಳಕ್ಕೆ ತುಳಿದಿಟ್ಟ ಈ ಪ್ರವೃತ್ತಿಗಳನ್ನು ಕೆದರಿ ಕೆಣಕಿ ಕೆರಳಿಸಿ ಭುಗಿಲೆಬ್ಬಿಸಿದವರು ಯಾರು? ಈ ಉರಿವ ಬೆಂಕಿಗೆ ಎಣ್ಣೆ ಎರಚುತ್ತ ಬಂದಿರುವವರು ಯಾರು ಎಂಬ ಪ್ರಶ್ನೆಗಳಿಗೆ ಉತ್ತರಗಳು ದೇಶ ವಿದೇಶಗಳಲ್ಲಿ ಒಡಮೂಡಿವೆ. ಒಂದೊಂದು ದೇಶದಲ್ಲಿ ಒಂದೊಂದು ಹೆಸರು ಧರಿಸಿವೆ. ಹೊಸ ಭಯೋತ್ಪಾದಕರನ್ನು ಕಟೆದು ನಿಲ್ಲಿಸಿವೆ. ಈ ಭಯೋತ್ಪಾದಕರು ಮುಖ ಕೈಕಾಲು ದೇಹಧಾರಿ ಮನುಷ್ಯರಲ್ಲ. ಬದಲಾಗಿ ಅವರದೆಯಲ್ಲಿ ಭುಗಿಲೆದ್ದು ಪ್ರಚಂಡ ನಾಯಕರು ಯಾರತ್ತ ಇಷಾರೆ ಮಾಡಿದರೆ ಅವರನ್ನು ಸುಡಬಹುದಾದ ಕಡುದ್ವೇಷದ ಕಿಚ್ಚು. ಅದುವೇ ನವ ಭಯೋತ್ಪಾದಕ. ಈ ಭಯೋತ್ಪಾದಕ ಈವರೆಗೆ ಕಂಡು ಕೇಳಿರುವ ಎಲ್ಲ ಭಯೋತ್ಪಾದಕರಿಗಿಂತ ಅಧಿಕ ಘಾತಕ. ಈ ಕಿಚ್ಚಿಗೆ ವರ್ಣಭೇದ, ಧರ್ಮ, ಜಾತಿ, ಮೇಲು ಕೀಳಿನ ಮುಖವಾಡ ತೊಡಿಸಿ ಅಮಾಯಕರನ್ನು ಹರಿದು ತಿನ್ನಲು ಛೂ ಬಿಡಲಾಗಿದೆ.

ಭರತವರ್ಷದಲ್ಲಿನ ನಿಜ ನಾಮಧೇಯಗಳು ಚಿರಪರಿಚಿತ. ಇವುಗಳು ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು. ನಂತರದ್ದು ಕ್ರೈಸ್ತರದು ಇದ್ದೀತು.


ಇದನ್ನು ಓದಿ: ಕರ್ನಾಟಕದ ಒಕ್ಕೂಟ ರಾಜಕೀಯ ವ್ಯವಸ್ಥೆಯ ಚರಿತ್ರೆ: ಟಿ.ಆರ್ ಚಂದ್ರಶೇಖರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...