Homeಅಂಕಣಗಳುದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ಹಿಟ್ಲರನ ಜರ್ಮನಿಯೂ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಿತ್ತು; ಯಹೂದಿಗಳಿಗೆ ನಾಗರಿಕತೆ ನಿರಾಕರಿಸಿತ್ತು.. ಅದೇ ಈಗ ಭಾರತದಲ್ಲಿಯೂ ನಡೆಯುತ್ತಿದೆ

- Advertisement -
- Advertisement -

ಮುಸ್ಲಿಮರನ್ನು ಬಹುಸಂಖ್ಯಾತ ಹಿಂದೂ ರಾಷ್ಟ್ರದ ಎರಡನೆಯ ದರ್ಜೆಯ ಪ್ರಜೆಗಳನ್ನಾಗಿಸಿ ಸಮಾನತೆಯನ್ನು ನಿರಾಕರಿಸುವುದು ಪೌರತ್ವ ಕಾಯಿದೆ ತಿದ್ದುಪಡಿ ಮತ್ತು ಎನ್‍ಆರ್‌ಸಿಯ ಮೂಲ ಉದ್ದೇಶವಾಗಿತ್ತು. ಈ ಕಾಯಿದೆ ಹತ್ತಾರುಗಳ ಪ್ರಯೋಗ ಆರಂಭವಾಗಿದೆ.

ಸಮಾನತೆ ನಿರಾಕರಿಸುವ ಮತ್ತೊಂದು ಕಾನೂನನ್ನು ಬಿಜೆಪಿ ಆಡಳಿತ ರಾಜ್ಯ ಸರ್ಕಾರಗಳು ಒಂದರ ನಂತರ ಮತ್ತೊಂದರಂತೆ ಜಾರಿಗೆ ತರತೊಡಗಿವೆ. ಮಧ್ಯಪ್ರದೇಶದ ನಂತರ ಮಂಗಳವಾರ ರಾತ್ರಿ ಉತ್ತರಪ್ರದೇಶವೂ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಿತು. ಮುಸಲ್ಮಾನ ಯುವಕರು ಹಿಂದೂ ಯುವತಿಯರನ್ನು ಪ್ರೇಮಪಾಶಕ್ಕೆ ಸಿಲುಕಿಸಿಕೊಂಡು ಮುಸ್ಲಿಮ್ ಧರ್ಮಕ್ಕೆ ಮತಾಂತರಗೊಳಿಸುವರು ಎಂಬ ಆಪಾದನೆಗೆ ಹಿಂದುತ್ವವಾದ ಇರಿಸಿರುವ ಹೆಸರು ‘ಲವ್ ಜಿಹಾದ್’. ಅಂತರಧರ್ಮೀಯ ವಿವಾಹಗಳ ನಿಷೇಧವನ್ನು ಲವ್ ಜಿಹಾದ್ ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ ಎಂಬುದು ಹಿಂದುತ್ವವಾದ ಮಂಡಿಸುವ ವಾದ.

ಆದರೆ ವಾಸ್ತವವಾಗಿ ಅಲ್ಪಸಂಖ್ಯಾತರನ್ನು ಎರಡನೆ ದರ್ಜೆಯ ಪ್ರಜೆಗಳನ್ನಾಗಿಸುವ ಕ್ರಮದ ಮುಂದುವರಿಕೆಯಿದು. ಹಿಟ್ಲರ್ ಸತ್ತಿದ್ದಾನೆ ಎಂದು ಯಾರು ಹೇಳುತ್ತಾರೆ? ಜರ್ಮನಿಯಲ್ಲಿ ದಫನಾದದ್ದು ಅವನ ಭೌತಿಕ ಶರೀರ ಮಾತ್ರ. ಕುಲೀನ ಹಸಿರು ರಕ್ತದ ಆರ್ಯ ಜನಾಂಗೀಯ ಮೇಲ್ಮೆಯನ್ನು ಮತ್ತೆ ಸ್ಥಾಪಿಸುವ ಅವನ ಧೋರಣೆಗಳು ದಫನಾಗಿಲ್ಲ. ಅವು ಗಾಳಿಯಲ್ಲಿ ನೀರಿನಲ್ಲಿ ತೇಲಿ ದೇಶ ದೇಶಗಳನ್ನು ಮುಟ್ಟಿವೆ. ಪ್ರಚಂಡ ನಾಯಕರ ಒಡಲುಗಳನ್ನು ಮೆದುಳುಗಳನ್ನು ಸೇರಿ ಹೋಗಿವೆ. ಜನಾಂಗೀಯ ಶ್ರೇಷ್ಠತೆಯ ಹುಸಿ ಹೆಮ್ಮೆಯನ್ನೂ, ಅನಾರ್ಯ ರಕ್ತದ ಮೇಲೆ ದ್ವೇಷದ ಕಿಚ್ಚನ್ನೂ ಹೊತ್ತಿಸಿ ಉರಿಸತೊಡಗಿವೆ.

ಈ ಅಂಕಣದಲ್ಲಿ ಈ ಹಿಂದೆ ಹೇಳಿರುವ ಹಲವು ಮಾತುಗಳನ್ನು ಪುನಃ ಹೇಳಲೇಬೇಕಿದೆ.

ಕಳೆದ ಆರು ವರ್ಷಗಳಿಂದ ದೇಶದುದ್ದಗಲಕ್ಕೆ ರಸ್ತೆ ರಸ್ತೆಗಳಲ್ಲಿ ಮುಸಲ್ಮಾನರು ದಲಿತರು ಈ ಕಿಚ್ಚಿಗೆ ಬಲಿಯಾದರು. ಕೊರೊನಾ ಮಹಾಮಾರಿ ಹಾಕಿರುವ ಅಲ್ಪವಿರಾಮ ತೆರವಾದ ನಂತರ ಈ ಕಿಚ್ಚು ಹೊಸ ಎಣ್ಣೆ ಎರೆಸಿಕೊಂಡು ಭುಗಿಲೇಳುವಲ್ಲಿ ಯಾವ ಅನುಮಾನವೂ ಇಲ್ಲ.

ಶ್ರೇಷ್ಠ ಆರ್ಯ ರಕ್ತ ಮತ್ತು ಕನಿಷ್ಠ ಅನಾರ್ಯ ರಕ್ತ ಅಥವಾ ಶ್ರೇಷ್ಠ ಆರ್ಯ ತಳಿ ಮತ್ತು ಕನಿಷ್ಠ ಅನಾರ್ಯ ತಳಿ ಎಂಬ ಹುಸಿ ಭೇದಭಾವವು ಹಿಟ್ಲರನ ಜರ್ಮನಿ ಮತ್ತು ಜರ್ಮನಿ ಆಕ್ರಮಿತ ಪ್ರದೇಶಗಳಲ್ಲಿ 60 ಲಕ್ಷ ಯಹೂದಿಗಳ ಮಾರಣಹೋಮಕ್ಕೆ ಕಾರಣವಾಯಿತು. ಹಲವು ಹತ್ತು ಲಕ್ಷಗಳಷ್ಟು ಇತರರೂ ಬಲಿಯಾದರು.

ನಾಜಿ ಜರ್ಮನಿಯ ಇತಿಹಾಸ ಭಾರತದಲ್ಲಿ ಸುರುಳಿ ಬಿಚ್ಚತೊಡಗಿದೆ. ಅನುಮಾನವೇ ಇಲ್ಲ.

“ಹಿಂದೂ ಜನಾಂಗ ಮತ್ತು ಹಿಂದೂ ರಾಷ್ಟ್ರವನ್ನು ತಮ್ಮ ಹೃದಯಕ್ಕೆ ಹತ್ತಿರ ಇರಿಸಿಕೊಂಡು ವೈಭವೀಕರಿಸಿ ಆ ಧ್ಯೇಯದೆಡೆಗೆ ಸಾಗುವ ಆಶೋತ್ತರ ಉಳ್ಳವರು ಮಾತ್ರವೇ ರಾಷ್ಟ್ರವಾದೀ ದೇಶಭಕ್ತರು. ಉಳಿದವರೆಲ್ಲ ದೇಶದ್ರೋಹಿಗಳು ಮತ್ತು ರಾಷ್ಟ್ರೀಯತೆಯ ವೈರಿಗಳು” ಎಂದು ಮೂರು ದಶಕಗಳ ಕಾಲ ಆರ್‌ಎಸ್‍ಎಸ್ ಮುಖ್ಯಸ್ಥರಾಗಿದ್ದ ಮಾಧವರಾವ್ ಸದಾಶಿವರಾವ್ ಗೋಲ್ವಲ್ಕರ್ ಹೇಳಿದ್ದರು. We or Our Nationhood Defined (1939) ಕೃತಿಯಲ್ಲಿ ರಾಷ್ಟ್ರೀಯತೆ ಕುರಿತ ಅವರ ವಿಚಾರದ ಸವಿವರ ಪ್ರಸ್ತಾಪವಿದೆ.

“ಹಿಂದುಸ್ತಾನದ ಪರಕೀಯ ಜನಾಂಗಗಳು ಹಿಂದು ಸಂಸ್ಕೃತಿ ಮತ್ತು ಭಾಷೆಯನ್ನು ಅಳವಡಿಸಿಕೊಳ್ಳಬೇಕು, ಹಿಂದು ಧರ್ಮವನ್ನು ಭಕ್ತಿ ಗೌರವದಿಂದ ಕಾಣಬೇಕು, ಹಿಂದೂ ಜನಾಂಗ ಮತ್ತು ಸಂಸ್ಕೃತಿಯನ್ನು ವೈಭವೀಕರಿಸುವುದರ ವಿನಾ ಬೇರೆ ಯಾವ ವಿಚಾರವನ್ನೂ ನೆಚ್ಚಕೂಡದು. ಪ್ರತ್ಯೇಕ ಅಸ್ತಿತ್ವವನ್ನು ಬಿಟ್ಟುಕೊಟ್ಟು ಹಿಂದು ಜನಾಂಗದೊಳಕ್ಕೆ ವಿಲೀನಗೊಳ್ಳಬೇಕು, ಇಲ್ಲವಾದರೆ ಹಿಂದು ರಾಷ್ಟ್ರಕ್ಕೆ ಸಂಪೂರ್ಣ ಅಧೀನವಾಗಿ ನಾಗರಿಕ ಹಕ್ಕುಗಳನ್ನು ಕೂಡ ಕೇಳದಂತೆ ಈ ದೇಶದಲ್ಲಿ ಜೀವಿಸಬೇಕು. ನಮ್ಮದು ಪ್ರಾಚೀನ ರಾಷ್ಟ್ರ. ತಮ್ಮ ದೇಶದಲ್ಲಿ ನೆಲೆಸಲು ಬಂದ ಪರಕೀಯ ಜನಾಂಗಗಳನ್ನು ಪ್ರಾಚೀನ ದೇಶಗಳು ಹೇಗೆ ನಡೆಸಿಕೊಳ್ಳುತ್ತವೆಯೋ ಅದೇ ರೀತಿ ನಡೆಸಿಕೊಳ್ಳೋಣ” ಎಂಬುದು ಗೋಲ್ವಲ್ಕರ್ ಅವರ ಪ್ರತಿಪಾದನೆಯಾಗಿತ್ತು.

ಆದರೆ ಸಂವಿಧಾನ ರಚನಾ ಸಭೆಯು ಗೋಲ್ವಲ್ಕರ್ ಅವರ ಈ ಪ್ರತಿಪಾದನೆಗಳನ್ನು ತಿರಸ್ಕರಿಸಿತು. ಪೌರತ್ವದ ತಳಹದಿ ಧರ್ಮ ಅಲ್ಲ ಎಂದು ಸಾರಿತು. ಭಾರತವನ್ನು ಹಿಂದೂ ಬಹುಸಂಖ್ಯಾತ ದೇಶ ಎಂದು ಘೋಷಿಸದೆ ಜಾತ್ಯತೀತ ಮೌಲ್ಯ ವ್ಯವಸ್ಥೆಯನ್ನು ಅಳವಡಿಸಿಕೊಂಡಿತು.

ಮನುಷ್ಯ ಮನುಷ್ಯನನ್ನು ಜಾತಿಯ ಕಾರಣಕ್ಕೆ, ಧರ್ಮದ ಕಾರಣಕ್ಕೆ, ತೊಗಲಿನ ಬಣ್ಣದ ಕಾರಣಕ್ಕೆ ದ್ವೇಷಿಸಿ ಹಿಂಸಿಸತೊಡಗಿದ್ದಾನೆ. ಮಾನವೀಯತೆಯನ್ನು ಮರೆತಿದ್ದಾನೆ. ಆಳದಲ್ಲಿ ಮಲಗಿರುವ ಪಾಶವಿಕ ಹಿಂಸಾ ಪ್ರವೃತ್ತಿ ಮೇಲೆದ್ದು ಹೆಡೆಯೆತ್ತಿ ಭುಸುಗುಡುತ್ತಿದೆ. ಸಾವಿರ ಸಾವಿರ ವರ್ಷಗಳಿಂದ ನಾಗರಿಕತೆಯ ವಿಕಾಸದ ಹಾದಿಯಲ್ಲಿ ಮಾನವೀಯ ಸಾಮಾಜಿಕ ನಡವಳಿಕೆಗಳು ಕೆಳಕ್ಕೆ ತುಳಿದಿಟ್ಟ ಈ ಪ್ರವೃತ್ತಿಗಳನ್ನು ಕೆದರಿ ಕೆಣಕಿ ಕೆರಳಿಸಿ ಭುಗಿಲೆಬ್ಬಿಸಿದವರು ಯಾರು? ಈ ಉರಿವ ಬೆಂಕಿಗೆ ಎಣ್ಣೆ ಎರಚುತ್ತ ಬಂದಿರುವವರು ಯಾರು ಎಂಬ ಪ್ರಶ್ನೆಗಳಿಗೆ ಉತ್ತರಗಳು ದೇಶ ವಿದೇಶಗಳಲ್ಲಿ ಒಡಮೂಡಿವೆ. ಒಂದೊಂದು ದೇಶದಲ್ಲಿ ಒಂದೊಂದು ಹೆಸರು ಧರಿಸಿವೆ. ಹೊಸ ಭಯೋತ್ಪಾದಕರನ್ನು ಕಟೆದು ನಿಲ್ಲಿಸಿವೆ. ಈ ಭಯೋತ್ಪಾದಕರು ಮುಖ ಕೈಕಾಲು ದೇಹಧಾರಿ ಮನುಷ್ಯರಲ್ಲ. ಬದಲಾಗಿ ಅವರದೆಯಲ್ಲಿ ಭುಗಿಲೆದ್ದು ಪ್ರಚಂಡ ನಾಯಕರು ಯಾರತ್ತ ಇಷಾರೆ ಮಾಡಿದರೆ ಅವರನ್ನು ಸುಡಬಹುದಾದ ಕಡುದ್ವೇಷದ ಕಿಚ್ಚು. ಅದುವೇ ನವ ಭಯೋತ್ಪಾದಕ. ಈ ಭಯೋತ್ಪಾದಕ ಈವರೆಗೆ ಕಂಡು ಕೇಳಿರುವ ಎಲ್ಲ ಭಯೋತ್ಪಾದಕರಿಗಿಂತ ಅಧಿಕ ಘಾತಕ. ಈ ಕಿಚ್ಚಿಗೆ ವರ್ಣಭೇದ, ಧರ್ಮ, ಜಾತಿ, ಮೇಲು ಕೀಳಿನ ಮುಖವಾಡ ತೊಡಿಸಿ ಅಮಾಯಕರನ್ನು ಹರಿದು ತಿನ್ನಲು ಛೂ ಬಿಡಲಾಗಿದೆ.

ಭರತವರ್ಷದಲ್ಲಿನ ನಿಜ ನಾಮಧೇಯಗಳು ಚಿರಪರಿಚಿತ. ಇವುಗಳು ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು. ನಂತರದ್ದು ಕ್ರೈಸ್ತರದು ಇದ್ದೀತು.


ಇದನ್ನು ಓದಿ: ಕರ್ನಾಟಕದ ಒಕ್ಕೂಟ ರಾಜಕೀಯ ವ್ಯವಸ್ಥೆಯ ಚರಿತ್ರೆ: ಟಿ.ಆರ್ ಚಂದ್ರಶೇಖರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...