Homeಅಂಕಣಗಳುದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ಹಿಟ್ಲರನ ಜರ್ಮನಿಯೂ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಿತ್ತು; ಯಹೂದಿಗಳಿಗೆ ನಾಗರಿಕತೆ ನಿರಾಕರಿಸಿತ್ತು.. ಅದೇ ಈಗ ಭಾರತದಲ್ಲಿಯೂ ನಡೆಯುತ್ತಿದೆ

- Advertisement -
- Advertisement -

ಮುಸ್ಲಿಮರನ್ನು ಬಹುಸಂಖ್ಯಾತ ಹಿಂದೂ ರಾಷ್ಟ್ರದ ಎರಡನೆಯ ದರ್ಜೆಯ ಪ್ರಜೆಗಳನ್ನಾಗಿಸಿ ಸಮಾನತೆಯನ್ನು ನಿರಾಕರಿಸುವುದು ಪೌರತ್ವ ಕಾಯಿದೆ ತಿದ್ದುಪಡಿ ಮತ್ತು ಎನ್‍ಆರ್‌ಸಿಯ ಮೂಲ ಉದ್ದೇಶವಾಗಿತ್ತು. ಈ ಕಾಯಿದೆ ಹತ್ತಾರುಗಳ ಪ್ರಯೋಗ ಆರಂಭವಾಗಿದೆ.

ಸಮಾನತೆ ನಿರಾಕರಿಸುವ ಮತ್ತೊಂದು ಕಾನೂನನ್ನು ಬಿಜೆಪಿ ಆಡಳಿತ ರಾಜ್ಯ ಸರ್ಕಾರಗಳು ಒಂದರ ನಂತರ ಮತ್ತೊಂದರಂತೆ ಜಾರಿಗೆ ತರತೊಡಗಿವೆ. ಮಧ್ಯಪ್ರದೇಶದ ನಂತರ ಮಂಗಳವಾರ ರಾತ್ರಿ ಉತ್ತರಪ್ರದೇಶವೂ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಿತು. ಮುಸಲ್ಮಾನ ಯುವಕರು ಹಿಂದೂ ಯುವತಿಯರನ್ನು ಪ್ರೇಮಪಾಶಕ್ಕೆ ಸಿಲುಕಿಸಿಕೊಂಡು ಮುಸ್ಲಿಮ್ ಧರ್ಮಕ್ಕೆ ಮತಾಂತರಗೊಳಿಸುವರು ಎಂಬ ಆಪಾದನೆಗೆ ಹಿಂದುತ್ವವಾದ ಇರಿಸಿರುವ ಹೆಸರು ‘ಲವ್ ಜಿಹಾದ್’. ಅಂತರಧರ್ಮೀಯ ವಿವಾಹಗಳ ನಿಷೇಧವನ್ನು ಲವ್ ಜಿಹಾದ್ ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ ಎಂಬುದು ಹಿಂದುತ್ವವಾದ ಮಂಡಿಸುವ ವಾದ.

ಆದರೆ ವಾಸ್ತವವಾಗಿ ಅಲ್ಪಸಂಖ್ಯಾತರನ್ನು ಎರಡನೆ ದರ್ಜೆಯ ಪ್ರಜೆಗಳನ್ನಾಗಿಸುವ ಕ್ರಮದ ಮುಂದುವರಿಕೆಯಿದು. ಹಿಟ್ಲರ್ ಸತ್ತಿದ್ದಾನೆ ಎಂದು ಯಾರು ಹೇಳುತ್ತಾರೆ? ಜರ್ಮನಿಯಲ್ಲಿ ದಫನಾದದ್ದು ಅವನ ಭೌತಿಕ ಶರೀರ ಮಾತ್ರ. ಕುಲೀನ ಹಸಿರು ರಕ್ತದ ಆರ್ಯ ಜನಾಂಗೀಯ ಮೇಲ್ಮೆಯನ್ನು ಮತ್ತೆ ಸ್ಥಾಪಿಸುವ ಅವನ ಧೋರಣೆಗಳು ದಫನಾಗಿಲ್ಲ. ಅವು ಗಾಳಿಯಲ್ಲಿ ನೀರಿನಲ್ಲಿ ತೇಲಿ ದೇಶ ದೇಶಗಳನ್ನು ಮುಟ್ಟಿವೆ. ಪ್ರಚಂಡ ನಾಯಕರ ಒಡಲುಗಳನ್ನು ಮೆದುಳುಗಳನ್ನು ಸೇರಿ ಹೋಗಿವೆ. ಜನಾಂಗೀಯ ಶ್ರೇಷ್ಠತೆಯ ಹುಸಿ ಹೆಮ್ಮೆಯನ್ನೂ, ಅನಾರ್ಯ ರಕ್ತದ ಮೇಲೆ ದ್ವೇಷದ ಕಿಚ್ಚನ್ನೂ ಹೊತ್ತಿಸಿ ಉರಿಸತೊಡಗಿವೆ.

ಈ ಅಂಕಣದಲ್ಲಿ ಈ ಹಿಂದೆ ಹೇಳಿರುವ ಹಲವು ಮಾತುಗಳನ್ನು ಪುನಃ ಹೇಳಲೇಬೇಕಿದೆ.

ಕಳೆದ ಆರು ವರ್ಷಗಳಿಂದ ದೇಶದುದ್ದಗಲಕ್ಕೆ ರಸ್ತೆ ರಸ್ತೆಗಳಲ್ಲಿ ಮುಸಲ್ಮಾನರು ದಲಿತರು ಈ ಕಿಚ್ಚಿಗೆ ಬಲಿಯಾದರು. ಕೊರೊನಾ ಮಹಾಮಾರಿ ಹಾಕಿರುವ ಅಲ್ಪವಿರಾಮ ತೆರವಾದ ನಂತರ ಈ ಕಿಚ್ಚು ಹೊಸ ಎಣ್ಣೆ ಎರೆಸಿಕೊಂಡು ಭುಗಿಲೇಳುವಲ್ಲಿ ಯಾವ ಅನುಮಾನವೂ ಇಲ್ಲ.

ಶ್ರೇಷ್ಠ ಆರ್ಯ ರಕ್ತ ಮತ್ತು ಕನಿಷ್ಠ ಅನಾರ್ಯ ರಕ್ತ ಅಥವಾ ಶ್ರೇಷ್ಠ ಆರ್ಯ ತಳಿ ಮತ್ತು ಕನಿಷ್ಠ ಅನಾರ್ಯ ತಳಿ ಎಂಬ ಹುಸಿ ಭೇದಭಾವವು ಹಿಟ್ಲರನ ಜರ್ಮನಿ ಮತ್ತು ಜರ್ಮನಿ ಆಕ್ರಮಿತ ಪ್ರದೇಶಗಳಲ್ಲಿ 60 ಲಕ್ಷ ಯಹೂದಿಗಳ ಮಾರಣಹೋಮಕ್ಕೆ ಕಾರಣವಾಯಿತು. ಹಲವು ಹತ್ತು ಲಕ್ಷಗಳಷ್ಟು ಇತರರೂ ಬಲಿಯಾದರು.

ನಾಜಿ ಜರ್ಮನಿಯ ಇತಿಹಾಸ ಭಾರತದಲ್ಲಿ ಸುರುಳಿ ಬಿಚ್ಚತೊಡಗಿದೆ. ಅನುಮಾನವೇ ಇಲ್ಲ.

“ಹಿಂದೂ ಜನಾಂಗ ಮತ್ತು ಹಿಂದೂ ರಾಷ್ಟ್ರವನ್ನು ತಮ್ಮ ಹೃದಯಕ್ಕೆ ಹತ್ತಿರ ಇರಿಸಿಕೊಂಡು ವೈಭವೀಕರಿಸಿ ಆ ಧ್ಯೇಯದೆಡೆಗೆ ಸಾಗುವ ಆಶೋತ್ತರ ಉಳ್ಳವರು ಮಾತ್ರವೇ ರಾಷ್ಟ್ರವಾದೀ ದೇಶಭಕ್ತರು. ಉಳಿದವರೆಲ್ಲ ದೇಶದ್ರೋಹಿಗಳು ಮತ್ತು ರಾಷ್ಟ್ರೀಯತೆಯ ವೈರಿಗಳು” ಎಂದು ಮೂರು ದಶಕಗಳ ಕಾಲ ಆರ್‌ಎಸ್‍ಎಸ್ ಮುಖ್ಯಸ್ಥರಾಗಿದ್ದ ಮಾಧವರಾವ್ ಸದಾಶಿವರಾವ್ ಗೋಲ್ವಲ್ಕರ್ ಹೇಳಿದ್ದರು. We or Our Nationhood Defined (1939) ಕೃತಿಯಲ್ಲಿ ರಾಷ್ಟ್ರೀಯತೆ ಕುರಿತ ಅವರ ವಿಚಾರದ ಸವಿವರ ಪ್ರಸ್ತಾಪವಿದೆ.

“ಹಿಂದುಸ್ತಾನದ ಪರಕೀಯ ಜನಾಂಗಗಳು ಹಿಂದು ಸಂಸ್ಕೃತಿ ಮತ್ತು ಭಾಷೆಯನ್ನು ಅಳವಡಿಸಿಕೊಳ್ಳಬೇಕು, ಹಿಂದು ಧರ್ಮವನ್ನು ಭಕ್ತಿ ಗೌರವದಿಂದ ಕಾಣಬೇಕು, ಹಿಂದೂ ಜನಾಂಗ ಮತ್ತು ಸಂಸ್ಕೃತಿಯನ್ನು ವೈಭವೀಕರಿಸುವುದರ ವಿನಾ ಬೇರೆ ಯಾವ ವಿಚಾರವನ್ನೂ ನೆಚ್ಚಕೂಡದು. ಪ್ರತ್ಯೇಕ ಅಸ್ತಿತ್ವವನ್ನು ಬಿಟ್ಟುಕೊಟ್ಟು ಹಿಂದು ಜನಾಂಗದೊಳಕ್ಕೆ ವಿಲೀನಗೊಳ್ಳಬೇಕು, ಇಲ್ಲವಾದರೆ ಹಿಂದು ರಾಷ್ಟ್ರಕ್ಕೆ ಸಂಪೂರ್ಣ ಅಧೀನವಾಗಿ ನಾಗರಿಕ ಹಕ್ಕುಗಳನ್ನು ಕೂಡ ಕೇಳದಂತೆ ಈ ದೇಶದಲ್ಲಿ ಜೀವಿಸಬೇಕು. ನಮ್ಮದು ಪ್ರಾಚೀನ ರಾಷ್ಟ್ರ. ತಮ್ಮ ದೇಶದಲ್ಲಿ ನೆಲೆಸಲು ಬಂದ ಪರಕೀಯ ಜನಾಂಗಗಳನ್ನು ಪ್ರಾಚೀನ ದೇಶಗಳು ಹೇಗೆ ನಡೆಸಿಕೊಳ್ಳುತ್ತವೆಯೋ ಅದೇ ರೀತಿ ನಡೆಸಿಕೊಳ್ಳೋಣ” ಎಂಬುದು ಗೋಲ್ವಲ್ಕರ್ ಅವರ ಪ್ರತಿಪಾದನೆಯಾಗಿತ್ತು.

ಆದರೆ ಸಂವಿಧಾನ ರಚನಾ ಸಭೆಯು ಗೋಲ್ವಲ್ಕರ್ ಅವರ ಈ ಪ್ರತಿಪಾದನೆಗಳನ್ನು ತಿರಸ್ಕರಿಸಿತು. ಪೌರತ್ವದ ತಳಹದಿ ಧರ್ಮ ಅಲ್ಲ ಎಂದು ಸಾರಿತು. ಭಾರತವನ್ನು ಹಿಂದೂ ಬಹುಸಂಖ್ಯಾತ ದೇಶ ಎಂದು ಘೋಷಿಸದೆ ಜಾತ್ಯತೀತ ಮೌಲ್ಯ ವ್ಯವಸ್ಥೆಯನ್ನು ಅಳವಡಿಸಿಕೊಂಡಿತು.

ಮನುಷ್ಯ ಮನುಷ್ಯನನ್ನು ಜಾತಿಯ ಕಾರಣಕ್ಕೆ, ಧರ್ಮದ ಕಾರಣಕ್ಕೆ, ತೊಗಲಿನ ಬಣ್ಣದ ಕಾರಣಕ್ಕೆ ದ್ವೇಷಿಸಿ ಹಿಂಸಿಸತೊಡಗಿದ್ದಾನೆ. ಮಾನವೀಯತೆಯನ್ನು ಮರೆತಿದ್ದಾನೆ. ಆಳದಲ್ಲಿ ಮಲಗಿರುವ ಪಾಶವಿಕ ಹಿಂಸಾ ಪ್ರವೃತ್ತಿ ಮೇಲೆದ್ದು ಹೆಡೆಯೆತ್ತಿ ಭುಸುಗುಡುತ್ತಿದೆ. ಸಾವಿರ ಸಾವಿರ ವರ್ಷಗಳಿಂದ ನಾಗರಿಕತೆಯ ವಿಕಾಸದ ಹಾದಿಯಲ್ಲಿ ಮಾನವೀಯ ಸಾಮಾಜಿಕ ನಡವಳಿಕೆಗಳು ಕೆಳಕ್ಕೆ ತುಳಿದಿಟ್ಟ ಈ ಪ್ರವೃತ್ತಿಗಳನ್ನು ಕೆದರಿ ಕೆಣಕಿ ಕೆರಳಿಸಿ ಭುಗಿಲೆಬ್ಬಿಸಿದವರು ಯಾರು? ಈ ಉರಿವ ಬೆಂಕಿಗೆ ಎಣ್ಣೆ ಎರಚುತ್ತ ಬಂದಿರುವವರು ಯಾರು ಎಂಬ ಪ್ರಶ್ನೆಗಳಿಗೆ ಉತ್ತರಗಳು ದೇಶ ವಿದೇಶಗಳಲ್ಲಿ ಒಡಮೂಡಿವೆ. ಒಂದೊಂದು ದೇಶದಲ್ಲಿ ಒಂದೊಂದು ಹೆಸರು ಧರಿಸಿವೆ. ಹೊಸ ಭಯೋತ್ಪಾದಕರನ್ನು ಕಟೆದು ನಿಲ್ಲಿಸಿವೆ. ಈ ಭಯೋತ್ಪಾದಕರು ಮುಖ ಕೈಕಾಲು ದೇಹಧಾರಿ ಮನುಷ್ಯರಲ್ಲ. ಬದಲಾಗಿ ಅವರದೆಯಲ್ಲಿ ಭುಗಿಲೆದ್ದು ಪ್ರಚಂಡ ನಾಯಕರು ಯಾರತ್ತ ಇಷಾರೆ ಮಾಡಿದರೆ ಅವರನ್ನು ಸುಡಬಹುದಾದ ಕಡುದ್ವೇಷದ ಕಿಚ್ಚು. ಅದುವೇ ನವ ಭಯೋತ್ಪಾದಕ. ಈ ಭಯೋತ್ಪಾದಕ ಈವರೆಗೆ ಕಂಡು ಕೇಳಿರುವ ಎಲ್ಲ ಭಯೋತ್ಪಾದಕರಿಗಿಂತ ಅಧಿಕ ಘಾತಕ. ಈ ಕಿಚ್ಚಿಗೆ ವರ್ಣಭೇದ, ಧರ್ಮ, ಜಾತಿ, ಮೇಲು ಕೀಳಿನ ಮುಖವಾಡ ತೊಡಿಸಿ ಅಮಾಯಕರನ್ನು ಹರಿದು ತಿನ್ನಲು ಛೂ ಬಿಡಲಾಗಿದೆ.

ಭರತವರ್ಷದಲ್ಲಿನ ನಿಜ ನಾಮಧೇಯಗಳು ಚಿರಪರಿಚಿತ. ಇವುಗಳು ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು. ನಂತರದ್ದು ಕ್ರೈಸ್ತರದು ಇದ್ದೀತು.


ಇದನ್ನು ಓದಿ: ಕರ್ನಾಟಕದ ಒಕ್ಕೂಟ ರಾಜಕೀಯ ವ್ಯವಸ್ಥೆಯ ಚರಿತ್ರೆ: ಟಿ.ಆರ್ ಚಂದ್ರಶೇಖರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....