Homeಅಂಕಣಗಳುದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ಹಿಟ್ಲರನ ಜರ್ಮನಿಯೂ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಿತ್ತು; ಯಹೂದಿಗಳಿಗೆ ನಾಗರಿಕತೆ ನಿರಾಕರಿಸಿತ್ತು.. ಅದೇ ಈಗ ಭಾರತದಲ್ಲಿಯೂ ನಡೆಯುತ್ತಿದೆ

- Advertisement -
- Advertisement -

ಮುಸ್ಲಿಮರನ್ನು ಬಹುಸಂಖ್ಯಾತ ಹಿಂದೂ ರಾಷ್ಟ್ರದ ಎರಡನೆಯ ದರ್ಜೆಯ ಪ್ರಜೆಗಳನ್ನಾಗಿಸಿ ಸಮಾನತೆಯನ್ನು ನಿರಾಕರಿಸುವುದು ಪೌರತ್ವ ಕಾಯಿದೆ ತಿದ್ದುಪಡಿ ಮತ್ತು ಎನ್‍ಆರ್‌ಸಿಯ ಮೂಲ ಉದ್ದೇಶವಾಗಿತ್ತು. ಈ ಕಾಯಿದೆ ಹತ್ತಾರುಗಳ ಪ್ರಯೋಗ ಆರಂಭವಾಗಿದೆ.

ಸಮಾನತೆ ನಿರಾಕರಿಸುವ ಮತ್ತೊಂದು ಕಾನೂನನ್ನು ಬಿಜೆಪಿ ಆಡಳಿತ ರಾಜ್ಯ ಸರ್ಕಾರಗಳು ಒಂದರ ನಂತರ ಮತ್ತೊಂದರಂತೆ ಜಾರಿಗೆ ತರತೊಡಗಿವೆ. ಮಧ್ಯಪ್ರದೇಶದ ನಂತರ ಮಂಗಳವಾರ ರಾತ್ರಿ ಉತ್ತರಪ್ರದೇಶವೂ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಿತು. ಮುಸಲ್ಮಾನ ಯುವಕರು ಹಿಂದೂ ಯುವತಿಯರನ್ನು ಪ್ರೇಮಪಾಶಕ್ಕೆ ಸಿಲುಕಿಸಿಕೊಂಡು ಮುಸ್ಲಿಮ್ ಧರ್ಮಕ್ಕೆ ಮತಾಂತರಗೊಳಿಸುವರು ಎಂಬ ಆಪಾದನೆಗೆ ಹಿಂದುತ್ವವಾದ ಇರಿಸಿರುವ ಹೆಸರು ‘ಲವ್ ಜಿಹಾದ್’. ಅಂತರಧರ್ಮೀಯ ವಿವಾಹಗಳ ನಿಷೇಧವನ್ನು ಲವ್ ಜಿಹಾದ್ ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ ಎಂಬುದು ಹಿಂದುತ್ವವಾದ ಮಂಡಿಸುವ ವಾದ.

ಆದರೆ ವಾಸ್ತವವಾಗಿ ಅಲ್ಪಸಂಖ್ಯಾತರನ್ನು ಎರಡನೆ ದರ್ಜೆಯ ಪ್ರಜೆಗಳನ್ನಾಗಿಸುವ ಕ್ರಮದ ಮುಂದುವರಿಕೆಯಿದು. ಹಿಟ್ಲರ್ ಸತ್ತಿದ್ದಾನೆ ಎಂದು ಯಾರು ಹೇಳುತ್ತಾರೆ? ಜರ್ಮನಿಯಲ್ಲಿ ದಫನಾದದ್ದು ಅವನ ಭೌತಿಕ ಶರೀರ ಮಾತ್ರ. ಕುಲೀನ ಹಸಿರು ರಕ್ತದ ಆರ್ಯ ಜನಾಂಗೀಯ ಮೇಲ್ಮೆಯನ್ನು ಮತ್ತೆ ಸ್ಥಾಪಿಸುವ ಅವನ ಧೋರಣೆಗಳು ದಫನಾಗಿಲ್ಲ. ಅವು ಗಾಳಿಯಲ್ಲಿ ನೀರಿನಲ್ಲಿ ತೇಲಿ ದೇಶ ದೇಶಗಳನ್ನು ಮುಟ್ಟಿವೆ. ಪ್ರಚಂಡ ನಾಯಕರ ಒಡಲುಗಳನ್ನು ಮೆದುಳುಗಳನ್ನು ಸೇರಿ ಹೋಗಿವೆ. ಜನಾಂಗೀಯ ಶ್ರೇಷ್ಠತೆಯ ಹುಸಿ ಹೆಮ್ಮೆಯನ್ನೂ, ಅನಾರ್ಯ ರಕ್ತದ ಮೇಲೆ ದ್ವೇಷದ ಕಿಚ್ಚನ್ನೂ ಹೊತ್ತಿಸಿ ಉರಿಸತೊಡಗಿವೆ.

ಈ ಅಂಕಣದಲ್ಲಿ ಈ ಹಿಂದೆ ಹೇಳಿರುವ ಹಲವು ಮಾತುಗಳನ್ನು ಪುನಃ ಹೇಳಲೇಬೇಕಿದೆ.

ಕಳೆದ ಆರು ವರ್ಷಗಳಿಂದ ದೇಶದುದ್ದಗಲಕ್ಕೆ ರಸ್ತೆ ರಸ್ತೆಗಳಲ್ಲಿ ಮುಸಲ್ಮಾನರು ದಲಿತರು ಈ ಕಿಚ್ಚಿಗೆ ಬಲಿಯಾದರು. ಕೊರೊನಾ ಮಹಾಮಾರಿ ಹಾಕಿರುವ ಅಲ್ಪವಿರಾಮ ತೆರವಾದ ನಂತರ ಈ ಕಿಚ್ಚು ಹೊಸ ಎಣ್ಣೆ ಎರೆಸಿಕೊಂಡು ಭುಗಿಲೇಳುವಲ್ಲಿ ಯಾವ ಅನುಮಾನವೂ ಇಲ್ಲ.

ಶ್ರೇಷ್ಠ ಆರ್ಯ ರಕ್ತ ಮತ್ತು ಕನಿಷ್ಠ ಅನಾರ್ಯ ರಕ್ತ ಅಥವಾ ಶ್ರೇಷ್ಠ ಆರ್ಯ ತಳಿ ಮತ್ತು ಕನಿಷ್ಠ ಅನಾರ್ಯ ತಳಿ ಎಂಬ ಹುಸಿ ಭೇದಭಾವವು ಹಿಟ್ಲರನ ಜರ್ಮನಿ ಮತ್ತು ಜರ್ಮನಿ ಆಕ್ರಮಿತ ಪ್ರದೇಶಗಳಲ್ಲಿ 60 ಲಕ್ಷ ಯಹೂದಿಗಳ ಮಾರಣಹೋಮಕ್ಕೆ ಕಾರಣವಾಯಿತು. ಹಲವು ಹತ್ತು ಲಕ್ಷಗಳಷ್ಟು ಇತರರೂ ಬಲಿಯಾದರು.

ನಾಜಿ ಜರ್ಮನಿಯ ಇತಿಹಾಸ ಭಾರತದಲ್ಲಿ ಸುರುಳಿ ಬಿಚ್ಚತೊಡಗಿದೆ. ಅನುಮಾನವೇ ಇಲ್ಲ.

“ಹಿಂದೂ ಜನಾಂಗ ಮತ್ತು ಹಿಂದೂ ರಾಷ್ಟ್ರವನ್ನು ತಮ್ಮ ಹೃದಯಕ್ಕೆ ಹತ್ತಿರ ಇರಿಸಿಕೊಂಡು ವೈಭವೀಕರಿಸಿ ಆ ಧ್ಯೇಯದೆಡೆಗೆ ಸಾಗುವ ಆಶೋತ್ತರ ಉಳ್ಳವರು ಮಾತ್ರವೇ ರಾಷ್ಟ್ರವಾದೀ ದೇಶಭಕ್ತರು. ಉಳಿದವರೆಲ್ಲ ದೇಶದ್ರೋಹಿಗಳು ಮತ್ತು ರಾಷ್ಟ್ರೀಯತೆಯ ವೈರಿಗಳು” ಎಂದು ಮೂರು ದಶಕಗಳ ಕಾಲ ಆರ್‌ಎಸ್‍ಎಸ್ ಮುಖ್ಯಸ್ಥರಾಗಿದ್ದ ಮಾಧವರಾವ್ ಸದಾಶಿವರಾವ್ ಗೋಲ್ವಲ್ಕರ್ ಹೇಳಿದ್ದರು. We or Our Nationhood Defined (1939) ಕೃತಿಯಲ್ಲಿ ರಾಷ್ಟ್ರೀಯತೆ ಕುರಿತ ಅವರ ವಿಚಾರದ ಸವಿವರ ಪ್ರಸ್ತಾಪವಿದೆ.

“ಹಿಂದುಸ್ತಾನದ ಪರಕೀಯ ಜನಾಂಗಗಳು ಹಿಂದು ಸಂಸ್ಕೃತಿ ಮತ್ತು ಭಾಷೆಯನ್ನು ಅಳವಡಿಸಿಕೊಳ್ಳಬೇಕು, ಹಿಂದು ಧರ್ಮವನ್ನು ಭಕ್ತಿ ಗೌರವದಿಂದ ಕಾಣಬೇಕು, ಹಿಂದೂ ಜನಾಂಗ ಮತ್ತು ಸಂಸ್ಕೃತಿಯನ್ನು ವೈಭವೀಕರಿಸುವುದರ ವಿನಾ ಬೇರೆ ಯಾವ ವಿಚಾರವನ್ನೂ ನೆಚ್ಚಕೂಡದು. ಪ್ರತ್ಯೇಕ ಅಸ್ತಿತ್ವವನ್ನು ಬಿಟ್ಟುಕೊಟ್ಟು ಹಿಂದು ಜನಾಂಗದೊಳಕ್ಕೆ ವಿಲೀನಗೊಳ್ಳಬೇಕು, ಇಲ್ಲವಾದರೆ ಹಿಂದು ರಾಷ್ಟ್ರಕ್ಕೆ ಸಂಪೂರ್ಣ ಅಧೀನವಾಗಿ ನಾಗರಿಕ ಹಕ್ಕುಗಳನ್ನು ಕೂಡ ಕೇಳದಂತೆ ಈ ದೇಶದಲ್ಲಿ ಜೀವಿಸಬೇಕು. ನಮ್ಮದು ಪ್ರಾಚೀನ ರಾಷ್ಟ್ರ. ತಮ್ಮ ದೇಶದಲ್ಲಿ ನೆಲೆಸಲು ಬಂದ ಪರಕೀಯ ಜನಾಂಗಗಳನ್ನು ಪ್ರಾಚೀನ ದೇಶಗಳು ಹೇಗೆ ನಡೆಸಿಕೊಳ್ಳುತ್ತವೆಯೋ ಅದೇ ರೀತಿ ನಡೆಸಿಕೊಳ್ಳೋಣ” ಎಂಬುದು ಗೋಲ್ವಲ್ಕರ್ ಅವರ ಪ್ರತಿಪಾದನೆಯಾಗಿತ್ತು.

ಆದರೆ ಸಂವಿಧಾನ ರಚನಾ ಸಭೆಯು ಗೋಲ್ವಲ್ಕರ್ ಅವರ ಈ ಪ್ರತಿಪಾದನೆಗಳನ್ನು ತಿರಸ್ಕರಿಸಿತು. ಪೌರತ್ವದ ತಳಹದಿ ಧರ್ಮ ಅಲ್ಲ ಎಂದು ಸಾರಿತು. ಭಾರತವನ್ನು ಹಿಂದೂ ಬಹುಸಂಖ್ಯಾತ ದೇಶ ಎಂದು ಘೋಷಿಸದೆ ಜಾತ್ಯತೀತ ಮೌಲ್ಯ ವ್ಯವಸ್ಥೆಯನ್ನು ಅಳವಡಿಸಿಕೊಂಡಿತು.

ಮನುಷ್ಯ ಮನುಷ್ಯನನ್ನು ಜಾತಿಯ ಕಾರಣಕ್ಕೆ, ಧರ್ಮದ ಕಾರಣಕ್ಕೆ, ತೊಗಲಿನ ಬಣ್ಣದ ಕಾರಣಕ್ಕೆ ದ್ವೇಷಿಸಿ ಹಿಂಸಿಸತೊಡಗಿದ್ದಾನೆ. ಮಾನವೀಯತೆಯನ್ನು ಮರೆತಿದ್ದಾನೆ. ಆಳದಲ್ಲಿ ಮಲಗಿರುವ ಪಾಶವಿಕ ಹಿಂಸಾ ಪ್ರವೃತ್ತಿ ಮೇಲೆದ್ದು ಹೆಡೆಯೆತ್ತಿ ಭುಸುಗುಡುತ್ತಿದೆ. ಸಾವಿರ ಸಾವಿರ ವರ್ಷಗಳಿಂದ ನಾಗರಿಕತೆಯ ವಿಕಾಸದ ಹಾದಿಯಲ್ಲಿ ಮಾನವೀಯ ಸಾಮಾಜಿಕ ನಡವಳಿಕೆಗಳು ಕೆಳಕ್ಕೆ ತುಳಿದಿಟ್ಟ ಈ ಪ್ರವೃತ್ತಿಗಳನ್ನು ಕೆದರಿ ಕೆಣಕಿ ಕೆರಳಿಸಿ ಭುಗಿಲೆಬ್ಬಿಸಿದವರು ಯಾರು? ಈ ಉರಿವ ಬೆಂಕಿಗೆ ಎಣ್ಣೆ ಎರಚುತ್ತ ಬಂದಿರುವವರು ಯಾರು ಎಂಬ ಪ್ರಶ್ನೆಗಳಿಗೆ ಉತ್ತರಗಳು ದೇಶ ವಿದೇಶಗಳಲ್ಲಿ ಒಡಮೂಡಿವೆ. ಒಂದೊಂದು ದೇಶದಲ್ಲಿ ಒಂದೊಂದು ಹೆಸರು ಧರಿಸಿವೆ. ಹೊಸ ಭಯೋತ್ಪಾದಕರನ್ನು ಕಟೆದು ನಿಲ್ಲಿಸಿವೆ. ಈ ಭಯೋತ್ಪಾದಕರು ಮುಖ ಕೈಕಾಲು ದೇಹಧಾರಿ ಮನುಷ್ಯರಲ್ಲ. ಬದಲಾಗಿ ಅವರದೆಯಲ್ಲಿ ಭುಗಿಲೆದ್ದು ಪ್ರಚಂಡ ನಾಯಕರು ಯಾರತ್ತ ಇಷಾರೆ ಮಾಡಿದರೆ ಅವರನ್ನು ಸುಡಬಹುದಾದ ಕಡುದ್ವೇಷದ ಕಿಚ್ಚು. ಅದುವೇ ನವ ಭಯೋತ್ಪಾದಕ. ಈ ಭಯೋತ್ಪಾದಕ ಈವರೆಗೆ ಕಂಡು ಕೇಳಿರುವ ಎಲ್ಲ ಭಯೋತ್ಪಾದಕರಿಗಿಂತ ಅಧಿಕ ಘಾತಕ. ಈ ಕಿಚ್ಚಿಗೆ ವರ್ಣಭೇದ, ಧರ್ಮ, ಜಾತಿ, ಮೇಲು ಕೀಳಿನ ಮುಖವಾಡ ತೊಡಿಸಿ ಅಮಾಯಕರನ್ನು ಹರಿದು ತಿನ್ನಲು ಛೂ ಬಿಡಲಾಗಿದೆ.

ಭರತವರ್ಷದಲ್ಲಿನ ನಿಜ ನಾಮಧೇಯಗಳು ಚಿರಪರಿಚಿತ. ಇವುಗಳು ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು. ನಂತರದ್ದು ಕ್ರೈಸ್ತರದು ಇದ್ದೀತು.


ಇದನ್ನು ಓದಿ: ಕರ್ನಾಟಕದ ಒಕ್ಕೂಟ ರಾಜಕೀಯ ವ್ಯವಸ್ಥೆಯ ಚರಿತ್ರೆ: ಟಿ.ಆರ್ ಚಂದ್ರಶೇಖರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...