Homeಅಂಕಣಗಳುದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ಹಿಟ್ಲರನ ಜರ್ಮನಿಯೂ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಿತ್ತು; ಯಹೂದಿಗಳಿಗೆ ನಾಗರಿಕತೆ ನಿರಾಕರಿಸಿತ್ತು.. ಅದೇ ಈಗ ಭಾರತದಲ್ಲಿಯೂ ನಡೆಯುತ್ತಿದೆ

- Advertisement -
- Advertisement -

ಮುಸ್ಲಿಮರನ್ನು ಬಹುಸಂಖ್ಯಾತ ಹಿಂದೂ ರಾಷ್ಟ್ರದ ಎರಡನೆಯ ದರ್ಜೆಯ ಪ್ರಜೆಗಳನ್ನಾಗಿಸಿ ಸಮಾನತೆಯನ್ನು ನಿರಾಕರಿಸುವುದು ಪೌರತ್ವ ಕಾಯಿದೆ ತಿದ್ದುಪಡಿ ಮತ್ತು ಎನ್‍ಆರ್‌ಸಿಯ ಮೂಲ ಉದ್ದೇಶವಾಗಿತ್ತು. ಈ ಕಾಯಿದೆ ಹತ್ತಾರುಗಳ ಪ್ರಯೋಗ ಆರಂಭವಾಗಿದೆ.

ಸಮಾನತೆ ನಿರಾಕರಿಸುವ ಮತ್ತೊಂದು ಕಾನೂನನ್ನು ಬಿಜೆಪಿ ಆಡಳಿತ ರಾಜ್ಯ ಸರ್ಕಾರಗಳು ಒಂದರ ನಂತರ ಮತ್ತೊಂದರಂತೆ ಜಾರಿಗೆ ತರತೊಡಗಿವೆ. ಮಧ್ಯಪ್ರದೇಶದ ನಂತರ ಮಂಗಳವಾರ ರಾತ್ರಿ ಉತ್ತರಪ್ರದೇಶವೂ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಿತು. ಮುಸಲ್ಮಾನ ಯುವಕರು ಹಿಂದೂ ಯುವತಿಯರನ್ನು ಪ್ರೇಮಪಾಶಕ್ಕೆ ಸಿಲುಕಿಸಿಕೊಂಡು ಮುಸ್ಲಿಮ್ ಧರ್ಮಕ್ಕೆ ಮತಾಂತರಗೊಳಿಸುವರು ಎಂಬ ಆಪಾದನೆಗೆ ಹಿಂದುತ್ವವಾದ ಇರಿಸಿರುವ ಹೆಸರು ‘ಲವ್ ಜಿಹಾದ್’. ಅಂತರಧರ್ಮೀಯ ವಿವಾಹಗಳ ನಿಷೇಧವನ್ನು ಲವ್ ಜಿಹಾದ್ ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ ಎಂಬುದು ಹಿಂದುತ್ವವಾದ ಮಂಡಿಸುವ ವಾದ.

ಆದರೆ ವಾಸ್ತವವಾಗಿ ಅಲ್ಪಸಂಖ್ಯಾತರನ್ನು ಎರಡನೆ ದರ್ಜೆಯ ಪ್ರಜೆಗಳನ್ನಾಗಿಸುವ ಕ್ರಮದ ಮುಂದುವರಿಕೆಯಿದು. ಹಿಟ್ಲರ್ ಸತ್ತಿದ್ದಾನೆ ಎಂದು ಯಾರು ಹೇಳುತ್ತಾರೆ? ಜರ್ಮನಿಯಲ್ಲಿ ದಫನಾದದ್ದು ಅವನ ಭೌತಿಕ ಶರೀರ ಮಾತ್ರ. ಕುಲೀನ ಹಸಿರು ರಕ್ತದ ಆರ್ಯ ಜನಾಂಗೀಯ ಮೇಲ್ಮೆಯನ್ನು ಮತ್ತೆ ಸ್ಥಾಪಿಸುವ ಅವನ ಧೋರಣೆಗಳು ದಫನಾಗಿಲ್ಲ. ಅವು ಗಾಳಿಯಲ್ಲಿ ನೀರಿನಲ್ಲಿ ತೇಲಿ ದೇಶ ದೇಶಗಳನ್ನು ಮುಟ್ಟಿವೆ. ಪ್ರಚಂಡ ನಾಯಕರ ಒಡಲುಗಳನ್ನು ಮೆದುಳುಗಳನ್ನು ಸೇರಿ ಹೋಗಿವೆ. ಜನಾಂಗೀಯ ಶ್ರೇಷ್ಠತೆಯ ಹುಸಿ ಹೆಮ್ಮೆಯನ್ನೂ, ಅನಾರ್ಯ ರಕ್ತದ ಮೇಲೆ ದ್ವೇಷದ ಕಿಚ್ಚನ್ನೂ ಹೊತ್ತಿಸಿ ಉರಿಸತೊಡಗಿವೆ.

ಈ ಅಂಕಣದಲ್ಲಿ ಈ ಹಿಂದೆ ಹೇಳಿರುವ ಹಲವು ಮಾತುಗಳನ್ನು ಪುನಃ ಹೇಳಲೇಬೇಕಿದೆ.

ಕಳೆದ ಆರು ವರ್ಷಗಳಿಂದ ದೇಶದುದ್ದಗಲಕ್ಕೆ ರಸ್ತೆ ರಸ್ತೆಗಳಲ್ಲಿ ಮುಸಲ್ಮಾನರು ದಲಿತರು ಈ ಕಿಚ್ಚಿಗೆ ಬಲಿಯಾದರು. ಕೊರೊನಾ ಮಹಾಮಾರಿ ಹಾಕಿರುವ ಅಲ್ಪವಿರಾಮ ತೆರವಾದ ನಂತರ ಈ ಕಿಚ್ಚು ಹೊಸ ಎಣ್ಣೆ ಎರೆಸಿಕೊಂಡು ಭುಗಿಲೇಳುವಲ್ಲಿ ಯಾವ ಅನುಮಾನವೂ ಇಲ್ಲ.

ಶ್ರೇಷ್ಠ ಆರ್ಯ ರಕ್ತ ಮತ್ತು ಕನಿಷ್ಠ ಅನಾರ್ಯ ರಕ್ತ ಅಥವಾ ಶ್ರೇಷ್ಠ ಆರ್ಯ ತಳಿ ಮತ್ತು ಕನಿಷ್ಠ ಅನಾರ್ಯ ತಳಿ ಎಂಬ ಹುಸಿ ಭೇದಭಾವವು ಹಿಟ್ಲರನ ಜರ್ಮನಿ ಮತ್ತು ಜರ್ಮನಿ ಆಕ್ರಮಿತ ಪ್ರದೇಶಗಳಲ್ಲಿ 60 ಲಕ್ಷ ಯಹೂದಿಗಳ ಮಾರಣಹೋಮಕ್ಕೆ ಕಾರಣವಾಯಿತು. ಹಲವು ಹತ್ತು ಲಕ್ಷಗಳಷ್ಟು ಇತರರೂ ಬಲಿಯಾದರು.

ನಾಜಿ ಜರ್ಮನಿಯ ಇತಿಹಾಸ ಭಾರತದಲ್ಲಿ ಸುರುಳಿ ಬಿಚ್ಚತೊಡಗಿದೆ. ಅನುಮಾನವೇ ಇಲ್ಲ.

“ಹಿಂದೂ ಜನಾಂಗ ಮತ್ತು ಹಿಂದೂ ರಾಷ್ಟ್ರವನ್ನು ತಮ್ಮ ಹೃದಯಕ್ಕೆ ಹತ್ತಿರ ಇರಿಸಿಕೊಂಡು ವೈಭವೀಕರಿಸಿ ಆ ಧ್ಯೇಯದೆಡೆಗೆ ಸಾಗುವ ಆಶೋತ್ತರ ಉಳ್ಳವರು ಮಾತ್ರವೇ ರಾಷ್ಟ್ರವಾದೀ ದೇಶಭಕ್ತರು. ಉಳಿದವರೆಲ್ಲ ದೇಶದ್ರೋಹಿಗಳು ಮತ್ತು ರಾಷ್ಟ್ರೀಯತೆಯ ವೈರಿಗಳು” ಎಂದು ಮೂರು ದಶಕಗಳ ಕಾಲ ಆರ್‌ಎಸ್‍ಎಸ್ ಮುಖ್ಯಸ್ಥರಾಗಿದ್ದ ಮಾಧವರಾವ್ ಸದಾಶಿವರಾವ್ ಗೋಲ್ವಲ್ಕರ್ ಹೇಳಿದ್ದರು. We or Our Nationhood Defined (1939) ಕೃತಿಯಲ್ಲಿ ರಾಷ್ಟ್ರೀಯತೆ ಕುರಿತ ಅವರ ವಿಚಾರದ ಸವಿವರ ಪ್ರಸ್ತಾಪವಿದೆ.

“ಹಿಂದುಸ್ತಾನದ ಪರಕೀಯ ಜನಾಂಗಗಳು ಹಿಂದು ಸಂಸ್ಕೃತಿ ಮತ್ತು ಭಾಷೆಯನ್ನು ಅಳವಡಿಸಿಕೊಳ್ಳಬೇಕು, ಹಿಂದು ಧರ್ಮವನ್ನು ಭಕ್ತಿ ಗೌರವದಿಂದ ಕಾಣಬೇಕು, ಹಿಂದೂ ಜನಾಂಗ ಮತ್ತು ಸಂಸ್ಕೃತಿಯನ್ನು ವೈಭವೀಕರಿಸುವುದರ ವಿನಾ ಬೇರೆ ಯಾವ ವಿಚಾರವನ್ನೂ ನೆಚ್ಚಕೂಡದು. ಪ್ರತ್ಯೇಕ ಅಸ್ತಿತ್ವವನ್ನು ಬಿಟ್ಟುಕೊಟ್ಟು ಹಿಂದು ಜನಾಂಗದೊಳಕ್ಕೆ ವಿಲೀನಗೊಳ್ಳಬೇಕು, ಇಲ್ಲವಾದರೆ ಹಿಂದು ರಾಷ್ಟ್ರಕ್ಕೆ ಸಂಪೂರ್ಣ ಅಧೀನವಾಗಿ ನಾಗರಿಕ ಹಕ್ಕುಗಳನ್ನು ಕೂಡ ಕೇಳದಂತೆ ಈ ದೇಶದಲ್ಲಿ ಜೀವಿಸಬೇಕು. ನಮ್ಮದು ಪ್ರಾಚೀನ ರಾಷ್ಟ್ರ. ತಮ್ಮ ದೇಶದಲ್ಲಿ ನೆಲೆಸಲು ಬಂದ ಪರಕೀಯ ಜನಾಂಗಗಳನ್ನು ಪ್ರಾಚೀನ ದೇಶಗಳು ಹೇಗೆ ನಡೆಸಿಕೊಳ್ಳುತ್ತವೆಯೋ ಅದೇ ರೀತಿ ನಡೆಸಿಕೊಳ್ಳೋಣ” ಎಂಬುದು ಗೋಲ್ವಲ್ಕರ್ ಅವರ ಪ್ರತಿಪಾದನೆಯಾಗಿತ್ತು.

ಆದರೆ ಸಂವಿಧಾನ ರಚನಾ ಸಭೆಯು ಗೋಲ್ವಲ್ಕರ್ ಅವರ ಈ ಪ್ರತಿಪಾದನೆಗಳನ್ನು ತಿರಸ್ಕರಿಸಿತು. ಪೌರತ್ವದ ತಳಹದಿ ಧರ್ಮ ಅಲ್ಲ ಎಂದು ಸಾರಿತು. ಭಾರತವನ್ನು ಹಿಂದೂ ಬಹುಸಂಖ್ಯಾತ ದೇಶ ಎಂದು ಘೋಷಿಸದೆ ಜಾತ್ಯತೀತ ಮೌಲ್ಯ ವ್ಯವಸ್ಥೆಯನ್ನು ಅಳವಡಿಸಿಕೊಂಡಿತು.

ಮನುಷ್ಯ ಮನುಷ್ಯನನ್ನು ಜಾತಿಯ ಕಾರಣಕ್ಕೆ, ಧರ್ಮದ ಕಾರಣಕ್ಕೆ, ತೊಗಲಿನ ಬಣ್ಣದ ಕಾರಣಕ್ಕೆ ದ್ವೇಷಿಸಿ ಹಿಂಸಿಸತೊಡಗಿದ್ದಾನೆ. ಮಾನವೀಯತೆಯನ್ನು ಮರೆತಿದ್ದಾನೆ. ಆಳದಲ್ಲಿ ಮಲಗಿರುವ ಪಾಶವಿಕ ಹಿಂಸಾ ಪ್ರವೃತ್ತಿ ಮೇಲೆದ್ದು ಹೆಡೆಯೆತ್ತಿ ಭುಸುಗುಡುತ್ತಿದೆ. ಸಾವಿರ ಸಾವಿರ ವರ್ಷಗಳಿಂದ ನಾಗರಿಕತೆಯ ವಿಕಾಸದ ಹಾದಿಯಲ್ಲಿ ಮಾನವೀಯ ಸಾಮಾಜಿಕ ನಡವಳಿಕೆಗಳು ಕೆಳಕ್ಕೆ ತುಳಿದಿಟ್ಟ ಈ ಪ್ರವೃತ್ತಿಗಳನ್ನು ಕೆದರಿ ಕೆಣಕಿ ಕೆರಳಿಸಿ ಭುಗಿಲೆಬ್ಬಿಸಿದವರು ಯಾರು? ಈ ಉರಿವ ಬೆಂಕಿಗೆ ಎಣ್ಣೆ ಎರಚುತ್ತ ಬಂದಿರುವವರು ಯಾರು ಎಂಬ ಪ್ರಶ್ನೆಗಳಿಗೆ ಉತ್ತರಗಳು ದೇಶ ವಿದೇಶಗಳಲ್ಲಿ ಒಡಮೂಡಿವೆ. ಒಂದೊಂದು ದೇಶದಲ್ಲಿ ಒಂದೊಂದು ಹೆಸರು ಧರಿಸಿವೆ. ಹೊಸ ಭಯೋತ್ಪಾದಕರನ್ನು ಕಟೆದು ನಿಲ್ಲಿಸಿವೆ. ಈ ಭಯೋತ್ಪಾದಕರು ಮುಖ ಕೈಕಾಲು ದೇಹಧಾರಿ ಮನುಷ್ಯರಲ್ಲ. ಬದಲಾಗಿ ಅವರದೆಯಲ್ಲಿ ಭುಗಿಲೆದ್ದು ಪ್ರಚಂಡ ನಾಯಕರು ಯಾರತ್ತ ಇಷಾರೆ ಮಾಡಿದರೆ ಅವರನ್ನು ಸುಡಬಹುದಾದ ಕಡುದ್ವೇಷದ ಕಿಚ್ಚು. ಅದುವೇ ನವ ಭಯೋತ್ಪಾದಕ. ಈ ಭಯೋತ್ಪಾದಕ ಈವರೆಗೆ ಕಂಡು ಕೇಳಿರುವ ಎಲ್ಲ ಭಯೋತ್ಪಾದಕರಿಗಿಂತ ಅಧಿಕ ಘಾತಕ. ಈ ಕಿಚ್ಚಿಗೆ ವರ್ಣಭೇದ, ಧರ್ಮ, ಜಾತಿ, ಮೇಲು ಕೀಳಿನ ಮುಖವಾಡ ತೊಡಿಸಿ ಅಮಾಯಕರನ್ನು ಹರಿದು ತಿನ್ನಲು ಛೂ ಬಿಡಲಾಗಿದೆ.

ಭರತವರ್ಷದಲ್ಲಿನ ನಿಜ ನಾಮಧೇಯಗಳು ಚಿರಪರಿಚಿತ. ಇವುಗಳು ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು. ನಂತರದ್ದು ಕ್ರೈಸ್ತರದು ಇದ್ದೀತು.


ಇದನ್ನು ಓದಿ: ಕರ್ನಾಟಕದ ಒಕ್ಕೂಟ ರಾಜಕೀಯ ವ್ಯವಸ್ಥೆಯ ಚರಿತ್ರೆ: ಟಿ.ಆರ್ ಚಂದ್ರಶೇಖರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...