Homeಮುಖಪುಟಭದ್ರತಾ ಪಡೆಗಳಿಂದ ಉಗ್ರ ಕಮಾಂಡರ್ ಸೈಫುಲ್ಲಾ​​​ ಎನ್​ಕೌಂಟರ್

ಭದ್ರತಾ ಪಡೆಗಳಿಂದ ಉಗ್ರ ಕಮಾಂಡರ್ ಸೈಫುಲ್ಲಾ​​​ ಎನ್​ಕೌಂಟರ್

ಕುಲ್ಗಂ ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಸ್ಥಳೀಯ ಯುವ ವಿಭಾಗದ ಮುಖಂಡ ಸೇರಿದಂತೆ ಮೂವರು ಬಿಜೆಪಿ ಕಾರ್ಯಕರ್ತರು ಗುರುವಾರ ಸಾವನ್ನಪ್ಪಿದ್ದರು

- Advertisement -
- Advertisement -

ಜಮ್ಮು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಮುಹಾಜಿದೀನ್ (ಎಚ್‌ಎಂ) ಮುಖ್ಯಸ್ಥ ಸೈಫುಲ್ಲಾ ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯಾದ ಸೈಫುಲ್ಲಾ, ಕಾಶ್ಮೀರ ಕಣಿವೆಯಲ್ಲಿ ಮೋಸ್ಟ್ ವಾಂಟೆಡ್ ಉಗ್ರರಲ್ಲಿ ಒಬ್ಬರಾಗಿದ್ದರು ಮತ್ತು ಭದ್ರತಾ ಪಡೆಗಳ ಮೇಲೆ ಹಲವಾರು ದಾಳಿಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಇದು ಪೊಲೀಸ್ ಮತ್ತು ಭದ್ರತಾ ಪಡೆಗಳಿಗೆ ದಕ್ಕಿದ ದೊಡ್ಡ ಯಶಸ್ಸು. ಇದು ಸಣ್ಣ ಸಾಧನೆಯಲ್ಲ” ಎಂದು ಕಾಶ್ಮೀರದ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ (ಐಜಿಪಿ) ವಿಜಯ್ ಕುಮಾರ್ ಎನ್ಕೌಂಟರ್ ನಡೆದ ಸ್ಥಳದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಸೈಫುಲ್ಲಾ ಇತ್ತೀಚೆಗೆ ಹತ್ಯೆಯಾದ ಬಿಜೆಪಿ ಕಾರ್ಯಕರ್ತರ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿದೆ. ಇನ್ನು ಕಾರ್ಯಾಚರಣೆ ಮುಂದುವರೆದಿದ್ದು ಭದ್ರತಾ ಪಡೆಗಳು ಮತ್ತೋರ್ವ ಉಗ್ರನನ್ನು ಬಂಧಿಸಿದ್ದಾರೆ. ಘಟನೆ  ವೇಳೆ ಯುವಕರ ಗುಂಪೊಂದು ರಕ್ಷಣಾ ಪಡೆ ಮೇಲೆ ಕಲ್ಲು ಎಸೆದ ಘಟನೆಯೂ ನಡೆದಿದೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರ: ಭಯೋತ್ಪಾದಕರ ಗುಂಡೇಟಿಗೆ 3 ಬಿಜೆಪಿ ಕಾರ್ಯಕರ್ತರು ಬಲಿ!

ಸ್ಥಳದಲ್ಲಿ ಉಗ್ರರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಹಳೆಯ ವಾಯುನೆಲೆಯ ಸಮೀಪ ರಂಗ್ರೆತ್ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಪರಸ್ಪರ ಘರ್ಷಣೆ ಉಂಟಾಗಿ ಗುಂಡಿನ ದಾಳಿಯಲ್ಲಿ ಉಗ್ರನನ್ನು ಕೊಲ್ಲಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಪೊಲೀಸರ ಜಾಲವು ಬಲಶಾಲಿಯಾಗಿದೆ. ನಗರಕ್ಕೆ ಪ್ರವೇಶಿಸುವ ಯಾವುದೇ ಉಗ್ರರ ಬಗ್ಗೆ ಪೊಲೀಸರಿಗೆ ತಕ್ಷಣ ಮಾಹಿತಿ ಸಿಗುತ್ತದೆ ಎಂದು ಐಜಿಪಿ ಕುಮಾರ್ ಹೇಳಿದರು. ಬಂಧಿಸಲಾಗಿರುವ ಉಗ್ರನನ್ನು ವಿಚಾರಣೆ ಮಾಡಲಾಗುತ್ತದೆ ಎಂದರು.

ಕುಲ್ಗಂ ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಸ್ಥಳೀಯ ಯುವ ವಿಭಾಗದ ಮುಖಂಡ ಸೇರಿದಂತೆ ಮೂವರು ಬಿಜೆಪಿ ಕಾರ್ಯಕರ್ತರು ಗುರುವಾರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು. ಕಾರ್ಯಕರ್ತರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ವೈ.ಕೆ ಪೊರಾ ಪ್ರದೇಶದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ್ದರು.


ಇದನ್ನೂ ಓದಿ: ಟ್ರಂಪ್ ನಡೆಸಿದ 18 ರ್ಯಾಲಿಗಳಿಂದ 30 ಸಾವಿರ ಜನರಿಗೆ ಸೋಂಕು, 700 ಸಾವು ಸಾಧ್ಯತೆ:…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...