Homeಮುಖಪುಟಮಣಿಪುರ| ಅಂಗಡಿಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: 24 ಗಂಟೆ ಭದ್ರತೆಗೆ ಬುಡಕಟ್ಟು ಸಮುದಾಯ ಆಗ್ರಹ

ಮಣಿಪುರ| ಅಂಗಡಿಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: 24 ಗಂಟೆ ಭದ್ರತೆಗೆ ಬುಡಕಟ್ಟು ಸಮುದಾಯ ಆಗ್ರಹ

- Advertisement -
- Advertisement -

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಹ್ಮಾರ್-ಕುಕಿ-ಝೋಮಿ ಬುಡಕಟ್ಟು ಜನಾಂಗದವರು ನಡೆಸುತ್ತಿದ್ದ ನಾಲ್ಕು ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ನಂತರ ಜಿರಿಬಾಮ್‌ನಲ್ಲಿ ಉದ್ವಿಗ್ನತೆ ಉಂಟಾಗಿದೆ.

ಬುಡಕಟ್ಟುಗಳ ನಾಗರಿಕ ಸಮಾಜದ ಗುಂಪು ಈ ಬಗ್ಗೆ ಹೇಳಿಕೆಯೊಂದನ್ನು ನೀಡಿದೆ. ಸ್ಥಳೀಯ ಬುಡಕಟ್ಟು ಅಡ್ವೊಕಸಿ ಕಮಿಟಿ (ಐಟಿಎಸಿ) ಹೇಳಿಕೆಯಲ್ಲಿ “ಅಧಿಕಾರಿಗಳು ತಕ್ಷಣವೇ ಅಪರಾಧಿಗಳನ್ನು ಬಂಧಿಸಿ ಮತ್ತು ಕಾನೂನಿನ ಪ್ರಕಾರ ಅವರಿಗೆ ಸೂಕ್ತ ಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದೆ.

ಮೈತೇಯಿ ಸಶಸ್ತ್ರ ಗುಂಪು ಅರಂಬೈ ತೆಂಗೋಲ್ ಅಂಗಡಿಗಳಿಗೆ ಬೆಂಕಿ ಹಚ್ಚಿದೆ ಎಂದು ಐಟಿಎಸಿ ಆರೋಪಿಸಿದೆ. “ಮನೆಗಳು ಮತ್ತು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹ್ಮಾರ್ ವೆಂಗ್, ಕಾಲಿನಗರ, ಜಿರಿಬಾಮ್, ಮೈತಿ ಲೈಕೈ ಪ್ರದೇಶದಲ್ಲಿ ಅಂಗಡಿ ಮನೆಗಳು ಸುಟ್ಟು ಕರಕಲಾಗಿವೆ” ಎಂದು ಐಟಿಎಸಿ ಹೇಳಿಕೆಯಲ್ಲಿ ತಿಳಿಸಿದೆ.

ಕಾಳಿನಗರ, ಹ್ಮಾರ್ ವೆಂಗ್, ಐಬಿ ಲೈಕೈ, ಕರೋಂಗ್, ರಾನಿನ್ ವೆಂಗ್, ಮಿಷನ್ ಕಾಂಪೌಂಡ್, ವೆಂಗ್ನುಮ್, ಬಾಬುಪಾರ ವಾರ್ಡ್ ನಂ. 4 (ಬಜಾರ್) ಮತ್ತು ಉಚಾಥೋಲ್‌ನಲ್ಲಿ 24 ಗಂಟೆಗಳ ರಕ್ಷಣೆ ಅಗತ್ಯವಿದೆ ಎಂದು ಹೇಳಿದೆ.

“ಜಿರಿಬಾಮ್‌ನ ಸ್ಥಳೀಯ ಬುಡಕಟ್ಟು ಜನಾಂಗದ ಹ್ಮಾರ್, ಕುಕಿ ಮತ್ತು ಝೋಮಿ ವಾಸಿಸುವ ಪ್ರದೇಶಗಳಲ್ಲಿ ಮೈತೇಯಿ ದುಷ್ಕರ್ಮಿಗಳು ಆಸ್ತಿಗಳು ಮತ್ತು ವಸ್ತುಗಳನ್ನು ನಾಶಪಡಿಸುವುದನ್ನು, ಕದಿಯುವುದನ್ನು ತಡೆಯಲು ಕೇಂದ್ರ ಪಡೆಗಳಿಂದ 24 ಗಂಟೆಗಳ ರಕ್ಷಣೆ, ಗಸ್ತು ತಿರುಗುವಿಕೆ ತಕ್ಷಣವೇ ಆರಂಭಿಸಬೇಕು ಎಂದು ನಾವು ಅಧಿಕಾರಿಗಳಿಗೆ ಒತ್ತಾಯಿಸುತ್ತೇವೆ” ಎಂದು ಐಟಿಎಸಿ ತಿಳಿಸಿದೆ.

ಜಿರಿಬಾಮ್‌ನಲ್ಲಿ ಹ್ಮಾರ್-ಕುಕಿ-ಝೋಮಿ ಬುಡಕಟ್ಟು ಜನಾಂಗದವರ 45 ಮನೆಗಳನ್ನು ಸುಟ್ಟು ಹಾಕಲಾಗಿದೆ. ಕಳೆದ ಶನಿವಾರದಂದು ಮೈತೇಯಿ ಗುಂಪೊಂದು ಬೆಂಕಿ ಹಚ್ಚಿತ್ತು. ಆದರೆ, ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸುವ ಮುನ್ನ ಬೆಂಕಿ ನಂದಿಸಲಾಗಿದೆ ಎಂದು ಐಟಿಎಸಿ ಹೇಳಿದೆ.

40 ವರ್ಷದ ಎಲ್ ಲಾಲಿಯನ್‌ಮುವಾಂಗ್ ಎಂಬವರನ್ನು ಅವರ ಮನೆಯಿಂದ ಅರಂಬೈ ತೆಂಗೋಲ್ ಸದಸ್ಯರು ಅಪಹರಿಸಿದ್ದಾರೆ. ಈಗ ಲಾಲಿಯನ್‌ಮುವಾಂಗ್ ಕಾಣೆಯಾಗಿದ್ದಾರೆ ಎಂದು ಕೂಡ ಆರೋಪಿಸಿದೆ.

ಇದನ್ನೂ ಓದಿ : ಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಮರ್ಡರ್‌ ಕೇಸ್‌: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದದಲ್ಲಿ ಒಡಿಶಾದ ನೂತನ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...