Homeಮುಖಪುಟನಾಳೆಯೇ ಬಹುಮತ ಸಾಬೀತುಮಾಡಿ: ಕಾಂಗ್ರೆಸ್‌ಗೆ ಮಧ್ಯಪ್ರದೇಶ ಗವರ್ನರ್‌ ತಾಕೀತು

ನಾಳೆಯೇ ಬಹುಮತ ಸಾಬೀತುಮಾಡಿ: ಕಾಂಗ್ರೆಸ್‌ಗೆ ಮಧ್ಯಪ್ರದೇಶ ಗವರ್ನರ್‌ ತಾಕೀತು

ಮುಖ್ಯಮಂತ್ರಿ ಕಮಲ್ ನಾಥ್ ಅವರು ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಶಾಸಕರ "ಬಿಡುಗಡೆ" ಮಾಡುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶ ರಾಜ್ಯಪಾಲರು ಸೋಮವಾರವೇ ವಿಶ್ವಾಸಮತ ಪರೀಕ್ಷೆ ನಡೆಸುವಂತೆ ಸ್ಪೀಕರ್‌ಗೆ ಸೂಚಿಸಿದ್ದು, ವಿಶ್ವಾಸಮತ ಯಾಚನೆಯನ್ನು “ಮುಂದೂಡಲು, ವಿಳಂಬ ಮಾಡಲು ಅಥವಾ ಅಮಾನತುಗೊಳಿಸಲು” ಸಾಧ್ಯವಿಲ್ಲ ಎಂದಿದ್ದಾರೆ.

ಕಮಲ್ ನಾಥ್ ಅವರ 15 ತಿಂಗಳ ಸರ್ಕಾರಕ್ಕೆ 22 ಕಾಂಗ್ರೆಸ್ ಶಾಸಕರು ಸಾಮೂಹಿಕವಾಗಿ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಮಧ್ಯಪ್ರದೇಶದ ಗವರ್ನರ್ ಲಾಲ್ಜಿ ಟಂಡನ್ ಅವರು ಬಹುಮತ ಪರೀಕ್ಷೆ ನಡೆಸುವಂತೆ ವಿಧಾನಸಭಾ ಸ್ಪೀಕರ್ ನರ್ಮದಾ ಪ್ರಸಾದ್ ಪ್ರಜಾಪತಿಗೆ ನಿರ್ದೇಶನ ನೀಡಿದ್ದಾರೆ.

“ಮಧ್ಯಪ್ರದೇಶದ ವಿಧಾನಸಭೆಯ ಅಧಿವೇಶನವು 2020ರ ಮಾರ್ಚ್ 16 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ, ಮತ್ತು ನಾನು ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ನಂತರ, ಮೊದಲು ನಡೆಸಬೇಕಾದ ಕೆಲಸ ಬಹುಮತ ಸಾಬೀತುಪಡಿಸುವುದಾಗಿದೆ” ಎಂದು ರಾಜ್ಯಪಾಲರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

“ವಿಶ್ವಾಸಮತ ಯಾಚನೆಯು ಗುಂಡಿಯನ್ನು ಒತ್ತುವ ಮೂಲಕ ನಡೆಯುತ್ತದೆ, ಬೇರೆ ಯಾವುದೇ ಮತದಾನ ಸ್ವೀಕಾರಾರ್ಹವಲ್ಲ” ಎಂದು ಅವರು ಹೇಳಿದರು.

ಆರು ಬಂಡಾಯ ಮಂತ್ರಿಗಳ ರಾಜೀನಾಮೆಯನ್ನು ಸ್ಪೀಕರ್ ಶನಿವಾರ ಅಂಗೀಕರಿಸಿದ್ದಾರೆ. ಈ ನಿರ್ಧಾರದಿಂದಾಗಿ ಸದನದಲ್ಲಿ ಬಹುಮತದ ಸಂಖ್ಯೆ 113ಕ್ಕೆ ಕುಸಿದಿದೆ. ಇದರಿಂದಾಗಿ 230 ಸದಸ್ಯರ ವಿಧಾನಸಭೆಯ ಬಲವು 222 ಕ್ಕೆ ಕುಗ್ಗಿದೆ. (ಇಬ್ಬರು ಶಾಸಕರ ಸಾವಿನಿಂದಾಗಿ ಎರಡು ಸ್ಥಾನಗಳು ಈಗಾಗಲೇ ಖಾಲಿ ಇದ್ದವು). ಕಾಂಗ್ರೆಸ್ ಸದನದಲ್ಲಿ 108 ಶಾಸಕರನ್ನು ಹೊಂದಿದ್ದು, ಏಳು ಮಿತ್ರ ಶಾಸಕರ ಬೆಂಬಲವಿದೆ. ಉಳಿದ ಬಂಡಾಯ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದರೆ, ಕಾಂಗ್ರೆಸ್ ಬಲವು 90ಕ್ಕಿಂತ ಕಡಿಮೆಗೆ ಕುಸಿದು ಬಹುಮತಕ್ಕಿಂತ ಕೆಳಗಿರುತ್ತದೆ ಮತ್ತು 107 ಶಾಸಕರನ್ನು ಹೊಂದಿರುವ ಬಿಜೆಪಿ ದೊಡ್ಡ ಪಕ್ಷವಾಗಲಿದೆ.

ಅತೃಪ್ತ ಶಾಸಕರು ಪ್ರಸ್ತುತ ಬೆಂಗಳೂರಿನಲ್ಲಿ ಒಟ್ಟಿಗೆ ಸೇರಿದ್ದಾರೆ. ಬಿಜೆಪಿ ಅವರನ್ನು ಸೆರೆಯಲ್ಲಿಟ್ಟುಕೊಂಡಿದೆ ಎಂದು ಕಾಂಗ್ರೆಸ್ ಹೇಳಿದೆ.

ಮುಖ್ಯಮಂತ್ರಿ ಕಮಲ್ ನಾಥ್ ಅವರು ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಶಾಸಕರ “ಬಿಡುಗಡೆ” ಮಾಡುವಂತೆ ಒತ್ತಾಯಿಸಿದ್ದಾರೆ.

“ದಯವಿಟ್ಟು ಕೇಂದ್ರ ಗೃಹ ಸಚಿವರಾಗಿ ನಿಮ್ಮ ಅಧಿಕಾರವನ್ನು ಬಳಸಿ ಅವರನ್ನು ಬಂಧಮುಕ್ತಗೊಳಿಸಿ. ಇದರಿಂದಾಗಿ ಬಂಧಿತರಾಗಿರುವ 22 ಕಾಂಗ್ರೆಸ್ ಶಾಸಕರು ಸುರಕ್ಷಿತವಾಗಿ ಮಧ್ಯಪ್ರದೇಶವನ್ನು ತಲುಪಬಹುದು ಮತ್ತು ಮಾರ್ಚ್ 16 ರಿಂದ ಪ್ರಾರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಯಾವುದೇ ಆಮಿಷ ಮತ್ತು ಭಯವಿಲ್ಲದೆ ಭಾಗವಹಿಸಬಹುದು” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...