Homeಮುಖಪುಟನಾಳೆಯೇ ಬಹುಮತ ಸಾಬೀತುಮಾಡಿ: ಕಾಂಗ್ರೆಸ್‌ಗೆ ಮಧ್ಯಪ್ರದೇಶ ಗವರ್ನರ್‌ ತಾಕೀತು

ನಾಳೆಯೇ ಬಹುಮತ ಸಾಬೀತುಮಾಡಿ: ಕಾಂಗ್ರೆಸ್‌ಗೆ ಮಧ್ಯಪ್ರದೇಶ ಗವರ್ನರ್‌ ತಾಕೀತು

ಮುಖ್ಯಮಂತ್ರಿ ಕಮಲ್ ನಾಥ್ ಅವರು ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಶಾಸಕರ "ಬಿಡುಗಡೆ" ಮಾಡುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶ ರಾಜ್ಯಪಾಲರು ಸೋಮವಾರವೇ ವಿಶ್ವಾಸಮತ ಪರೀಕ್ಷೆ ನಡೆಸುವಂತೆ ಸ್ಪೀಕರ್‌ಗೆ ಸೂಚಿಸಿದ್ದು, ವಿಶ್ವಾಸಮತ ಯಾಚನೆಯನ್ನು “ಮುಂದೂಡಲು, ವಿಳಂಬ ಮಾಡಲು ಅಥವಾ ಅಮಾನತುಗೊಳಿಸಲು” ಸಾಧ್ಯವಿಲ್ಲ ಎಂದಿದ್ದಾರೆ.

ಕಮಲ್ ನಾಥ್ ಅವರ 15 ತಿಂಗಳ ಸರ್ಕಾರಕ್ಕೆ 22 ಕಾಂಗ್ರೆಸ್ ಶಾಸಕರು ಸಾಮೂಹಿಕವಾಗಿ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಮಧ್ಯಪ್ರದೇಶದ ಗವರ್ನರ್ ಲಾಲ್ಜಿ ಟಂಡನ್ ಅವರು ಬಹುಮತ ಪರೀಕ್ಷೆ ನಡೆಸುವಂತೆ ವಿಧಾನಸಭಾ ಸ್ಪೀಕರ್ ನರ್ಮದಾ ಪ್ರಸಾದ್ ಪ್ರಜಾಪತಿಗೆ ನಿರ್ದೇಶನ ನೀಡಿದ್ದಾರೆ.

“ಮಧ್ಯಪ್ರದೇಶದ ವಿಧಾನಸಭೆಯ ಅಧಿವೇಶನವು 2020ರ ಮಾರ್ಚ್ 16 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ, ಮತ್ತು ನಾನು ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ನಂತರ, ಮೊದಲು ನಡೆಸಬೇಕಾದ ಕೆಲಸ ಬಹುಮತ ಸಾಬೀತುಪಡಿಸುವುದಾಗಿದೆ” ಎಂದು ರಾಜ್ಯಪಾಲರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

“ವಿಶ್ವಾಸಮತ ಯಾಚನೆಯು ಗುಂಡಿಯನ್ನು ಒತ್ತುವ ಮೂಲಕ ನಡೆಯುತ್ತದೆ, ಬೇರೆ ಯಾವುದೇ ಮತದಾನ ಸ್ವೀಕಾರಾರ್ಹವಲ್ಲ” ಎಂದು ಅವರು ಹೇಳಿದರು.

ಆರು ಬಂಡಾಯ ಮಂತ್ರಿಗಳ ರಾಜೀನಾಮೆಯನ್ನು ಸ್ಪೀಕರ್ ಶನಿವಾರ ಅಂಗೀಕರಿಸಿದ್ದಾರೆ. ಈ ನಿರ್ಧಾರದಿಂದಾಗಿ ಸದನದಲ್ಲಿ ಬಹುಮತದ ಸಂಖ್ಯೆ 113ಕ್ಕೆ ಕುಸಿದಿದೆ. ಇದರಿಂದಾಗಿ 230 ಸದಸ್ಯರ ವಿಧಾನಸಭೆಯ ಬಲವು 222 ಕ್ಕೆ ಕುಗ್ಗಿದೆ. (ಇಬ್ಬರು ಶಾಸಕರ ಸಾವಿನಿಂದಾಗಿ ಎರಡು ಸ್ಥಾನಗಳು ಈಗಾಗಲೇ ಖಾಲಿ ಇದ್ದವು). ಕಾಂಗ್ರೆಸ್ ಸದನದಲ್ಲಿ 108 ಶಾಸಕರನ್ನು ಹೊಂದಿದ್ದು, ಏಳು ಮಿತ್ರ ಶಾಸಕರ ಬೆಂಬಲವಿದೆ. ಉಳಿದ ಬಂಡಾಯ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದರೆ, ಕಾಂಗ್ರೆಸ್ ಬಲವು 90ಕ್ಕಿಂತ ಕಡಿಮೆಗೆ ಕುಸಿದು ಬಹುಮತಕ್ಕಿಂತ ಕೆಳಗಿರುತ್ತದೆ ಮತ್ತು 107 ಶಾಸಕರನ್ನು ಹೊಂದಿರುವ ಬಿಜೆಪಿ ದೊಡ್ಡ ಪಕ್ಷವಾಗಲಿದೆ.

ಅತೃಪ್ತ ಶಾಸಕರು ಪ್ರಸ್ತುತ ಬೆಂಗಳೂರಿನಲ್ಲಿ ಒಟ್ಟಿಗೆ ಸೇರಿದ್ದಾರೆ. ಬಿಜೆಪಿ ಅವರನ್ನು ಸೆರೆಯಲ್ಲಿಟ್ಟುಕೊಂಡಿದೆ ಎಂದು ಕಾಂಗ್ರೆಸ್ ಹೇಳಿದೆ.

ಮುಖ್ಯಮಂತ್ರಿ ಕಮಲ್ ನಾಥ್ ಅವರು ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಶಾಸಕರ “ಬಿಡುಗಡೆ” ಮಾಡುವಂತೆ ಒತ್ತಾಯಿಸಿದ್ದಾರೆ.

“ದಯವಿಟ್ಟು ಕೇಂದ್ರ ಗೃಹ ಸಚಿವರಾಗಿ ನಿಮ್ಮ ಅಧಿಕಾರವನ್ನು ಬಳಸಿ ಅವರನ್ನು ಬಂಧಮುಕ್ತಗೊಳಿಸಿ. ಇದರಿಂದಾಗಿ ಬಂಧಿತರಾಗಿರುವ 22 ಕಾಂಗ್ರೆಸ್ ಶಾಸಕರು ಸುರಕ್ಷಿತವಾಗಿ ಮಧ್ಯಪ್ರದೇಶವನ್ನು ತಲುಪಬಹುದು ಮತ್ತು ಮಾರ್ಚ್ 16 ರಿಂದ ಪ್ರಾರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಯಾವುದೇ ಆಮಿಷ ಮತ್ತು ಭಯವಿಲ್ಲದೆ ಭಾಗವಹಿಸಬಹುದು” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...