Homeಮುಖಪುಟ'Z' ಶ್ರೇಣಿಯ ಭದ್ರತೆ ಸ್ವೀಕರಿಸುವಂತೆ ಅಸಾದುದ್ದೀನ್ ಓವೈಸಿಗೆ ಅಮಿತ್‌ ಶಾ ಮನವಿ

‘Z’ ಶ್ರೇಣಿಯ ಭದ್ರತೆ ಸ್ವೀಕರಿಸುವಂತೆ ಅಸಾದುದ್ದೀನ್ ಓವೈಸಿಗೆ ಅಮಿತ್‌ ಶಾ ಮನವಿ

- Advertisement -
- Advertisement -

ಎಐಎಂಐಎಂ ಮುಖ್ಯಸ್ಥ ಮತ್ತು ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಬಳಿಕ ಒಕ್ಕೂಟ ಸರ್ಕಾರ ‘Z’ ಶ್ರೇಣಿಯ ಭದ್ರತೆ ನೀಡುವುದಾಗಿ ತಿಳಿಸಿತ್ತು. ಭದ್ರತೆ ಬೇಡ ಎಂದಿರುವ ಓವೈಸಿ ಅವರಿಗೆ ಭದ್ರತೆ ಸ್ವೀಕರಿಸುವಂತೆ ಗೃಹ ಸಚಿವ ಅಮಿತ್‌ ಶಾ ಮನವಿ ಮಾಡಿದ್ದಾರೆ.

ಕಳೆದ ವಾರ ಆರಂಭದಲ್ಲಿ ಉತ್ತರ ಪ್ರದೇಶದ ಚುನಾವಣೆ ಪ್ರಚಾರದಿಂದ ಹಿಂದಿರುಗುತ್ತಿದ್ದ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆದಿತ್ತು. ಬಳಿಕ ಒಕ್ಕೂಟ ಸರ್ಕಾರ ‘Z’ ಶ್ರೇಣಿಯ ಭದ್ರತೆಯನ್ನು ನೀಡುವುದಾಗಿ ಪ್ರಸ್ತಾಪಿಸಿತ್ತು. ಆದರೆ ನನಗೆ ಭದ್ರತೆ ಬೇಡ ಎಂದು ಓವೈಸಿ ತಿಳಿಸಿದ್ದರು. ಹೀಗಾಗಿ ಭದ್ರತೆಯನ್ನು ಸ್ವೀಕರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಾಯಿಸಿದ್ದಾರೆ.

“ಓವೈಸಿ ಅವರ ಭದ್ರತೆಗೆ ಬೆದರಿಕೆ ಇದೆ.ಸರ್ಕಾರವು ‘ಝಡ್’ ಕೆಟಗರಿ ಭದ್ರತೆ (ಬುಲೆಟ್ ಪ್ರೂಫ್ ಸಹಿತ) ಕಾರನ್ನು ನೀಡಲು ನಿರ್ಧರಿಸಿದೆ. ಆದರೆ ಅವರು ನಿರಾಕರಿಸಿದ್ದಾರೆ. ಅವರು ಈ ಭದ್ರತೆಯನ್ನು ಸ್ವೀಕರಿಸಲು ನಾನು ಸದನದ ಸದಸ್ಯರ ಮೂಲಕ ವಿನಂತಿಸುತ್ತೇನೆ”  ಎಂದು ಅಮಿತ್ ಶಾ ಸಂಸತ್ತಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

ಉತ್ತರ ಪ್ರದೇಶದ ಮೀರತ್‌ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ವಾಪಸಾಗುತ್ತಿದ್ದ ಎಐಎಂಐಎಂ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿಯಾಗಿತ್ತು. ಪ್ರಕರಣದಲ್ಲಿ ಬಂಧಿತ ಇಬ್ಬರನ್ನು 14 ದಿನಗಳ ಕಸ್ಟಡಿಗೆ ಒಪ್ಪಿಸಲಾಗಿದೆ.

“ಇಬ್ಬರು ಅಪರಿಚಿತರು ಗುಂಡು ಹಾರಿಸಿದ್ದರು. ಅವರು (ಓವೈಸಿ) ಅಪಾಯದಿಮದ ಪಾರಾದರು. ಆದರೆ ಅವರ ವಾಹನದಲ್ಲಿ ಮೂರು ಗುಂಡಿನ ಗುರುತುಗಳು ಇವೆ. ಘಟನೆಯಲ್ಲಿ ಮೂವರು ಸಾಕ್ಷಿಗಳು ಇದ್ದು, ಎಫ್ಐಆರ್ ದಾಖಲಾಗಿದೆ. ಇದುವರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಪೊಲೀಸರು ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಮಾರುತಿ ಆಲ್ಟೊ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಯುಪಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದಲ್ಲಿದೆ” ಎಂದು ಗೃಹ ಸಚಿವರು ತಿಳಿಸಿದ್ದಾರೆ.

“ಮೀರತ್‌ನ ಕಿಥೌರ್‌ನಲ್ಲಿ ಚುನಾವಣಾ ಕಾರ್ಯಕ್ರಮದ ನಂತರ ನಾನು ದೆಹಲಿಗೆ ಹೊರಟಿದ್ದೆ. ಛಜರ್ಸಿ ಟೋಲ್ ಪ್ಲಾಜಾ ಬಳಿ ಇಬ್ಬರು ನನ್ನ ವಾಹನದ ಮೇಲೆ ಮೂರರಿಂದ ನಾಲ್ಕು ಸುತ್ತಿನ ಬುಲೆಟ್‌ಗಳನ್ನು ಹಾರಿಸಿಸಲಾಗಿದೆ. ಒಟ್ಟು 3 ರಿಂದ 4 ಮಂದಿಯಿದ್ದರು. ನನ್ನ ವಾಹನದ ಟೈರ್ (ಚಿತ್ರದಲ್ಲಿ) ಪಂಕ್ಚರ್ ಆಗಿದೆ, ಹೀಗಾಗಿ ನಾನು ಇನ್ನೊಂದು ವಾಹನದಲ್ಲಿ ಹೊರಟೆ” ಎಂದು ಫೆಬ್ರವರಿ 3 ರಂದು ಅಸಾದುದ್ದೀನ್ ಓವೈಸಿ ಟ್ವೀಟ್‌ ಮಾಡಿದ್ದರು.

ಬಳಿಕ ಒಕ್ಕೂಟ ಸರ್ಕಾರ ಭದ್ರತೆ ನೀಡುವುದಾಗಿ ತಿಳಿಸಿತ್ತು. “ನನಗೆ ‘Z’ ಶ್ರೇಣಿಯ ಭದ್ರತೆ ಬೇಡ. ನಾನು A ವರ್ಗದ ಪ್ರಜೆಯಾಗಲು ಬಯಸುತ್ತೇನೆ. ನನ್ನ ಮೇಲೆ ಗುಂಡು ಹಾರಿಸಿದವರ ವಿರುದ್ಧ UAPA ಏಕೆ ಜಾರಿ ಮಾಡಲಿಲ್ಲ?. ನಾನು ಬದುಕಲು ಬಯಸುತ್ತೇನೆ, ಮಾತನಾಡಲು ಬಯಸುತ್ತೇನೆ. ಬಡವರು ಸುರಕ್ಷಿತವಾಗಿದ್ದಾಗ ನನ್ನ ಜೀವನ ಸುರಕ್ಷಿತವಾಗಿರುತ್ತದೆ. ನನ್ನ ಕಾರಿಗೆ ಗುಂಡು ಹಾರಿಸಿದವರಿಂದ ನಾನು ಹೆದರುವುದಿಲ್ಲ” ಎಂದು ಓವೈಸಿ ಕಳೆದ ವಾರ ಸಂಸತ್ತಿನಲ್ಲಿ ಹೇಳಿದ್ದರು.

ಇತ್ತ, ಚುನಾವಣಾ ಅವಧಿಯಲ್ಲಿ ತಮ್ಮ ರಾಜ್ಯಗಳೊಳಗಿನ ಚುನಾವಣೆ ಪ್ರಚಾರಕ್ಕೆ ಬರುವ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಚುನಾವಣಾ ಆಯೋಗವು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ.


ಇದನ್ನೂ ಓದಿ: ಓವೈಸಿ ಕಾರಿನ ಮೇಲೆ ದಾಳಿ ಬೆನ್ನಲ್ಲೇ ಸ್ಟಾರ್ ಪ್ರಚಾರಕರಿಗೆ ಭದ್ರತೆ ನೀಡಲು ಚುನಾವಣಾ ಆಯೋಗ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...