Homeಮುಖಪುಟ'Z' ಶ್ರೇಣಿಯ ಭದ್ರತೆ ಸ್ವೀಕರಿಸುವಂತೆ ಅಸಾದುದ್ದೀನ್ ಓವೈಸಿಗೆ ಅಮಿತ್‌ ಶಾ ಮನವಿ

‘Z’ ಶ್ರೇಣಿಯ ಭದ್ರತೆ ಸ್ವೀಕರಿಸುವಂತೆ ಅಸಾದುದ್ದೀನ್ ಓವೈಸಿಗೆ ಅಮಿತ್‌ ಶಾ ಮನವಿ

- Advertisement -
- Advertisement -

ಎಐಎಂಐಎಂ ಮುಖ್ಯಸ್ಥ ಮತ್ತು ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಬಳಿಕ ಒಕ್ಕೂಟ ಸರ್ಕಾರ ‘Z’ ಶ್ರೇಣಿಯ ಭದ್ರತೆ ನೀಡುವುದಾಗಿ ತಿಳಿಸಿತ್ತು. ಭದ್ರತೆ ಬೇಡ ಎಂದಿರುವ ಓವೈಸಿ ಅವರಿಗೆ ಭದ್ರತೆ ಸ್ವೀಕರಿಸುವಂತೆ ಗೃಹ ಸಚಿವ ಅಮಿತ್‌ ಶಾ ಮನವಿ ಮಾಡಿದ್ದಾರೆ.

ಕಳೆದ ವಾರ ಆರಂಭದಲ್ಲಿ ಉತ್ತರ ಪ್ರದೇಶದ ಚುನಾವಣೆ ಪ್ರಚಾರದಿಂದ ಹಿಂದಿರುಗುತ್ತಿದ್ದ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆದಿತ್ತು. ಬಳಿಕ ಒಕ್ಕೂಟ ಸರ್ಕಾರ ‘Z’ ಶ್ರೇಣಿಯ ಭದ್ರತೆಯನ್ನು ನೀಡುವುದಾಗಿ ಪ್ರಸ್ತಾಪಿಸಿತ್ತು. ಆದರೆ ನನಗೆ ಭದ್ರತೆ ಬೇಡ ಎಂದು ಓವೈಸಿ ತಿಳಿಸಿದ್ದರು. ಹೀಗಾಗಿ ಭದ್ರತೆಯನ್ನು ಸ್ವೀಕರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಾಯಿಸಿದ್ದಾರೆ.

“ಓವೈಸಿ ಅವರ ಭದ್ರತೆಗೆ ಬೆದರಿಕೆ ಇದೆ.ಸರ್ಕಾರವು ‘ಝಡ್’ ಕೆಟಗರಿ ಭದ್ರತೆ (ಬುಲೆಟ್ ಪ್ರೂಫ್ ಸಹಿತ) ಕಾರನ್ನು ನೀಡಲು ನಿರ್ಧರಿಸಿದೆ. ಆದರೆ ಅವರು ನಿರಾಕರಿಸಿದ್ದಾರೆ. ಅವರು ಈ ಭದ್ರತೆಯನ್ನು ಸ್ವೀಕರಿಸಲು ನಾನು ಸದನದ ಸದಸ್ಯರ ಮೂಲಕ ವಿನಂತಿಸುತ್ತೇನೆ”  ಎಂದು ಅಮಿತ್ ಶಾ ಸಂಸತ್ತಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

ಉತ್ತರ ಪ್ರದೇಶದ ಮೀರತ್‌ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ವಾಪಸಾಗುತ್ತಿದ್ದ ಎಐಎಂಐಎಂ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿಯಾಗಿತ್ತು. ಪ್ರಕರಣದಲ್ಲಿ ಬಂಧಿತ ಇಬ್ಬರನ್ನು 14 ದಿನಗಳ ಕಸ್ಟಡಿಗೆ ಒಪ್ಪಿಸಲಾಗಿದೆ.

“ಇಬ್ಬರು ಅಪರಿಚಿತರು ಗುಂಡು ಹಾರಿಸಿದ್ದರು. ಅವರು (ಓವೈಸಿ) ಅಪಾಯದಿಮದ ಪಾರಾದರು. ಆದರೆ ಅವರ ವಾಹನದಲ್ಲಿ ಮೂರು ಗುಂಡಿನ ಗುರುತುಗಳು ಇವೆ. ಘಟನೆಯಲ್ಲಿ ಮೂವರು ಸಾಕ್ಷಿಗಳು ಇದ್ದು, ಎಫ್ಐಆರ್ ದಾಖಲಾಗಿದೆ. ಇದುವರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಪೊಲೀಸರು ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಮಾರುತಿ ಆಲ್ಟೊ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಯುಪಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದಲ್ಲಿದೆ” ಎಂದು ಗೃಹ ಸಚಿವರು ತಿಳಿಸಿದ್ದಾರೆ.

“ಮೀರತ್‌ನ ಕಿಥೌರ್‌ನಲ್ಲಿ ಚುನಾವಣಾ ಕಾರ್ಯಕ್ರಮದ ನಂತರ ನಾನು ದೆಹಲಿಗೆ ಹೊರಟಿದ್ದೆ. ಛಜರ್ಸಿ ಟೋಲ್ ಪ್ಲಾಜಾ ಬಳಿ ಇಬ್ಬರು ನನ್ನ ವಾಹನದ ಮೇಲೆ ಮೂರರಿಂದ ನಾಲ್ಕು ಸುತ್ತಿನ ಬುಲೆಟ್‌ಗಳನ್ನು ಹಾರಿಸಿಸಲಾಗಿದೆ. ಒಟ್ಟು 3 ರಿಂದ 4 ಮಂದಿಯಿದ್ದರು. ನನ್ನ ವಾಹನದ ಟೈರ್ (ಚಿತ್ರದಲ್ಲಿ) ಪಂಕ್ಚರ್ ಆಗಿದೆ, ಹೀಗಾಗಿ ನಾನು ಇನ್ನೊಂದು ವಾಹನದಲ್ಲಿ ಹೊರಟೆ” ಎಂದು ಫೆಬ್ರವರಿ 3 ರಂದು ಅಸಾದುದ್ದೀನ್ ಓವೈಸಿ ಟ್ವೀಟ್‌ ಮಾಡಿದ್ದರು.

ಬಳಿಕ ಒಕ್ಕೂಟ ಸರ್ಕಾರ ಭದ್ರತೆ ನೀಡುವುದಾಗಿ ತಿಳಿಸಿತ್ತು. “ನನಗೆ ‘Z’ ಶ್ರೇಣಿಯ ಭದ್ರತೆ ಬೇಡ. ನಾನು A ವರ್ಗದ ಪ್ರಜೆಯಾಗಲು ಬಯಸುತ್ತೇನೆ. ನನ್ನ ಮೇಲೆ ಗುಂಡು ಹಾರಿಸಿದವರ ವಿರುದ್ಧ UAPA ಏಕೆ ಜಾರಿ ಮಾಡಲಿಲ್ಲ?. ನಾನು ಬದುಕಲು ಬಯಸುತ್ತೇನೆ, ಮಾತನಾಡಲು ಬಯಸುತ್ತೇನೆ. ಬಡವರು ಸುರಕ್ಷಿತವಾಗಿದ್ದಾಗ ನನ್ನ ಜೀವನ ಸುರಕ್ಷಿತವಾಗಿರುತ್ತದೆ. ನನ್ನ ಕಾರಿಗೆ ಗುಂಡು ಹಾರಿಸಿದವರಿಂದ ನಾನು ಹೆದರುವುದಿಲ್ಲ” ಎಂದು ಓವೈಸಿ ಕಳೆದ ವಾರ ಸಂಸತ್ತಿನಲ್ಲಿ ಹೇಳಿದ್ದರು.

ಇತ್ತ, ಚುನಾವಣಾ ಅವಧಿಯಲ್ಲಿ ತಮ್ಮ ರಾಜ್ಯಗಳೊಳಗಿನ ಚುನಾವಣೆ ಪ್ರಚಾರಕ್ಕೆ ಬರುವ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಚುನಾವಣಾ ಆಯೋಗವು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ.


ಇದನ್ನೂ ಓದಿ: ಓವೈಸಿ ಕಾರಿನ ಮೇಲೆ ದಾಳಿ ಬೆನ್ನಲ್ಲೇ ಸ್ಟಾರ್ ಪ್ರಚಾರಕರಿಗೆ ಭದ್ರತೆ ನೀಡಲು ಚುನಾವಣಾ ಆಯೋಗ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...