Homeಮುಖಪುಟ'Z' ಶ್ರೇಣಿಯ ಭದ್ರತೆ ಸ್ವೀಕರಿಸುವಂತೆ ಅಸಾದುದ್ದೀನ್ ಓವೈಸಿಗೆ ಅಮಿತ್‌ ಶಾ ಮನವಿ

‘Z’ ಶ್ರೇಣಿಯ ಭದ್ರತೆ ಸ್ವೀಕರಿಸುವಂತೆ ಅಸಾದುದ್ದೀನ್ ಓವೈಸಿಗೆ ಅಮಿತ್‌ ಶಾ ಮನವಿ

- Advertisement -
- Advertisement -

ಎಐಎಂಐಎಂ ಮುಖ್ಯಸ್ಥ ಮತ್ತು ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಬಳಿಕ ಒಕ್ಕೂಟ ಸರ್ಕಾರ ‘Z’ ಶ್ರೇಣಿಯ ಭದ್ರತೆ ನೀಡುವುದಾಗಿ ತಿಳಿಸಿತ್ತು. ಭದ್ರತೆ ಬೇಡ ಎಂದಿರುವ ಓವೈಸಿ ಅವರಿಗೆ ಭದ್ರತೆ ಸ್ವೀಕರಿಸುವಂತೆ ಗೃಹ ಸಚಿವ ಅಮಿತ್‌ ಶಾ ಮನವಿ ಮಾಡಿದ್ದಾರೆ.

ಕಳೆದ ವಾರ ಆರಂಭದಲ್ಲಿ ಉತ್ತರ ಪ್ರದೇಶದ ಚುನಾವಣೆ ಪ್ರಚಾರದಿಂದ ಹಿಂದಿರುಗುತ್ತಿದ್ದ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆದಿತ್ತು. ಬಳಿಕ ಒಕ್ಕೂಟ ಸರ್ಕಾರ ‘Z’ ಶ್ರೇಣಿಯ ಭದ್ರತೆಯನ್ನು ನೀಡುವುದಾಗಿ ಪ್ರಸ್ತಾಪಿಸಿತ್ತು. ಆದರೆ ನನಗೆ ಭದ್ರತೆ ಬೇಡ ಎಂದು ಓವೈಸಿ ತಿಳಿಸಿದ್ದರು. ಹೀಗಾಗಿ ಭದ್ರತೆಯನ್ನು ಸ್ವೀಕರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಾಯಿಸಿದ್ದಾರೆ.

“ಓವೈಸಿ ಅವರ ಭದ್ರತೆಗೆ ಬೆದರಿಕೆ ಇದೆ.ಸರ್ಕಾರವು ‘ಝಡ್’ ಕೆಟಗರಿ ಭದ್ರತೆ (ಬುಲೆಟ್ ಪ್ರೂಫ್ ಸಹಿತ) ಕಾರನ್ನು ನೀಡಲು ನಿರ್ಧರಿಸಿದೆ. ಆದರೆ ಅವರು ನಿರಾಕರಿಸಿದ್ದಾರೆ. ಅವರು ಈ ಭದ್ರತೆಯನ್ನು ಸ್ವೀಕರಿಸಲು ನಾನು ಸದನದ ಸದಸ್ಯರ ಮೂಲಕ ವಿನಂತಿಸುತ್ತೇನೆ”  ಎಂದು ಅಮಿತ್ ಶಾ ಸಂಸತ್ತಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

ಉತ್ತರ ಪ್ರದೇಶದ ಮೀರತ್‌ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ವಾಪಸಾಗುತ್ತಿದ್ದ ಎಐಎಂಐಎಂ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿಯಾಗಿತ್ತು. ಪ್ರಕರಣದಲ್ಲಿ ಬಂಧಿತ ಇಬ್ಬರನ್ನು 14 ದಿನಗಳ ಕಸ್ಟಡಿಗೆ ಒಪ್ಪಿಸಲಾಗಿದೆ.

“ಇಬ್ಬರು ಅಪರಿಚಿತರು ಗುಂಡು ಹಾರಿಸಿದ್ದರು. ಅವರು (ಓವೈಸಿ) ಅಪಾಯದಿಮದ ಪಾರಾದರು. ಆದರೆ ಅವರ ವಾಹನದಲ್ಲಿ ಮೂರು ಗುಂಡಿನ ಗುರುತುಗಳು ಇವೆ. ಘಟನೆಯಲ್ಲಿ ಮೂವರು ಸಾಕ್ಷಿಗಳು ಇದ್ದು, ಎಫ್ಐಆರ್ ದಾಖಲಾಗಿದೆ. ಇದುವರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಪೊಲೀಸರು ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಮಾರುತಿ ಆಲ್ಟೊ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಯುಪಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದಲ್ಲಿದೆ” ಎಂದು ಗೃಹ ಸಚಿವರು ತಿಳಿಸಿದ್ದಾರೆ.

“ಮೀರತ್‌ನ ಕಿಥೌರ್‌ನಲ್ಲಿ ಚುನಾವಣಾ ಕಾರ್ಯಕ್ರಮದ ನಂತರ ನಾನು ದೆಹಲಿಗೆ ಹೊರಟಿದ್ದೆ. ಛಜರ್ಸಿ ಟೋಲ್ ಪ್ಲಾಜಾ ಬಳಿ ಇಬ್ಬರು ನನ್ನ ವಾಹನದ ಮೇಲೆ ಮೂರರಿಂದ ನಾಲ್ಕು ಸುತ್ತಿನ ಬುಲೆಟ್‌ಗಳನ್ನು ಹಾರಿಸಿಸಲಾಗಿದೆ. ಒಟ್ಟು 3 ರಿಂದ 4 ಮಂದಿಯಿದ್ದರು. ನನ್ನ ವಾಹನದ ಟೈರ್ (ಚಿತ್ರದಲ್ಲಿ) ಪಂಕ್ಚರ್ ಆಗಿದೆ, ಹೀಗಾಗಿ ನಾನು ಇನ್ನೊಂದು ವಾಹನದಲ್ಲಿ ಹೊರಟೆ” ಎಂದು ಫೆಬ್ರವರಿ 3 ರಂದು ಅಸಾದುದ್ದೀನ್ ಓವೈಸಿ ಟ್ವೀಟ್‌ ಮಾಡಿದ್ದರು.

ಬಳಿಕ ಒಕ್ಕೂಟ ಸರ್ಕಾರ ಭದ್ರತೆ ನೀಡುವುದಾಗಿ ತಿಳಿಸಿತ್ತು. “ನನಗೆ ‘Z’ ಶ್ರೇಣಿಯ ಭದ್ರತೆ ಬೇಡ. ನಾನು A ವರ್ಗದ ಪ್ರಜೆಯಾಗಲು ಬಯಸುತ್ತೇನೆ. ನನ್ನ ಮೇಲೆ ಗುಂಡು ಹಾರಿಸಿದವರ ವಿರುದ್ಧ UAPA ಏಕೆ ಜಾರಿ ಮಾಡಲಿಲ್ಲ?. ನಾನು ಬದುಕಲು ಬಯಸುತ್ತೇನೆ, ಮಾತನಾಡಲು ಬಯಸುತ್ತೇನೆ. ಬಡವರು ಸುರಕ್ಷಿತವಾಗಿದ್ದಾಗ ನನ್ನ ಜೀವನ ಸುರಕ್ಷಿತವಾಗಿರುತ್ತದೆ. ನನ್ನ ಕಾರಿಗೆ ಗುಂಡು ಹಾರಿಸಿದವರಿಂದ ನಾನು ಹೆದರುವುದಿಲ್ಲ” ಎಂದು ಓವೈಸಿ ಕಳೆದ ವಾರ ಸಂಸತ್ತಿನಲ್ಲಿ ಹೇಳಿದ್ದರು.

ಇತ್ತ, ಚುನಾವಣಾ ಅವಧಿಯಲ್ಲಿ ತಮ್ಮ ರಾಜ್ಯಗಳೊಳಗಿನ ಚುನಾವಣೆ ಪ್ರಚಾರಕ್ಕೆ ಬರುವ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಚುನಾವಣಾ ಆಯೋಗವು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ.


ಇದನ್ನೂ ಓದಿ: ಓವೈಸಿ ಕಾರಿನ ಮೇಲೆ ದಾಳಿ ಬೆನ್ನಲ್ಲೇ ಸ್ಟಾರ್ ಪ್ರಚಾರಕರಿಗೆ ಭದ್ರತೆ ನೀಡಲು ಚುನಾವಣಾ ಆಯೋಗ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...