Homeಮುಖಪುಟ'Z' ಶ್ರೇಣಿಯ ಭದ್ರತೆ ಸ್ವೀಕರಿಸುವಂತೆ ಅಸಾದುದ್ದೀನ್ ಓವೈಸಿಗೆ ಅಮಿತ್‌ ಶಾ ಮನವಿ

‘Z’ ಶ್ರೇಣಿಯ ಭದ್ರತೆ ಸ್ವೀಕರಿಸುವಂತೆ ಅಸಾದುದ್ದೀನ್ ಓವೈಸಿಗೆ ಅಮಿತ್‌ ಶಾ ಮನವಿ

- Advertisement -
- Advertisement -

ಎಐಎಂಐಎಂ ಮುಖ್ಯಸ್ಥ ಮತ್ತು ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಬಳಿಕ ಒಕ್ಕೂಟ ಸರ್ಕಾರ ‘Z’ ಶ್ರೇಣಿಯ ಭದ್ರತೆ ನೀಡುವುದಾಗಿ ತಿಳಿಸಿತ್ತು. ಭದ್ರತೆ ಬೇಡ ಎಂದಿರುವ ಓವೈಸಿ ಅವರಿಗೆ ಭದ್ರತೆ ಸ್ವೀಕರಿಸುವಂತೆ ಗೃಹ ಸಚಿವ ಅಮಿತ್‌ ಶಾ ಮನವಿ ಮಾಡಿದ್ದಾರೆ.

ಕಳೆದ ವಾರ ಆರಂಭದಲ್ಲಿ ಉತ್ತರ ಪ್ರದೇಶದ ಚುನಾವಣೆ ಪ್ರಚಾರದಿಂದ ಹಿಂದಿರುಗುತ್ತಿದ್ದ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆದಿತ್ತು. ಬಳಿಕ ಒಕ್ಕೂಟ ಸರ್ಕಾರ ‘Z’ ಶ್ರೇಣಿಯ ಭದ್ರತೆಯನ್ನು ನೀಡುವುದಾಗಿ ಪ್ರಸ್ತಾಪಿಸಿತ್ತು. ಆದರೆ ನನಗೆ ಭದ್ರತೆ ಬೇಡ ಎಂದು ಓವೈಸಿ ತಿಳಿಸಿದ್ದರು. ಹೀಗಾಗಿ ಭದ್ರತೆಯನ್ನು ಸ್ವೀಕರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಾಯಿಸಿದ್ದಾರೆ.

“ಓವೈಸಿ ಅವರ ಭದ್ರತೆಗೆ ಬೆದರಿಕೆ ಇದೆ.ಸರ್ಕಾರವು ‘ಝಡ್’ ಕೆಟಗರಿ ಭದ್ರತೆ (ಬುಲೆಟ್ ಪ್ರೂಫ್ ಸಹಿತ) ಕಾರನ್ನು ನೀಡಲು ನಿರ್ಧರಿಸಿದೆ. ಆದರೆ ಅವರು ನಿರಾಕರಿಸಿದ್ದಾರೆ. ಅವರು ಈ ಭದ್ರತೆಯನ್ನು ಸ್ವೀಕರಿಸಲು ನಾನು ಸದನದ ಸದಸ್ಯರ ಮೂಲಕ ವಿನಂತಿಸುತ್ತೇನೆ”  ಎಂದು ಅಮಿತ್ ಶಾ ಸಂಸತ್ತಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

ಉತ್ತರ ಪ್ರದೇಶದ ಮೀರತ್‌ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ವಾಪಸಾಗುತ್ತಿದ್ದ ಎಐಎಂಐಎಂ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿಯಾಗಿತ್ತು. ಪ್ರಕರಣದಲ್ಲಿ ಬಂಧಿತ ಇಬ್ಬರನ್ನು 14 ದಿನಗಳ ಕಸ್ಟಡಿಗೆ ಒಪ್ಪಿಸಲಾಗಿದೆ.

“ಇಬ್ಬರು ಅಪರಿಚಿತರು ಗುಂಡು ಹಾರಿಸಿದ್ದರು. ಅವರು (ಓವೈಸಿ) ಅಪಾಯದಿಮದ ಪಾರಾದರು. ಆದರೆ ಅವರ ವಾಹನದಲ್ಲಿ ಮೂರು ಗುಂಡಿನ ಗುರುತುಗಳು ಇವೆ. ಘಟನೆಯಲ್ಲಿ ಮೂವರು ಸಾಕ್ಷಿಗಳು ಇದ್ದು, ಎಫ್ಐಆರ್ ದಾಖಲಾಗಿದೆ. ಇದುವರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಪೊಲೀಸರು ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಮಾರುತಿ ಆಲ್ಟೊ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಯುಪಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದಲ್ಲಿದೆ” ಎಂದು ಗೃಹ ಸಚಿವರು ತಿಳಿಸಿದ್ದಾರೆ.

“ಮೀರತ್‌ನ ಕಿಥೌರ್‌ನಲ್ಲಿ ಚುನಾವಣಾ ಕಾರ್ಯಕ್ರಮದ ನಂತರ ನಾನು ದೆಹಲಿಗೆ ಹೊರಟಿದ್ದೆ. ಛಜರ್ಸಿ ಟೋಲ್ ಪ್ಲಾಜಾ ಬಳಿ ಇಬ್ಬರು ನನ್ನ ವಾಹನದ ಮೇಲೆ ಮೂರರಿಂದ ನಾಲ್ಕು ಸುತ್ತಿನ ಬುಲೆಟ್‌ಗಳನ್ನು ಹಾರಿಸಿಸಲಾಗಿದೆ. ಒಟ್ಟು 3 ರಿಂದ 4 ಮಂದಿಯಿದ್ದರು. ನನ್ನ ವಾಹನದ ಟೈರ್ (ಚಿತ್ರದಲ್ಲಿ) ಪಂಕ್ಚರ್ ಆಗಿದೆ, ಹೀಗಾಗಿ ನಾನು ಇನ್ನೊಂದು ವಾಹನದಲ್ಲಿ ಹೊರಟೆ” ಎಂದು ಫೆಬ್ರವರಿ 3 ರಂದು ಅಸಾದುದ್ದೀನ್ ಓವೈಸಿ ಟ್ವೀಟ್‌ ಮಾಡಿದ್ದರು.

ಬಳಿಕ ಒಕ್ಕೂಟ ಸರ್ಕಾರ ಭದ್ರತೆ ನೀಡುವುದಾಗಿ ತಿಳಿಸಿತ್ತು. “ನನಗೆ ‘Z’ ಶ್ರೇಣಿಯ ಭದ್ರತೆ ಬೇಡ. ನಾನು A ವರ್ಗದ ಪ್ರಜೆಯಾಗಲು ಬಯಸುತ್ತೇನೆ. ನನ್ನ ಮೇಲೆ ಗುಂಡು ಹಾರಿಸಿದವರ ವಿರುದ್ಧ UAPA ಏಕೆ ಜಾರಿ ಮಾಡಲಿಲ್ಲ?. ನಾನು ಬದುಕಲು ಬಯಸುತ್ತೇನೆ, ಮಾತನಾಡಲು ಬಯಸುತ್ತೇನೆ. ಬಡವರು ಸುರಕ್ಷಿತವಾಗಿದ್ದಾಗ ನನ್ನ ಜೀವನ ಸುರಕ್ಷಿತವಾಗಿರುತ್ತದೆ. ನನ್ನ ಕಾರಿಗೆ ಗುಂಡು ಹಾರಿಸಿದವರಿಂದ ನಾನು ಹೆದರುವುದಿಲ್ಲ” ಎಂದು ಓವೈಸಿ ಕಳೆದ ವಾರ ಸಂಸತ್ತಿನಲ್ಲಿ ಹೇಳಿದ್ದರು.

ಇತ್ತ, ಚುನಾವಣಾ ಅವಧಿಯಲ್ಲಿ ತಮ್ಮ ರಾಜ್ಯಗಳೊಳಗಿನ ಚುನಾವಣೆ ಪ್ರಚಾರಕ್ಕೆ ಬರುವ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಚುನಾವಣಾ ಆಯೋಗವು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ.


ಇದನ್ನೂ ಓದಿ: ಓವೈಸಿ ಕಾರಿನ ಮೇಲೆ ದಾಳಿ ಬೆನ್ನಲ್ಲೇ ಸ್ಟಾರ್ ಪ್ರಚಾರಕರಿಗೆ ಭದ್ರತೆ ನೀಡಲು ಚುನಾವಣಾ ಆಯೋಗ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...