Homeಮುಖಪುಟ'Z' ಶ್ರೇಣಿಯ ಭದ್ರತೆ ಸ್ವೀಕರಿಸುವಂತೆ ಅಸಾದುದ್ದೀನ್ ಓವೈಸಿಗೆ ಅಮಿತ್‌ ಶಾ ಮನವಿ

‘Z’ ಶ್ರೇಣಿಯ ಭದ್ರತೆ ಸ್ವೀಕರಿಸುವಂತೆ ಅಸಾದುದ್ದೀನ್ ಓವೈಸಿಗೆ ಅಮಿತ್‌ ಶಾ ಮನವಿ

- Advertisement -
- Advertisement -

ಎಐಎಂಐಎಂ ಮುಖ್ಯಸ್ಥ ಮತ್ತು ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಬಳಿಕ ಒಕ್ಕೂಟ ಸರ್ಕಾರ ‘Z’ ಶ್ರೇಣಿಯ ಭದ್ರತೆ ನೀಡುವುದಾಗಿ ತಿಳಿಸಿತ್ತು. ಭದ್ರತೆ ಬೇಡ ಎಂದಿರುವ ಓವೈಸಿ ಅವರಿಗೆ ಭದ್ರತೆ ಸ್ವೀಕರಿಸುವಂತೆ ಗೃಹ ಸಚಿವ ಅಮಿತ್‌ ಶಾ ಮನವಿ ಮಾಡಿದ್ದಾರೆ.

ಕಳೆದ ವಾರ ಆರಂಭದಲ್ಲಿ ಉತ್ತರ ಪ್ರದೇಶದ ಚುನಾವಣೆ ಪ್ರಚಾರದಿಂದ ಹಿಂದಿರುಗುತ್ತಿದ್ದ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆದಿತ್ತು. ಬಳಿಕ ಒಕ್ಕೂಟ ಸರ್ಕಾರ ‘Z’ ಶ್ರೇಣಿಯ ಭದ್ರತೆಯನ್ನು ನೀಡುವುದಾಗಿ ಪ್ರಸ್ತಾಪಿಸಿತ್ತು. ಆದರೆ ನನಗೆ ಭದ್ರತೆ ಬೇಡ ಎಂದು ಓವೈಸಿ ತಿಳಿಸಿದ್ದರು. ಹೀಗಾಗಿ ಭದ್ರತೆಯನ್ನು ಸ್ವೀಕರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಾಯಿಸಿದ್ದಾರೆ.

“ಓವೈಸಿ ಅವರ ಭದ್ರತೆಗೆ ಬೆದರಿಕೆ ಇದೆ.ಸರ್ಕಾರವು ‘ಝಡ್’ ಕೆಟಗರಿ ಭದ್ರತೆ (ಬುಲೆಟ್ ಪ್ರೂಫ್ ಸಹಿತ) ಕಾರನ್ನು ನೀಡಲು ನಿರ್ಧರಿಸಿದೆ. ಆದರೆ ಅವರು ನಿರಾಕರಿಸಿದ್ದಾರೆ. ಅವರು ಈ ಭದ್ರತೆಯನ್ನು ಸ್ವೀಕರಿಸಲು ನಾನು ಸದನದ ಸದಸ್ಯರ ಮೂಲಕ ವಿನಂತಿಸುತ್ತೇನೆ”  ಎಂದು ಅಮಿತ್ ಶಾ ಸಂಸತ್ತಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

ಉತ್ತರ ಪ್ರದೇಶದ ಮೀರತ್‌ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ವಾಪಸಾಗುತ್ತಿದ್ದ ಎಐಎಂಐಎಂ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿಯಾಗಿತ್ತು. ಪ್ರಕರಣದಲ್ಲಿ ಬಂಧಿತ ಇಬ್ಬರನ್ನು 14 ದಿನಗಳ ಕಸ್ಟಡಿಗೆ ಒಪ್ಪಿಸಲಾಗಿದೆ.

“ಇಬ್ಬರು ಅಪರಿಚಿತರು ಗುಂಡು ಹಾರಿಸಿದ್ದರು. ಅವರು (ಓವೈಸಿ) ಅಪಾಯದಿಮದ ಪಾರಾದರು. ಆದರೆ ಅವರ ವಾಹನದಲ್ಲಿ ಮೂರು ಗುಂಡಿನ ಗುರುತುಗಳು ಇವೆ. ಘಟನೆಯಲ್ಲಿ ಮೂವರು ಸಾಕ್ಷಿಗಳು ಇದ್ದು, ಎಫ್ಐಆರ್ ದಾಖಲಾಗಿದೆ. ಇದುವರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಪೊಲೀಸರು ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಮಾರುತಿ ಆಲ್ಟೊ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಯುಪಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದಲ್ಲಿದೆ” ಎಂದು ಗೃಹ ಸಚಿವರು ತಿಳಿಸಿದ್ದಾರೆ.

“ಮೀರತ್‌ನ ಕಿಥೌರ್‌ನಲ್ಲಿ ಚುನಾವಣಾ ಕಾರ್ಯಕ್ರಮದ ನಂತರ ನಾನು ದೆಹಲಿಗೆ ಹೊರಟಿದ್ದೆ. ಛಜರ್ಸಿ ಟೋಲ್ ಪ್ಲಾಜಾ ಬಳಿ ಇಬ್ಬರು ನನ್ನ ವಾಹನದ ಮೇಲೆ ಮೂರರಿಂದ ನಾಲ್ಕು ಸುತ್ತಿನ ಬುಲೆಟ್‌ಗಳನ್ನು ಹಾರಿಸಿಸಲಾಗಿದೆ. ಒಟ್ಟು 3 ರಿಂದ 4 ಮಂದಿಯಿದ್ದರು. ನನ್ನ ವಾಹನದ ಟೈರ್ (ಚಿತ್ರದಲ್ಲಿ) ಪಂಕ್ಚರ್ ಆಗಿದೆ, ಹೀಗಾಗಿ ನಾನು ಇನ್ನೊಂದು ವಾಹನದಲ್ಲಿ ಹೊರಟೆ” ಎಂದು ಫೆಬ್ರವರಿ 3 ರಂದು ಅಸಾದುದ್ದೀನ್ ಓವೈಸಿ ಟ್ವೀಟ್‌ ಮಾಡಿದ್ದರು.

ಬಳಿಕ ಒಕ್ಕೂಟ ಸರ್ಕಾರ ಭದ್ರತೆ ನೀಡುವುದಾಗಿ ತಿಳಿಸಿತ್ತು. “ನನಗೆ ‘Z’ ಶ್ರೇಣಿಯ ಭದ್ರತೆ ಬೇಡ. ನಾನು A ವರ್ಗದ ಪ್ರಜೆಯಾಗಲು ಬಯಸುತ್ತೇನೆ. ನನ್ನ ಮೇಲೆ ಗುಂಡು ಹಾರಿಸಿದವರ ವಿರುದ್ಧ UAPA ಏಕೆ ಜಾರಿ ಮಾಡಲಿಲ್ಲ?. ನಾನು ಬದುಕಲು ಬಯಸುತ್ತೇನೆ, ಮಾತನಾಡಲು ಬಯಸುತ್ತೇನೆ. ಬಡವರು ಸುರಕ್ಷಿತವಾಗಿದ್ದಾಗ ನನ್ನ ಜೀವನ ಸುರಕ್ಷಿತವಾಗಿರುತ್ತದೆ. ನನ್ನ ಕಾರಿಗೆ ಗುಂಡು ಹಾರಿಸಿದವರಿಂದ ನಾನು ಹೆದರುವುದಿಲ್ಲ” ಎಂದು ಓವೈಸಿ ಕಳೆದ ವಾರ ಸಂಸತ್ತಿನಲ್ಲಿ ಹೇಳಿದ್ದರು.

ಇತ್ತ, ಚುನಾವಣಾ ಅವಧಿಯಲ್ಲಿ ತಮ್ಮ ರಾಜ್ಯಗಳೊಳಗಿನ ಚುನಾವಣೆ ಪ್ರಚಾರಕ್ಕೆ ಬರುವ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಚುನಾವಣಾ ಆಯೋಗವು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ.


ಇದನ್ನೂ ಓದಿ: ಓವೈಸಿ ಕಾರಿನ ಮೇಲೆ ದಾಳಿ ಬೆನ್ನಲ್ಲೇ ಸ್ಟಾರ್ ಪ್ರಚಾರಕರಿಗೆ ಭದ್ರತೆ ನೀಡಲು ಚುನಾವಣಾ ಆಯೋಗ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...