Homeಮುಖಪುಟಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಮತ್ತೆ ಬೆದರಿಕೆ ಕರೆ

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಮತ್ತೆ ಬೆದರಿಕೆ ಕರೆ

ಅನಾಮಧೇಯ ವ್ಯಕ್ತಿಯೊಬ್ಬ ತನ್ನ ನಾಗ್ಪುರ ಕಚೇರಿಗೆ ಫೋನ್ ಮಾಡಿ ತನಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೂ ಬೆದರಿಕೆ ಹಾಕಿದ್ದಾನೆ ಎಂದು ಸಚಿವರು ಈ ಹಿಂದೆ ತಿಳಿಸಿದ್ದರು.

- Advertisement -
- Advertisement -

ನಟಿ ಕಂಗನಾ ರಣಾವತ್ ಅವರ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ನಿಲುವಿನ ಬಗ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಮಂಗಳವಾರ ಮತ್ತು ಬುಧವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಹಿಮಾಚಲ ಪ್ರದೇಶದ ವಿವಿಧ ವ್ಯಕ್ತಿಗಳಿಂದ ದೇಶ್ಮುಖ್ ಈ ಕರೆಗಳನ್ನು ಸ್ವೀಕರಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ಈ ಹಿಂದೆಯು ಅವರಿಗೆ ಈ ರೀತಿಯ ಬೆದರಿಕೆ ಕರೆಗಳು ಬಂದಿದ್ದು, ಅನಾಮಧೇಯ ವ್ಯಕ್ತಿಯೊಬ್ಬ ತನ್ನ ನಾಗ್ಪುರ ಕಚೇರಿಗೆ ಫೋನ್ ಮಾಡಿ ತನಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ಗೂ ಬೆದರಿಕೆ ಹಾಕಿದ್ದಾನೆ ಎಂದು ಸಚಿವರು ಸೋಮವಾರ ತಿಳಿಸಿದ್ದರು.

ಕಂಗನಾ‌ಗೆ ‘ವೈ-ಪ್ಲಸ್’ ಭದ್ರತೆ ನೀಡುವ ಕೇಂದ್ರದ ನಿರ್ಧಾರದ ಬಗ್ಗೆ ದೇಶ್ಮುಖ್ ಸೋಮವಾರ ಆಶ್ಚರ್ಯ ವ್ಯಕ್ತಪಡಿಸಿದ್ದು, ಅವರು ತಮ್ಮ ಹೇಳಿಕೆಗಳಿಂದ ಮುಂಬೈ ಮತ್ತು ಮಹಾರಾಷ್ಟ್ರವನ್ನು “ಅವಮಾನಿಸಿದ್ದಾರೆ” ಎಂದು ಹೇಳಿದ್ದರು.

ಕಂಗನಾ ರಾಣಾವತ್‌ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ವಿವಾದ ಎಬ್ಬಿಸಿದ್ದರು.

ಅಷ್ಟೇ ಅಲ್ಲದೆ ಕಳೆದ ಶನಿವಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಬಾಂದ್ರಾದಲ್ಲಿರುವ ನಿವಾಸ ‘ಮಾತೋಶ್ರೀ’ ಗೆ ಕರೆಗಳು ಬಂದಿದ್ದು, ಕರೆ ಮಾಡಿದವರು ನಿವಾಸವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಕರೆ ಮಾಡಿದವರು ಮುಂಬೈನ ಭೂಗತ ಡಾನ್ ದಾವೂದ್ ಇಬ್ರಾಹಿಂ ಸಹಾಯಕ ಎಂದು ಪರಿಚಯಿಸಿಕೊಂಡಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: ಕಂಗನಾಗೆ ನಮ್ಮ ರಾಜ್ಯದಲ್ಲಿ ವಾಸಿಸುವ ಹಕ್ಕಿಲ್ಲ: ಮಹಾರಾಷ್ಟ್ರ ಗೃಹ ಸಚಿವ

ಈ ನಡುವೆ, ಸಿನೆಮಾ ಮಾಫಿಯಾಕ್ಕಿಂತ ತನಗೆ ಮುಂಬೈ ಪೊಲೀಸರ ಬಗ್ಗೆ ಭಯವಿದೆ. ತಾನು ಹಿಮಾಚಲ ಪ್ರದೇಶ ಅಥವಾ ಕೇಂದ್ರದಿಂದ ಭದ್ರತೆ ಬಯಸುತ್ತೇನೆ ಎಂದು ಕಂಗನಾ ಹೇಳಿದ್ದು, ಇದಕ್ಕೆ ಬಿಜೆಪಿ ನಾಯಕ ಹಾಗೂ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಆಕ್ಷೇಪ ವ್ಯಕ್ತಪಡಿಸಿ ಕಂಗನಾ ಹೇಳಿಕೆ ಪೊಲೀಸ್ ಇಲಾಖೆಯ ‘ಅವಮಾನ’ಕ್ಕೆ ಸಮನಾಗಿದೆ ಎಂದಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಐದು ವರ್ಷ ಅಧಿಕಾರದಲ್ಲಿದ್ದುದರಿಂದ ಮುಂಬೈ ಪೊಲೀಸರ ಸಾಮರ್ಥ್ಯದ ಕುರಿತು ತಮಗೆ ಅರಿವಿದೆ. ಆದರೆ ಪೊಲೀಸರು ರಾಜಕೀಯ ಒತ್ತಡಕ್ಕೆ ಒಳಗಾಗಬಹುದು, ಅವರು ಸುಶಾಂತ್ ಸಿಂಗ್ ರಾಜಪುತ್ ಪ್ರಕರಣವನ್ನು ತಪ್ಪಾಗಿ ನಿಭಾಯಿಸಿದ್ದರಿಂದ ಅದರ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ ಎಂದರು.


ಓದಿ: ಕಂಗನಾ, ಪದ್ಮಶ್ರೀ ಮತ್ತು ತುಕ್ಡೇಗ್ಯಾಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...