Homeಕರ್ನಾಟಕಡ್ರಗ್ಸ್ ನಿಯಂತ್ರಣ: ಪೊಲೀಸ್ ಅಧಿಕಾರಿಗಳ ಜೊತೆ ಗೃಹಸಚಿವರ ಸಭೆ

ಡ್ರಗ್ಸ್ ನಿಯಂತ್ರಣ: ಪೊಲೀಸ್ ಅಧಿಕಾರಿಗಳ ಜೊತೆ ಗೃಹಸಚಿವರ ಸಭೆ

ಈಗಾಗಲೇ 1438  ಡ್ರಗ್ಸ್ ಕೇಸ್‌ಗಳು ದಾಖಲಾಗಿ ಈ ಸಂಬಂಧ 1792 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಕಳೆದೊಂದು ವಾರದಿಂದ ರಾಜ್ಯದಲ್ಲಿ ಈಗ ಕೊರೊನಾಗಿಂತ ಮಾದಕ ದ್ರವ್ಯದ ವಿಚಾರವೇ ಹೆಚ್ಚು ಚರ್ಚೆಗೊಳಪಡುತ್ತಿದೆ. ಚಂದನವನದಲ್ಲಿ ಡ್ರಗ್ಸ್ ಮಾಫಿಯಾ ನಡೆಯುತ್ತಿದೆ ಎನ್ನುವ ವಿಚಾರ ರಾಜ್ಯದ ಜನರನ್ನು ಬೆಚ್ಚಿಬೀಳಿಸುತ್ತಿದೆ. ಇದರಲ್ಲಿ ಹಿರಿತೆರೆ ಜೊತೆಗೆ ಕಿರುತೆರೆಯ ಹೆಸರು ಕೂಡ ತಳುಕು ಹಾಕಿಕೊಂಡಿದೆ.

ಈ ಕುರಿತು ಇಂದು ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವರು ಸಭೆ ನಡೆಸಿದ್ದಾರೆ. ನಂತರ “ರಾಜ್ಯ ಸರ್ಕಾರ ಕೂಡ ಡ್ರಗ್ಸ್ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಬಕಾರಿ ಇಲಾಖೆ, ಪೊಲೀಸ್ ಇಲಾಖೆ ಜೊತೆಗೆ ಕಾರ್ಯ ನಿರ್ವಹಿಸುತ್ತಿದೆ” ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಡ್ರಗ್ಸ್ ದಂಧೆ ನಿಯಂತ್ರಣ ಮತ್ತು ಡ್ರಗ್ಸ್ ಹಾವಳಿ ಕುರಿತು ಚರ್ಚೆ ನಡೆಸಲಾಗಿದೆ. ಈಗಾಗಲೇ 1438  ಡ್ರಗ್ಸ್ ಕೇಸ್‌ಗಳು ದಾಖಲಾಗಿ ಈ ಸಂಬಂಧ 1792 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ವಲಯದ ಐ ಜಿ ಇವರ ನೇತೃತ್ವದಲ್ಲಿ ಜಂಟಿ ತಂಡ ರಚನೆ. ವಿಸಾ ಅವಧಿ ಮುಗಿದ ಮೇಲು ಭಾರತದ ಉಳಿದ ವಿದೇಶಿಗರನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸುವುದು, ಕಾಲೇಜ್ ಗಳು ಪ್ರಾರಂಭವಾದ ತಕ್ಷಣ ಪ್ರಮುಖ ಸಂಘಟನೆಯೊಂದಿಗೆ ಜೊತೆಗೆ ಸೇರಿ ಡ್ರಗ್ಸ್ ವಿರುದ್ಧ ಜಾಗೃತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇನ್ನು ಮೊನ್ನೆಯಷ್ಟೇ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್​ಸಿಬಿ) ಅಧಿಕಾರಿಗಳು ಡ್ರಗ್ಸ್ ದಂಧೆಯಲ್ಲಿ ಡಿ ಅನಿಕಾ, ಅನೂಪ್ ಮೊಹಮದ್ ಮತ್ತು ರಾಜೇಶ್ ರವೀಂದ್ರನ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದರು.

ಒಟ್ಟಾರೆ, ಬಾಲಿವುಡ್‌ಗೆ ಮಾತ್ರ ಸೀಮಿತವಾಗಿದ್ದ ಡ್ರಗ್ಸ್ ದಂಧೆ ಕನ್ನಡ ಚಿತ್ರರಂಗ, ಕಿರುತೆರೆಗೂ ಕಾಲಿಟ್ಟಿದ್ದು, ಸೂಕ್ತ ಹಾಗೂ ಪ್ರಾಮಾಣಿಕ ತನಿಖೆಯಿಂದಷ್ಟೇ ಮತ್ತಷ್ಟು ವಿಚಾರಗಳು ಬಯಲಿಗೆ ಬರಲು ಸಾಧ್ಯ.


ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...