Homeಮುಖಪುಟಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್...

ಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್ ಚಡ್ಡಾ

- Advertisement -
- Advertisement -

“ದೇಶಾದ್ಯಂತ ಕೋಮು ಹಿಂಸಾಚಾರವನ್ನು ನಿಲ್ಲಿಸಬೇಕಾದರೆ ಗೃಹ ಸಚಿವ ಅಮಿತ್ ಶಾ ಅವರ ಮನೆ, ಬಿಜೆಪಿ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಹತ್ತಿಸಬೇಕು” ಎಂದು ಎಎಪಿ ನಾಯಕ ರಾಘವ್‌ ಚಡ್ಡಾ ಹೇಳಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿ ಕೋಮುಗಲಭೆಯ ನಂತರ ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಅಧಿಕಾರದಲ್ಲಿರುವ ದೆಹಲಿ ಮುನ್ಸಿಪಾಲ್‌ ತೆರವು ಕಾರ್ಯಾಚರಣೆ ಆರಂಭಿಸಿದೆ. ಅತಿಕ್ರಮಣ ತೆರವು ಕಾರ್ಯಾಚರಣೆ ಹೆಸರಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಘರ್ಷಣೆಗಳು ನಡೆದಿವೆ. ಇಂದು, ಜಹಾಂಗೀರ್ಪುರಿಯಲ್ಲಿ ಘರ್ಷಣೆಗಳು ನಡೆಯುತ್ತಿವೆ. ಬಿಜೆಪಿ ಈ ಗಲಭೆಗಳನ್ನು ಸೃಷ್ಟಿಸುತ್ತದೆ. ಗೃಹ ಸಚಿವರು ಈ ಗಲಭೆಗಳನ್ನು ನಡೆಸುತ್ತಿದ್ದಾರೆ. ಅವರ ಮನೆಯ ಮೇಲೆ ಬುಲ್ಡೋಜರ್ ಚಲಾಯಿಸಿದರೆ, ಗಲಭೆಗಳು ನಿಲ್ಲುತ್ತವೆ” ಎಂದು ಚಡ್ಡಾ ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತೀಯ ಜನತಾ ಪಕ್ಷ ದೇಶಾದ್ಯಂತ ಗಲಭೆ, ಗೂಂಡಾಗಿರಿ ನಡೆಸುತ್ತಿದೆ. ಇದನ್ನೆಲ್ಲ ತಡೆಯಬೇಕಾದರೆ ಬಿಜೆಪಿಯ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಓಡಿಸಬೇಕು. ಬಿಜೆಪಿ ಕೇಂದ್ರ ಕಚೇರಿ ಮೇಲೆ ಬುಲ್ಡೋಜರ್ ಬಳಸಿದರೆ ನಾನು ಗ್ಯಾರಂಟಿ ನೀಡುತ್ತೇನೆ. ಈ ಗಲಭೆಗಳು ನಿಲ್ಲುತ್ತವೆ” ಎಂದಿದ್ದಾರೆ.

ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಜಹಾಂಗೀರ್‌ಪುರಿಯಲ್ಲಿ ನಡೆದ ಘರ್ಷಣೆಯನ್ನು ಪ್ರಸ್ತಾಪಿಸಿ, “ಬಿಜೆಪಿಯವರು ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳನ್ನು ತಮ್ಮ ಜೇಬಿನಲ್ಲಿಟ್ಟುಕೊಂಡಿದ್ದು, ಅವರನ್ನು ಅಶಾಂತಿ ಸೃಷ್ಟಿಸಲು ಬಳಸಬಹುದು. ಬಾಂಗ್ಲಾದೇಶಿಯರು ಎಲ್ಲಿ ನೆಲೆಸಿದ್ದಾರೆಂದು ಕೇಳಿ ಮುಂದಿನ ಗಲಭೆಗಳ ನಿಮಗೆ ತಿಳಿಯುತ್ತವೆ. ಇದಲ್ಲದೆ, ದೆಹಲಿಯಲ್ಲಿ ಅಕ್ರಮ ವಸಾಹತುಗಳ ನಿರ್ಮಾಣಕ್ಕೆ ಬಿಜೆಪಿ ಅನುಕೂಲ ಮಾಡಿಕೊಟ್ಟಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿ ಕಳೆದ 15 ವರ್ಷಗಳಿಂದ ಎಂಸಿಡಿಯಲ್ಲಿ ಅಧಿಕಾರದಲ್ಲಿದೆ. ಅವರು ಲಂಚ ಸ್ವೀಕರಿಸಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿದೆ. ಇಂದು ಉರುಳಿಸಲಾಗುತ್ತಿರುವ ಅಕ್ರಮ ಕಟ್ಟಡಗಳ ಜೊತೆಗೆ ಆ ಕಟ್ಟಡಗಳನ್ನು ನಿರ್ಮಿಸಿದ ಬಿಜೆಪಿ ಸಚಿವರ ಮನೆಗಳನ್ನು ನೆಲಸಮ ಮಾಡಬೇಕು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ನಡೆಯುತ್ತಿರುವುದನ್ನು ವಿರೋಧ ಪಕ್ಷದ ನಾಯಕರು ಖಂಡಿಸಿದ್ದಾರೆ. ಕಾರ್ಯಾಚರಣೆ ನಿಲ್ಲುಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿರಿ: ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ಘಟನೆಯ ಸಂಬಂಧ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಟ್ವೀಟ್ ಮಾಡಿದ್ದು, “ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಅತಿಕ್ರಮಣವಾಗುತ್ತಿದ್ದು, ಅದರ ಮೇಲೆ ಕೇಂದ್ರ ಸರ್ಕಾರ ಬುಲ್ಡೋಜರ್‌ಗಳನ್ನು ಏಕೆ ಓಡಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ತೈಲ ಬೆಲೆ ಏರಿಕೆ, ಸಿಲಿಂಡರ್‌ ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗದ ಮೇಲೆ ಯಾವಾಗ ಬುಲ್ಡೋಜರ್‌ ಓಡುಸುತ್ತೀರಿ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದರ ನಡುವೆ ಸಿಪಿಐ (ಎಂ) ನಾಯಕಿ ಬೃಂದಾ ಕಾರಟ್ ಅವರು ಬುಧವಾರ ಮಧ್ಯಾಹ್ನ ಜಹಾಂಗೀರ್‌ಪುರಿಯಲ್ಲಿ ಧ್ವಂಸಗೊಳಿಸುವ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆಗ್ರಹಿಸಿ ಬುಲ್ಡೋಜರ್ ಎದುರು ನಿಂತು ಪ್ರತಿಭಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...