Homeಮುಖಪುಟಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್...

ಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್ ಚಡ್ಡಾ

- Advertisement -
- Advertisement -

“ದೇಶಾದ್ಯಂತ ಕೋಮು ಹಿಂಸಾಚಾರವನ್ನು ನಿಲ್ಲಿಸಬೇಕಾದರೆ ಗೃಹ ಸಚಿವ ಅಮಿತ್ ಶಾ ಅವರ ಮನೆ, ಬಿಜೆಪಿ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಹತ್ತಿಸಬೇಕು” ಎಂದು ಎಎಪಿ ನಾಯಕ ರಾಘವ್‌ ಚಡ್ಡಾ ಹೇಳಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿ ಕೋಮುಗಲಭೆಯ ನಂತರ ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಅಧಿಕಾರದಲ್ಲಿರುವ ದೆಹಲಿ ಮುನ್ಸಿಪಾಲ್‌ ತೆರವು ಕಾರ್ಯಾಚರಣೆ ಆರಂಭಿಸಿದೆ. ಅತಿಕ್ರಮಣ ತೆರವು ಕಾರ್ಯಾಚರಣೆ ಹೆಸರಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಘರ್ಷಣೆಗಳು ನಡೆದಿವೆ. ಇಂದು, ಜಹಾಂಗೀರ್ಪುರಿಯಲ್ಲಿ ಘರ್ಷಣೆಗಳು ನಡೆಯುತ್ತಿವೆ. ಬಿಜೆಪಿ ಈ ಗಲಭೆಗಳನ್ನು ಸೃಷ್ಟಿಸುತ್ತದೆ. ಗೃಹ ಸಚಿವರು ಈ ಗಲಭೆಗಳನ್ನು ನಡೆಸುತ್ತಿದ್ದಾರೆ. ಅವರ ಮನೆಯ ಮೇಲೆ ಬುಲ್ಡೋಜರ್ ಚಲಾಯಿಸಿದರೆ, ಗಲಭೆಗಳು ನಿಲ್ಲುತ್ತವೆ” ಎಂದು ಚಡ್ಡಾ ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತೀಯ ಜನತಾ ಪಕ್ಷ ದೇಶಾದ್ಯಂತ ಗಲಭೆ, ಗೂಂಡಾಗಿರಿ ನಡೆಸುತ್ತಿದೆ. ಇದನ್ನೆಲ್ಲ ತಡೆಯಬೇಕಾದರೆ ಬಿಜೆಪಿಯ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಓಡಿಸಬೇಕು. ಬಿಜೆಪಿ ಕೇಂದ್ರ ಕಚೇರಿ ಮೇಲೆ ಬುಲ್ಡೋಜರ್ ಬಳಸಿದರೆ ನಾನು ಗ್ಯಾರಂಟಿ ನೀಡುತ್ತೇನೆ. ಈ ಗಲಭೆಗಳು ನಿಲ್ಲುತ್ತವೆ” ಎಂದಿದ್ದಾರೆ.

ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಜಹಾಂಗೀರ್‌ಪುರಿಯಲ್ಲಿ ನಡೆದ ಘರ್ಷಣೆಯನ್ನು ಪ್ರಸ್ತಾಪಿಸಿ, “ಬಿಜೆಪಿಯವರು ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳನ್ನು ತಮ್ಮ ಜೇಬಿನಲ್ಲಿಟ್ಟುಕೊಂಡಿದ್ದು, ಅವರನ್ನು ಅಶಾಂತಿ ಸೃಷ್ಟಿಸಲು ಬಳಸಬಹುದು. ಬಾಂಗ್ಲಾದೇಶಿಯರು ಎಲ್ಲಿ ನೆಲೆಸಿದ್ದಾರೆಂದು ಕೇಳಿ ಮುಂದಿನ ಗಲಭೆಗಳ ನಿಮಗೆ ತಿಳಿಯುತ್ತವೆ. ಇದಲ್ಲದೆ, ದೆಹಲಿಯಲ್ಲಿ ಅಕ್ರಮ ವಸಾಹತುಗಳ ನಿರ್ಮಾಣಕ್ಕೆ ಬಿಜೆಪಿ ಅನುಕೂಲ ಮಾಡಿಕೊಟ್ಟಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿ ಕಳೆದ 15 ವರ್ಷಗಳಿಂದ ಎಂಸಿಡಿಯಲ್ಲಿ ಅಧಿಕಾರದಲ್ಲಿದೆ. ಅವರು ಲಂಚ ಸ್ವೀಕರಿಸಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿದೆ. ಇಂದು ಉರುಳಿಸಲಾಗುತ್ತಿರುವ ಅಕ್ರಮ ಕಟ್ಟಡಗಳ ಜೊತೆಗೆ ಆ ಕಟ್ಟಡಗಳನ್ನು ನಿರ್ಮಿಸಿದ ಬಿಜೆಪಿ ಸಚಿವರ ಮನೆಗಳನ್ನು ನೆಲಸಮ ಮಾಡಬೇಕು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ನಡೆಯುತ್ತಿರುವುದನ್ನು ವಿರೋಧ ಪಕ್ಷದ ನಾಯಕರು ಖಂಡಿಸಿದ್ದಾರೆ. ಕಾರ್ಯಾಚರಣೆ ನಿಲ್ಲುಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿರಿ: ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ಘಟನೆಯ ಸಂಬಂಧ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಟ್ವೀಟ್ ಮಾಡಿದ್ದು, “ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಅತಿಕ್ರಮಣವಾಗುತ್ತಿದ್ದು, ಅದರ ಮೇಲೆ ಕೇಂದ್ರ ಸರ್ಕಾರ ಬುಲ್ಡೋಜರ್‌ಗಳನ್ನು ಏಕೆ ಓಡಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ತೈಲ ಬೆಲೆ ಏರಿಕೆ, ಸಿಲಿಂಡರ್‌ ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗದ ಮೇಲೆ ಯಾವಾಗ ಬುಲ್ಡೋಜರ್‌ ಓಡುಸುತ್ತೀರಿ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದರ ನಡುವೆ ಸಿಪಿಐ (ಎಂ) ನಾಯಕಿ ಬೃಂದಾ ಕಾರಟ್ ಅವರು ಬುಧವಾರ ಮಧ್ಯಾಹ್ನ ಜಹಾಂಗೀರ್‌ಪುರಿಯಲ್ಲಿ ಧ್ವಂಸಗೊಳಿಸುವ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆಗ್ರಹಿಸಿ ಬುಲ್ಡೋಜರ್ ಎದುರು ನಿಂತು ಪ್ರತಿಭಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ...

ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

'ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್' ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ. ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, "ಸಿನಿಮಾದ...

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...