Homeಮುಖಪುಟಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್...

ಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್ ಚಡ್ಡಾ

- Advertisement -
- Advertisement -

“ದೇಶಾದ್ಯಂತ ಕೋಮು ಹಿಂಸಾಚಾರವನ್ನು ನಿಲ್ಲಿಸಬೇಕಾದರೆ ಗೃಹ ಸಚಿವ ಅಮಿತ್ ಶಾ ಅವರ ಮನೆ, ಬಿಜೆಪಿ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಹತ್ತಿಸಬೇಕು” ಎಂದು ಎಎಪಿ ನಾಯಕ ರಾಘವ್‌ ಚಡ್ಡಾ ಹೇಳಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿ ಕೋಮುಗಲಭೆಯ ನಂತರ ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಅಧಿಕಾರದಲ್ಲಿರುವ ದೆಹಲಿ ಮುನ್ಸಿಪಾಲ್‌ ತೆರವು ಕಾರ್ಯಾಚರಣೆ ಆರಂಭಿಸಿದೆ. ಅತಿಕ್ರಮಣ ತೆರವು ಕಾರ್ಯಾಚರಣೆ ಹೆಸರಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಘರ್ಷಣೆಗಳು ನಡೆದಿವೆ. ಇಂದು, ಜಹಾಂಗೀರ್ಪುರಿಯಲ್ಲಿ ಘರ್ಷಣೆಗಳು ನಡೆಯುತ್ತಿವೆ. ಬಿಜೆಪಿ ಈ ಗಲಭೆಗಳನ್ನು ಸೃಷ್ಟಿಸುತ್ತದೆ. ಗೃಹ ಸಚಿವರು ಈ ಗಲಭೆಗಳನ್ನು ನಡೆಸುತ್ತಿದ್ದಾರೆ. ಅವರ ಮನೆಯ ಮೇಲೆ ಬುಲ್ಡೋಜರ್ ಚಲಾಯಿಸಿದರೆ, ಗಲಭೆಗಳು ನಿಲ್ಲುತ್ತವೆ” ಎಂದು ಚಡ್ಡಾ ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತೀಯ ಜನತಾ ಪಕ್ಷ ದೇಶಾದ್ಯಂತ ಗಲಭೆ, ಗೂಂಡಾಗಿರಿ ನಡೆಸುತ್ತಿದೆ. ಇದನ್ನೆಲ್ಲ ತಡೆಯಬೇಕಾದರೆ ಬಿಜೆಪಿಯ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಓಡಿಸಬೇಕು. ಬಿಜೆಪಿ ಕೇಂದ್ರ ಕಚೇರಿ ಮೇಲೆ ಬುಲ್ಡೋಜರ್ ಬಳಸಿದರೆ ನಾನು ಗ್ಯಾರಂಟಿ ನೀಡುತ್ತೇನೆ. ಈ ಗಲಭೆಗಳು ನಿಲ್ಲುತ್ತವೆ” ಎಂದಿದ್ದಾರೆ.

ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಜಹಾಂಗೀರ್‌ಪುರಿಯಲ್ಲಿ ನಡೆದ ಘರ್ಷಣೆಯನ್ನು ಪ್ರಸ್ತಾಪಿಸಿ, “ಬಿಜೆಪಿಯವರು ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳನ್ನು ತಮ್ಮ ಜೇಬಿನಲ್ಲಿಟ್ಟುಕೊಂಡಿದ್ದು, ಅವರನ್ನು ಅಶಾಂತಿ ಸೃಷ್ಟಿಸಲು ಬಳಸಬಹುದು. ಬಾಂಗ್ಲಾದೇಶಿಯರು ಎಲ್ಲಿ ನೆಲೆಸಿದ್ದಾರೆಂದು ಕೇಳಿ ಮುಂದಿನ ಗಲಭೆಗಳ ನಿಮಗೆ ತಿಳಿಯುತ್ತವೆ. ಇದಲ್ಲದೆ, ದೆಹಲಿಯಲ್ಲಿ ಅಕ್ರಮ ವಸಾಹತುಗಳ ನಿರ್ಮಾಣಕ್ಕೆ ಬಿಜೆಪಿ ಅನುಕೂಲ ಮಾಡಿಕೊಟ್ಟಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿ ಕಳೆದ 15 ವರ್ಷಗಳಿಂದ ಎಂಸಿಡಿಯಲ್ಲಿ ಅಧಿಕಾರದಲ್ಲಿದೆ. ಅವರು ಲಂಚ ಸ್ವೀಕರಿಸಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿದೆ. ಇಂದು ಉರುಳಿಸಲಾಗುತ್ತಿರುವ ಅಕ್ರಮ ಕಟ್ಟಡಗಳ ಜೊತೆಗೆ ಆ ಕಟ್ಟಡಗಳನ್ನು ನಿರ್ಮಿಸಿದ ಬಿಜೆಪಿ ಸಚಿವರ ಮನೆಗಳನ್ನು ನೆಲಸಮ ಮಾಡಬೇಕು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ನಡೆಯುತ್ತಿರುವುದನ್ನು ವಿರೋಧ ಪಕ್ಷದ ನಾಯಕರು ಖಂಡಿಸಿದ್ದಾರೆ. ಕಾರ್ಯಾಚರಣೆ ನಿಲ್ಲುಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿರಿ: ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ಘಟನೆಯ ಸಂಬಂಧ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಟ್ವೀಟ್ ಮಾಡಿದ್ದು, “ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಅತಿಕ್ರಮಣವಾಗುತ್ತಿದ್ದು, ಅದರ ಮೇಲೆ ಕೇಂದ್ರ ಸರ್ಕಾರ ಬುಲ್ಡೋಜರ್‌ಗಳನ್ನು ಏಕೆ ಓಡಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ತೈಲ ಬೆಲೆ ಏರಿಕೆ, ಸಿಲಿಂಡರ್‌ ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗದ ಮೇಲೆ ಯಾವಾಗ ಬುಲ್ಡೋಜರ್‌ ಓಡುಸುತ್ತೀರಿ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದರ ನಡುವೆ ಸಿಪಿಐ (ಎಂ) ನಾಯಕಿ ಬೃಂದಾ ಕಾರಟ್ ಅವರು ಬುಧವಾರ ಮಧ್ಯಾಹ್ನ ಜಹಾಂಗೀರ್‌ಪುರಿಯಲ್ಲಿ ಧ್ವಂಸಗೊಳಿಸುವ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆಗ್ರಹಿಸಿ ಬುಲ್ಡೋಜರ್ ಎದುರು ನಿಂತು ಪ್ರತಿಭಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...