Homeಮುಖಪುಟಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್...

ಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್ ಚಡ್ಡಾ

- Advertisement -
- Advertisement -

“ದೇಶಾದ್ಯಂತ ಕೋಮು ಹಿಂಸಾಚಾರವನ್ನು ನಿಲ್ಲಿಸಬೇಕಾದರೆ ಗೃಹ ಸಚಿವ ಅಮಿತ್ ಶಾ ಅವರ ಮನೆ, ಬಿಜೆಪಿ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಹತ್ತಿಸಬೇಕು” ಎಂದು ಎಎಪಿ ನಾಯಕ ರಾಘವ್‌ ಚಡ್ಡಾ ಹೇಳಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿ ಕೋಮುಗಲಭೆಯ ನಂತರ ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಅಧಿಕಾರದಲ್ಲಿರುವ ದೆಹಲಿ ಮುನ್ಸಿಪಾಲ್‌ ತೆರವು ಕಾರ್ಯಾಚರಣೆ ಆರಂಭಿಸಿದೆ. ಅತಿಕ್ರಮಣ ತೆರವು ಕಾರ್ಯಾಚರಣೆ ಹೆಸರಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಘರ್ಷಣೆಗಳು ನಡೆದಿವೆ. ಇಂದು, ಜಹಾಂಗೀರ್ಪುರಿಯಲ್ಲಿ ಘರ್ಷಣೆಗಳು ನಡೆಯುತ್ತಿವೆ. ಬಿಜೆಪಿ ಈ ಗಲಭೆಗಳನ್ನು ಸೃಷ್ಟಿಸುತ್ತದೆ. ಗೃಹ ಸಚಿವರು ಈ ಗಲಭೆಗಳನ್ನು ನಡೆಸುತ್ತಿದ್ದಾರೆ. ಅವರ ಮನೆಯ ಮೇಲೆ ಬುಲ್ಡೋಜರ್ ಚಲಾಯಿಸಿದರೆ, ಗಲಭೆಗಳು ನಿಲ್ಲುತ್ತವೆ” ಎಂದು ಚಡ್ಡಾ ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತೀಯ ಜನತಾ ಪಕ್ಷ ದೇಶಾದ್ಯಂತ ಗಲಭೆ, ಗೂಂಡಾಗಿರಿ ನಡೆಸುತ್ತಿದೆ. ಇದನ್ನೆಲ್ಲ ತಡೆಯಬೇಕಾದರೆ ಬಿಜೆಪಿಯ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಓಡಿಸಬೇಕು. ಬಿಜೆಪಿ ಕೇಂದ್ರ ಕಚೇರಿ ಮೇಲೆ ಬುಲ್ಡೋಜರ್ ಬಳಸಿದರೆ ನಾನು ಗ್ಯಾರಂಟಿ ನೀಡುತ್ತೇನೆ. ಈ ಗಲಭೆಗಳು ನಿಲ್ಲುತ್ತವೆ” ಎಂದಿದ್ದಾರೆ.

ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಜಹಾಂಗೀರ್‌ಪುರಿಯಲ್ಲಿ ನಡೆದ ಘರ್ಷಣೆಯನ್ನು ಪ್ರಸ್ತಾಪಿಸಿ, “ಬಿಜೆಪಿಯವರು ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳನ್ನು ತಮ್ಮ ಜೇಬಿನಲ್ಲಿಟ್ಟುಕೊಂಡಿದ್ದು, ಅವರನ್ನು ಅಶಾಂತಿ ಸೃಷ್ಟಿಸಲು ಬಳಸಬಹುದು. ಬಾಂಗ್ಲಾದೇಶಿಯರು ಎಲ್ಲಿ ನೆಲೆಸಿದ್ದಾರೆಂದು ಕೇಳಿ ಮುಂದಿನ ಗಲಭೆಗಳ ನಿಮಗೆ ತಿಳಿಯುತ್ತವೆ. ಇದಲ್ಲದೆ, ದೆಹಲಿಯಲ್ಲಿ ಅಕ್ರಮ ವಸಾಹತುಗಳ ನಿರ್ಮಾಣಕ್ಕೆ ಬಿಜೆಪಿ ಅನುಕೂಲ ಮಾಡಿಕೊಟ್ಟಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿ ಕಳೆದ 15 ವರ್ಷಗಳಿಂದ ಎಂಸಿಡಿಯಲ್ಲಿ ಅಧಿಕಾರದಲ್ಲಿದೆ. ಅವರು ಲಂಚ ಸ್ವೀಕರಿಸಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿದೆ. ಇಂದು ಉರುಳಿಸಲಾಗುತ್ತಿರುವ ಅಕ್ರಮ ಕಟ್ಟಡಗಳ ಜೊತೆಗೆ ಆ ಕಟ್ಟಡಗಳನ್ನು ನಿರ್ಮಿಸಿದ ಬಿಜೆಪಿ ಸಚಿವರ ಮನೆಗಳನ್ನು ನೆಲಸಮ ಮಾಡಬೇಕು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ನಡೆಯುತ್ತಿರುವುದನ್ನು ವಿರೋಧ ಪಕ್ಷದ ನಾಯಕರು ಖಂಡಿಸಿದ್ದಾರೆ. ಕಾರ್ಯಾಚರಣೆ ನಿಲ್ಲುಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿರಿ: ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ಘಟನೆಯ ಸಂಬಂಧ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಟ್ವೀಟ್ ಮಾಡಿದ್ದು, “ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಅತಿಕ್ರಮಣವಾಗುತ್ತಿದ್ದು, ಅದರ ಮೇಲೆ ಕೇಂದ್ರ ಸರ್ಕಾರ ಬುಲ್ಡೋಜರ್‌ಗಳನ್ನು ಏಕೆ ಓಡಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ತೈಲ ಬೆಲೆ ಏರಿಕೆ, ಸಿಲಿಂಡರ್‌ ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗದ ಮೇಲೆ ಯಾವಾಗ ಬುಲ್ಡೋಜರ್‌ ಓಡುಸುತ್ತೀರಿ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದರ ನಡುವೆ ಸಿಪಿಐ (ಎಂ) ನಾಯಕಿ ಬೃಂದಾ ಕಾರಟ್ ಅವರು ಬುಧವಾರ ಮಧ್ಯಾಹ್ನ ಜಹಾಂಗೀರ್‌ಪುರಿಯಲ್ಲಿ ಧ್ವಂಸಗೊಳಿಸುವ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆಗ್ರಹಿಸಿ ಬುಲ್ಡೋಜರ್ ಎದುರು ನಿಂತು ಪ್ರತಿಭಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆತ ಗಲ್ಲಿಗೇರುವವರೆಗೆ ಹೋರಾಟ ಮುಂದುವರಿಸುತ್ತೇನೆ’ : ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸ್ವಾಗತಿಸಿದ್ದು, ಸೆಂಗಾರ್‌ ಗಲ್ಲಿಗೇರುವವರೆಗೆ ತನ್ನ ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. "ಈ...

ಅರಾವಳಿ ಬೆಟ್ಟ, ಶ್ರೇಣಿಗಳ ಮರು ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್ ತಡೆ

ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಹೊಸ ವ್ಯಾಖ್ಯಾನ ಕುರಿತು ನವೆಂಬರ್ 20ರಂದು ನಿವೃತ್ತ ಸಿಜೆಐ ಬಿ. ಆರ್ ಗವಾಯಿ ನೇತೃತ್ವದ ಪೀಠ ನೀಡಿದ ತೀರ್ಪಿನ ಅನುಷ್ಠಾನವನ್ನು ಮೂವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ವಿಶೇಷ...

ತಮಿಳುನಾಡು: ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ಗಾಂಜಾ ವ್ಯಸನಿಗಳಿಂದ ಹಲ್ಲೆ; ಡಿಎಂಕೆಯನ್ನು ಟೀಕಿಸಿದ ಬಿಜೆಪಿ 

ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ವಯಸ್ಕರು ಹಲ್ಲೆ ನಡೆಸಿದ್ದು, ವಲಸೆ ಕಾರ್ಮಿಕ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಅಪ್ರಾಪ್ತ ವಯಸ್ಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ಆಘಾತಕಾರಿ...

ಬಿಜೆಪಿ ಶಾಸಕ ಶರಣು ಸಲಗರ್ ಮೇಲೆ ಎಫ್ಐಆರ್: ಚುನಾವಣೆ ವೇಳೆ ₹99 ಲಕ್ಷ ಸಾಲ ಪಡೆದು ವಂಚನೆ ಆರೋಪ

ಬೀದರ್: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸಲು ವಿಫಲವಾದ ಆರೋಪದ ಮೇಲೆ 99 ಲಕ್ಷ ರೂ.ಗಳ ಚೆಕ್ ಅಮಾನ್ಯವಾದ ದೂರಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್...

ಗಾಜಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್: 80 ದಿನಗಳಲ್ಲಿ 969 ಬಾರಿ ಕದನ ವಿರಾಮ ಉಲ್ಲಂಘನೆ: 418ಜನರ ಹತ್ಯೆ

80 ದಿನಗಳ ಅವಧಿಯಲ್ಲಿ ಇಸ್ರೇಲ್ 969 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದು, 418 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,141 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿರುವ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ. ಭಾನುವಾರ ಬಿಡುಗಡೆ...

BREAKING NEWS: ಉನ್ನಾವೋ ಅತ್ಯಾಚಾರ: ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು...

‘ಲವ್ ಜಿಹಾದ್’ ಆರೋಪ: ಬರೇಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಹಿಂಸಾಚಾರಕ್ಕೆ ತಿರುಗಿಸಿದ ಬಜರಂಗದಳ 

ಬರೇಲಿಯ ಕೆಫೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಹುಟ್ಟುಹಬ್ಬದ ಆಚರಣೆಯಾಗಿ ಆರಂಭವಾದ ಸಂಭ್ರಮ, ಶನಿವಾರ ಬಜರಂಗದಳ ಸದಸ್ಯರು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ಹಲ್ಲೆ ನಡೆಸಿ, ಅಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು "ಲವ್ ಜಿಹಾದ್" ಎಂದು...

ಉನ್ನಾವೋ ಅತ್ಯಾಚಾರ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಡಿ.29) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ...

ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ : ಓರ್ವ ಪ್ರಯಾಣಿಕ ಸಾವು

ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಎಲಮಂಚಿಲಿ ಬಳಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಸೋಮವಾರ (ಡಿ.29) ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ...

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...