Homeಮುಖಪುಟಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್...

ಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್ ಚಡ್ಡಾ

- Advertisement -
- Advertisement -

“ದೇಶಾದ್ಯಂತ ಕೋಮು ಹಿಂಸಾಚಾರವನ್ನು ನಿಲ್ಲಿಸಬೇಕಾದರೆ ಗೃಹ ಸಚಿವ ಅಮಿತ್ ಶಾ ಅವರ ಮನೆ, ಬಿಜೆಪಿ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಹತ್ತಿಸಬೇಕು” ಎಂದು ಎಎಪಿ ನಾಯಕ ರಾಘವ್‌ ಚಡ್ಡಾ ಹೇಳಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿ ಕೋಮುಗಲಭೆಯ ನಂತರ ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಅಧಿಕಾರದಲ್ಲಿರುವ ದೆಹಲಿ ಮುನ್ಸಿಪಾಲ್‌ ತೆರವು ಕಾರ್ಯಾಚರಣೆ ಆರಂಭಿಸಿದೆ. ಅತಿಕ್ರಮಣ ತೆರವು ಕಾರ್ಯಾಚರಣೆ ಹೆಸರಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಘರ್ಷಣೆಗಳು ನಡೆದಿವೆ. ಇಂದು, ಜಹಾಂಗೀರ್ಪುರಿಯಲ್ಲಿ ಘರ್ಷಣೆಗಳು ನಡೆಯುತ್ತಿವೆ. ಬಿಜೆಪಿ ಈ ಗಲಭೆಗಳನ್ನು ಸೃಷ್ಟಿಸುತ್ತದೆ. ಗೃಹ ಸಚಿವರು ಈ ಗಲಭೆಗಳನ್ನು ನಡೆಸುತ್ತಿದ್ದಾರೆ. ಅವರ ಮನೆಯ ಮೇಲೆ ಬುಲ್ಡೋಜರ್ ಚಲಾಯಿಸಿದರೆ, ಗಲಭೆಗಳು ನಿಲ್ಲುತ್ತವೆ” ಎಂದು ಚಡ್ಡಾ ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತೀಯ ಜನತಾ ಪಕ್ಷ ದೇಶಾದ್ಯಂತ ಗಲಭೆ, ಗೂಂಡಾಗಿರಿ ನಡೆಸುತ್ತಿದೆ. ಇದನ್ನೆಲ್ಲ ತಡೆಯಬೇಕಾದರೆ ಬಿಜೆಪಿಯ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಓಡಿಸಬೇಕು. ಬಿಜೆಪಿ ಕೇಂದ್ರ ಕಚೇರಿ ಮೇಲೆ ಬುಲ್ಡೋಜರ್ ಬಳಸಿದರೆ ನಾನು ಗ್ಯಾರಂಟಿ ನೀಡುತ್ತೇನೆ. ಈ ಗಲಭೆಗಳು ನಿಲ್ಲುತ್ತವೆ” ಎಂದಿದ್ದಾರೆ.

ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಜಹಾಂಗೀರ್‌ಪುರಿಯಲ್ಲಿ ನಡೆದ ಘರ್ಷಣೆಯನ್ನು ಪ್ರಸ್ತಾಪಿಸಿ, “ಬಿಜೆಪಿಯವರು ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳನ್ನು ತಮ್ಮ ಜೇಬಿನಲ್ಲಿಟ್ಟುಕೊಂಡಿದ್ದು, ಅವರನ್ನು ಅಶಾಂತಿ ಸೃಷ್ಟಿಸಲು ಬಳಸಬಹುದು. ಬಾಂಗ್ಲಾದೇಶಿಯರು ಎಲ್ಲಿ ನೆಲೆಸಿದ್ದಾರೆಂದು ಕೇಳಿ ಮುಂದಿನ ಗಲಭೆಗಳ ನಿಮಗೆ ತಿಳಿಯುತ್ತವೆ. ಇದಲ್ಲದೆ, ದೆಹಲಿಯಲ್ಲಿ ಅಕ್ರಮ ವಸಾಹತುಗಳ ನಿರ್ಮಾಣಕ್ಕೆ ಬಿಜೆಪಿ ಅನುಕೂಲ ಮಾಡಿಕೊಟ್ಟಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿ ಕಳೆದ 15 ವರ್ಷಗಳಿಂದ ಎಂಸಿಡಿಯಲ್ಲಿ ಅಧಿಕಾರದಲ್ಲಿದೆ. ಅವರು ಲಂಚ ಸ್ವೀಕರಿಸಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿದೆ. ಇಂದು ಉರುಳಿಸಲಾಗುತ್ತಿರುವ ಅಕ್ರಮ ಕಟ್ಟಡಗಳ ಜೊತೆಗೆ ಆ ಕಟ್ಟಡಗಳನ್ನು ನಿರ್ಮಿಸಿದ ಬಿಜೆಪಿ ಸಚಿವರ ಮನೆಗಳನ್ನು ನೆಲಸಮ ಮಾಡಬೇಕು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ನಡೆಯುತ್ತಿರುವುದನ್ನು ವಿರೋಧ ಪಕ್ಷದ ನಾಯಕರು ಖಂಡಿಸಿದ್ದಾರೆ. ಕಾರ್ಯಾಚರಣೆ ನಿಲ್ಲುಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿರಿ: ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ಘಟನೆಯ ಸಂಬಂಧ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಟ್ವೀಟ್ ಮಾಡಿದ್ದು, “ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಅತಿಕ್ರಮಣವಾಗುತ್ತಿದ್ದು, ಅದರ ಮೇಲೆ ಕೇಂದ್ರ ಸರ್ಕಾರ ಬುಲ್ಡೋಜರ್‌ಗಳನ್ನು ಏಕೆ ಓಡಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ತೈಲ ಬೆಲೆ ಏರಿಕೆ, ಸಿಲಿಂಡರ್‌ ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗದ ಮೇಲೆ ಯಾವಾಗ ಬುಲ್ಡೋಜರ್‌ ಓಡುಸುತ್ತೀರಿ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದರ ನಡುವೆ ಸಿಪಿಐ (ಎಂ) ನಾಯಕಿ ಬೃಂದಾ ಕಾರಟ್ ಅವರು ಬುಧವಾರ ಮಧ್ಯಾಹ್ನ ಜಹಾಂಗೀರ್‌ಪುರಿಯಲ್ಲಿ ಧ್ವಂಸಗೊಳಿಸುವ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆಗ್ರಹಿಸಿ ಬುಲ್ಡೋಜರ್ ಎದುರು ನಿಂತು ಪ್ರತಿಭಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...