Homeಮುಖಪುಟಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್...

ಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್ ಚಡ್ಡಾ

- Advertisement -
- Advertisement -

“ದೇಶಾದ್ಯಂತ ಕೋಮು ಹಿಂಸಾಚಾರವನ್ನು ನಿಲ್ಲಿಸಬೇಕಾದರೆ ಗೃಹ ಸಚಿವ ಅಮಿತ್ ಶಾ ಅವರ ಮನೆ, ಬಿಜೆಪಿ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಹತ್ತಿಸಬೇಕು” ಎಂದು ಎಎಪಿ ನಾಯಕ ರಾಘವ್‌ ಚಡ್ಡಾ ಹೇಳಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿ ಕೋಮುಗಲಭೆಯ ನಂತರ ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಅಧಿಕಾರದಲ್ಲಿರುವ ದೆಹಲಿ ಮುನ್ಸಿಪಾಲ್‌ ತೆರವು ಕಾರ್ಯಾಚರಣೆ ಆರಂಭಿಸಿದೆ. ಅತಿಕ್ರಮಣ ತೆರವು ಕಾರ್ಯಾಚರಣೆ ಹೆಸರಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಘರ್ಷಣೆಗಳು ನಡೆದಿವೆ. ಇಂದು, ಜಹಾಂಗೀರ್ಪುರಿಯಲ್ಲಿ ಘರ್ಷಣೆಗಳು ನಡೆಯುತ್ತಿವೆ. ಬಿಜೆಪಿ ಈ ಗಲಭೆಗಳನ್ನು ಸೃಷ್ಟಿಸುತ್ತದೆ. ಗೃಹ ಸಚಿವರು ಈ ಗಲಭೆಗಳನ್ನು ನಡೆಸುತ್ತಿದ್ದಾರೆ. ಅವರ ಮನೆಯ ಮೇಲೆ ಬುಲ್ಡೋಜರ್ ಚಲಾಯಿಸಿದರೆ, ಗಲಭೆಗಳು ನಿಲ್ಲುತ್ತವೆ” ಎಂದು ಚಡ್ಡಾ ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತೀಯ ಜನತಾ ಪಕ್ಷ ದೇಶಾದ್ಯಂತ ಗಲಭೆ, ಗೂಂಡಾಗಿರಿ ನಡೆಸುತ್ತಿದೆ. ಇದನ್ನೆಲ್ಲ ತಡೆಯಬೇಕಾದರೆ ಬಿಜೆಪಿಯ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಓಡಿಸಬೇಕು. ಬಿಜೆಪಿ ಕೇಂದ್ರ ಕಚೇರಿ ಮೇಲೆ ಬುಲ್ಡೋಜರ್ ಬಳಸಿದರೆ ನಾನು ಗ್ಯಾರಂಟಿ ನೀಡುತ್ತೇನೆ. ಈ ಗಲಭೆಗಳು ನಿಲ್ಲುತ್ತವೆ” ಎಂದಿದ್ದಾರೆ.

ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಜಹಾಂಗೀರ್‌ಪುರಿಯಲ್ಲಿ ನಡೆದ ಘರ್ಷಣೆಯನ್ನು ಪ್ರಸ್ತಾಪಿಸಿ, “ಬಿಜೆಪಿಯವರು ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳನ್ನು ತಮ್ಮ ಜೇಬಿನಲ್ಲಿಟ್ಟುಕೊಂಡಿದ್ದು, ಅವರನ್ನು ಅಶಾಂತಿ ಸೃಷ್ಟಿಸಲು ಬಳಸಬಹುದು. ಬಾಂಗ್ಲಾದೇಶಿಯರು ಎಲ್ಲಿ ನೆಲೆಸಿದ್ದಾರೆಂದು ಕೇಳಿ ಮುಂದಿನ ಗಲಭೆಗಳ ನಿಮಗೆ ತಿಳಿಯುತ್ತವೆ. ಇದಲ್ಲದೆ, ದೆಹಲಿಯಲ್ಲಿ ಅಕ್ರಮ ವಸಾಹತುಗಳ ನಿರ್ಮಾಣಕ್ಕೆ ಬಿಜೆಪಿ ಅನುಕೂಲ ಮಾಡಿಕೊಟ್ಟಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿ ಕಳೆದ 15 ವರ್ಷಗಳಿಂದ ಎಂಸಿಡಿಯಲ್ಲಿ ಅಧಿಕಾರದಲ್ಲಿದೆ. ಅವರು ಲಂಚ ಸ್ವೀಕರಿಸಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿದೆ. ಇಂದು ಉರುಳಿಸಲಾಗುತ್ತಿರುವ ಅಕ್ರಮ ಕಟ್ಟಡಗಳ ಜೊತೆಗೆ ಆ ಕಟ್ಟಡಗಳನ್ನು ನಿರ್ಮಿಸಿದ ಬಿಜೆಪಿ ಸಚಿವರ ಮನೆಗಳನ್ನು ನೆಲಸಮ ಮಾಡಬೇಕು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ನಡೆಯುತ್ತಿರುವುದನ್ನು ವಿರೋಧ ಪಕ್ಷದ ನಾಯಕರು ಖಂಡಿಸಿದ್ದಾರೆ. ಕಾರ್ಯಾಚರಣೆ ನಿಲ್ಲುಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿರಿ: ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ಘಟನೆಯ ಸಂಬಂಧ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಟ್ವೀಟ್ ಮಾಡಿದ್ದು, “ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಅತಿಕ್ರಮಣವಾಗುತ್ತಿದ್ದು, ಅದರ ಮೇಲೆ ಕೇಂದ್ರ ಸರ್ಕಾರ ಬುಲ್ಡೋಜರ್‌ಗಳನ್ನು ಏಕೆ ಓಡಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ತೈಲ ಬೆಲೆ ಏರಿಕೆ, ಸಿಲಿಂಡರ್‌ ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗದ ಮೇಲೆ ಯಾವಾಗ ಬುಲ್ಡೋಜರ್‌ ಓಡುಸುತ್ತೀರಿ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದರ ನಡುವೆ ಸಿಪಿಐ (ಎಂ) ನಾಯಕಿ ಬೃಂದಾ ಕಾರಟ್ ಅವರು ಬುಧವಾರ ಮಧ್ಯಾಹ್ನ ಜಹಾಂಗೀರ್‌ಪುರಿಯಲ್ಲಿ ಧ್ವಂಸಗೊಳಿಸುವ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆಗ್ರಹಿಸಿ ಬುಲ್ಡೋಜರ್ ಎದುರು ನಿಂತು ಪ್ರತಿಭಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...