Homeಮುಖಪುಟಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್...

ಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್ ಚಡ್ಡಾ

- Advertisement -
- Advertisement -

“ದೇಶಾದ್ಯಂತ ಕೋಮು ಹಿಂಸಾಚಾರವನ್ನು ನಿಲ್ಲಿಸಬೇಕಾದರೆ ಗೃಹ ಸಚಿವ ಅಮಿತ್ ಶಾ ಅವರ ಮನೆ, ಬಿಜೆಪಿ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಹತ್ತಿಸಬೇಕು” ಎಂದು ಎಎಪಿ ನಾಯಕ ರಾಘವ್‌ ಚಡ್ಡಾ ಹೇಳಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿ ಕೋಮುಗಲಭೆಯ ನಂತರ ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಅಧಿಕಾರದಲ್ಲಿರುವ ದೆಹಲಿ ಮುನ್ಸಿಪಾಲ್‌ ತೆರವು ಕಾರ್ಯಾಚರಣೆ ಆರಂಭಿಸಿದೆ. ಅತಿಕ್ರಮಣ ತೆರವು ಕಾರ್ಯಾಚರಣೆ ಹೆಸರಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಘರ್ಷಣೆಗಳು ನಡೆದಿವೆ. ಇಂದು, ಜಹಾಂಗೀರ್ಪುರಿಯಲ್ಲಿ ಘರ್ಷಣೆಗಳು ನಡೆಯುತ್ತಿವೆ. ಬಿಜೆಪಿ ಈ ಗಲಭೆಗಳನ್ನು ಸೃಷ್ಟಿಸುತ್ತದೆ. ಗೃಹ ಸಚಿವರು ಈ ಗಲಭೆಗಳನ್ನು ನಡೆಸುತ್ತಿದ್ದಾರೆ. ಅವರ ಮನೆಯ ಮೇಲೆ ಬುಲ್ಡೋಜರ್ ಚಲಾಯಿಸಿದರೆ, ಗಲಭೆಗಳು ನಿಲ್ಲುತ್ತವೆ” ಎಂದು ಚಡ್ಡಾ ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತೀಯ ಜನತಾ ಪಕ್ಷ ದೇಶಾದ್ಯಂತ ಗಲಭೆ, ಗೂಂಡಾಗಿರಿ ನಡೆಸುತ್ತಿದೆ. ಇದನ್ನೆಲ್ಲ ತಡೆಯಬೇಕಾದರೆ ಬಿಜೆಪಿಯ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಓಡಿಸಬೇಕು. ಬಿಜೆಪಿ ಕೇಂದ್ರ ಕಚೇರಿ ಮೇಲೆ ಬುಲ್ಡೋಜರ್ ಬಳಸಿದರೆ ನಾನು ಗ್ಯಾರಂಟಿ ನೀಡುತ್ತೇನೆ. ಈ ಗಲಭೆಗಳು ನಿಲ್ಲುತ್ತವೆ” ಎಂದಿದ್ದಾರೆ.

ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಜಹಾಂಗೀರ್‌ಪುರಿಯಲ್ಲಿ ನಡೆದ ಘರ್ಷಣೆಯನ್ನು ಪ್ರಸ್ತಾಪಿಸಿ, “ಬಿಜೆಪಿಯವರು ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳನ್ನು ತಮ್ಮ ಜೇಬಿನಲ್ಲಿಟ್ಟುಕೊಂಡಿದ್ದು, ಅವರನ್ನು ಅಶಾಂತಿ ಸೃಷ್ಟಿಸಲು ಬಳಸಬಹುದು. ಬಾಂಗ್ಲಾದೇಶಿಯರು ಎಲ್ಲಿ ನೆಲೆಸಿದ್ದಾರೆಂದು ಕೇಳಿ ಮುಂದಿನ ಗಲಭೆಗಳ ನಿಮಗೆ ತಿಳಿಯುತ್ತವೆ. ಇದಲ್ಲದೆ, ದೆಹಲಿಯಲ್ಲಿ ಅಕ್ರಮ ವಸಾಹತುಗಳ ನಿರ್ಮಾಣಕ್ಕೆ ಬಿಜೆಪಿ ಅನುಕೂಲ ಮಾಡಿಕೊಟ್ಟಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿ ಕಳೆದ 15 ವರ್ಷಗಳಿಂದ ಎಂಸಿಡಿಯಲ್ಲಿ ಅಧಿಕಾರದಲ್ಲಿದೆ. ಅವರು ಲಂಚ ಸ್ವೀಕರಿಸಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿದೆ. ಇಂದು ಉರುಳಿಸಲಾಗುತ್ತಿರುವ ಅಕ್ರಮ ಕಟ್ಟಡಗಳ ಜೊತೆಗೆ ಆ ಕಟ್ಟಡಗಳನ್ನು ನಿರ್ಮಿಸಿದ ಬಿಜೆಪಿ ಸಚಿವರ ಮನೆಗಳನ್ನು ನೆಲಸಮ ಮಾಡಬೇಕು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ನಡೆಯುತ್ತಿರುವುದನ್ನು ವಿರೋಧ ಪಕ್ಷದ ನಾಯಕರು ಖಂಡಿಸಿದ್ದಾರೆ. ಕಾರ್ಯಾಚರಣೆ ನಿಲ್ಲುಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿರಿ: ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ಘಟನೆಯ ಸಂಬಂಧ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಟ್ವೀಟ್ ಮಾಡಿದ್ದು, “ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಅತಿಕ್ರಮಣವಾಗುತ್ತಿದ್ದು, ಅದರ ಮೇಲೆ ಕೇಂದ್ರ ಸರ್ಕಾರ ಬುಲ್ಡೋಜರ್‌ಗಳನ್ನು ಏಕೆ ಓಡಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ತೈಲ ಬೆಲೆ ಏರಿಕೆ, ಸಿಲಿಂಡರ್‌ ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗದ ಮೇಲೆ ಯಾವಾಗ ಬುಲ್ಡೋಜರ್‌ ಓಡುಸುತ್ತೀರಿ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದರ ನಡುವೆ ಸಿಪಿಐ (ಎಂ) ನಾಯಕಿ ಬೃಂದಾ ಕಾರಟ್ ಅವರು ಬುಧವಾರ ಮಧ್ಯಾಹ್ನ ಜಹಾಂಗೀರ್‌ಪುರಿಯಲ್ಲಿ ಧ್ವಂಸಗೊಳಿಸುವ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆಗ್ರಹಿಸಿ ಬುಲ್ಡೋಜರ್ ಎದುರು ನಿಂತು ಪ್ರತಿಭಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...