Homeಮುಖಪುಟಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್...

ಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್ ಚಡ್ಡಾ

- Advertisement -
- Advertisement -

“ದೇಶಾದ್ಯಂತ ಕೋಮು ಹಿಂಸಾಚಾರವನ್ನು ನಿಲ್ಲಿಸಬೇಕಾದರೆ ಗೃಹ ಸಚಿವ ಅಮಿತ್ ಶಾ ಅವರ ಮನೆ, ಬಿಜೆಪಿ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಹತ್ತಿಸಬೇಕು” ಎಂದು ಎಎಪಿ ನಾಯಕ ರಾಘವ್‌ ಚಡ್ಡಾ ಹೇಳಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿ ಕೋಮುಗಲಭೆಯ ನಂತರ ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಅಧಿಕಾರದಲ್ಲಿರುವ ದೆಹಲಿ ಮುನ್ಸಿಪಾಲ್‌ ತೆರವು ಕಾರ್ಯಾಚರಣೆ ಆರಂಭಿಸಿದೆ. ಅತಿಕ್ರಮಣ ತೆರವು ಕಾರ್ಯಾಚರಣೆ ಹೆಸರಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಘರ್ಷಣೆಗಳು ನಡೆದಿವೆ. ಇಂದು, ಜಹಾಂಗೀರ್ಪುರಿಯಲ್ಲಿ ಘರ್ಷಣೆಗಳು ನಡೆಯುತ್ತಿವೆ. ಬಿಜೆಪಿ ಈ ಗಲಭೆಗಳನ್ನು ಸೃಷ್ಟಿಸುತ್ತದೆ. ಗೃಹ ಸಚಿವರು ಈ ಗಲಭೆಗಳನ್ನು ನಡೆಸುತ್ತಿದ್ದಾರೆ. ಅವರ ಮನೆಯ ಮೇಲೆ ಬುಲ್ಡೋಜರ್ ಚಲಾಯಿಸಿದರೆ, ಗಲಭೆಗಳು ನಿಲ್ಲುತ್ತವೆ” ಎಂದು ಚಡ್ಡಾ ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತೀಯ ಜನತಾ ಪಕ್ಷ ದೇಶಾದ್ಯಂತ ಗಲಭೆ, ಗೂಂಡಾಗಿರಿ ನಡೆಸುತ್ತಿದೆ. ಇದನ್ನೆಲ್ಲ ತಡೆಯಬೇಕಾದರೆ ಬಿಜೆಪಿಯ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಓಡಿಸಬೇಕು. ಬಿಜೆಪಿ ಕೇಂದ್ರ ಕಚೇರಿ ಮೇಲೆ ಬುಲ್ಡೋಜರ್ ಬಳಸಿದರೆ ನಾನು ಗ್ಯಾರಂಟಿ ನೀಡುತ್ತೇನೆ. ಈ ಗಲಭೆಗಳು ನಿಲ್ಲುತ್ತವೆ” ಎಂದಿದ್ದಾರೆ.

ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಜಹಾಂಗೀರ್‌ಪುರಿಯಲ್ಲಿ ನಡೆದ ಘರ್ಷಣೆಯನ್ನು ಪ್ರಸ್ತಾಪಿಸಿ, “ಬಿಜೆಪಿಯವರು ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳನ್ನು ತಮ್ಮ ಜೇಬಿನಲ್ಲಿಟ್ಟುಕೊಂಡಿದ್ದು, ಅವರನ್ನು ಅಶಾಂತಿ ಸೃಷ್ಟಿಸಲು ಬಳಸಬಹುದು. ಬಾಂಗ್ಲಾದೇಶಿಯರು ಎಲ್ಲಿ ನೆಲೆಸಿದ್ದಾರೆಂದು ಕೇಳಿ ಮುಂದಿನ ಗಲಭೆಗಳ ನಿಮಗೆ ತಿಳಿಯುತ್ತವೆ. ಇದಲ್ಲದೆ, ದೆಹಲಿಯಲ್ಲಿ ಅಕ್ರಮ ವಸಾಹತುಗಳ ನಿರ್ಮಾಣಕ್ಕೆ ಬಿಜೆಪಿ ಅನುಕೂಲ ಮಾಡಿಕೊಟ್ಟಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿ ಕಳೆದ 15 ವರ್ಷಗಳಿಂದ ಎಂಸಿಡಿಯಲ್ಲಿ ಅಧಿಕಾರದಲ್ಲಿದೆ. ಅವರು ಲಂಚ ಸ್ವೀಕರಿಸಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿದೆ. ಇಂದು ಉರುಳಿಸಲಾಗುತ್ತಿರುವ ಅಕ್ರಮ ಕಟ್ಟಡಗಳ ಜೊತೆಗೆ ಆ ಕಟ್ಟಡಗಳನ್ನು ನಿರ್ಮಿಸಿದ ಬಿಜೆಪಿ ಸಚಿವರ ಮನೆಗಳನ್ನು ನೆಲಸಮ ಮಾಡಬೇಕು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ನಡೆಯುತ್ತಿರುವುದನ್ನು ವಿರೋಧ ಪಕ್ಷದ ನಾಯಕರು ಖಂಡಿಸಿದ್ದಾರೆ. ಕಾರ್ಯಾಚರಣೆ ನಿಲ್ಲುಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿರಿ: ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ಘಟನೆಯ ಸಂಬಂಧ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಟ್ವೀಟ್ ಮಾಡಿದ್ದು, “ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಅತಿಕ್ರಮಣವಾಗುತ್ತಿದ್ದು, ಅದರ ಮೇಲೆ ಕೇಂದ್ರ ಸರ್ಕಾರ ಬುಲ್ಡೋಜರ್‌ಗಳನ್ನು ಏಕೆ ಓಡಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ತೈಲ ಬೆಲೆ ಏರಿಕೆ, ಸಿಲಿಂಡರ್‌ ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗದ ಮೇಲೆ ಯಾವಾಗ ಬುಲ್ಡೋಜರ್‌ ಓಡುಸುತ್ತೀರಿ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದರ ನಡುವೆ ಸಿಪಿಐ (ಎಂ) ನಾಯಕಿ ಬೃಂದಾ ಕಾರಟ್ ಅವರು ಬುಧವಾರ ಮಧ್ಯಾಹ್ನ ಜಹಾಂಗೀರ್‌ಪುರಿಯಲ್ಲಿ ಧ್ವಂಸಗೊಳಿಸುವ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆಗ್ರಹಿಸಿ ಬುಲ್ಡೋಜರ್ ಎದುರು ನಿಂತು ಪ್ರತಿಭಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...