Homeಮುಖಪುಟಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್...

ಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್ ಚಡ್ಡಾ

- Advertisement -
- Advertisement -

“ದೇಶಾದ್ಯಂತ ಕೋಮು ಹಿಂಸಾಚಾರವನ್ನು ನಿಲ್ಲಿಸಬೇಕಾದರೆ ಗೃಹ ಸಚಿವ ಅಮಿತ್ ಶಾ ಅವರ ಮನೆ, ಬಿಜೆಪಿ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಹತ್ತಿಸಬೇಕು” ಎಂದು ಎಎಪಿ ನಾಯಕ ರಾಘವ್‌ ಚಡ್ಡಾ ಹೇಳಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿ ಕೋಮುಗಲಭೆಯ ನಂತರ ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಅಧಿಕಾರದಲ್ಲಿರುವ ದೆಹಲಿ ಮುನ್ಸಿಪಾಲ್‌ ತೆರವು ಕಾರ್ಯಾಚರಣೆ ಆರಂಭಿಸಿದೆ. ಅತಿಕ್ರಮಣ ತೆರವು ಕಾರ್ಯಾಚರಣೆ ಹೆಸರಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಘರ್ಷಣೆಗಳು ನಡೆದಿವೆ. ಇಂದು, ಜಹಾಂಗೀರ್ಪುರಿಯಲ್ಲಿ ಘರ್ಷಣೆಗಳು ನಡೆಯುತ್ತಿವೆ. ಬಿಜೆಪಿ ಈ ಗಲಭೆಗಳನ್ನು ಸೃಷ್ಟಿಸುತ್ತದೆ. ಗೃಹ ಸಚಿವರು ಈ ಗಲಭೆಗಳನ್ನು ನಡೆಸುತ್ತಿದ್ದಾರೆ. ಅವರ ಮನೆಯ ಮೇಲೆ ಬುಲ್ಡೋಜರ್ ಚಲಾಯಿಸಿದರೆ, ಗಲಭೆಗಳು ನಿಲ್ಲುತ್ತವೆ” ಎಂದು ಚಡ್ಡಾ ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತೀಯ ಜನತಾ ಪಕ್ಷ ದೇಶಾದ್ಯಂತ ಗಲಭೆ, ಗೂಂಡಾಗಿರಿ ನಡೆಸುತ್ತಿದೆ. ಇದನ್ನೆಲ್ಲ ತಡೆಯಬೇಕಾದರೆ ಬಿಜೆಪಿಯ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಓಡಿಸಬೇಕು. ಬಿಜೆಪಿ ಕೇಂದ್ರ ಕಚೇರಿ ಮೇಲೆ ಬುಲ್ಡೋಜರ್ ಬಳಸಿದರೆ ನಾನು ಗ್ಯಾರಂಟಿ ನೀಡುತ್ತೇನೆ. ಈ ಗಲಭೆಗಳು ನಿಲ್ಲುತ್ತವೆ” ಎಂದಿದ್ದಾರೆ.

ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಜಹಾಂಗೀರ್‌ಪುರಿಯಲ್ಲಿ ನಡೆದ ಘರ್ಷಣೆಯನ್ನು ಪ್ರಸ್ತಾಪಿಸಿ, “ಬಿಜೆಪಿಯವರು ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳನ್ನು ತಮ್ಮ ಜೇಬಿನಲ್ಲಿಟ್ಟುಕೊಂಡಿದ್ದು, ಅವರನ್ನು ಅಶಾಂತಿ ಸೃಷ್ಟಿಸಲು ಬಳಸಬಹುದು. ಬಾಂಗ್ಲಾದೇಶಿಯರು ಎಲ್ಲಿ ನೆಲೆಸಿದ್ದಾರೆಂದು ಕೇಳಿ ಮುಂದಿನ ಗಲಭೆಗಳ ನಿಮಗೆ ತಿಳಿಯುತ್ತವೆ. ಇದಲ್ಲದೆ, ದೆಹಲಿಯಲ್ಲಿ ಅಕ್ರಮ ವಸಾಹತುಗಳ ನಿರ್ಮಾಣಕ್ಕೆ ಬಿಜೆಪಿ ಅನುಕೂಲ ಮಾಡಿಕೊಟ್ಟಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿ ಕಳೆದ 15 ವರ್ಷಗಳಿಂದ ಎಂಸಿಡಿಯಲ್ಲಿ ಅಧಿಕಾರದಲ್ಲಿದೆ. ಅವರು ಲಂಚ ಸ್ವೀಕರಿಸಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿದೆ. ಇಂದು ಉರುಳಿಸಲಾಗುತ್ತಿರುವ ಅಕ್ರಮ ಕಟ್ಟಡಗಳ ಜೊತೆಗೆ ಆ ಕಟ್ಟಡಗಳನ್ನು ನಿರ್ಮಿಸಿದ ಬಿಜೆಪಿ ಸಚಿವರ ಮನೆಗಳನ್ನು ನೆಲಸಮ ಮಾಡಬೇಕು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ನಡೆಯುತ್ತಿರುವುದನ್ನು ವಿರೋಧ ಪಕ್ಷದ ನಾಯಕರು ಖಂಡಿಸಿದ್ದಾರೆ. ಕಾರ್ಯಾಚರಣೆ ನಿಲ್ಲುಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿರಿ: ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ಘಟನೆಯ ಸಂಬಂಧ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಟ್ವೀಟ್ ಮಾಡಿದ್ದು, “ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಅತಿಕ್ರಮಣವಾಗುತ್ತಿದ್ದು, ಅದರ ಮೇಲೆ ಕೇಂದ್ರ ಸರ್ಕಾರ ಬುಲ್ಡೋಜರ್‌ಗಳನ್ನು ಏಕೆ ಓಡಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ತೈಲ ಬೆಲೆ ಏರಿಕೆ, ಸಿಲಿಂಡರ್‌ ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗದ ಮೇಲೆ ಯಾವಾಗ ಬುಲ್ಡೋಜರ್‌ ಓಡುಸುತ್ತೀರಿ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದರ ನಡುವೆ ಸಿಪಿಐ (ಎಂ) ನಾಯಕಿ ಬೃಂದಾ ಕಾರಟ್ ಅವರು ಬುಧವಾರ ಮಧ್ಯಾಹ್ನ ಜಹಾಂಗೀರ್‌ಪುರಿಯಲ್ಲಿ ಧ್ವಂಸಗೊಳಿಸುವ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆಗ್ರಹಿಸಿ ಬುಲ್ಡೋಜರ್ ಎದುರು ನಿಂತು ಪ್ರತಿಭಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧವೇ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...

ನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕನಿಷ್ಠ 616 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಶನಿವಾರ (ಆ.29) ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಶುಕ್ರವಾರ (ಆ.28) ಪೊಲೀಸರು...