Homeಮುಖಪುಟಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್...

ಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್ ಚಡ್ಡಾ

- Advertisement -
- Advertisement -

“ದೇಶಾದ್ಯಂತ ಕೋಮು ಹಿಂಸಾಚಾರವನ್ನು ನಿಲ್ಲಿಸಬೇಕಾದರೆ ಗೃಹ ಸಚಿವ ಅಮಿತ್ ಶಾ ಅವರ ಮನೆ, ಬಿಜೆಪಿ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಹತ್ತಿಸಬೇಕು” ಎಂದು ಎಎಪಿ ನಾಯಕ ರಾಘವ್‌ ಚಡ್ಡಾ ಹೇಳಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿ ಕೋಮುಗಲಭೆಯ ನಂತರ ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಅಧಿಕಾರದಲ್ಲಿರುವ ದೆಹಲಿ ಮುನ್ಸಿಪಾಲ್‌ ತೆರವು ಕಾರ್ಯಾಚರಣೆ ಆರಂಭಿಸಿದೆ. ಅತಿಕ್ರಮಣ ತೆರವು ಕಾರ್ಯಾಚರಣೆ ಹೆಸರಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಘರ್ಷಣೆಗಳು ನಡೆದಿವೆ. ಇಂದು, ಜಹಾಂಗೀರ್ಪುರಿಯಲ್ಲಿ ಘರ್ಷಣೆಗಳು ನಡೆಯುತ್ತಿವೆ. ಬಿಜೆಪಿ ಈ ಗಲಭೆಗಳನ್ನು ಸೃಷ್ಟಿಸುತ್ತದೆ. ಗೃಹ ಸಚಿವರು ಈ ಗಲಭೆಗಳನ್ನು ನಡೆಸುತ್ತಿದ್ದಾರೆ. ಅವರ ಮನೆಯ ಮೇಲೆ ಬುಲ್ಡೋಜರ್ ಚಲಾಯಿಸಿದರೆ, ಗಲಭೆಗಳು ನಿಲ್ಲುತ್ತವೆ” ಎಂದು ಚಡ್ಡಾ ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತೀಯ ಜನತಾ ಪಕ್ಷ ದೇಶಾದ್ಯಂತ ಗಲಭೆ, ಗೂಂಡಾಗಿರಿ ನಡೆಸುತ್ತಿದೆ. ಇದನ್ನೆಲ್ಲ ತಡೆಯಬೇಕಾದರೆ ಬಿಜೆಪಿಯ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಓಡಿಸಬೇಕು. ಬಿಜೆಪಿ ಕೇಂದ್ರ ಕಚೇರಿ ಮೇಲೆ ಬುಲ್ಡೋಜರ್ ಬಳಸಿದರೆ ನಾನು ಗ್ಯಾರಂಟಿ ನೀಡುತ್ತೇನೆ. ಈ ಗಲಭೆಗಳು ನಿಲ್ಲುತ್ತವೆ” ಎಂದಿದ್ದಾರೆ.

ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಜಹಾಂಗೀರ್‌ಪುರಿಯಲ್ಲಿ ನಡೆದ ಘರ್ಷಣೆಯನ್ನು ಪ್ರಸ್ತಾಪಿಸಿ, “ಬಿಜೆಪಿಯವರು ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳನ್ನು ತಮ್ಮ ಜೇಬಿನಲ್ಲಿಟ್ಟುಕೊಂಡಿದ್ದು, ಅವರನ್ನು ಅಶಾಂತಿ ಸೃಷ್ಟಿಸಲು ಬಳಸಬಹುದು. ಬಾಂಗ್ಲಾದೇಶಿಯರು ಎಲ್ಲಿ ನೆಲೆಸಿದ್ದಾರೆಂದು ಕೇಳಿ ಮುಂದಿನ ಗಲಭೆಗಳ ನಿಮಗೆ ತಿಳಿಯುತ್ತವೆ. ಇದಲ್ಲದೆ, ದೆಹಲಿಯಲ್ಲಿ ಅಕ್ರಮ ವಸಾಹತುಗಳ ನಿರ್ಮಾಣಕ್ಕೆ ಬಿಜೆಪಿ ಅನುಕೂಲ ಮಾಡಿಕೊಟ್ಟಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿ ಕಳೆದ 15 ವರ್ಷಗಳಿಂದ ಎಂಸಿಡಿಯಲ್ಲಿ ಅಧಿಕಾರದಲ್ಲಿದೆ. ಅವರು ಲಂಚ ಸ್ವೀಕರಿಸಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿದೆ. ಇಂದು ಉರುಳಿಸಲಾಗುತ್ತಿರುವ ಅಕ್ರಮ ಕಟ್ಟಡಗಳ ಜೊತೆಗೆ ಆ ಕಟ್ಟಡಗಳನ್ನು ನಿರ್ಮಿಸಿದ ಬಿಜೆಪಿ ಸಚಿವರ ಮನೆಗಳನ್ನು ನೆಲಸಮ ಮಾಡಬೇಕು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ನಡೆಯುತ್ತಿರುವುದನ್ನು ವಿರೋಧ ಪಕ್ಷದ ನಾಯಕರು ಖಂಡಿಸಿದ್ದಾರೆ. ಕಾರ್ಯಾಚರಣೆ ನಿಲ್ಲುಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿರಿ: ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ಘಟನೆಯ ಸಂಬಂಧ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಟ್ವೀಟ್ ಮಾಡಿದ್ದು, “ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಅತಿಕ್ರಮಣವಾಗುತ್ತಿದ್ದು, ಅದರ ಮೇಲೆ ಕೇಂದ್ರ ಸರ್ಕಾರ ಬುಲ್ಡೋಜರ್‌ಗಳನ್ನು ಏಕೆ ಓಡಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ತೈಲ ಬೆಲೆ ಏರಿಕೆ, ಸಿಲಿಂಡರ್‌ ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗದ ಮೇಲೆ ಯಾವಾಗ ಬುಲ್ಡೋಜರ್‌ ಓಡುಸುತ್ತೀರಿ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದರ ನಡುವೆ ಸಿಪಿಐ (ಎಂ) ನಾಯಕಿ ಬೃಂದಾ ಕಾರಟ್ ಅವರು ಬುಧವಾರ ಮಧ್ಯಾಹ್ನ ಜಹಾಂಗೀರ್‌ಪುರಿಯಲ್ಲಿ ಧ್ವಂಸಗೊಳಿಸುವ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆಗ್ರಹಿಸಿ ಬುಲ್ಡೋಜರ್ ಎದುರು ನಿಂತು ಪ್ರತಿಭಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...