Homeಮುಖಪುಟಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್...

ಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್ ಚಡ್ಡಾ

- Advertisement -
- Advertisement -

“ದೇಶಾದ್ಯಂತ ಕೋಮು ಹಿಂಸಾಚಾರವನ್ನು ನಿಲ್ಲಿಸಬೇಕಾದರೆ ಗೃಹ ಸಚಿವ ಅಮಿತ್ ಶಾ ಅವರ ಮನೆ, ಬಿಜೆಪಿ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಹತ್ತಿಸಬೇಕು” ಎಂದು ಎಎಪಿ ನಾಯಕ ರಾಘವ್‌ ಚಡ್ಡಾ ಹೇಳಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿ ಕೋಮುಗಲಭೆಯ ನಂತರ ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಅಧಿಕಾರದಲ್ಲಿರುವ ದೆಹಲಿ ಮುನ್ಸಿಪಾಲ್‌ ತೆರವು ಕಾರ್ಯಾಚರಣೆ ಆರಂಭಿಸಿದೆ. ಅತಿಕ್ರಮಣ ತೆರವು ಕಾರ್ಯಾಚರಣೆ ಹೆಸರಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಘರ್ಷಣೆಗಳು ನಡೆದಿವೆ. ಇಂದು, ಜಹಾಂಗೀರ್ಪುರಿಯಲ್ಲಿ ಘರ್ಷಣೆಗಳು ನಡೆಯುತ್ತಿವೆ. ಬಿಜೆಪಿ ಈ ಗಲಭೆಗಳನ್ನು ಸೃಷ್ಟಿಸುತ್ತದೆ. ಗೃಹ ಸಚಿವರು ಈ ಗಲಭೆಗಳನ್ನು ನಡೆಸುತ್ತಿದ್ದಾರೆ. ಅವರ ಮನೆಯ ಮೇಲೆ ಬುಲ್ಡೋಜರ್ ಚಲಾಯಿಸಿದರೆ, ಗಲಭೆಗಳು ನಿಲ್ಲುತ್ತವೆ” ಎಂದು ಚಡ್ಡಾ ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತೀಯ ಜನತಾ ಪಕ್ಷ ದೇಶಾದ್ಯಂತ ಗಲಭೆ, ಗೂಂಡಾಗಿರಿ ನಡೆಸುತ್ತಿದೆ. ಇದನ್ನೆಲ್ಲ ತಡೆಯಬೇಕಾದರೆ ಬಿಜೆಪಿಯ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಓಡಿಸಬೇಕು. ಬಿಜೆಪಿ ಕೇಂದ್ರ ಕಚೇರಿ ಮೇಲೆ ಬುಲ್ಡೋಜರ್ ಬಳಸಿದರೆ ನಾನು ಗ್ಯಾರಂಟಿ ನೀಡುತ್ತೇನೆ. ಈ ಗಲಭೆಗಳು ನಿಲ್ಲುತ್ತವೆ” ಎಂದಿದ್ದಾರೆ.

ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಜಹಾಂಗೀರ್‌ಪುರಿಯಲ್ಲಿ ನಡೆದ ಘರ್ಷಣೆಯನ್ನು ಪ್ರಸ್ತಾಪಿಸಿ, “ಬಿಜೆಪಿಯವರು ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳನ್ನು ತಮ್ಮ ಜೇಬಿನಲ್ಲಿಟ್ಟುಕೊಂಡಿದ್ದು, ಅವರನ್ನು ಅಶಾಂತಿ ಸೃಷ್ಟಿಸಲು ಬಳಸಬಹುದು. ಬಾಂಗ್ಲಾದೇಶಿಯರು ಎಲ್ಲಿ ನೆಲೆಸಿದ್ದಾರೆಂದು ಕೇಳಿ ಮುಂದಿನ ಗಲಭೆಗಳ ನಿಮಗೆ ತಿಳಿಯುತ್ತವೆ. ಇದಲ್ಲದೆ, ದೆಹಲಿಯಲ್ಲಿ ಅಕ್ರಮ ವಸಾಹತುಗಳ ನಿರ್ಮಾಣಕ್ಕೆ ಬಿಜೆಪಿ ಅನುಕೂಲ ಮಾಡಿಕೊಟ್ಟಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿ ಕಳೆದ 15 ವರ್ಷಗಳಿಂದ ಎಂಸಿಡಿಯಲ್ಲಿ ಅಧಿಕಾರದಲ್ಲಿದೆ. ಅವರು ಲಂಚ ಸ್ವೀಕರಿಸಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿದೆ. ಇಂದು ಉರುಳಿಸಲಾಗುತ್ತಿರುವ ಅಕ್ರಮ ಕಟ್ಟಡಗಳ ಜೊತೆಗೆ ಆ ಕಟ್ಟಡಗಳನ್ನು ನಿರ್ಮಿಸಿದ ಬಿಜೆಪಿ ಸಚಿವರ ಮನೆಗಳನ್ನು ನೆಲಸಮ ಮಾಡಬೇಕು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ನಡೆಯುತ್ತಿರುವುದನ್ನು ವಿರೋಧ ಪಕ್ಷದ ನಾಯಕರು ಖಂಡಿಸಿದ್ದಾರೆ. ಕಾರ್ಯಾಚರಣೆ ನಿಲ್ಲುಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿರಿ: ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ಘಟನೆಯ ಸಂಬಂಧ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಟ್ವೀಟ್ ಮಾಡಿದ್ದು, “ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಅತಿಕ್ರಮಣವಾಗುತ್ತಿದ್ದು, ಅದರ ಮೇಲೆ ಕೇಂದ್ರ ಸರ್ಕಾರ ಬುಲ್ಡೋಜರ್‌ಗಳನ್ನು ಏಕೆ ಓಡಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ತೈಲ ಬೆಲೆ ಏರಿಕೆ, ಸಿಲಿಂಡರ್‌ ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗದ ಮೇಲೆ ಯಾವಾಗ ಬುಲ್ಡೋಜರ್‌ ಓಡುಸುತ್ತೀರಿ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದರ ನಡುವೆ ಸಿಪಿಐ (ಎಂ) ನಾಯಕಿ ಬೃಂದಾ ಕಾರಟ್ ಅವರು ಬುಧವಾರ ಮಧ್ಯಾಹ್ನ ಜಹಾಂಗೀರ್‌ಪುರಿಯಲ್ಲಿ ಧ್ವಂಸಗೊಳಿಸುವ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆಗ್ರಹಿಸಿ ಬುಲ್ಡೋಜರ್ ಎದುರು ನಿಂತು ಪ್ರತಿಭಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...