Homeಮುಖಪುಟಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್...

ಗೃಹಸಚಿವರ ಮನೆ, ಬಿಜೆಪಿ ಕಚೇರಿ ಮೇಲೆ ಬುಲ್ಡೋಜರ್‌ ಹತ್ತಿಸಿದರೆ ಗಲಭೆಗಳು ನಿಲ್ಲುತ್ತವೆ: ಎಎಪಿ ನಾಯಕ ರಾಘವ್ ಚಡ್ಡಾ

- Advertisement -
- Advertisement -

“ದೇಶಾದ್ಯಂತ ಕೋಮು ಹಿಂಸಾಚಾರವನ್ನು ನಿಲ್ಲಿಸಬೇಕಾದರೆ ಗೃಹ ಸಚಿವ ಅಮಿತ್ ಶಾ ಅವರ ಮನೆ, ಬಿಜೆಪಿ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಹತ್ತಿಸಬೇಕು” ಎಂದು ಎಎಪಿ ನಾಯಕ ರಾಘವ್‌ ಚಡ್ಡಾ ಹೇಳಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿ ಕೋಮುಗಲಭೆಯ ನಂತರ ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಅಧಿಕಾರದಲ್ಲಿರುವ ದೆಹಲಿ ಮುನ್ಸಿಪಾಲ್‌ ತೆರವು ಕಾರ್ಯಾಚರಣೆ ಆರಂಭಿಸಿದೆ. ಅತಿಕ್ರಮಣ ತೆರವು ಕಾರ್ಯಾಚರಣೆ ಹೆಸರಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಘರ್ಷಣೆಗಳು ನಡೆದಿವೆ. ಇಂದು, ಜಹಾಂಗೀರ್ಪುರಿಯಲ್ಲಿ ಘರ್ಷಣೆಗಳು ನಡೆಯುತ್ತಿವೆ. ಬಿಜೆಪಿ ಈ ಗಲಭೆಗಳನ್ನು ಸೃಷ್ಟಿಸುತ್ತದೆ. ಗೃಹ ಸಚಿವರು ಈ ಗಲಭೆಗಳನ್ನು ನಡೆಸುತ್ತಿದ್ದಾರೆ. ಅವರ ಮನೆಯ ಮೇಲೆ ಬುಲ್ಡೋಜರ್ ಚಲಾಯಿಸಿದರೆ, ಗಲಭೆಗಳು ನಿಲ್ಲುತ್ತವೆ” ಎಂದು ಚಡ್ಡಾ ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತೀಯ ಜನತಾ ಪಕ್ಷ ದೇಶಾದ್ಯಂತ ಗಲಭೆ, ಗೂಂಡಾಗಿರಿ ನಡೆಸುತ್ತಿದೆ. ಇದನ್ನೆಲ್ಲ ತಡೆಯಬೇಕಾದರೆ ಬಿಜೆಪಿಯ ಕೇಂದ್ರ ಕಚೇರಿಯ ಮೇಲೆ ಬುಲ್ಡೋಜರ್ ಓಡಿಸಬೇಕು. ಬಿಜೆಪಿ ಕೇಂದ್ರ ಕಚೇರಿ ಮೇಲೆ ಬುಲ್ಡೋಜರ್ ಬಳಸಿದರೆ ನಾನು ಗ್ಯಾರಂಟಿ ನೀಡುತ್ತೇನೆ. ಈ ಗಲಭೆಗಳು ನಿಲ್ಲುತ್ತವೆ” ಎಂದಿದ್ದಾರೆ.

ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಜಹಾಂಗೀರ್‌ಪುರಿಯಲ್ಲಿ ನಡೆದ ಘರ್ಷಣೆಯನ್ನು ಪ್ರಸ್ತಾಪಿಸಿ, “ಬಿಜೆಪಿಯವರು ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳನ್ನು ತಮ್ಮ ಜೇಬಿನಲ್ಲಿಟ್ಟುಕೊಂಡಿದ್ದು, ಅವರನ್ನು ಅಶಾಂತಿ ಸೃಷ್ಟಿಸಲು ಬಳಸಬಹುದು. ಬಾಂಗ್ಲಾದೇಶಿಯರು ಎಲ್ಲಿ ನೆಲೆಸಿದ್ದಾರೆಂದು ಕೇಳಿ ಮುಂದಿನ ಗಲಭೆಗಳ ನಿಮಗೆ ತಿಳಿಯುತ್ತವೆ. ಇದಲ್ಲದೆ, ದೆಹಲಿಯಲ್ಲಿ ಅಕ್ರಮ ವಸಾಹತುಗಳ ನಿರ್ಮಾಣಕ್ಕೆ ಬಿಜೆಪಿ ಅನುಕೂಲ ಮಾಡಿಕೊಟ್ಟಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿ ಕಳೆದ 15 ವರ್ಷಗಳಿಂದ ಎಂಸಿಡಿಯಲ್ಲಿ ಅಧಿಕಾರದಲ್ಲಿದೆ. ಅವರು ಲಂಚ ಸ್ವೀಕರಿಸಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿದೆ. ಇಂದು ಉರುಳಿಸಲಾಗುತ್ತಿರುವ ಅಕ್ರಮ ಕಟ್ಟಡಗಳ ಜೊತೆಗೆ ಆ ಕಟ್ಟಡಗಳನ್ನು ನಿರ್ಮಿಸಿದ ಬಿಜೆಪಿ ಸಚಿವರ ಮನೆಗಳನ್ನು ನೆಲಸಮ ಮಾಡಬೇಕು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ನಡೆಯುತ್ತಿರುವುದನ್ನು ವಿರೋಧ ಪಕ್ಷದ ನಾಯಕರು ಖಂಡಿಸಿದ್ದಾರೆ. ಕಾರ್ಯಾಚರಣೆ ನಿಲ್ಲುಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿರಿ: ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ಘಟನೆಯ ಸಂಬಂಧ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಟ್ವೀಟ್ ಮಾಡಿದ್ದು, “ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಅತಿಕ್ರಮಣವಾಗುತ್ತಿದ್ದು, ಅದರ ಮೇಲೆ ಕೇಂದ್ರ ಸರ್ಕಾರ ಬುಲ್ಡೋಜರ್‌ಗಳನ್ನು ಏಕೆ ಓಡಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ತೈಲ ಬೆಲೆ ಏರಿಕೆ, ಸಿಲಿಂಡರ್‌ ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗದ ಮೇಲೆ ಯಾವಾಗ ಬುಲ್ಡೋಜರ್‌ ಓಡುಸುತ್ತೀರಿ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದರ ನಡುವೆ ಸಿಪಿಐ (ಎಂ) ನಾಯಕಿ ಬೃಂದಾ ಕಾರಟ್ ಅವರು ಬುಧವಾರ ಮಧ್ಯಾಹ್ನ ಜಹಾಂಗೀರ್‌ಪುರಿಯಲ್ಲಿ ಧ್ವಂಸಗೊಳಿಸುವ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆಗ್ರಹಿಸಿ ಬುಲ್ಡೋಜರ್ ಎದುರು ನಿಂತು ಪ್ರತಿಭಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಪಿ: ತಂದೆ ಮತ್ತು ಮಾನಸಿಕ ಅಸ್ವಸ್ಥ ಮಗಳನ್ನು ಐದು ವರ್ಷ ಕೋಣೆಯಲ್ಲಿ ಕೂಡಿ ಹಾಕಿದ ಸೇವಕ ದಂಪತಿ: ತಂದೆ ಸಾವು, ಅಸ್ಥಿಪಂಜರದಂತೆ ಪತ್ತೆಯಾದ ಮಗಳು

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಿವೃತ್ತ ರೈಲ್ವೆ ಉದ್ಯೋಗಿ ಮತ್ತು ಅವರ ಮಾನಸಿಕ ಅಸ್ವಸ್ಥ ಮಗಳನ್ನು ಅವರ ಆರೈಕೆದಾರರು ಐದು ವರ್ಷಗಳ ಕಾಲ ಬಂಧಿಯಾಗಿಟ್ಟು ಚಿತ್ರಹಿಂಸೆ ನೀಡಿ, ಆ ವ್ಯಕ್ತಿಯ ಸಾವಿಗೆ ಕಾರಣವಾದ...

ಈಶಾನ್ಯ ಭಾರತ ನಾಗರಿಕರ ವಿರುದ್ಧದ ಜನಾಂಗೀಯ ಹಿಂಸಾಚಾರ: ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಈಶಾನ್ಯ ರಾಜ್ಯಗಳು ಮತ್ತು ಇತರ ಗಡಿ ಪ್ರದೇಶಗಳ ನಾಗರಿಕರ ಮೇಲಿನ ಜನಾಂಗೀಯ ತಾರತಮ್ಯ ಮತ್ತು ಹಿಂಸಾಚಾರವನ್ನು ತಡೆಗಟ್ಟುವಲ್ಲಿ, ಪ್ರತಿಕ್ರಿಯಿಸುವಲ್ಲಿ ನಿರಂತರ ಸಾಂವಿಧಾನಿಕ ವೈಫಲ್ಯವನ್ನು ಪರಿಹರಿಸಲು ನ್ಯಾಯಾಂಗ ಹಸ್ತಕ್ಷೇಪವನ್ನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ...

ಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ ಬ್ಯಾನರ್ಜಿ ಎಚ್ಚರಿಕೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡ ನಂತರ ಅಂತಿಮ ಮತದಾರರ ಪಟ್ಟಿಯಿಂದ ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೆ, ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಘೇರಾವ್ ಹಾಕುವುದಾಗಿ...

ಬೀದಿ ನಾಯಿ ಎಣಿಕೆ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿಲ್ಲ: ದೆಹಲಿ ಸರ್ಕಾರದ ಸ್ಪಷ್ಟನೆ

ನಗರದಲ್ಲಿ ಬೀದಿ ನಾಯಿಗಳ ಎಣಿಕೆಗೆ ಯಾವುದೇ ಶಾಲಾ ಶಿಕ್ಷಕರನ್ನು ನಿಯೋಜಿಸಲಾಗಿಲ್ಲ ಎಂದು ದೆಹಲಿ ಸರ್ಕಾರ ಸ್ಪಷ್ಟಪಡಿಸಿದೆ. ಶಿಕ್ಷಕರಿಗೆ ಜನಗಣತಿ ಸಂಬಂಧಿತ ಕರ್ತವ್ಯಗಳಿಗೆ ಮಾತ್ರ ನಿಯೋಜಿಸಲಾಗಿದೆ. ಬೀದಿ ನಾಯಿ ಸಂಬಂಧಿತ ವಿಷಯಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಸಂಸ್ಥೆಗಳಿಗೆ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌.ಡಿ ರೇವಣ್ಣ ಖುಲಾಸೆ

ಮನೆ ಕೆಲಸದ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಸೋಮವಾರ (ಡಿ.29) ಆರೋಪ ಮುಕ್ತಗೊಳಿಸಿ ಮಹತ್ವದ ಆದೇಶ ನೀಡಿದೆ. ಕಳೆದ ತಿಂಗಳು...

ಅಧಿಕಾರಕ್ಕೆ ಬಂದರೆ ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸುತ್ತೇವೆ: ಅಮಿತ್ ಶಾ

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸುವುದು ಬಿಜೆಪಿಯ ಮೊದಲ ಕೆಲಸ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ...

ಅಂಜೆಲ್ ಚಕ್ಮಾ ಜನಾಂಗೀಯ ಹತ್ಯೆ: ತ್ರಿಪುರಾದಲ್ಲಿ ತೀವ್ರಗೊಂಡ ಪ್ರತಿಭಟನೆ; ಮೇಣದಬತ್ತಿ ಮೆರವಣಿಗೆ

ಅಂಜೆಲ್ ಚಕ್ಮಾ ಜನಾಂಗೀಯ ಹತ್ಯೆ ಖಂಡಿಸಿ ತ್ರಿಪುರಾದಲ್ಲಿ ಪ್ರತಿಭಟನೆಗಳು, ಮೇಣದಬತ್ತಿ ಜಾಗೃತಿ ಮುಂದುವರೆದಿದೆ. ಹತ್ಯೆ ಸಂಬಂಧ ಪೊಲೀಸರು ಆರಂಭದಲ್ಲಿ ಎಫ್‌ಐಆರ್ ದಾಖಲಿಸುವಲ್ಲಿ ವಿಫಲರಾಗುವ ಮೂಲಕ ಅಪರಾಧದ ಸಾಕ್ಷಿಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಅಖಿಲ...

ತಮಿಳುನಾಡು: ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ ವಾಪಸ್ ಕಳುಹಿಸಿದ ದ್ರೌಪದಿ ಮುರ್ಮು: ಸ್ಟಾಲಿನ್ ಸರ್ಕಾರಕ್ಕೆ ಹಿನ್ನೆಡೆ

ಚೆನ್ನೈ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮಿಳುನಾಡು ವಿಶ್ವವಿದ್ಯಾಲಯದ ಮದ್ರಾಸ್ ತಿದ್ದುಪಡಿ ಮಸೂದೆಯನ್ನು ಹಿಂದಿರುಗಿಸಿದ್ದಾರೆ, ಇದು ರಾಜ್ಯ ಸರ್ಕಾರಕ್ಕೆ ತನ್ನ ಉಪಕುಲಪತಿಯನ್ನು ನೇಮಿಸಲು ಅಧಿಕಾರ ನೀಡುತ್ತದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ. ಏಪ್ರಿಲ್...

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ: ನೊಂದ ಕುಟಂಬವನ್ನು ಭೇಟಿಯಾದ ಮಾವಳ್ಳಿ ಶಂಕರ್

ಮಾದಿಗ ಸಮುದಾಯದ ಯುವಕನನ್ನು ಮದುವೆಯಾಗಿದ್ದಕ್ಕೆ ತಂದೆಯಿಂದಲೇ ಭೀಕರವಾಗಿ ಹತ್ಯೆಗೀಡಾದ ಗರ್ಭಿಣಿ ಯುವತಿ ಮಾನ್ಯ ಪಾಟೀಲ್ ಅವರ ಪತಿ ವಿವೇಕಾನಂದ ಮತ್ತು ಹಲ್ಲೆಗೆ ಒಳಗಾದ ಕುಟುಂಬದ ಸದಸ್ಯರನ್ನು ಹಿರಿಯ ದಲಿತ ನಾಯಕ ಮಾವಳ್ಳಿ ಶಂಕರ್...

ತಲವಾರು ವಿತರಣೆ : ಹಿಂದೂ ರಕ್ಷಾ ದಳದ 10 ದುಷ್ಕರ್ಮಿಗಳ ಬಂಧನ

ಉತ್ತರ ಪ್ರದೇಶದ ಗಾಝಿಯಾಬಾದ್‌ನ ಶಾಲಿಮಾರ್ ಗಾರ್ಡನ್ ಕಾಲೋನಿಯಲ್ಲಿ ತಲವಾರು ವಿತರಿಸಿದ ಆರೋಪದ ಮೇಲೆ ಹಿಂದೂ ರಕ್ಷಾ ದಳದ ಹತ್ತು ದುಷ್ಕರ್ಮಿಗಳನ್ನು ಪೊಲೀಸರು ಸೋಮವಾರ (ಡಿ.29) ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಾಲಿಮಾರ್...