Homeಕರ್ನಾಟಕವರ್ತೂರು ಪೊಲೀಸರಿಂದ ಮಹಿಳೆ ಮೇಲೆ ಹಲ್ಲೆ ಆರೋಪ : ವರದಿ ಕೇಳಿದ ಗೃಹ ಸಚಿವ ಪರಮೇಶ್ವರ್

ವರ್ತೂರು ಪೊಲೀಸರಿಂದ ಮಹಿಳೆ ಮೇಲೆ ಹಲ್ಲೆ ಆರೋಪ : ವರದಿ ಕೇಳಿದ ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಪಶ್ಚಿಮ ಬಂಗಾಳ ಮೂಲದ ಮನೆ ಕೆಲಸದ ಮಹಿಳೆ ಮೇಲೆ ಬೆಂಗಳೂರಿನ ವರ್ತೂರು ಠಾಣೆ ಪೊಲೀಸರು ತೀವ್ರವಾಗಿ ಹಲ್ಲೆ ನಡೆಸಿರುವ ಕುರಿತು ವರದಿ ಕೇಳಿರುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳವಾರ (ನ.4) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಮಹಿಳಾ ಪೊಲೀಸರು ಹೊಡೆದಿದ್ದಾರೆ ಎಂಬ ವಿಷಯ ಗೊತ್ತಾಗಿದೆ. ಈ ಬಗ್ಗೆ ವಿವರವಾದ ವರದಿ ಕೊಡುವಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸುತ್ತೇವೆ” ಎಂದಿದ್ದಾರೆ.

ಏನಿದು ಪ್ರಕರಣ? ಬೆಂಗಳೂರಿನ ಬಳಗೆರೆಯ ಕಾರ್ಮಿಕರ ಶೆಡ್‌ನಲ್ಲಿ ವಾಸವಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆ ಸುಂದರಿ ಬೀಬಿ ಮತ್ತು ಆಕೆಯ ಪತಿ ಮೇಲೆ ಅಕ್ಟೋಬರ್ 30ರಂದು ವರ್ತೂರು ಪೊಲೀಸ್ ಠಾಣೆಯ ನಾಲ್ವರು ಪುರುಷ ಹಾಗೂ ಮೂವರು ಮಹಿಳಾ ಸಿಬ್ಬಂದಿ ಲಾಠಿಯಿಂದ ಮನಸೋ ಇಚ್ಚೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಕ್ಟೋಬರ್ 30ರಂದು ಬೆಳಿಗ್ಗೆ 9ಗಂಟೆಯ ಹೊತ್ತಿಗೆ ಮಹಿಳೆ ಮನೆ ಕೆಲಸ ಮಾಡುತ್ತಿದ್ದ ಶೋಭಾ ಫ್ಲ್ಯಾಟ್‌ನಿಂದ ವರ್ತೂರು ಠಾಣೆಯ ಪೊಲೀಸರು ಕರೆದೊಯ್ದಿದ್ದರು. ಫ್ಲ್ಯಾಟ್‌ನಲ್ಲಿ ವಾಸವಿರುವ ಟೆಕ್ಕಿ ದಂಪತಿ ಅವರ 5 ಲಕ್ಷ ರೂ ಬೆಲೆ ಬಾಳುವ ವಜ್ರದ ಉಂಗುರವನ್ನು ಸುಂದರಿ ಬೀಬಿ ಕದ್ದಿದ್ದಾರೆ ಎಂದು ಆರೋಪಿಸಿದ್ದರು. ಠಾಣೆಗೆ ಕರೆದೊಯ್ದ ಪೊಲೀಸರು ಅಮಾನವೀಯವಾಗಿ ಥಳಿಸಿದ್ದಾರೆ. ಈ ವಿಷಯ ತಿಳಿದು ಆಕೆಯ ಪತಿ ಸಹಾಯಕ್ಕೆ ಧಾವಿಸಿದ್ದರು. ಪೊಲೀಸರು ಅವರನ್ನೂ ಕೂಡಿ ಹಾಕಿ ಥಳಿಸಿದ್ದಾರೆ ಎಂದು ವರದಿಯಾಗಿದೆ.

ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪೊಲೀಸರು ನಿರಂತರ ಹಲ್ಲೆ ಮಾಡಿದ್ದಾರೆ. ಸಂಜೆ ಕಲೀಮುಲ್ಲಾ ಎಂಬ ಸಾಮಾಜಿಕ ಕಾರ್ಯಕರ್ತ ಕರೆ ಮಾಡಿ ವಿಚಾರಿಸಿದ ಬಳಿಕ ಪೊಲೀಸರು ಹಲ್ಲೆ ನಿಲ್ಲಿಸಿ ಲಾಠಿ ಬಚ್ಚಿಟ್ಟಿದ್ದರು. ಬಳಿಕ ರಾತ್ರಿ 7 ಗಂಟೆಯವರೆಗೆ ಠಾಣೆಯಲ್ಲೇ ಕೂರಿಸಿಕೊಂಡು, ಹಲ್ಲೆಯ ವಿಚಾರವನ್ನು ಎಲ್ಲೂ ಹೇಳದಂತೆ ಬೆದರಿಸಿ ಕಳುಹಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸುಂದರಿ ಬೀಬಿ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಅವರನ್ನು ಪಶ್ಚಿಮ ಬಂಗಾಳದಲ್ಲೇ ಬಿಟ್ಟು ಕೆಲಸ ಮಾಡಲು ಬೆಂಗಳೂರಿಗೆ ಬಂದಿದ್ದರು. ಗಂಡ ಬಿಬಿಎಂಪಿ ಕಸದ ಲಾರಿಯಲ್ಲಿ ಕೆಲಸ ಮಾಡುತ್ತಿದ್ದರೆ, ಹೆಂಡತಿ ಮನೆ ಕೆಲಸ ಮಾಡುತ್ತಿದ್ದರು. ಕಳೆದ 3 ತಿಂಗಳಿನಿಂದ ಸುಂದರಿ ಬೀಬಿ ವರ್ತೂರಿನ ಶೋಭಾ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ಗೆ ಕೆಲಸಕ್ಕೆ ಹೋಗುತ್ತಿದ್ದರು.

ಅಕ್ಟೋಬರ್ 30ರಂದು ಬೆಳಿಗ್ಗೆ ಸುಂದರಿ ಬಾಲ್ಕನಿಯಲ್ಲಿ ಕಸ ಗುಡಿಸುತ್ತಿದ್ದಾಗ, ಅಲ್ಲಿ ಬಿದ್ದಿದ್ದ 100 ರೂ. ನೋಟನ್ನು ತೆಗೆದುಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ ಫ್ಲ್ಯಾಟ್ ಮಾಲೀಕರು, ಸುಂದರಿಯ ಕೈ ಹಿಡಿದುಕೊಂಡು ಕಳ್ಳಿ ಎಂದು ನಿಂದಿಸಿದ್ದರು. ಅಲ್ಲದೆ, ಈ ಹಿಂದೆಯೂ ಫ್ಲ್ಯಾಟ್‌ನಲ್ಲಿ ವಜ್ರದ ಉಂಗುರ ಕದ್ದಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಸಂತ್ರಸ್ತೆ ನೀಡಿದ ದೂರು ಆಧರಿಸಿ ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಕೆ.ಪರಶುರಾಮ್ ನೇತೃತ್ವದಲ್ಲಿ ಪೊಲೀಸರ ಆಂತರಿಕ ತನಿಖೆ ಆರಂಭವಾಗಿದೆ. “ಮನೆಗೆಲಸದ ಮಹಿಳೆಯನ್ನು ಠಾಣೆಗೆ ಕರೆಸಿ ಹಲ್ಲೆ ನಡೆಸಿದ ಆರೋಪದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಡಿಸಿಪಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಪಶ್ಚಿಮ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರಮೇಶ್‌ ಬಾನೋತ್ ತಿಳಿಸಿದ್ದಾರೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ವೈಟ್‌ಫೀಲ್ಡ್ ವಿಭಾಗದ ಡಿಸಿಪಿಗೆ ಪತ್ರ ಬರೆದಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಸುಂದರಿ ಬೀಬಿಯ ಪತಿಯು ವರ್ತೂರು ಪೊಲೀಸರ ದೌರ್ಜನ್ಯದ ಬಗ್ಗೆ ಪಶ್ಚಿಮ ಬಂಗಾಳ ವಲಸೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಸಮೀರುಲ್ಲಾ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು. ಈ ಮೂಲಕ ವಿಷಯ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕಚೇರಿಗೂ ತಲುಪಿಸಿದೆ. ಅಲ್ಲಿನ ಅಧಿಕಾರಿಗಳು ಈ ಘಟನೆ ಸಂಬಂಧ ಬೆಂಗಳೂರು ಪೊಲೀಸರಿಂದ ಸ್ಪಷ್ಟೀಕರಣ ಕೋರಿದ್ದಾರೆ ವರದಿಗಳು ಹೇಳಿವೆ.

ಪೊಲೀಸರು ಮಹಿಳೆಯ ಖಾಸಗಿ ಅಂಗಕ್ಕೆ ಥಳಿಸಿ ಕ್ರೌರ್ಯ ಮೆರೆದಿದ್ದಾರೆ. ಇದರಿಂದ ಆಕೆ ಮೂತ್ರ ವಿಸರ್ಜನೆ ಮಾಡಲೂ ಆಗದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಬೌರಿಂಗ್ ಆಸ್ಪತ್ರೆಯ ಎಂಎಲ್​​ಸಿ ರಿಪೋರ್ಟ್​ನಲ್ಲಿ ಗಾಯದ ಭೀಕರತೆ ಬಗ್ಗೆ ಉಲ್ಲೇಖಿಸಲಾಗಿದೆ. ಸದ್ಯ ವೈದ್ಯರ ಚಿಕಿತ್ಸೆ ನಂತರ ಮಹಿಳೆ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

‘ನಲಿ ಕಲಿ’ ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...