Homeಕರ್ನಾಟಕವರ್ತೂರು ಪೊಲೀಸರಿಂದ ಮಹಿಳೆ ಮೇಲೆ ಹಲ್ಲೆ ಆರೋಪ : ವರದಿ ಕೇಳಿದ ಗೃಹ ಸಚಿವ ಪರಮೇಶ್ವರ್

ವರ್ತೂರು ಪೊಲೀಸರಿಂದ ಮಹಿಳೆ ಮೇಲೆ ಹಲ್ಲೆ ಆರೋಪ : ವರದಿ ಕೇಳಿದ ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಪಶ್ಚಿಮ ಬಂಗಾಳ ಮೂಲದ ಮನೆ ಕೆಲಸದ ಮಹಿಳೆ ಮೇಲೆ ಬೆಂಗಳೂರಿನ ವರ್ತೂರು ಠಾಣೆ ಪೊಲೀಸರು ತೀವ್ರವಾಗಿ ಹಲ್ಲೆ ನಡೆಸಿರುವ ಕುರಿತು ವರದಿ ಕೇಳಿರುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳವಾರ (ನ.4) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಮಹಿಳಾ ಪೊಲೀಸರು ಹೊಡೆದಿದ್ದಾರೆ ಎಂಬ ವಿಷಯ ಗೊತ್ತಾಗಿದೆ. ಈ ಬಗ್ಗೆ ವಿವರವಾದ ವರದಿ ಕೊಡುವಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸುತ್ತೇವೆ” ಎಂದಿದ್ದಾರೆ.

ಏನಿದು ಪ್ರಕರಣ? ಬೆಂಗಳೂರಿನ ಬಳಗೆರೆಯ ಕಾರ್ಮಿಕರ ಶೆಡ್‌ನಲ್ಲಿ ವಾಸವಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆ ಸುಂದರಿ ಬೀಬಿ ಮತ್ತು ಆಕೆಯ ಪತಿ ಮೇಲೆ ಅಕ್ಟೋಬರ್ 30ರಂದು ವರ್ತೂರು ಪೊಲೀಸ್ ಠಾಣೆಯ ನಾಲ್ವರು ಪುರುಷ ಹಾಗೂ ಮೂವರು ಮಹಿಳಾ ಸಿಬ್ಬಂದಿ ಲಾಠಿಯಿಂದ ಮನಸೋ ಇಚ್ಚೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಕ್ಟೋಬರ್ 30ರಂದು ಬೆಳಿಗ್ಗೆ 9ಗಂಟೆಯ ಹೊತ್ತಿಗೆ ಮಹಿಳೆ ಮನೆ ಕೆಲಸ ಮಾಡುತ್ತಿದ್ದ ಶೋಭಾ ಫ್ಲ್ಯಾಟ್‌ನಿಂದ ವರ್ತೂರು ಠಾಣೆಯ ಪೊಲೀಸರು ಕರೆದೊಯ್ದಿದ್ದರು. ಫ್ಲ್ಯಾಟ್‌ನಲ್ಲಿ ವಾಸವಿರುವ ಟೆಕ್ಕಿ ದಂಪತಿ ಅವರ 5 ಲಕ್ಷ ರೂ ಬೆಲೆ ಬಾಳುವ ವಜ್ರದ ಉಂಗುರವನ್ನು ಸುಂದರಿ ಬೀಬಿ ಕದ್ದಿದ್ದಾರೆ ಎಂದು ಆರೋಪಿಸಿದ್ದರು. ಠಾಣೆಗೆ ಕರೆದೊಯ್ದ ಪೊಲೀಸರು ಅಮಾನವೀಯವಾಗಿ ಥಳಿಸಿದ್ದಾರೆ. ಈ ವಿಷಯ ತಿಳಿದು ಆಕೆಯ ಪತಿ ಸಹಾಯಕ್ಕೆ ಧಾವಿಸಿದ್ದರು. ಪೊಲೀಸರು ಅವರನ್ನೂ ಕೂಡಿ ಹಾಕಿ ಥಳಿಸಿದ್ದಾರೆ ಎಂದು ವರದಿಯಾಗಿದೆ.

ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪೊಲೀಸರು ನಿರಂತರ ಹಲ್ಲೆ ಮಾಡಿದ್ದಾರೆ. ಸಂಜೆ ಕಲೀಮುಲ್ಲಾ ಎಂಬ ಸಾಮಾಜಿಕ ಕಾರ್ಯಕರ್ತ ಕರೆ ಮಾಡಿ ವಿಚಾರಿಸಿದ ಬಳಿಕ ಪೊಲೀಸರು ಹಲ್ಲೆ ನಿಲ್ಲಿಸಿ ಲಾಠಿ ಬಚ್ಚಿಟ್ಟಿದ್ದರು. ಬಳಿಕ ರಾತ್ರಿ 7 ಗಂಟೆಯವರೆಗೆ ಠಾಣೆಯಲ್ಲೇ ಕೂರಿಸಿಕೊಂಡು, ಹಲ್ಲೆಯ ವಿಚಾರವನ್ನು ಎಲ್ಲೂ ಹೇಳದಂತೆ ಬೆದರಿಸಿ ಕಳುಹಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸುಂದರಿ ಬೀಬಿ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಅವರನ್ನು ಪಶ್ಚಿಮ ಬಂಗಾಳದಲ್ಲೇ ಬಿಟ್ಟು ಕೆಲಸ ಮಾಡಲು ಬೆಂಗಳೂರಿಗೆ ಬಂದಿದ್ದರು. ಗಂಡ ಬಿಬಿಎಂಪಿ ಕಸದ ಲಾರಿಯಲ್ಲಿ ಕೆಲಸ ಮಾಡುತ್ತಿದ್ದರೆ, ಹೆಂಡತಿ ಮನೆ ಕೆಲಸ ಮಾಡುತ್ತಿದ್ದರು. ಕಳೆದ 3 ತಿಂಗಳಿನಿಂದ ಸುಂದರಿ ಬೀಬಿ ವರ್ತೂರಿನ ಶೋಭಾ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ಗೆ ಕೆಲಸಕ್ಕೆ ಹೋಗುತ್ತಿದ್ದರು.

ಅಕ್ಟೋಬರ್ 30ರಂದು ಬೆಳಿಗ್ಗೆ ಸುಂದರಿ ಬಾಲ್ಕನಿಯಲ್ಲಿ ಕಸ ಗುಡಿಸುತ್ತಿದ್ದಾಗ, ಅಲ್ಲಿ ಬಿದ್ದಿದ್ದ 100 ರೂ. ನೋಟನ್ನು ತೆಗೆದುಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ ಫ್ಲ್ಯಾಟ್ ಮಾಲೀಕರು, ಸುಂದರಿಯ ಕೈ ಹಿಡಿದುಕೊಂಡು ಕಳ್ಳಿ ಎಂದು ನಿಂದಿಸಿದ್ದರು. ಅಲ್ಲದೆ, ಈ ಹಿಂದೆಯೂ ಫ್ಲ್ಯಾಟ್‌ನಲ್ಲಿ ವಜ್ರದ ಉಂಗುರ ಕದ್ದಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಸಂತ್ರಸ್ತೆ ನೀಡಿದ ದೂರು ಆಧರಿಸಿ ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಕೆ.ಪರಶುರಾಮ್ ನೇತೃತ್ವದಲ್ಲಿ ಪೊಲೀಸರ ಆಂತರಿಕ ತನಿಖೆ ಆರಂಭವಾಗಿದೆ. “ಮನೆಗೆಲಸದ ಮಹಿಳೆಯನ್ನು ಠಾಣೆಗೆ ಕರೆಸಿ ಹಲ್ಲೆ ನಡೆಸಿದ ಆರೋಪದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಡಿಸಿಪಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಪಶ್ಚಿಮ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರಮೇಶ್‌ ಬಾನೋತ್ ತಿಳಿಸಿದ್ದಾರೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ವೈಟ್‌ಫೀಲ್ಡ್ ವಿಭಾಗದ ಡಿಸಿಪಿಗೆ ಪತ್ರ ಬರೆದಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಸುಂದರಿ ಬೀಬಿಯ ಪತಿಯು ವರ್ತೂರು ಪೊಲೀಸರ ದೌರ್ಜನ್ಯದ ಬಗ್ಗೆ ಪಶ್ಚಿಮ ಬಂಗಾಳ ವಲಸೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಸಮೀರುಲ್ಲಾ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು. ಈ ಮೂಲಕ ವಿಷಯ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕಚೇರಿಗೂ ತಲುಪಿಸಿದೆ. ಅಲ್ಲಿನ ಅಧಿಕಾರಿಗಳು ಈ ಘಟನೆ ಸಂಬಂಧ ಬೆಂಗಳೂರು ಪೊಲೀಸರಿಂದ ಸ್ಪಷ್ಟೀಕರಣ ಕೋರಿದ್ದಾರೆ ವರದಿಗಳು ಹೇಳಿವೆ.

ಪೊಲೀಸರು ಮಹಿಳೆಯ ಖಾಸಗಿ ಅಂಗಕ್ಕೆ ಥಳಿಸಿ ಕ್ರೌರ್ಯ ಮೆರೆದಿದ್ದಾರೆ. ಇದರಿಂದ ಆಕೆ ಮೂತ್ರ ವಿಸರ್ಜನೆ ಮಾಡಲೂ ಆಗದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಬೌರಿಂಗ್ ಆಸ್ಪತ್ರೆಯ ಎಂಎಲ್​​ಸಿ ರಿಪೋರ್ಟ್​ನಲ್ಲಿ ಗಾಯದ ಭೀಕರತೆ ಬಗ್ಗೆ ಉಲ್ಲೇಖಿಸಲಾಗಿದೆ. ಸದ್ಯ ವೈದ್ಯರ ಚಿಕಿತ್ಸೆ ನಂತರ ಮಹಿಳೆ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

‘ನಲಿ ಕಲಿ’ ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...