Homeಕರ್ನಾಟಕಸದನದಲ್ಲಿ ಸದ್ದು ಮಾಡಿದ 'ಹನಿಟ್ರ್ಯಾಪ್' ವಿಚಾರ: ಉನ್ನತ ಮಟ್ಟದ ತನಿಖೆಗೆ ಆದೇಶಿಸುವ ಭರವಸೆ ನೀಡಿದ ಸರ್ಕಾರ

ಸದನದಲ್ಲಿ ಸದ್ದು ಮಾಡಿದ ‘ಹನಿಟ್ರ್ಯಾಪ್’ ವಿಚಾರ: ಉನ್ನತ ಮಟ್ಟದ ತನಿಖೆಗೆ ಆದೇಶಿಸುವ ಭರವಸೆ ನೀಡಿದ ಸರ್ಕಾರ

- Advertisement -
- Advertisement -

ವಿಧಾನಸಭೆ ಕಲಾಪದಲ್ಲಿ ಇಂದು (ಮಾ.20) ಸಚಿವರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿರುವ ಪ್ರಕರಣಗಳ ಬಗ್ಗೆ ಕೆಲಕಾಲ ಚರ್ಚೆ ನಡೆಯಿತು.

ಬಜೆಟ್‌ ಮೇಲಿನ ಚರ್ಚೆಯ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ವಿಷಯ ಪ್ರಸ್ತಾಪಿ, “ರಾಜಕೀಯ ವಿರೋಧಿಗಳನ್ನು ಬ್ಲಾಕ್ ಮೇಲ್ ಮಾಡುವ ಮೂಲಕ ಅವರ ಜೀವನ ಹಾಳು ಮಾಡುವ ಪ್ರವೃತ್ತಿ ಶುರುವಾಗಿದೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಹನಿಟ್ರ್ಯಾಪ್ ಮಾಡಲಾಗಿದೆ” ಎಂದು ಆರೋಪಿಸಿದರು.

ನೀತಿ ಮತ್ತು ಸಿದ್ಧಾಂತಗಳ ಮೇಲೆ ವಿರೋಧಿಗಳನ್ನು ಸೋಲಿಸಲು ಸಾಧ್ಯವಾಗದವರು ತಮ್ಮ ರಾಜಕೀಯ ಗುರಿಗಳನ್ನು ಸಾಧಿಸಲು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಟೀಕಿಸಿದರು. ಅತ್ಯಾಚಾರ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದ್ದು, ನನ್ನ ಮೇಲಿನ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಶಾಸಕ ಮುನಿರತ್ನ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಾಜಣ್ಣ, “ಯತ್ನಾಳ್ ಅವರು ನನ್ನ ಹೆಸರು ಪ್ರಸ್ತಾಪ ಮಾಡಿದ್ದರಿಂದ ಇದಕ್ಕೆ ಸ್ಪಷ್ಟನೆ ನೀಡುತ್ತಿದ್ದೇನೆ. ಕರ್ನಾಟಕ ರಾಜ್ಯ ಸಿಡಿ, ಪೆನ್ ಡ್ರೈವ್ ಕಾರ್ಖಾನೆಯಾಗಿದೆ ಎಂದು ಹಲವು ಜನ ಹೇಳ್ತಾರೆ. ಇದು ಗುರುತರ ಆರೋಪವಾಗಿದೆ. ತುಮಕೂರಿನ ಪ್ರಭಾವಿ ಸಚಿವರು ಹನಿಟ್ರ್ಯಾಪ್‌ನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ತುಮಕೂರಿವರು ನಾನು ಮತ್ತು ಡಾ.ಪರಮೇಶ್ವರ್ ಮಾತ್ರ” ಎಂದರು.

ಮುಂದುವರಿದು, “48 ಜನರ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ. ಇದರಲ್ಲಿ ಸಿಲುಕಿದವರು ಎರಡು ಪಕ್ಷದಲ್ಲಿ ಇದ್ದಾರೆ. ಇದು ನಮ್ಮ ರಾಜ್ಯಕ್ಕೆ ಸೀಮಿತವಾಗಿಲ್ಲ. ರಾಷ್ಟ್ರ ಮಟ್ಟದ ವಿವಿಧ ಪಕ್ಷಗಳ ಮುಖಂಡರ ಹನಿಟ್ರ್ಯಾಪ್ ಪೆನ್ ಡ್ರೈವ್ ಇದೆ. ನನ್ನ ಮೇಲೆ ಆರೋಪಕ್ಕೆ ಇಲ್ಲಿ ಉತ್ತರ ಕೊಡಲ್ಲ. ನಾನು ಈ ಬಗ್ಗೆ ಗೃಹ ಸಚಿವರಿಗೆ ಲಿಖಿತ ದೂರು ಕೊಡುತ್ತೇವೆ. ಇದನ್ನು ತನಿಖೆ ಮಾಡಬೇಕು. ಯಾರು ನಿರ್ಮಾಪಕರು, ನಿರ್ದೇಶಕಕರು ಇದ್ದಾರೆ ಇವೆಲ್ಲವೂ ಹೊರಗಡೆ ಬರಲಿ. ಜನರಿಗೆ ಗೊತ್ತಾಗಲಿ” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, “ಯತ್ನಾಳ್ ಅವರು ಬಹಳ ಗಂಭೀರ ಪ್ರಶ್ನೆ ಎತ್ತಿದ್ದಾರೆ. ಸುನಿಲ್ ಕುಮಾರ್, ಮುನಿರತ್ನ ಅವರೂ ಬಹಳ ಆವೇಶದಿಂದ ಮಾತನಾಡಿದ್ದಾರೆ. ಇದು ಬಹುಷ ಈ ಸದನದ ಪ್ರತಿಯೊಬ್ಬ ಸದಸ್ಯನ ಪ್ರಶ್ನೆ. ಇದಕ್ಕೆ ಒಂದು ಇತಿಶ್ರಿ ಹಾಡಬೇಕು. ಕರ್ನಾಟಕದ ವಿಧಾನಮಂಡಲ ಇಡೀ ದೇಶದಲ್ಲಿ ಗೌರವ ಸಂಪಾದನೆ ಮಾಡಿದೆ. ಹೀಗಿರುವಾಗ, ಈ ಸದನದ ಮರ್ಯಾದೆ ಕಾಪಾಡಬೇಕಾದ್ರೆ, ಸದಸ್ಯರ ಮರ್ಯಾದೆ ಕಾಪಾಡಬೇಕಾದ್ರೆ ಇದಕ್ಕೆ ಇತಿಶ್ರಿ ಹಾಡಲೇಬೇಕು ಎಂದರು.

ರಾಜಣ್ಣ ವಿಷಯ ಪ್ರಸ್ತಾಪ ಮಾಡಿದ್ದಾರೆ. ಅವರು ಮನವಿ ಕೊಡುತ್ತೇನೆ ಹೇಳಿದ್ದಾರೆ. ಆ ಆಧಾರದ ಮೇಲೆ ಉನ್ನತ ಮಟ್ಟದ ತನಿಖೆಗೆ ಆದೇಶಿಸುತ್ತೇನೆ. ಇದರ ಸತ್ಯಾಸತ್ಯತೆ ತಿಳಿಯಬೇಕಿದೆ. ಅದಕ್ಕಾಗಿ ಉನ್ನತ ಮಟ್ಟದ ತನಿಖೆಗೆ ಆದೇಶಿಸುತ್ತೇನೆ ಎಂದು ಹೇಳಿದರು.

ಕಾವೇರಿ ಆರತಿ ವಿವಾದ | ಕಾರ್ಯಕ್ರಮ ಸ್ಥಗಿತಗೊಳಿಸಲು ಹೈಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...