Homeಕರ್ನಾಟಕಸದನದಲ್ಲಿ ಸದ್ದು ಮಾಡಿದ 'ಹನಿಟ್ರ್ಯಾಪ್' ವಿಚಾರ: ಉನ್ನತ ಮಟ್ಟದ ತನಿಖೆಗೆ ಆದೇಶಿಸುವ ಭರವಸೆ ನೀಡಿದ ಸರ್ಕಾರ

ಸದನದಲ್ಲಿ ಸದ್ದು ಮಾಡಿದ ‘ಹನಿಟ್ರ್ಯಾಪ್’ ವಿಚಾರ: ಉನ್ನತ ಮಟ್ಟದ ತನಿಖೆಗೆ ಆದೇಶಿಸುವ ಭರವಸೆ ನೀಡಿದ ಸರ್ಕಾರ

- Advertisement -
- Advertisement -

ವಿಧಾನಸಭೆ ಕಲಾಪದಲ್ಲಿ ಇಂದು (ಮಾ.20) ಸಚಿವರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿರುವ ಪ್ರಕರಣಗಳ ಬಗ್ಗೆ ಕೆಲಕಾಲ ಚರ್ಚೆ ನಡೆಯಿತು.

ಬಜೆಟ್‌ ಮೇಲಿನ ಚರ್ಚೆಯ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ವಿಷಯ ಪ್ರಸ್ತಾಪಿ, “ರಾಜಕೀಯ ವಿರೋಧಿಗಳನ್ನು ಬ್ಲಾಕ್ ಮೇಲ್ ಮಾಡುವ ಮೂಲಕ ಅವರ ಜೀವನ ಹಾಳು ಮಾಡುವ ಪ್ರವೃತ್ತಿ ಶುರುವಾಗಿದೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಹನಿಟ್ರ್ಯಾಪ್ ಮಾಡಲಾಗಿದೆ” ಎಂದು ಆರೋಪಿಸಿದರು.

ನೀತಿ ಮತ್ತು ಸಿದ್ಧಾಂತಗಳ ಮೇಲೆ ವಿರೋಧಿಗಳನ್ನು ಸೋಲಿಸಲು ಸಾಧ್ಯವಾಗದವರು ತಮ್ಮ ರಾಜಕೀಯ ಗುರಿಗಳನ್ನು ಸಾಧಿಸಲು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಟೀಕಿಸಿದರು. ಅತ್ಯಾಚಾರ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದ್ದು, ನನ್ನ ಮೇಲಿನ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಶಾಸಕ ಮುನಿರತ್ನ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಾಜಣ್ಣ, “ಯತ್ನಾಳ್ ಅವರು ನನ್ನ ಹೆಸರು ಪ್ರಸ್ತಾಪ ಮಾಡಿದ್ದರಿಂದ ಇದಕ್ಕೆ ಸ್ಪಷ್ಟನೆ ನೀಡುತ್ತಿದ್ದೇನೆ. ಕರ್ನಾಟಕ ರಾಜ್ಯ ಸಿಡಿ, ಪೆನ್ ಡ್ರೈವ್ ಕಾರ್ಖಾನೆಯಾಗಿದೆ ಎಂದು ಹಲವು ಜನ ಹೇಳ್ತಾರೆ. ಇದು ಗುರುತರ ಆರೋಪವಾಗಿದೆ. ತುಮಕೂರಿನ ಪ್ರಭಾವಿ ಸಚಿವರು ಹನಿಟ್ರ್ಯಾಪ್‌ನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ತುಮಕೂರಿವರು ನಾನು ಮತ್ತು ಡಾ.ಪರಮೇಶ್ವರ್ ಮಾತ್ರ” ಎಂದರು.

ಮುಂದುವರಿದು, “48 ಜನರ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ. ಇದರಲ್ಲಿ ಸಿಲುಕಿದವರು ಎರಡು ಪಕ್ಷದಲ್ಲಿ ಇದ್ದಾರೆ. ಇದು ನಮ್ಮ ರಾಜ್ಯಕ್ಕೆ ಸೀಮಿತವಾಗಿಲ್ಲ. ರಾಷ್ಟ್ರ ಮಟ್ಟದ ವಿವಿಧ ಪಕ್ಷಗಳ ಮುಖಂಡರ ಹನಿಟ್ರ್ಯಾಪ್ ಪೆನ್ ಡ್ರೈವ್ ಇದೆ. ನನ್ನ ಮೇಲೆ ಆರೋಪಕ್ಕೆ ಇಲ್ಲಿ ಉತ್ತರ ಕೊಡಲ್ಲ. ನಾನು ಈ ಬಗ್ಗೆ ಗೃಹ ಸಚಿವರಿಗೆ ಲಿಖಿತ ದೂರು ಕೊಡುತ್ತೇವೆ. ಇದನ್ನು ತನಿಖೆ ಮಾಡಬೇಕು. ಯಾರು ನಿರ್ಮಾಪಕರು, ನಿರ್ದೇಶಕಕರು ಇದ್ದಾರೆ ಇವೆಲ್ಲವೂ ಹೊರಗಡೆ ಬರಲಿ. ಜನರಿಗೆ ಗೊತ್ತಾಗಲಿ” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, “ಯತ್ನಾಳ್ ಅವರು ಬಹಳ ಗಂಭೀರ ಪ್ರಶ್ನೆ ಎತ್ತಿದ್ದಾರೆ. ಸುನಿಲ್ ಕುಮಾರ್, ಮುನಿರತ್ನ ಅವರೂ ಬಹಳ ಆವೇಶದಿಂದ ಮಾತನಾಡಿದ್ದಾರೆ. ಇದು ಬಹುಷ ಈ ಸದನದ ಪ್ರತಿಯೊಬ್ಬ ಸದಸ್ಯನ ಪ್ರಶ್ನೆ. ಇದಕ್ಕೆ ಒಂದು ಇತಿಶ್ರಿ ಹಾಡಬೇಕು. ಕರ್ನಾಟಕದ ವಿಧಾನಮಂಡಲ ಇಡೀ ದೇಶದಲ್ಲಿ ಗೌರವ ಸಂಪಾದನೆ ಮಾಡಿದೆ. ಹೀಗಿರುವಾಗ, ಈ ಸದನದ ಮರ್ಯಾದೆ ಕಾಪಾಡಬೇಕಾದ್ರೆ, ಸದಸ್ಯರ ಮರ್ಯಾದೆ ಕಾಪಾಡಬೇಕಾದ್ರೆ ಇದಕ್ಕೆ ಇತಿಶ್ರಿ ಹಾಡಲೇಬೇಕು ಎಂದರು.

ರಾಜಣ್ಣ ವಿಷಯ ಪ್ರಸ್ತಾಪ ಮಾಡಿದ್ದಾರೆ. ಅವರು ಮನವಿ ಕೊಡುತ್ತೇನೆ ಹೇಳಿದ್ದಾರೆ. ಆ ಆಧಾರದ ಮೇಲೆ ಉನ್ನತ ಮಟ್ಟದ ತನಿಖೆಗೆ ಆದೇಶಿಸುತ್ತೇನೆ. ಇದರ ಸತ್ಯಾಸತ್ಯತೆ ತಿಳಿಯಬೇಕಿದೆ. ಅದಕ್ಕಾಗಿ ಉನ್ನತ ಮಟ್ಟದ ತನಿಖೆಗೆ ಆದೇಶಿಸುತ್ತೇನೆ ಎಂದು ಹೇಳಿದರು.

ಕಾವೇರಿ ಆರತಿ ವಿವಾದ | ಕಾರ್ಯಕ್ರಮ ಸ್ಥಗಿತಗೊಳಿಸಲು ಹೈಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...