Homeಕರ್ನಾಟಕಸದನದಲ್ಲಿ ಸದ್ದು ಮಾಡಿದ 'ಹನಿಟ್ರ್ಯಾಪ್' ವಿಚಾರ: ಉನ್ನತ ಮಟ್ಟದ ತನಿಖೆಗೆ ಆದೇಶಿಸುವ ಭರವಸೆ ನೀಡಿದ ಸರ್ಕಾರ

ಸದನದಲ್ಲಿ ಸದ್ದು ಮಾಡಿದ ‘ಹನಿಟ್ರ್ಯಾಪ್’ ವಿಚಾರ: ಉನ್ನತ ಮಟ್ಟದ ತನಿಖೆಗೆ ಆದೇಶಿಸುವ ಭರವಸೆ ನೀಡಿದ ಸರ್ಕಾರ

- Advertisement -
- Advertisement -

ವಿಧಾನಸಭೆ ಕಲಾಪದಲ್ಲಿ ಇಂದು (ಮಾ.20) ಸಚಿವರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿರುವ ಪ್ರಕರಣಗಳ ಬಗ್ಗೆ ಕೆಲಕಾಲ ಚರ್ಚೆ ನಡೆಯಿತು.

ಬಜೆಟ್‌ ಮೇಲಿನ ಚರ್ಚೆಯ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ವಿಷಯ ಪ್ರಸ್ತಾಪಿ, “ರಾಜಕೀಯ ವಿರೋಧಿಗಳನ್ನು ಬ್ಲಾಕ್ ಮೇಲ್ ಮಾಡುವ ಮೂಲಕ ಅವರ ಜೀವನ ಹಾಳು ಮಾಡುವ ಪ್ರವೃತ್ತಿ ಶುರುವಾಗಿದೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಹನಿಟ್ರ್ಯಾಪ್ ಮಾಡಲಾಗಿದೆ” ಎಂದು ಆರೋಪಿಸಿದರು.

ನೀತಿ ಮತ್ತು ಸಿದ್ಧಾಂತಗಳ ಮೇಲೆ ವಿರೋಧಿಗಳನ್ನು ಸೋಲಿಸಲು ಸಾಧ್ಯವಾಗದವರು ತಮ್ಮ ರಾಜಕೀಯ ಗುರಿಗಳನ್ನು ಸಾಧಿಸಲು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಟೀಕಿಸಿದರು. ಅತ್ಯಾಚಾರ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದ್ದು, ನನ್ನ ಮೇಲಿನ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಶಾಸಕ ಮುನಿರತ್ನ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಾಜಣ್ಣ, “ಯತ್ನಾಳ್ ಅವರು ನನ್ನ ಹೆಸರು ಪ್ರಸ್ತಾಪ ಮಾಡಿದ್ದರಿಂದ ಇದಕ್ಕೆ ಸ್ಪಷ್ಟನೆ ನೀಡುತ್ತಿದ್ದೇನೆ. ಕರ್ನಾಟಕ ರಾಜ್ಯ ಸಿಡಿ, ಪೆನ್ ಡ್ರೈವ್ ಕಾರ್ಖಾನೆಯಾಗಿದೆ ಎಂದು ಹಲವು ಜನ ಹೇಳ್ತಾರೆ. ಇದು ಗುರುತರ ಆರೋಪವಾಗಿದೆ. ತುಮಕೂರಿನ ಪ್ರಭಾವಿ ಸಚಿವರು ಹನಿಟ್ರ್ಯಾಪ್‌ನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ತುಮಕೂರಿವರು ನಾನು ಮತ್ತು ಡಾ.ಪರಮೇಶ್ವರ್ ಮಾತ್ರ” ಎಂದರು.

ಮುಂದುವರಿದು, “48 ಜನರ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ. ಇದರಲ್ಲಿ ಸಿಲುಕಿದವರು ಎರಡು ಪಕ್ಷದಲ್ಲಿ ಇದ್ದಾರೆ. ಇದು ನಮ್ಮ ರಾಜ್ಯಕ್ಕೆ ಸೀಮಿತವಾಗಿಲ್ಲ. ರಾಷ್ಟ್ರ ಮಟ್ಟದ ವಿವಿಧ ಪಕ್ಷಗಳ ಮುಖಂಡರ ಹನಿಟ್ರ್ಯಾಪ್ ಪೆನ್ ಡ್ರೈವ್ ಇದೆ. ನನ್ನ ಮೇಲೆ ಆರೋಪಕ್ಕೆ ಇಲ್ಲಿ ಉತ್ತರ ಕೊಡಲ್ಲ. ನಾನು ಈ ಬಗ್ಗೆ ಗೃಹ ಸಚಿವರಿಗೆ ಲಿಖಿತ ದೂರು ಕೊಡುತ್ತೇವೆ. ಇದನ್ನು ತನಿಖೆ ಮಾಡಬೇಕು. ಯಾರು ನಿರ್ಮಾಪಕರು, ನಿರ್ದೇಶಕಕರು ಇದ್ದಾರೆ ಇವೆಲ್ಲವೂ ಹೊರಗಡೆ ಬರಲಿ. ಜನರಿಗೆ ಗೊತ್ತಾಗಲಿ” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, “ಯತ್ನಾಳ್ ಅವರು ಬಹಳ ಗಂಭೀರ ಪ್ರಶ್ನೆ ಎತ್ತಿದ್ದಾರೆ. ಸುನಿಲ್ ಕುಮಾರ್, ಮುನಿರತ್ನ ಅವರೂ ಬಹಳ ಆವೇಶದಿಂದ ಮಾತನಾಡಿದ್ದಾರೆ. ಇದು ಬಹುಷ ಈ ಸದನದ ಪ್ರತಿಯೊಬ್ಬ ಸದಸ್ಯನ ಪ್ರಶ್ನೆ. ಇದಕ್ಕೆ ಒಂದು ಇತಿಶ್ರಿ ಹಾಡಬೇಕು. ಕರ್ನಾಟಕದ ವಿಧಾನಮಂಡಲ ಇಡೀ ದೇಶದಲ್ಲಿ ಗೌರವ ಸಂಪಾದನೆ ಮಾಡಿದೆ. ಹೀಗಿರುವಾಗ, ಈ ಸದನದ ಮರ್ಯಾದೆ ಕಾಪಾಡಬೇಕಾದ್ರೆ, ಸದಸ್ಯರ ಮರ್ಯಾದೆ ಕಾಪಾಡಬೇಕಾದ್ರೆ ಇದಕ್ಕೆ ಇತಿಶ್ರಿ ಹಾಡಲೇಬೇಕು ಎಂದರು.

ರಾಜಣ್ಣ ವಿಷಯ ಪ್ರಸ್ತಾಪ ಮಾಡಿದ್ದಾರೆ. ಅವರು ಮನವಿ ಕೊಡುತ್ತೇನೆ ಹೇಳಿದ್ದಾರೆ. ಆ ಆಧಾರದ ಮೇಲೆ ಉನ್ನತ ಮಟ್ಟದ ತನಿಖೆಗೆ ಆದೇಶಿಸುತ್ತೇನೆ. ಇದರ ಸತ್ಯಾಸತ್ಯತೆ ತಿಳಿಯಬೇಕಿದೆ. ಅದಕ್ಕಾಗಿ ಉನ್ನತ ಮಟ್ಟದ ತನಿಖೆಗೆ ಆದೇಶಿಸುತ್ತೇನೆ ಎಂದು ಹೇಳಿದರು.

ಕಾವೇರಿ ಆರತಿ ವಿವಾದ | ಕಾರ್ಯಕ್ರಮ ಸ್ಥಗಿತಗೊಳಿಸಲು ಹೈಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...