Homeಮುಖಪುಟಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ

ಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ

ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ, ಅಖಿಲ ಭಾರತೀಯ ಸೇವೆ ಮತ್ತು ಭ್ರಷ್ಟಾಚಾರ ನಿಗ್ರಹ ವ್ಯವಸ್ಥೆಗಳಲ್ಲಿ ಮುಖ್ಯಮಂತ್ರಿಗೆ ಅಧಿಕಾರ ಇಲ್ಲ

- Advertisement -
- Advertisement -

ವರ್ಷಗಳ ಹಿಂದೆ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಲ್ಪಟ್ಟ ಜಮ್ಮು ಕಾಶ್ಮೀರದಲ್ಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಸಚಿವರ ಸಮಿತಿಯ ಕಾರ್ಯಗಳನ್ನು ನಿಖರಗೊಳಿಸುವ ಹೊಸ ನಿಯಮಗಳನ್ನು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.

ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ, ಅಖಿಲ ಭಾರತೀಯ ಸೇವೆ ಮತ್ತು ಭ್ರಷ್ಟಾಚಾರ ನಿಗ್ರಹ ವ್ಯವಸ್ಥೆಗಳು ಲೆಫ್ಟಿನೆಂಟ್ ಗವರ್ನರ್ ಕಾರ್ಯನಿರ್ವಹಣೆಯಡಿ ಬರುತ್ತವೆ ಎಂದು ಹೊಸ ವ್ಯವಹಾರ ನಿಯಮ ಹೇಳುತ್ತದೆ. ಸಚಿವರ ಸಮಿತಿ ಅಥವಾ ಮುಖ್ಯಮಂತ್ರಿಗೆ ಈ ಕಾರ್ಯ ವ್ಯವಸ್ಥೆಯಲ್ಲಿ ಯಾವುದೇ ಅಧಿಕಾರ ಇಲ್ಲ.

ಇದನ್ನೂ ಓದಿ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಒಂದುಗೂಡಿದ ಆರು ಪಕ್ಷಗಳು

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಹೊರಡಿಸಿದ ಅಧಿಸೂಚನೆ, ಕೇಂದ್ರಾಡಳಿತ ಪ್ರದೇಶದ ಶಾಂತಿ ಮತ್ತು ನೆಮ್ಮದಿಯ ಮೇಲೆ ಅಥವಾ ಅಲ್ಪಸಂಖ್ಯಾತ ಸಮುದಾಯ, ಎಸ್‌ಸಿ/ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಮೇಲೆ ಪರಿಣಾಮ ಬೀರುವ ಅಥವಾ ಬೀಳಬಹುದಾದ ಯಾವುದೇ ವಿಷಯ ಅಥವಾ ಪ್ರಸ್ತಾವನೆಗೆ ಸಂಬಂಧಿಸಿ ಆದೇಶ ಹೊರಡಿಸುವ ಮುನ್ನ ಮುಖ್ಯ ಕಾರ್ಯದರ್ಶಿಗಳ ಮೂಲಕ ಮುಖ್ಯಮಂತ್ರಿಗೆ ತಿಳಿಸಿ ಲೆಫ್ಟಿನೆಂಟ್ ಗವರ್ನರ್‌ಗೆ ಸಲ್ಲಿಸಬೇಕು ಎಂದು ಹೇಳಿದೆ.

ಹೊಸ ತೆರಿಗೆ ವಿಧಿಸುವ ಪ್ರಸ್ತಾವನೆ, ಭೂಕಂದಾಯ, ಸರಕಾರಿ ಆಸ್ತಿಯ ಮಾರಾಟ ಅಥವಾ ಲೀಸ್ ಒಪ್ಪಂದ, ಇಲಾಖೆ ಅಥವಾ ಅಧಿಕಾರಿಗಳ ಮರು ಸಂಯೋಜನೆ, ಮಸೂದೆ ರೂಪಿಸುವುದು ಮುಂತಾದ ಅಖಿಲ ಭಾರತೀಯ ಸೇವೆಯ ಅಧಿಕಾರಿಗಳಿಗೆ ಸಂಬಂಧಿಸದ ಕೆಲಸಗಳನ್ನು ಮುಖ್ಯಮಂತ್ರಿ ನೇತೃತ್ವದ ಸಚಿವರ ಸಮಿತಿ ನಿರ್ಧರಿಸುತ್ತದೆ.

ಇದನ್ನೂ ಓದಿ: ಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಲೆಫ್ಟಿನೆಂಟ್ ಗವರ್ನರ್ ಮತ್ತು ಸಚಿವರ ಮಧ್ಯೆ ಭಿನ್ನಾಭಿಪ್ರಾಯ ಮೂಡಿ, ಆರು ತಿಂಗಳ ಬಳಿಕವೂ ಒಮ್ಮತಾಭಿಪ್ರಾಯ ಮೂಡದಿದ್ದರೆ ಆಗ ಲೆಫ್ಟಿನೆಂಟ್ ಗವರ್ನರ್ ಅವರ ನಿರ್ಧಾರವನ್ನು ಸಚಿವ ಸಮಿತಿ ಒಪ್ಪಬೇಕಾಗುತ್ತದೆ. ಕೇಂದ್ರಾಡಳಿತ ಪ್ರದೇಶದ ಸರಕಾರ ಮತ್ತು ಕೇಂದ್ರ ಸರಕಾರ, ರಾಜ್ಯ ಸರಕಾರಗಳ ಮಧ್ಯೆ ವಿವಾದಕ್ಕೆ ಕಾರಣವಾಗಬಲ್ಲ ಯಾವುದೇ ವಿಷಯವನ್ನು ಸಂಬಂಧಿತ ಇಲಾಖೆಯ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿಯ ಮೂಲಕ ಲೆಫ್ಟಿನೆಂಟ್ ಗವರ್ನರ್ ಮತ್ತು ಮುಖ್ಯಮಂತ್ರಿಯ ಗಮನಕ್ಕೆ ತರಬೇಕು ಎಂದು ಸೂಚಿಸಲಾಗಿದೆ.

ಪ್ರಧಾನಿ ಹಾಗೂ ಇತರ ಕೇಂದ್ರ ಸಚಿವರ ಸಹಿತ ದೈನಂದಿನ ವಿಷಯ ಮತ್ತು ಪ್ರಾಮುಖ್ಯವಿಲ್ಲದ ವಿಷಯ ಹೊರತುಪಡಿಸಿ ಕೇಂದ್ರ ಸರಕಾರದಿಂದ ಬರುವ ಎಲ್ಲಾ ಮಾಹಿತಿಗಳನ್ನುತಕ್ಷಣ ಮುಖ್ಯ ಕಾರ್ಯದರ್ಶಿ, ಆಯಾ ಖಾತೆಯ ಸಚಿವ, ಮುಖ್ಯಮಂತ್ರಿ ಮತ್ತು ಲೆಫ್ಟಿನೆಂಟ್ ಗವರ್ನರ್ ಗಮನಕ್ಕೆ ತರಬೇಕು ಎಂದು ನಿಯಮಾವಳಿಯಲ್ಲಿ ಸೂಚಿಸಲಾಗಿದೆ.

ಶಾಲಾ ಶಿಕ್ಷಣ, ಕೃಷಿ, ಉನ್ನತ ಶಿಕ್ಷಣ, ತೋಟಗಾರಿಕೆ, ಚುನಾವಣೆ, ಸಾಮಾನ್ಯ ಆಡಳಿತ, ಗೃಹ, ಗಣಿಗಾರಿಕೆ, ಇಂಧನ, ಲೋಕೋಪಯೋಗಿ ಇಲಾಖೆ, ಬುಡಕಟ್ಟು ವ್ಯವಹಾರ, ಸಾರಿಗೆ ಸೇರಿದಂತೆ ಕೇಂದ್ರಾಡಳಿತ ಪ್ರದೇಶದಲ್ಲಿ 39 ಇಲಾಖೆಗಳಿರುತ್ತವೆ.


ಓದಿ: ನೀನೂ ಅಲ್ಲಿರಲಿಲ್ಲ: ಕಾಶ್ಮೀರದ ಜನರ ಸಂಕಟ, ತಲ್ಲಣ, ಅತಂತ್ರ-ಅನಿಶ್ಚಿತತೆಯನ್ನು ಕಟ್ಟಿಕೊಡುವ ಕವಿತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...