Homeಮುಖಪುಟಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ

ಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ

ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ, ಅಖಿಲ ಭಾರತೀಯ ಸೇವೆ ಮತ್ತು ಭ್ರಷ್ಟಾಚಾರ ನಿಗ್ರಹ ವ್ಯವಸ್ಥೆಗಳಲ್ಲಿ ಮುಖ್ಯಮಂತ್ರಿಗೆ ಅಧಿಕಾರ ಇಲ್ಲ

- Advertisement -
- Advertisement -

ವರ್ಷಗಳ ಹಿಂದೆ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಲ್ಪಟ್ಟ ಜಮ್ಮು ಕಾಶ್ಮೀರದಲ್ಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಸಚಿವರ ಸಮಿತಿಯ ಕಾರ್ಯಗಳನ್ನು ನಿಖರಗೊಳಿಸುವ ಹೊಸ ನಿಯಮಗಳನ್ನು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.

ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ, ಅಖಿಲ ಭಾರತೀಯ ಸೇವೆ ಮತ್ತು ಭ್ರಷ್ಟಾಚಾರ ನಿಗ್ರಹ ವ್ಯವಸ್ಥೆಗಳು ಲೆಫ್ಟಿನೆಂಟ್ ಗವರ್ನರ್ ಕಾರ್ಯನಿರ್ವಹಣೆಯಡಿ ಬರುತ್ತವೆ ಎಂದು ಹೊಸ ವ್ಯವಹಾರ ನಿಯಮ ಹೇಳುತ್ತದೆ. ಸಚಿವರ ಸಮಿತಿ ಅಥವಾ ಮುಖ್ಯಮಂತ್ರಿಗೆ ಈ ಕಾರ್ಯ ವ್ಯವಸ್ಥೆಯಲ್ಲಿ ಯಾವುದೇ ಅಧಿಕಾರ ಇಲ್ಲ.

ಇದನ್ನೂ ಓದಿ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಒಂದುಗೂಡಿದ ಆರು ಪಕ್ಷಗಳು

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಹೊರಡಿಸಿದ ಅಧಿಸೂಚನೆ, ಕೇಂದ್ರಾಡಳಿತ ಪ್ರದೇಶದ ಶಾಂತಿ ಮತ್ತು ನೆಮ್ಮದಿಯ ಮೇಲೆ ಅಥವಾ ಅಲ್ಪಸಂಖ್ಯಾತ ಸಮುದಾಯ, ಎಸ್‌ಸಿ/ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಮೇಲೆ ಪರಿಣಾಮ ಬೀರುವ ಅಥವಾ ಬೀಳಬಹುದಾದ ಯಾವುದೇ ವಿಷಯ ಅಥವಾ ಪ್ರಸ್ತಾವನೆಗೆ ಸಂಬಂಧಿಸಿ ಆದೇಶ ಹೊರಡಿಸುವ ಮುನ್ನ ಮುಖ್ಯ ಕಾರ್ಯದರ್ಶಿಗಳ ಮೂಲಕ ಮುಖ್ಯಮಂತ್ರಿಗೆ ತಿಳಿಸಿ ಲೆಫ್ಟಿನೆಂಟ್ ಗವರ್ನರ್‌ಗೆ ಸಲ್ಲಿಸಬೇಕು ಎಂದು ಹೇಳಿದೆ.

ಹೊಸ ತೆರಿಗೆ ವಿಧಿಸುವ ಪ್ರಸ್ತಾವನೆ, ಭೂಕಂದಾಯ, ಸರಕಾರಿ ಆಸ್ತಿಯ ಮಾರಾಟ ಅಥವಾ ಲೀಸ್ ಒಪ್ಪಂದ, ಇಲಾಖೆ ಅಥವಾ ಅಧಿಕಾರಿಗಳ ಮರು ಸಂಯೋಜನೆ, ಮಸೂದೆ ರೂಪಿಸುವುದು ಮುಂತಾದ ಅಖಿಲ ಭಾರತೀಯ ಸೇವೆಯ ಅಧಿಕಾರಿಗಳಿಗೆ ಸಂಬಂಧಿಸದ ಕೆಲಸಗಳನ್ನು ಮುಖ್ಯಮಂತ್ರಿ ನೇತೃತ್ವದ ಸಚಿವರ ಸಮಿತಿ ನಿರ್ಧರಿಸುತ್ತದೆ.

ಇದನ್ನೂ ಓದಿ: ಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಲೆಫ್ಟಿನೆಂಟ್ ಗವರ್ನರ್ ಮತ್ತು ಸಚಿವರ ಮಧ್ಯೆ ಭಿನ್ನಾಭಿಪ್ರಾಯ ಮೂಡಿ, ಆರು ತಿಂಗಳ ಬಳಿಕವೂ ಒಮ್ಮತಾಭಿಪ್ರಾಯ ಮೂಡದಿದ್ದರೆ ಆಗ ಲೆಫ್ಟಿನೆಂಟ್ ಗವರ್ನರ್ ಅವರ ನಿರ್ಧಾರವನ್ನು ಸಚಿವ ಸಮಿತಿ ಒಪ್ಪಬೇಕಾಗುತ್ತದೆ. ಕೇಂದ್ರಾಡಳಿತ ಪ್ರದೇಶದ ಸರಕಾರ ಮತ್ತು ಕೇಂದ್ರ ಸರಕಾರ, ರಾಜ್ಯ ಸರಕಾರಗಳ ಮಧ್ಯೆ ವಿವಾದಕ್ಕೆ ಕಾರಣವಾಗಬಲ್ಲ ಯಾವುದೇ ವಿಷಯವನ್ನು ಸಂಬಂಧಿತ ಇಲಾಖೆಯ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿಯ ಮೂಲಕ ಲೆಫ್ಟಿನೆಂಟ್ ಗವರ್ನರ್ ಮತ್ತು ಮುಖ್ಯಮಂತ್ರಿಯ ಗಮನಕ್ಕೆ ತರಬೇಕು ಎಂದು ಸೂಚಿಸಲಾಗಿದೆ.

ಪ್ರಧಾನಿ ಹಾಗೂ ಇತರ ಕೇಂದ್ರ ಸಚಿವರ ಸಹಿತ ದೈನಂದಿನ ವಿಷಯ ಮತ್ತು ಪ್ರಾಮುಖ್ಯವಿಲ್ಲದ ವಿಷಯ ಹೊರತುಪಡಿಸಿ ಕೇಂದ್ರ ಸರಕಾರದಿಂದ ಬರುವ ಎಲ್ಲಾ ಮಾಹಿತಿಗಳನ್ನುತಕ್ಷಣ ಮುಖ್ಯ ಕಾರ್ಯದರ್ಶಿ, ಆಯಾ ಖಾತೆಯ ಸಚಿವ, ಮುಖ್ಯಮಂತ್ರಿ ಮತ್ತು ಲೆಫ್ಟಿನೆಂಟ್ ಗವರ್ನರ್ ಗಮನಕ್ಕೆ ತರಬೇಕು ಎಂದು ನಿಯಮಾವಳಿಯಲ್ಲಿ ಸೂಚಿಸಲಾಗಿದೆ.

ಶಾಲಾ ಶಿಕ್ಷಣ, ಕೃಷಿ, ಉನ್ನತ ಶಿಕ್ಷಣ, ತೋಟಗಾರಿಕೆ, ಚುನಾವಣೆ, ಸಾಮಾನ್ಯ ಆಡಳಿತ, ಗೃಹ, ಗಣಿಗಾರಿಕೆ, ಇಂಧನ, ಲೋಕೋಪಯೋಗಿ ಇಲಾಖೆ, ಬುಡಕಟ್ಟು ವ್ಯವಹಾರ, ಸಾರಿಗೆ ಸೇರಿದಂತೆ ಕೇಂದ್ರಾಡಳಿತ ಪ್ರದೇಶದಲ್ಲಿ 39 ಇಲಾಖೆಗಳಿರುತ್ತವೆ.


ಓದಿ: ನೀನೂ ಅಲ್ಲಿರಲಿಲ್ಲ: ಕಾಶ್ಮೀರದ ಜನರ ಸಂಕಟ, ತಲ್ಲಣ, ಅತಂತ್ರ-ಅನಿಶ್ಚಿತತೆಯನ್ನು ಕಟ್ಟಿಕೊಡುವ ಕವಿತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....