Homeಮುಖಪುಟಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ

ಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ

ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ, ಅಖಿಲ ಭಾರತೀಯ ಸೇವೆ ಮತ್ತು ಭ್ರಷ್ಟಾಚಾರ ನಿಗ್ರಹ ವ್ಯವಸ್ಥೆಗಳಲ್ಲಿ ಮುಖ್ಯಮಂತ್ರಿಗೆ ಅಧಿಕಾರ ಇಲ್ಲ

- Advertisement -
- Advertisement -

ವರ್ಷಗಳ ಹಿಂದೆ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಲ್ಪಟ್ಟ ಜಮ್ಮು ಕಾಶ್ಮೀರದಲ್ಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಸಚಿವರ ಸಮಿತಿಯ ಕಾರ್ಯಗಳನ್ನು ನಿಖರಗೊಳಿಸುವ ಹೊಸ ನಿಯಮಗಳನ್ನು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.

ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ, ಅಖಿಲ ಭಾರತೀಯ ಸೇವೆ ಮತ್ತು ಭ್ರಷ್ಟಾಚಾರ ನಿಗ್ರಹ ವ್ಯವಸ್ಥೆಗಳು ಲೆಫ್ಟಿನೆಂಟ್ ಗವರ್ನರ್ ಕಾರ್ಯನಿರ್ವಹಣೆಯಡಿ ಬರುತ್ತವೆ ಎಂದು ಹೊಸ ವ್ಯವಹಾರ ನಿಯಮ ಹೇಳುತ್ತದೆ. ಸಚಿವರ ಸಮಿತಿ ಅಥವಾ ಮುಖ್ಯಮಂತ್ರಿಗೆ ಈ ಕಾರ್ಯ ವ್ಯವಸ್ಥೆಯಲ್ಲಿ ಯಾವುದೇ ಅಧಿಕಾರ ಇಲ್ಲ.

ಇದನ್ನೂ ಓದಿ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಒಂದುಗೂಡಿದ ಆರು ಪಕ್ಷಗಳು

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಹೊರಡಿಸಿದ ಅಧಿಸೂಚನೆ, ಕೇಂದ್ರಾಡಳಿತ ಪ್ರದೇಶದ ಶಾಂತಿ ಮತ್ತು ನೆಮ್ಮದಿಯ ಮೇಲೆ ಅಥವಾ ಅಲ್ಪಸಂಖ್ಯಾತ ಸಮುದಾಯ, ಎಸ್‌ಸಿ/ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಮೇಲೆ ಪರಿಣಾಮ ಬೀರುವ ಅಥವಾ ಬೀಳಬಹುದಾದ ಯಾವುದೇ ವಿಷಯ ಅಥವಾ ಪ್ರಸ್ತಾವನೆಗೆ ಸಂಬಂಧಿಸಿ ಆದೇಶ ಹೊರಡಿಸುವ ಮುನ್ನ ಮುಖ್ಯ ಕಾರ್ಯದರ್ಶಿಗಳ ಮೂಲಕ ಮುಖ್ಯಮಂತ್ರಿಗೆ ತಿಳಿಸಿ ಲೆಫ್ಟಿನೆಂಟ್ ಗವರ್ನರ್‌ಗೆ ಸಲ್ಲಿಸಬೇಕು ಎಂದು ಹೇಳಿದೆ.

ಹೊಸ ತೆರಿಗೆ ವಿಧಿಸುವ ಪ್ರಸ್ತಾವನೆ, ಭೂಕಂದಾಯ, ಸರಕಾರಿ ಆಸ್ತಿಯ ಮಾರಾಟ ಅಥವಾ ಲೀಸ್ ಒಪ್ಪಂದ, ಇಲಾಖೆ ಅಥವಾ ಅಧಿಕಾರಿಗಳ ಮರು ಸಂಯೋಜನೆ, ಮಸೂದೆ ರೂಪಿಸುವುದು ಮುಂತಾದ ಅಖಿಲ ಭಾರತೀಯ ಸೇವೆಯ ಅಧಿಕಾರಿಗಳಿಗೆ ಸಂಬಂಧಿಸದ ಕೆಲಸಗಳನ್ನು ಮುಖ್ಯಮಂತ್ರಿ ನೇತೃತ್ವದ ಸಚಿವರ ಸಮಿತಿ ನಿರ್ಧರಿಸುತ್ತದೆ.

ಇದನ್ನೂ ಓದಿ: ಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಲೆಫ್ಟಿನೆಂಟ್ ಗವರ್ನರ್ ಮತ್ತು ಸಚಿವರ ಮಧ್ಯೆ ಭಿನ್ನಾಭಿಪ್ರಾಯ ಮೂಡಿ, ಆರು ತಿಂಗಳ ಬಳಿಕವೂ ಒಮ್ಮತಾಭಿಪ್ರಾಯ ಮೂಡದಿದ್ದರೆ ಆಗ ಲೆಫ್ಟಿನೆಂಟ್ ಗವರ್ನರ್ ಅವರ ನಿರ್ಧಾರವನ್ನು ಸಚಿವ ಸಮಿತಿ ಒಪ್ಪಬೇಕಾಗುತ್ತದೆ. ಕೇಂದ್ರಾಡಳಿತ ಪ್ರದೇಶದ ಸರಕಾರ ಮತ್ತು ಕೇಂದ್ರ ಸರಕಾರ, ರಾಜ್ಯ ಸರಕಾರಗಳ ಮಧ್ಯೆ ವಿವಾದಕ್ಕೆ ಕಾರಣವಾಗಬಲ್ಲ ಯಾವುದೇ ವಿಷಯವನ್ನು ಸಂಬಂಧಿತ ಇಲಾಖೆಯ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿಯ ಮೂಲಕ ಲೆಫ್ಟಿನೆಂಟ್ ಗವರ್ನರ್ ಮತ್ತು ಮುಖ್ಯಮಂತ್ರಿಯ ಗಮನಕ್ಕೆ ತರಬೇಕು ಎಂದು ಸೂಚಿಸಲಾಗಿದೆ.

ಪ್ರಧಾನಿ ಹಾಗೂ ಇತರ ಕೇಂದ್ರ ಸಚಿವರ ಸಹಿತ ದೈನಂದಿನ ವಿಷಯ ಮತ್ತು ಪ್ರಾಮುಖ್ಯವಿಲ್ಲದ ವಿಷಯ ಹೊರತುಪಡಿಸಿ ಕೇಂದ್ರ ಸರಕಾರದಿಂದ ಬರುವ ಎಲ್ಲಾ ಮಾಹಿತಿಗಳನ್ನುತಕ್ಷಣ ಮುಖ್ಯ ಕಾರ್ಯದರ್ಶಿ, ಆಯಾ ಖಾತೆಯ ಸಚಿವ, ಮುಖ್ಯಮಂತ್ರಿ ಮತ್ತು ಲೆಫ್ಟಿನೆಂಟ್ ಗವರ್ನರ್ ಗಮನಕ್ಕೆ ತರಬೇಕು ಎಂದು ನಿಯಮಾವಳಿಯಲ್ಲಿ ಸೂಚಿಸಲಾಗಿದೆ.

ಶಾಲಾ ಶಿಕ್ಷಣ, ಕೃಷಿ, ಉನ್ನತ ಶಿಕ್ಷಣ, ತೋಟಗಾರಿಕೆ, ಚುನಾವಣೆ, ಸಾಮಾನ್ಯ ಆಡಳಿತ, ಗೃಹ, ಗಣಿಗಾರಿಕೆ, ಇಂಧನ, ಲೋಕೋಪಯೋಗಿ ಇಲಾಖೆ, ಬುಡಕಟ್ಟು ವ್ಯವಹಾರ, ಸಾರಿಗೆ ಸೇರಿದಂತೆ ಕೇಂದ್ರಾಡಳಿತ ಪ್ರದೇಶದಲ್ಲಿ 39 ಇಲಾಖೆಗಳಿರುತ್ತವೆ.


ಓದಿ: ನೀನೂ ಅಲ್ಲಿರಲಿಲ್ಲ: ಕಾಶ್ಮೀರದ ಜನರ ಸಂಕಟ, ತಲ್ಲಣ, ಅತಂತ್ರ-ಅನಿಶ್ಚಿತತೆಯನ್ನು ಕಟ್ಟಿಕೊಡುವ ಕವಿತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...