Homeಮುಖಪುಟಐದು ಎನ್‌ಜಿಒಗಳ ನೋಂದಣಿಯನ್ನು ರದ್ದುಗೊಳಿಸಿದ ಗೃಹ ಸಚಿವಾಲಯ

ಐದು ಎನ್‌ಜಿಒಗಳ ನೋಂದಣಿಯನ್ನು ರದ್ದುಗೊಳಿಸಿದ ಗೃಹ ಸಚಿವಾಲಯ

- Advertisement -
- Advertisement -

ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆಯ ವಿವಿಧ ನಿಬಂಧನೆಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಕೇಂದ್ರ ಗೃಹ ಸಚಿವಾಲಯವು ಎಫ್‌ಸಿಆರ್‌ಎ ಅಡಿಯಲ್ಲಿ ಕನಿಷ್ಠ ಐದು ಸರ್ಕಾರೇತರ ಸಂಸ್ಥೆಗಳ (ಎನ್‌ಜಿಒಗಳ) ನೋಂದಣಿಯನ್ನು ರದ್ದುಗೊಳಿಸಿದೆ.

ಎಫ್‌ಸಿಆರ್‌ಎ ನೋಂದಣಿಯನ್ನು ರದ್ದುಗೊಳಿಸುತ್ತಿರುವ ಕಾರಣ ಈ ಎನ್‌ಜಿಒಗಳು ಇನ್ನು ಮುಂದೆ ವಿದೇಶಿ ದೇಣಿಗೆಗಳನ್ನು ಸ್ವೀಕರಿಸಲು ಅಥವಾ ಅಸ್ತಿತ್ವದಲ್ಲಿರುವ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ನೋಂದಣಿ ರದ್ದುಗೊಂಡ ಐದು ಎನ್‌ಜಿಒಗಳು: ವಾಲಂಟರಿ ಹೆಲ್ತ್ ಅಸೋಸಿಯೇಷನ್ ಆಫ್ ಇಂಡಿಯಾ, ಸಿಎನ್‌ಐ ಸಿನೊಡಿಕಲ್ ಬೋರ್ಡ್ ಆಫ್ ಸೋಶಿಯಲ್ ಸರ್ವಿಸಸ್, ಇಂಡೋ-ಗ್ಲೋಬಲ್ ಸೋಶಿಯಲ್ ಸರ್ವಿಸ್ ಸೊಸೈಟಿ, ಚರ್ಚ್‌ಸ್ ಆಕ್ಸಿಲಿಯರಿ ಫಾರ್ ಸೋಶಿಯಲ್ ಆಕ್ಷನ್, ಮತ್ತು ಇವಾಂಜೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾ

ಕೇಂದ್ರ ಸರಕಾರ ಐದು ಎನ್‌ಜಿಒಗಳನ್ನು ರದ್ದು ಮಾಡಿದೆ, ಆದರೆ ಯಾವುದೇ NGOಗಳು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆಯನ್ನು ಮಾಡಿಲ್ಲ. ಮೂಲಗಳ ಪ್ರಕಾರ, ಎನ್‌ಜಿಒಗಳು ಎಫ್‌ಸಿಆರ್‌ಎಯ ನಿಬಂಧನೆಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಕಾನೂನುಗಳನ್ನು ಉಲ್ಲಂಘಿಸಿವೆ ಎಂದು ಆರೋಪಿಸಲಾಗಿದೆ.

ವಾಲಂಟರಿ ಹೆಲ್ತ್ ಅಸೋಸಿಯೇಷನ್ ಆಫ್ ಇಂಡಿಯಾ (VHAI) 1970ರಲ್ಲಿ ಸ್ಥಾಪಿತವಾಗಿದೆ. ದೇಶಾದ್ಯಂತ 4,500ಕ್ಕೂ ಹೆಚ್ಚು ಆರೋಗ್ಯ ಮತ್ತು ಅಭಿವೃದ್ಧಿ ಸಂಸ್ಥೆಗಳನ್ನು ಈ ಎನ್‌ಜಿಒ ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ.

‘ಸಿನೊಡಿಕಲ್ ಬೋರ್ಡ್ ಆಫ್ ಸೋಶಿಯಲ್ ಸರ್ವೀಸಸ್’ ‘ಚರ್ಚ್ ಆಫ್ ನಾರ್ತ್ ಇಂಡಿಯಾ’ದ (CNI) ಅಭಿವೃದ್ಧಿ ಮತ್ತು ನ್ಯಾಯ ಮಂಡಳಿಯಾಗಿದೆ. ಇದು ಬಡವರಿಗೆ ಸಹಾಯ ಮಾಡಲು ಮತ್ತು ತುಳಿತಕ್ಕೊಳಗಾದವರನ್ನು ವಿಮೋಚನೆಗೊಳಿಸಲು ಚರ್ಚ್‌ನ ಭಾಗವಾಗಿ ಆರಂಭಗೊಂಡಿತ್ತು. ದಲಿತರು, ಆದಿವಾಸಿಗಳು ಮತ್ತು ಮಹಿಳೆಯರ ಕಲ್ಯಾಣಕ್ಕೆ ಇದು ಕೆಲಸ ಮಾಡುತ್ತಿತ್ತು ಎನ್ನಲಾಗಿದೆ.

ಒಟ್ಟಾರೆಯಾಗಿ, 2012ರಿಂದ 20,721 ಎಫ್‌ಸಿಆರ್‌ಎ ನೋಂದಣಿಯನ್ನು ರದ್ದುಗೊಳಿಸಲಾಗಿದೆ. 2012ರಲ್ಲಿ 3,924 ಎಫ್‌ಸಿಆರ್‌ಎ ರದ್ದುಗೊಂಡಿದೆ, 2013ರಲ್ಲಿ 4, 2014ರಲ್ಲಿ 59, 2015ರಲ್ಲಿ 10,002, 2016ರಲ್ಲಿ 6, 2017ರಲ್ಲಿ 4,863, 2018ರಲ್ಲಿ ಒಂದು, 2019ರಲ್ಲಿ 1,839, 2021ರಲ್ಲಿ 3, 2022ರಲ್ಲಿ 15, 2023ರಲ್ಲಿ 4 ಎನ್‌ಜಿಒಗಳ ನೋಂದಣಿ ರದ್ದುಗೊಳಿಸಲಾಗಿದೆ ಎಂದು ಗೃಹ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿದೆ.

ಫೆಬ್ರವರಿ 1ರವರೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ, ತಮಿಳುನಾಡಿನಲ್ಲಿ 2012ರಿಂದ 2,580 ಎಫ್‌ಸಿಆರ್‌ಎ ನೋಂದಣಿಗಳು ರದ್ದುಗೊಂಡಿದ್ದು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ,  ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ತಲಾ 2,025, ಉತ್ತರ ಪ್ರದೇಶದಲ್ಲಿ 1,820 ಮತ್ತು ಪಶ್ಚಿಮ ಬಂಗಾಳ 1,717ರಷ್ಟಿದೆ.

ಕಳೆದ ವರ್ಷ ಸಂಸತ್ತಿನಲ್ಲಿ ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, 2019-2020 ಮತ್ತು 2021-2022 ಹಣಕಾಸು ವರ್ಷಗಳ ನಡುವೆ 13,520 ಎಫ್‌ಸಿಆರ್‌ಎ-ನೋಂದಾಯಿತ ಎನ್‌ಜಿಒಗಳು ವಿದೇಶಿ ದೇಣಿಗೆ ಮೂಲಕ 55,741.51 ಕೋಟಿ ರೂಪಾಯಿಗಳನ್ನು ಸ್ವೀಕರಿಸಿದೆ.

ಇದನ್ನು ಓದಿ: ಮಾಲೆಗಾಂವ್ ಸ್ಫೋಟ ಪ್ರಕರಣ: ನಿರಂತರವಾಗಿ ಕೋರ್ಟ್‌ಗೆ ಗೈರು ಹಾಜರಾಗುತ್ತಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...