Homeಮುಖಪುಟಐದು ಎನ್‌ಜಿಒಗಳ ನೋಂದಣಿಯನ್ನು ರದ್ದುಗೊಳಿಸಿದ ಗೃಹ ಸಚಿವಾಲಯ

ಐದು ಎನ್‌ಜಿಒಗಳ ನೋಂದಣಿಯನ್ನು ರದ್ದುಗೊಳಿಸಿದ ಗೃಹ ಸಚಿವಾಲಯ

- Advertisement -
- Advertisement -

ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆಯ ವಿವಿಧ ನಿಬಂಧನೆಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಕೇಂದ್ರ ಗೃಹ ಸಚಿವಾಲಯವು ಎಫ್‌ಸಿಆರ್‌ಎ ಅಡಿಯಲ್ಲಿ ಕನಿಷ್ಠ ಐದು ಸರ್ಕಾರೇತರ ಸಂಸ್ಥೆಗಳ (ಎನ್‌ಜಿಒಗಳ) ನೋಂದಣಿಯನ್ನು ರದ್ದುಗೊಳಿಸಿದೆ.

ಎಫ್‌ಸಿಆರ್‌ಎ ನೋಂದಣಿಯನ್ನು ರದ್ದುಗೊಳಿಸುತ್ತಿರುವ ಕಾರಣ ಈ ಎನ್‌ಜಿಒಗಳು ಇನ್ನು ಮುಂದೆ ವಿದೇಶಿ ದೇಣಿಗೆಗಳನ್ನು ಸ್ವೀಕರಿಸಲು ಅಥವಾ ಅಸ್ತಿತ್ವದಲ್ಲಿರುವ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ನೋಂದಣಿ ರದ್ದುಗೊಂಡ ಐದು ಎನ್‌ಜಿಒಗಳು: ವಾಲಂಟರಿ ಹೆಲ್ತ್ ಅಸೋಸಿಯೇಷನ್ ಆಫ್ ಇಂಡಿಯಾ, ಸಿಎನ್‌ಐ ಸಿನೊಡಿಕಲ್ ಬೋರ್ಡ್ ಆಫ್ ಸೋಶಿಯಲ್ ಸರ್ವಿಸಸ್, ಇಂಡೋ-ಗ್ಲೋಬಲ್ ಸೋಶಿಯಲ್ ಸರ್ವಿಸ್ ಸೊಸೈಟಿ, ಚರ್ಚ್‌ಸ್ ಆಕ್ಸಿಲಿಯರಿ ಫಾರ್ ಸೋಶಿಯಲ್ ಆಕ್ಷನ್, ಮತ್ತು ಇವಾಂಜೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾ

ಕೇಂದ್ರ ಸರಕಾರ ಐದು ಎನ್‌ಜಿಒಗಳನ್ನು ರದ್ದು ಮಾಡಿದೆ, ಆದರೆ ಯಾವುದೇ NGOಗಳು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆಯನ್ನು ಮಾಡಿಲ್ಲ. ಮೂಲಗಳ ಪ್ರಕಾರ, ಎನ್‌ಜಿಒಗಳು ಎಫ್‌ಸಿಆರ್‌ಎಯ ನಿಬಂಧನೆಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಕಾನೂನುಗಳನ್ನು ಉಲ್ಲಂಘಿಸಿವೆ ಎಂದು ಆರೋಪಿಸಲಾಗಿದೆ.

ವಾಲಂಟರಿ ಹೆಲ್ತ್ ಅಸೋಸಿಯೇಷನ್ ಆಫ್ ಇಂಡಿಯಾ (VHAI) 1970ರಲ್ಲಿ ಸ್ಥಾಪಿತವಾಗಿದೆ. ದೇಶಾದ್ಯಂತ 4,500ಕ್ಕೂ ಹೆಚ್ಚು ಆರೋಗ್ಯ ಮತ್ತು ಅಭಿವೃದ್ಧಿ ಸಂಸ್ಥೆಗಳನ್ನು ಈ ಎನ್‌ಜಿಒ ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ.

‘ಸಿನೊಡಿಕಲ್ ಬೋರ್ಡ್ ಆಫ್ ಸೋಶಿಯಲ್ ಸರ್ವೀಸಸ್’ ‘ಚರ್ಚ್ ಆಫ್ ನಾರ್ತ್ ಇಂಡಿಯಾ’ದ (CNI) ಅಭಿವೃದ್ಧಿ ಮತ್ತು ನ್ಯಾಯ ಮಂಡಳಿಯಾಗಿದೆ. ಇದು ಬಡವರಿಗೆ ಸಹಾಯ ಮಾಡಲು ಮತ್ತು ತುಳಿತಕ್ಕೊಳಗಾದವರನ್ನು ವಿಮೋಚನೆಗೊಳಿಸಲು ಚರ್ಚ್‌ನ ಭಾಗವಾಗಿ ಆರಂಭಗೊಂಡಿತ್ತು. ದಲಿತರು, ಆದಿವಾಸಿಗಳು ಮತ್ತು ಮಹಿಳೆಯರ ಕಲ್ಯಾಣಕ್ಕೆ ಇದು ಕೆಲಸ ಮಾಡುತ್ತಿತ್ತು ಎನ್ನಲಾಗಿದೆ.

ಒಟ್ಟಾರೆಯಾಗಿ, 2012ರಿಂದ 20,721 ಎಫ್‌ಸಿಆರ್‌ಎ ನೋಂದಣಿಯನ್ನು ರದ್ದುಗೊಳಿಸಲಾಗಿದೆ. 2012ರಲ್ಲಿ 3,924 ಎಫ್‌ಸಿಆರ್‌ಎ ರದ್ದುಗೊಂಡಿದೆ, 2013ರಲ್ಲಿ 4, 2014ರಲ್ಲಿ 59, 2015ರಲ್ಲಿ 10,002, 2016ರಲ್ಲಿ 6, 2017ರಲ್ಲಿ 4,863, 2018ರಲ್ಲಿ ಒಂದು, 2019ರಲ್ಲಿ 1,839, 2021ರಲ್ಲಿ 3, 2022ರಲ್ಲಿ 15, 2023ರಲ್ಲಿ 4 ಎನ್‌ಜಿಒಗಳ ನೋಂದಣಿ ರದ್ದುಗೊಳಿಸಲಾಗಿದೆ ಎಂದು ಗೃಹ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿದೆ.

ಫೆಬ್ರವರಿ 1ರವರೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ, ತಮಿಳುನಾಡಿನಲ್ಲಿ 2012ರಿಂದ 2,580 ಎಫ್‌ಸಿಆರ್‌ಎ ನೋಂದಣಿಗಳು ರದ್ದುಗೊಂಡಿದ್ದು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ,  ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ತಲಾ 2,025, ಉತ್ತರ ಪ್ರದೇಶದಲ್ಲಿ 1,820 ಮತ್ತು ಪಶ್ಚಿಮ ಬಂಗಾಳ 1,717ರಷ್ಟಿದೆ.

ಕಳೆದ ವರ್ಷ ಸಂಸತ್ತಿನಲ್ಲಿ ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, 2019-2020 ಮತ್ತು 2021-2022 ಹಣಕಾಸು ವರ್ಷಗಳ ನಡುವೆ 13,520 ಎಫ್‌ಸಿಆರ್‌ಎ-ನೋಂದಾಯಿತ ಎನ್‌ಜಿಒಗಳು ವಿದೇಶಿ ದೇಣಿಗೆ ಮೂಲಕ 55,741.51 ಕೋಟಿ ರೂಪಾಯಿಗಳನ್ನು ಸ್ವೀಕರಿಸಿದೆ.

ಇದನ್ನು ಓದಿ: ಮಾಲೆಗಾಂವ್ ಸ್ಫೋಟ ಪ್ರಕರಣ: ನಿರಂತರವಾಗಿ ಕೋರ್ಟ್‌ಗೆ ಗೈರು ಹಾಜರಾಗುತ್ತಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...