Homeಮುಖಪುಟಐದು ಎನ್‌ಜಿಒಗಳ ನೋಂದಣಿಯನ್ನು ರದ್ದುಗೊಳಿಸಿದ ಗೃಹ ಸಚಿವಾಲಯ

ಐದು ಎನ್‌ಜಿಒಗಳ ನೋಂದಣಿಯನ್ನು ರದ್ದುಗೊಳಿಸಿದ ಗೃಹ ಸಚಿವಾಲಯ

- Advertisement -
- Advertisement -

ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆಯ ವಿವಿಧ ನಿಬಂಧನೆಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಕೇಂದ್ರ ಗೃಹ ಸಚಿವಾಲಯವು ಎಫ್‌ಸಿಆರ್‌ಎ ಅಡಿಯಲ್ಲಿ ಕನಿಷ್ಠ ಐದು ಸರ್ಕಾರೇತರ ಸಂಸ್ಥೆಗಳ (ಎನ್‌ಜಿಒಗಳ) ನೋಂದಣಿಯನ್ನು ರದ್ದುಗೊಳಿಸಿದೆ.

ಎಫ್‌ಸಿಆರ್‌ಎ ನೋಂದಣಿಯನ್ನು ರದ್ದುಗೊಳಿಸುತ್ತಿರುವ ಕಾರಣ ಈ ಎನ್‌ಜಿಒಗಳು ಇನ್ನು ಮುಂದೆ ವಿದೇಶಿ ದೇಣಿಗೆಗಳನ್ನು ಸ್ವೀಕರಿಸಲು ಅಥವಾ ಅಸ್ತಿತ್ವದಲ್ಲಿರುವ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ನೋಂದಣಿ ರದ್ದುಗೊಂಡ ಐದು ಎನ್‌ಜಿಒಗಳು: ವಾಲಂಟರಿ ಹೆಲ್ತ್ ಅಸೋಸಿಯೇಷನ್ ಆಫ್ ಇಂಡಿಯಾ, ಸಿಎನ್‌ಐ ಸಿನೊಡಿಕಲ್ ಬೋರ್ಡ್ ಆಫ್ ಸೋಶಿಯಲ್ ಸರ್ವಿಸಸ್, ಇಂಡೋ-ಗ್ಲೋಬಲ್ ಸೋಶಿಯಲ್ ಸರ್ವಿಸ್ ಸೊಸೈಟಿ, ಚರ್ಚ್‌ಸ್ ಆಕ್ಸಿಲಿಯರಿ ಫಾರ್ ಸೋಶಿಯಲ್ ಆಕ್ಷನ್, ಮತ್ತು ಇವಾಂಜೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾ

ಕೇಂದ್ರ ಸರಕಾರ ಐದು ಎನ್‌ಜಿಒಗಳನ್ನು ರದ್ದು ಮಾಡಿದೆ, ಆದರೆ ಯಾವುದೇ NGOಗಳು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆಯನ್ನು ಮಾಡಿಲ್ಲ. ಮೂಲಗಳ ಪ್ರಕಾರ, ಎನ್‌ಜಿಒಗಳು ಎಫ್‌ಸಿಆರ್‌ಎಯ ನಿಬಂಧನೆಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಕಾನೂನುಗಳನ್ನು ಉಲ್ಲಂಘಿಸಿವೆ ಎಂದು ಆರೋಪಿಸಲಾಗಿದೆ.

ವಾಲಂಟರಿ ಹೆಲ್ತ್ ಅಸೋಸಿಯೇಷನ್ ಆಫ್ ಇಂಡಿಯಾ (VHAI) 1970ರಲ್ಲಿ ಸ್ಥಾಪಿತವಾಗಿದೆ. ದೇಶಾದ್ಯಂತ 4,500ಕ್ಕೂ ಹೆಚ್ಚು ಆರೋಗ್ಯ ಮತ್ತು ಅಭಿವೃದ್ಧಿ ಸಂಸ್ಥೆಗಳನ್ನು ಈ ಎನ್‌ಜಿಒ ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ.

‘ಸಿನೊಡಿಕಲ್ ಬೋರ್ಡ್ ಆಫ್ ಸೋಶಿಯಲ್ ಸರ್ವೀಸಸ್’ ‘ಚರ್ಚ್ ಆಫ್ ನಾರ್ತ್ ಇಂಡಿಯಾ’ದ (CNI) ಅಭಿವೃದ್ಧಿ ಮತ್ತು ನ್ಯಾಯ ಮಂಡಳಿಯಾಗಿದೆ. ಇದು ಬಡವರಿಗೆ ಸಹಾಯ ಮಾಡಲು ಮತ್ತು ತುಳಿತಕ್ಕೊಳಗಾದವರನ್ನು ವಿಮೋಚನೆಗೊಳಿಸಲು ಚರ್ಚ್‌ನ ಭಾಗವಾಗಿ ಆರಂಭಗೊಂಡಿತ್ತು. ದಲಿತರು, ಆದಿವಾಸಿಗಳು ಮತ್ತು ಮಹಿಳೆಯರ ಕಲ್ಯಾಣಕ್ಕೆ ಇದು ಕೆಲಸ ಮಾಡುತ್ತಿತ್ತು ಎನ್ನಲಾಗಿದೆ.

ಒಟ್ಟಾರೆಯಾಗಿ, 2012ರಿಂದ 20,721 ಎಫ್‌ಸಿಆರ್‌ಎ ನೋಂದಣಿಯನ್ನು ರದ್ದುಗೊಳಿಸಲಾಗಿದೆ. 2012ರಲ್ಲಿ 3,924 ಎಫ್‌ಸಿಆರ್‌ಎ ರದ್ದುಗೊಂಡಿದೆ, 2013ರಲ್ಲಿ 4, 2014ರಲ್ಲಿ 59, 2015ರಲ್ಲಿ 10,002, 2016ರಲ್ಲಿ 6, 2017ರಲ್ಲಿ 4,863, 2018ರಲ್ಲಿ ಒಂದು, 2019ರಲ್ಲಿ 1,839, 2021ರಲ್ಲಿ 3, 2022ರಲ್ಲಿ 15, 2023ರಲ್ಲಿ 4 ಎನ್‌ಜಿಒಗಳ ನೋಂದಣಿ ರದ್ದುಗೊಳಿಸಲಾಗಿದೆ ಎಂದು ಗೃಹ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿದೆ.

ಫೆಬ್ರವರಿ 1ರವರೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ, ತಮಿಳುನಾಡಿನಲ್ಲಿ 2012ರಿಂದ 2,580 ಎಫ್‌ಸಿಆರ್‌ಎ ನೋಂದಣಿಗಳು ರದ್ದುಗೊಂಡಿದ್ದು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ,  ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ತಲಾ 2,025, ಉತ್ತರ ಪ್ರದೇಶದಲ್ಲಿ 1,820 ಮತ್ತು ಪಶ್ಚಿಮ ಬಂಗಾಳ 1,717ರಷ್ಟಿದೆ.

ಕಳೆದ ವರ್ಷ ಸಂಸತ್ತಿನಲ್ಲಿ ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, 2019-2020 ಮತ್ತು 2021-2022 ಹಣಕಾಸು ವರ್ಷಗಳ ನಡುವೆ 13,520 ಎಫ್‌ಸಿಆರ್‌ಎ-ನೋಂದಾಯಿತ ಎನ್‌ಜಿಒಗಳು ವಿದೇಶಿ ದೇಣಿಗೆ ಮೂಲಕ 55,741.51 ಕೋಟಿ ರೂಪಾಯಿಗಳನ್ನು ಸ್ವೀಕರಿಸಿದೆ.

ಇದನ್ನು ಓದಿ: ಮಾಲೆಗಾಂವ್ ಸ್ಫೋಟ ಪ್ರಕರಣ: ನಿರಂತರವಾಗಿ ಕೋರ್ಟ್‌ಗೆ ಗೈರು ಹಾಜರಾಗುತ್ತಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...