Homeಮುಖಪುಟಉದ್ಯಮಿ ಬಾಬಿ ಚೆಮ್ಮನ್ನೂರ್ ವಿರುದ್ಧ ದೂರು ದಾಖಲಿಸಿದ ಮಲಯಾಳಂ ನಟಿ ಹನಿ ರೋಸ್

ಉದ್ಯಮಿ ಬಾಬಿ ಚೆಮ್ಮನ್ನೂರ್ ವಿರುದ್ಧ ದೂರು ದಾಖಲಿಸಿದ ಮಲಯಾಳಂ ನಟಿ ಹನಿ ರೋಸ್

- Advertisement -
- Advertisement -

ಮಲಯಾಳಂ ಚಿತ್ರರಂಗದ ಜನಪ್ರಿಯ ನಟಿ ಹನಿ ರೋಸ್ ಅವರು ಉದ್ಯಮಿ, ಖ್ಯಾತ ಆಭರಣ ವ್ಯಾಪಾರಿ ಬಾಬಿ ಚೆಮ್ಮನೂರ್ ವಿರುದ್ಧ ನಿರಂತರ ಅಶ್ಲೀಲ ನಿಂದನೆ ಆರೋಪದ ಮೇಲೆ ಜನವರಿ 7ರಂದು ಪೊಲೀಸ್ ದೂರು ದಾಖಲಿಸಿದ್ದಾರೆ.

ಕೇರಳದ ಎರ್ನಾಕುಲಂ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಾಬಿ ಅವರೊಂದಿಗೆ, ಅವರ ಕೆಲ ಬೆಂಬಲಿಗರ ವಿರುದ್ದವೂ ದೂರು ದಾಖಲಿಸುವುದಾಗಿ ಜನವರಿ 7ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ಹನಿ ರೋಸ್ ಹೇಳಿದ್ದಾರೆ.

ಜನವರಿ 7ರಂದು ಹನಿ ರೋಸ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿರುವ ಪೋಸ್ಟ್

“ಬಾಬಿ ಚೆಮ್ಮನೂರ್, ನಿಮ್ಮ ನಿರಂತರ ಅಶ್ಲೀಲ ನಿಂದನೆಯ ವಿರುದ್ದ ಎರ್ನಾಕುಲಂ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ನಿಮ್ಮ ಮಾನಸಿಕ ಸ್ಥಿತಿಯನ್ನು ವ್ಯಕ್ತಪಡಿಸುವ ನಿಮ್ಮ ಸಹವರ್ತಿಗಳ ವಿರುದ್ಧವೂ ಶೀಘ್ರದಲ್ಲೇ ದೂರು ನೀಡಲಿದ್ದೇನೆ. ನಿಮ್ಮ ಹಣದ ಬಲವನ್ನು ನೀವು ನಂಬಿರಬಹುದು. ಆದರೆ, ನಾನು ಭಾರತದ ನ್ಯಾಯಾಂಗ ವ್ಯವಸ್ಥೆಯ ಬಲವನ್ನು ನಂಬುತ್ತೇನೆ” ಎಂದು ತನ್ನ ಪೋಸ್ಟ್‌ನಲ್ಲಿ ಹನಿ ರೋಸ್ ಬರೆದುಕೊಂಡಿದ್ದಾರೆ.

ಈ ಹಿಂದೆ ಆಭರಣ ಮಳಿಗೆಯೊಂದರ ಉದ್ಘಾಟನೆ ವೇಳೆ ಹನಿ ರೋಸ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಬಿ ಚೆಮ್ಮನೂರ್ ಅವರು ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದರು.

ಜನವರಿ 5ರಂದು ಹನಿ ರೋಸ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿದ್ದ ಪೋಸ್ಟ್

“ಈ ಪ್ರಕರಣ ಸಂಬಂಧ ಜನವರಿ 5ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಮೊದಲ ಪೋಸ್ಟ್ ಹಾಕಿದ್ದ ಹನಿ ರೋಸ್ ಅವರು “ಒಬ್ಬ ವ್ಯಕ್ತಿಯು ನಿರಂತರವಾಗಿ ನನ್ನನ್ನು ಅವಮಾನಿಸಲು ಪ್ರಯತ್ನಿಸಿದಾಗ ನಾನು ಮೌನವಾಗಿದ್ದರೆ, ನಾನು ಅದನ್ನು ಆನಂದಿಸುತ್ತಿದ್ದೇನೆ ಅಥವಾ ಆತ ಮಾಡಿದ್ದೆಲ್ಲವನ್ನು ಒಪ್ಪಿಕೊಂಡಿದ್ದೇನೆಯೇ? ಎಂದು ನನ್ನ ಆಪ್ತರು ಕೇಳುತ್ತಾರೆ. ಈ ವ್ಯಕ್ತಿಯು ಕೆಲವು ಕಾರ್ಯಕ್ರಮಗಳಿಗೆ ನನ್ನನ್ನು ಆಹ್ವಾನಿಸಿದ್ದ. ನಾನು ಹಾಜರಾಗಲು ನಿರಾಕರಿಸಿದ್ದೆ.ಈ ಕಾರಣಕ್ಕೆ ನಾನು ಭಾಗವಹಿಸುವ ಕಾರ್ಯಕ್ರಮಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುತ್ತಿದ್ದಾನೆ. ನನನ್ನು ಗುರಿಯಾಗಿಸಿ ಹೆಣ್ತನಕ್ಕೆ ಅವಮಾನಿಸುವ ರೀತಿಯಲ್ಲಿ ಸಾರ್ವಜನಿಕವಾಗಿ ನನ್ನ ಬಗ್ಗೆ ಅವಹೇಳನಕಾರಿ ಟೀಕೆಗಳನ್ನು ಮಾಡುತ್ತಿದ್ದಾನೆ” ಎಂದು ಬಾಬಿ ಚೆಮ್ಮನ್ನೂರ್ ಅವರ ಹೆಸರು ಉಲ್ಲೇಖಿಸಿದೆ ಹನಿರೋಸ್ ಬರೆದುಕೊಂಡಿದ್ದರು.

ಈ ಪೋಸ್ಟ್‌ನ ಕೆಳಗೆ ಅನೇಕ ಜನರು ಅವಹೇಳನಕಾರಿ ಕಾಮೆಂಟ್‌ಗಳನ್ನು ಹಾಕಿದ್ದರು. ಅದು ಹನಿ ರೋಸ್ ಅವರನ್ನು ದೂರು ದಾಖಲಿಸಲು ಪ್ರೇರೇಪಿಸಿತು ಎಂದು ವರದಿಯಾಗಿದೆ.

ಹನಿ ರೋಸ್ ದೂರು ಆಧರಿಸಿ ಎರ್ನಾಕುಲಂ ಸೆಂಟ್ರಲ್ ಪೊಲೀಸರು 27 ವ್ಯಕ್ತಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪೈಕಿ ಕುಂಬಳಂನ ಶಾಜಿ ಎಂಬ ವ್ಯಕ್ತಿಯನ್ನು ಜನವರಿ 6 ರಂದು ಸೋಮವಾರ ಬಂಧಿಸಲಾಗಿದೆ. ಈತನ ವಿರುದ್ದ ಹನಿ ರೋಸ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಅಡಿಯಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಕಾಮೆಂಟ್‌ಗಳು ಹಾಕಿರುವ ಆರೋಪವಿದೆ. ಹನಿ ರೋಸ್ ಸ್ಕ್ರೀನ್‌ಶಾಟ್‌ಗಳನ್ನು ಪೊಲೀಸರಿಗೆ ಪುರಾವೆಯಾಗಿ ಸಲ್ಲಿಸಿದ್ದಾರೆ ಎಂದು ವರದಿಗಳು ಹೇಳಿವೆ.

ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ಬೆಂಬಲ

ಹನಿರೋಸ್ ಅವರ ಇನ್‌ಸ್ಟಾಗ್ರಾಮ್ ಪೋಸ್ಟ್ ಅನ್ನು ರಿ ಪೋಸ್ಟ್ ಮಾಡಿರುವ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ‘ಅವಳೊಂದಿಗೆ’ (Avalkoppam) ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿದೆ. ಈ ಮೂಲಕ ಹನಿರೋಸ್ ಅವರಿಗೆ ಬೆಂಬಲ ವ್ಯಕ್ತಪಡಿಸಿದೆ.

ಡಿಎಂಕೆ ಸರ್ಕಾರಕ್ಕೆ ತೊಂದರೆ ನೀಡಲು ಬಿಜೆಪಿಯಿಂದ ರಾಜ್ಯಪಾಲ ಆರ್‌ಎನ್ ರವಿ ನೇಮಕ: ಕನಿಮೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...