Homeಮುಖಪುಟಉದ್ಯಮಿ ಬಾಬಿ ಚೆಮ್ಮನ್ನೂರ್ ವಿರುದ್ಧ ದೂರು ದಾಖಲಿಸಿದ ಮಲಯಾಳಂ ನಟಿ ಹನಿ ರೋಸ್

ಉದ್ಯಮಿ ಬಾಬಿ ಚೆಮ್ಮನ್ನೂರ್ ವಿರುದ್ಧ ದೂರು ದಾಖಲಿಸಿದ ಮಲಯಾಳಂ ನಟಿ ಹನಿ ರೋಸ್

- Advertisement -
- Advertisement -

ಮಲಯಾಳಂ ಚಿತ್ರರಂಗದ ಜನಪ್ರಿಯ ನಟಿ ಹನಿ ರೋಸ್ ಅವರು ಉದ್ಯಮಿ, ಖ್ಯಾತ ಆಭರಣ ವ್ಯಾಪಾರಿ ಬಾಬಿ ಚೆಮ್ಮನೂರ್ ವಿರುದ್ಧ ನಿರಂತರ ಅಶ್ಲೀಲ ನಿಂದನೆ ಆರೋಪದ ಮೇಲೆ ಜನವರಿ 7ರಂದು ಪೊಲೀಸ್ ದೂರು ದಾಖಲಿಸಿದ್ದಾರೆ.

ಕೇರಳದ ಎರ್ನಾಕುಲಂ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಾಬಿ ಅವರೊಂದಿಗೆ, ಅವರ ಕೆಲ ಬೆಂಬಲಿಗರ ವಿರುದ್ದವೂ ದೂರು ದಾಖಲಿಸುವುದಾಗಿ ಜನವರಿ 7ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ಹನಿ ರೋಸ್ ಹೇಳಿದ್ದಾರೆ.

ಜನವರಿ 7ರಂದು ಹನಿ ರೋಸ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿರುವ ಪೋಸ್ಟ್

“ಬಾಬಿ ಚೆಮ್ಮನೂರ್, ನಿಮ್ಮ ನಿರಂತರ ಅಶ್ಲೀಲ ನಿಂದನೆಯ ವಿರುದ್ದ ಎರ್ನಾಕುಲಂ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ನಿಮ್ಮ ಮಾನಸಿಕ ಸ್ಥಿತಿಯನ್ನು ವ್ಯಕ್ತಪಡಿಸುವ ನಿಮ್ಮ ಸಹವರ್ತಿಗಳ ವಿರುದ್ಧವೂ ಶೀಘ್ರದಲ್ಲೇ ದೂರು ನೀಡಲಿದ್ದೇನೆ. ನಿಮ್ಮ ಹಣದ ಬಲವನ್ನು ನೀವು ನಂಬಿರಬಹುದು. ಆದರೆ, ನಾನು ಭಾರತದ ನ್ಯಾಯಾಂಗ ವ್ಯವಸ್ಥೆಯ ಬಲವನ್ನು ನಂಬುತ್ತೇನೆ” ಎಂದು ತನ್ನ ಪೋಸ್ಟ್‌ನಲ್ಲಿ ಹನಿ ರೋಸ್ ಬರೆದುಕೊಂಡಿದ್ದಾರೆ.

ಈ ಹಿಂದೆ ಆಭರಣ ಮಳಿಗೆಯೊಂದರ ಉದ್ಘಾಟನೆ ವೇಳೆ ಹನಿ ರೋಸ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಬಿ ಚೆಮ್ಮನೂರ್ ಅವರು ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದರು.

ಜನವರಿ 5ರಂದು ಹನಿ ರೋಸ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿದ್ದ ಪೋಸ್ಟ್

“ಈ ಪ್ರಕರಣ ಸಂಬಂಧ ಜನವರಿ 5ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಮೊದಲ ಪೋಸ್ಟ್ ಹಾಕಿದ್ದ ಹನಿ ರೋಸ್ ಅವರು “ಒಬ್ಬ ವ್ಯಕ್ತಿಯು ನಿರಂತರವಾಗಿ ನನ್ನನ್ನು ಅವಮಾನಿಸಲು ಪ್ರಯತ್ನಿಸಿದಾಗ ನಾನು ಮೌನವಾಗಿದ್ದರೆ, ನಾನು ಅದನ್ನು ಆನಂದಿಸುತ್ತಿದ್ದೇನೆ ಅಥವಾ ಆತ ಮಾಡಿದ್ದೆಲ್ಲವನ್ನು ಒಪ್ಪಿಕೊಂಡಿದ್ದೇನೆಯೇ? ಎಂದು ನನ್ನ ಆಪ್ತರು ಕೇಳುತ್ತಾರೆ. ಈ ವ್ಯಕ್ತಿಯು ಕೆಲವು ಕಾರ್ಯಕ್ರಮಗಳಿಗೆ ನನ್ನನ್ನು ಆಹ್ವಾನಿಸಿದ್ದ. ನಾನು ಹಾಜರಾಗಲು ನಿರಾಕರಿಸಿದ್ದೆ.ಈ ಕಾರಣಕ್ಕೆ ನಾನು ಭಾಗವಹಿಸುವ ಕಾರ್ಯಕ್ರಮಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುತ್ತಿದ್ದಾನೆ. ನನನ್ನು ಗುರಿಯಾಗಿಸಿ ಹೆಣ್ತನಕ್ಕೆ ಅವಮಾನಿಸುವ ರೀತಿಯಲ್ಲಿ ಸಾರ್ವಜನಿಕವಾಗಿ ನನ್ನ ಬಗ್ಗೆ ಅವಹೇಳನಕಾರಿ ಟೀಕೆಗಳನ್ನು ಮಾಡುತ್ತಿದ್ದಾನೆ” ಎಂದು ಬಾಬಿ ಚೆಮ್ಮನ್ನೂರ್ ಅವರ ಹೆಸರು ಉಲ್ಲೇಖಿಸಿದೆ ಹನಿರೋಸ್ ಬರೆದುಕೊಂಡಿದ್ದರು.

ಈ ಪೋಸ್ಟ್‌ನ ಕೆಳಗೆ ಅನೇಕ ಜನರು ಅವಹೇಳನಕಾರಿ ಕಾಮೆಂಟ್‌ಗಳನ್ನು ಹಾಕಿದ್ದರು. ಅದು ಹನಿ ರೋಸ್ ಅವರನ್ನು ದೂರು ದಾಖಲಿಸಲು ಪ್ರೇರೇಪಿಸಿತು ಎಂದು ವರದಿಯಾಗಿದೆ.

ಹನಿ ರೋಸ್ ದೂರು ಆಧರಿಸಿ ಎರ್ನಾಕುಲಂ ಸೆಂಟ್ರಲ್ ಪೊಲೀಸರು 27 ವ್ಯಕ್ತಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪೈಕಿ ಕುಂಬಳಂನ ಶಾಜಿ ಎಂಬ ವ್ಯಕ್ತಿಯನ್ನು ಜನವರಿ 6 ರಂದು ಸೋಮವಾರ ಬಂಧಿಸಲಾಗಿದೆ. ಈತನ ವಿರುದ್ದ ಹನಿ ರೋಸ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಅಡಿಯಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಕಾಮೆಂಟ್‌ಗಳು ಹಾಕಿರುವ ಆರೋಪವಿದೆ. ಹನಿ ರೋಸ್ ಸ್ಕ್ರೀನ್‌ಶಾಟ್‌ಗಳನ್ನು ಪೊಲೀಸರಿಗೆ ಪುರಾವೆಯಾಗಿ ಸಲ್ಲಿಸಿದ್ದಾರೆ ಎಂದು ವರದಿಗಳು ಹೇಳಿವೆ.

ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ಬೆಂಬಲ

ಹನಿರೋಸ್ ಅವರ ಇನ್‌ಸ್ಟಾಗ್ರಾಮ್ ಪೋಸ್ಟ್ ಅನ್ನು ರಿ ಪೋಸ್ಟ್ ಮಾಡಿರುವ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ‘ಅವಳೊಂದಿಗೆ’ (Avalkoppam) ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿದೆ. ಈ ಮೂಲಕ ಹನಿರೋಸ್ ಅವರಿಗೆ ಬೆಂಬಲ ವ್ಯಕ್ತಪಡಿಸಿದೆ.

ಡಿಎಂಕೆ ಸರ್ಕಾರಕ್ಕೆ ತೊಂದರೆ ನೀಡಲು ಬಿಜೆಪಿಯಿಂದ ರಾಜ್ಯಪಾಲ ಆರ್‌ಎನ್ ರವಿ ನೇಮಕ: ಕನಿಮೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...