Homeಮುಖಪುಟಹನಿಮೂನ್ ಹತ್ಯೆ: ಮೇಘಾಲಯ ಜನರ ಕುರಿತು ಮಾಧ್ಯಮಗಳಿಂದ ಅಪಪ್ರಚಾರ; ಕ್ಷಮೆಗೆ ಒತ್ತಾಯಿಸಿ ರ‍್ಯಾಲಿ

ಹನಿಮೂನ್ ಹತ್ಯೆ: ಮೇಘಾಲಯ ಜನರ ಕುರಿತು ಮಾಧ್ಯಮಗಳಿಂದ ಅಪಪ್ರಚಾರ; ಕ್ಷಮೆಗೆ ಒತ್ತಾಯಿಸಿ ರ‍್ಯಾಲಿ

- Advertisement -
- Advertisement -

ಉದ್ಯಮಿ ಪತ್ನಿ ಮತ್ತು ಇತರ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು

ಗುವಾಹಟಿ: ತಮ್ಮ ಪಟ್ಟಣ ಮತ್ತು ಮೇಘಾಲಯವನ್ನು ಅಪರಾಧ ಚಟುವಟಿಕೆಗಳಿಂದ ತುಂಬಿರುವ ಮತ್ತು ಪ್ರವಾಸಿಗರಿಗೆ ಅಸುರಕ್ಷಿತ ಸ್ಥಳವೆಂದು ಚಿತ್ರಿಸಲಾಗಿರುವುದರಿಂದ ಬೇಸರಗೊಂಡ ಸೊಹ್ರಾ (ಚಿರಾಪುಂಜಿ) ಜನರು ಮಂಗಳವಾರದಂದು ಹನಿಮೂನ್ ಪ್ರವಾಸದ ಸಮಯದಲ್ಲಿ ಕೊಲೆಯಾದ ಇಂದೋರ್‌ನ ಉದ್ಯಮಿ ರಾಜಾ ರಘುವಂಶಿಗೆ ಶ್ರದ್ದಾಂಜಲಿ ಸಲ್ಲಿಸಿದರು ಮತ್ತು ಮೇಣದಬತ್ತಿಯ ಮೆರವಣಿಗೆ ನಡೆಸಿದರು.

ರಾಜಾ ರಘುವಂಶಿ ಮತ್ತು ಅವರ 24 ವರ್ಷದ ಪತ್ನಿ ಸೋನಮ್ ಅವರ ಜೀವಗಳನ್ನು ಸ್ಥಳೀಯರು ಬಲಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಕ್ಕಾಗಿ ಕೆಲವು ಪ್ರಮುಖ ಮಾಧ್ಯಮ ಸಂಸ್ಥೆಗಳು ಮತ್ತು ವ್ಯಕ್ತಿಗಳಿಂದ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಅವರು ರ‍್ಯಾಲಿಯನ್ನು ಸಹ ಆಯೋಜಿಸಿದ್ದರು. ಜೂನ್ 2ರಂದು ಆಳವಾದ ಕಣಿವೆಯಲ್ಲಿ ರಾಜಾ ಅವರ ದೇಹವು ಪತ್ತೆಯಾಗಿದ್ದು “ಕಾಣೆಯಾದ” ದಂಪತಿಯ ಕಥೆಯಲ್ಲಿ ತಿರುವು ನೀಡಿತ್ತು.

ಸೊಹ್ರಾದಲ್ಲಿ ರಕ್ಷಣಾ ಸಿಬ್ಬಂದಿ “ಕಾಣೆಯಾದ” ಇಂದೋರ್ ದಂಪತಿಗಾಗಿ ಹುಡುಕುತ್ತಿದ್ದಾಗ ಮೇಘಾಲಯದ ಜನರನ್ನು ನಿಂದಿಸುತ್ತಿದ್ದ ರಘುವಂಶಿ ಕುಟುಂಬದವರು ಸೇರಿದಂತೆ ಕೆಲವು ದೂರದರ್ಶನ ವಾಹಿನಿಗಳು, ಆನ್‌ಲೈನ್ ವ್ಯಾಖ್ಯಾನಕಾರರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರ ವಿರುದ್ಧ ಇದೀಗ ಸ್ಥಳೀಯರ ಕೋಪಕ್ಕೆ ತುತ್ತಾಗಿದೆ. ರಘವಂಶಿಯ ಶವ ಪತ್ತೆಯಾದ ನಂತರ ತಮ್ಮ ಕುರಿತು ಅಪಪ್ರಚಾರ ನಡೆಸಲಾಗಿತ್ತು ಎಂದು ಮೇಘಾಲಯದ ಜನತೆ ಆರೋಪಿಸಿದ್ದಾರೆ.

ಸೊಹ್ರಾ ಶಾಸಕ ಗವಿನ್ ಮಿಗುಯೆಲ್ ಮೈಲ್ಲಿಯೆಮ್, ಮೇಣದಬತ್ತಿಯ ಮೆರವಣಿಗೆ ಸಮಯದಲ್ಲಿ ಸಮುದಾಯದ ನೋವು ಮತ್ತು ಆಕ್ರೋಶವನ್ನು ವ್ಯಕ್ತಪಡಿಸಿದರು. “ಇದು ನಮ್ಮೆಲ್ಲರನ್ನೂ ತೀವ್ರವಾಗಿ ಬೆಚ್ಚಿಬೀಳಿಸಿದ ದುರಂತ. ರಾಜಾ ನಮ್ಮ ಭೂಮಿಗೆ ಅತಿಥಿಯಾಗಿದ್ದರು. ಸೊಹ್ರಾ ಜನರು ರಾಜಾ ದಂಪತಿಯನ್ನು ಮುಕ್ತ ಹೃದಯದಿಂದ ಸ್ವಾಗತಿಸಿದರು ಮತ್ತು ಅವರಿಗೆ ಏನಾಯಿತೋ ಅದು ಇಲ್ಲಿನ ಜನರ ಕಾರಣಕ್ಕಾಗಿ ನಡೆದಿದ್ದಲ್ಲ” ಎಂದು ಅವರು ಹೇಳಿದರು.

“ಸೊಹ್ರಾ ಮತ್ತು ಅಲ್ಲಿನ ಜನರ ಕುರಿತು ಸುಳ್ಳು ಮತ್ತು ಅವಹೇಳನಕಾರಿ ವಿಷಯವನ್ನು ಹರಡಿದ ರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿರುವ ವ್ಯಕ್ತಿಗಳು ಬೇಷರತ್ತಾದ ಕ್ಷಮೆಯಾಚನೆಯನ್ನು ನಾವು ಒತ್ತಾಯಿಸುತ್ತೇವೆ. ಮುಂದಿನ 24 ಗಂಟೆಗಳಲ್ಲಿ ಯಾವುದೇ ಕ್ಷಮೆಯಾಚನೆಯನ್ನು ನೀಡದಿದ್ದರೆ, ನಾವು ಎಫ್‌ಐಆರ್‌ಗಳನ್ನು ದಾಖಲಿಸಲು ಮತ್ತು ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ” ಎಂದು ಹಿಮಾ ಸೊಹ್ರಾ (ಸಾಂಪ್ರದಾಯಿಕ ಸಂಸ್ಥೆ) ವಕ್ತಾರರು ಹೇಳಿದ್ದಾರೆ.

ಸೋನಮ್ ರಘುವಂಶಿ ಮೇಘಾಲಯದಲ್ಲಿ ರಜೆಯ ಸಮಯದಲ್ಲಿ ತನ್ನ ಪತಿಯ ಕೊಲೆಗೆ ಸಂಚು ರೂಪಿಸಿದ ಆರೋಪ ಹೊರಿಸಲಾಗಿದೆ. ಇಂದೋರ್ ದಂಪತಿಯ ಪ್ರಕರಣದಿಂದ ಪ್ರವಾಸೋದ್ಯಮ ವ್ಯವಹಾರದ ಮೇಲೆ ತಾತ್ಕಾಲಿಕವಾಗಿ ಕೆಟ್ಟ ಪರಿಣಾಮ ಬೀರಿದ ಸೊಹ್ರಾ ಮತ್ತು ಪಕ್ಕದ ಗ್ರಾಮಗಳಲ್ಲಿ ನಡೆದ ಗಂಭೀರ ಘಟನೆಯ ಆರೋಪಿಗಳನ್ನು ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಶಿಲ್ಲಾಂಗ್‌ಗೆ ಬಂಧಿಸಿ ಕರೆ ತರಲಾಗಿದೆ.

ಸೋನಮ್ ರಘುವಂಶಿ ಸೇರಿದಂತೆ ಆರೋಪಿಗಳನ್ನು ಇಂದು (ಬುಧವಾರ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಅಪರಾಧವನ್ನು ಪುನರ್ನಿರ್ಮಿಸಲು ಅವರನ್ನು ಸೊಹ್ರಾಕ್ಕೆ ಕರೆದೊಯ್ಯಲಾಗುವುದು ಎಂದು ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ವಿವೇಕ್ ಸೈಮ್ ಹೇಳಿದರು.

ಮೇಘಾಲಯ ಪೊಲೀಸರು ಇಂದೋರ್ (ಮಧ್ಯಪ್ರದೇಶ) ಮತ್ತು ಲಲಿತಪುರ (ಉತ್ತರಪ್ರದೇಶ)ದಲ್ಲಿ ಸಿಕ್ಕಿಬಿದ್ದ ನಾಲ್ವರು ಆರೋಪಿಗಳನ್ನು ಆರು ದಿನಗಳ ಕಾಲ ವಶಕ್ಕೆ ಪಡೆದರು. ಘಾಜಿಪುರದಲ್ಲಿ ಪೊಲೀಸರಿಗೆ ಶರಣಾದ ಸೋನಮ್ ರಘುವಂಶಿಯ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆಯಲಾಗಿತ್ತು.

ಪ್ರಕರಣದ ಹಿನ್ನೆಲೆ

ಮೇ 23ರಂದು ಮಧ್ಯಪ್ರದೇಶದ ಇಂದೋರ್ ಮೂಲದ ರಾಜಾ ರಘವಂಶಿ ಮತ್ತು ಸೋನಮ್ ರಘುವಂಶಿ  ಹನಿಮೂನ್‌ಗೆ ಹೋಗಿದ್ದರು. ಈ ವೇಳೆ ಸುಪಾರಿ ಕೊಟ್ಟು ತನ್ನ ಪತಿ ರಾಜ ರಘುವಂಶಿಯನ್ನು ಕೊಲೆ ಮಾಡಿಸಿದ ಆರೋಪವನ್ನು ಹೊತ್ತಿರುವ ಪತ್ನಿ ಸೋನಮ್ ರಘುವಂಶಿ “ದರೋಡೆಕೋರರು ನನ್ನ ಪತಿಯನ್ನು ಹತ್ಯೆ ಮಾಡಿದರು. ನನ್ನ ಆಭರಣಗಳನ್ನು ದೋಚಲು ದರೋಡೆಕೋರರು ಯತ್ನಿಸಿದ್ದರು” ಎಂದು ಹೇಳಿಕೊಂಡಿದ್ದರು. ಹನಿಮೂನ್ ಕೊಲೆ ಪ್ರಕರಣ ಎಂದೆ ಕರೆಯಲಾಗುತ್ತಿರುವ ಈ ಪ್ರಕರಣವು ಸದ್ಯ ದೇಶದಾದ್ಯಂತ ಸಂಚಲನ ಮೂಡಿಸಿದೆ.

ಮೇ 11ರಂದು ಇವರ ವಿವಾಹವಾಗಿತ್ತು. ತಮ್ಮ ಹನಿಮೂನ್‌ಗಾಗಿ ಮೇಘಾಲಯದ ಶಿಲ್ಲಾಂಗ್‌ಗೆ ಹೋಗಿದ್ದರು. ಬಳಿಕ ಮೇ 23ರಂದು ಇಬ್ಬರೂ ನಾಪತ್ತೆಯಾಗಿದ್ದರು. ಈ ಪೈಕಿ ರಾಜಾ ಅವರ ಮೃತದೇಹವು ಜೂನ್ 2ರಂದು ಪೂರ್ವ ಖಾಸಿ ಬೆಟ್ಟದ ಜಿಲ್ಲೆಯ ಕಮರಿಯಲ್ಲಿ ಪತ್ತೆಯಾಗಿತ್ತು. ಆದರೆ ಸೋನಮ್ ಪತ್ತೆಯಾಗಿರಲಿಲ್ಲ.

ಸೋನಮ್‌ಗಾಗಿ ಹುಡುಕಾಟ ನಡೆಯುತ್ತಿರುವಾಗಲೇ ಸೋಮವಾರ ಉತ್ತರ ಪ್ರದೇಶ ಗಾಜಿಪುರದ ಪೊಲೀಸರ ಮುಂದೆ ಸೋಮವಾರ ಸೋನಮ್ ಶರಣಾಗಿದ್ದರು. ಆಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮೇಘಾಲಯ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಗಳು ಈ ಕೊಲೆಗೆ ಸೋನಮ್ ಅವರೇ ಸುಪಾರಿ ನೀಡಿದ್ದಾರೆ ಎಂದಿದ್ದಾರೆ.

ಹಾಗಾಗಿ ಪೊಲೀಸರು ಸೋನಮ್ ಬಂಧನ ಮಾಡಿದ್ದಾರೆ. ಢಾಬಾ ಒಂದರಲ್ಲಿ ಸಹಾಯ ಕೋರಿ ಸೋನಮ್ ಬಂದಿದ್ದರು. ಬಳಿಕ ಅಲ್ಲಿಂದಲೇ ತಮ್ಮ ಕುಟುಂಬಸ್ಥರಿಗೆ ಕರೆ ಮಾಡಿದ್ದರು ಎನ್ನಲಾಗಿದೆ. “ಸೋನಮ್ ತುಂಬಾ ದುಖಿಃತರಾಗಿದ್ದರು” ಎಂದು ಢಾಬಾ ಮಾಲೀಕ ಸಾಹಿಲ್ ಹೇಳಿದ್ದಾರೆ.

ಮೇಘಾಲಯ ಪೊಲೀಸರು ಸೋನಮ್ ತನ್ನ ಪತಿಯ ಕೊಲೆಗಾಗಿ ಸುಪಾರಿ ನೀಡಿದ್ದರು ಎಂದು ಹೇಳಿದ್ದಾರೆ. ಈ ಸಂಬಂಧ ಸೋನಂ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇತ್ತ ಘಾಜಿಪುರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಸೋನಮ್ ಯಾವುದೇ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ” ಎಂದಿದ್ದಾರೆ.

ಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ ಭಾರತದ ಸಂತಾನೋತ್ಪತ್ತಿ ದರ: ವಿಶ್ವಸಂಸ್ಥೆ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...