Homeಮುಖಪುಟಹನಿಮೂನ್ ಹತ್ಯೆ: ಮೇಘಾಲಯ ಜನರ ಕುರಿತು ಮಾಧ್ಯಮಗಳಿಂದ ಅಪಪ್ರಚಾರ; ಕ್ಷಮೆಗೆ ಒತ್ತಾಯಿಸಿ ರ‍್ಯಾಲಿ

ಹನಿಮೂನ್ ಹತ್ಯೆ: ಮೇಘಾಲಯ ಜನರ ಕುರಿತು ಮಾಧ್ಯಮಗಳಿಂದ ಅಪಪ್ರಚಾರ; ಕ್ಷಮೆಗೆ ಒತ್ತಾಯಿಸಿ ರ‍್ಯಾಲಿ

- Advertisement -
- Advertisement -

ಉದ್ಯಮಿ ಪತ್ನಿ ಮತ್ತು ಇತರ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು

ಗುವಾಹಟಿ: ತಮ್ಮ ಪಟ್ಟಣ ಮತ್ತು ಮೇಘಾಲಯವನ್ನು ಅಪರಾಧ ಚಟುವಟಿಕೆಗಳಿಂದ ತುಂಬಿರುವ ಮತ್ತು ಪ್ರವಾಸಿಗರಿಗೆ ಅಸುರಕ್ಷಿತ ಸ್ಥಳವೆಂದು ಚಿತ್ರಿಸಲಾಗಿರುವುದರಿಂದ ಬೇಸರಗೊಂಡ ಸೊಹ್ರಾ (ಚಿರಾಪುಂಜಿ) ಜನರು ಮಂಗಳವಾರದಂದು ಹನಿಮೂನ್ ಪ್ರವಾಸದ ಸಮಯದಲ್ಲಿ ಕೊಲೆಯಾದ ಇಂದೋರ್‌ನ ಉದ್ಯಮಿ ರಾಜಾ ರಘುವಂಶಿಗೆ ಶ್ರದ್ದಾಂಜಲಿ ಸಲ್ಲಿಸಿದರು ಮತ್ತು ಮೇಣದಬತ್ತಿಯ ಮೆರವಣಿಗೆ ನಡೆಸಿದರು.

ರಾಜಾ ರಘುವಂಶಿ ಮತ್ತು ಅವರ 24 ವರ್ಷದ ಪತ್ನಿ ಸೋನಮ್ ಅವರ ಜೀವಗಳನ್ನು ಸ್ಥಳೀಯರು ಬಲಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಕ್ಕಾಗಿ ಕೆಲವು ಪ್ರಮುಖ ಮಾಧ್ಯಮ ಸಂಸ್ಥೆಗಳು ಮತ್ತು ವ್ಯಕ್ತಿಗಳಿಂದ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಅವರು ರ‍್ಯಾಲಿಯನ್ನು ಸಹ ಆಯೋಜಿಸಿದ್ದರು. ಜೂನ್ 2ರಂದು ಆಳವಾದ ಕಣಿವೆಯಲ್ಲಿ ರಾಜಾ ಅವರ ದೇಹವು ಪತ್ತೆಯಾಗಿದ್ದು “ಕಾಣೆಯಾದ” ದಂಪತಿಯ ಕಥೆಯಲ್ಲಿ ತಿರುವು ನೀಡಿತ್ತು.

ಸೊಹ್ರಾದಲ್ಲಿ ರಕ್ಷಣಾ ಸಿಬ್ಬಂದಿ “ಕಾಣೆಯಾದ” ಇಂದೋರ್ ದಂಪತಿಗಾಗಿ ಹುಡುಕುತ್ತಿದ್ದಾಗ ಮೇಘಾಲಯದ ಜನರನ್ನು ನಿಂದಿಸುತ್ತಿದ್ದ ರಘುವಂಶಿ ಕುಟುಂಬದವರು ಸೇರಿದಂತೆ ಕೆಲವು ದೂರದರ್ಶನ ವಾಹಿನಿಗಳು, ಆನ್‌ಲೈನ್ ವ್ಯಾಖ್ಯಾನಕಾರರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರ ವಿರುದ್ಧ ಇದೀಗ ಸ್ಥಳೀಯರ ಕೋಪಕ್ಕೆ ತುತ್ತಾಗಿದೆ. ರಘವಂಶಿಯ ಶವ ಪತ್ತೆಯಾದ ನಂತರ ತಮ್ಮ ಕುರಿತು ಅಪಪ್ರಚಾರ ನಡೆಸಲಾಗಿತ್ತು ಎಂದು ಮೇಘಾಲಯದ ಜನತೆ ಆರೋಪಿಸಿದ್ದಾರೆ.

ಸೊಹ್ರಾ ಶಾಸಕ ಗವಿನ್ ಮಿಗುಯೆಲ್ ಮೈಲ್ಲಿಯೆಮ್, ಮೇಣದಬತ್ತಿಯ ಮೆರವಣಿಗೆ ಸಮಯದಲ್ಲಿ ಸಮುದಾಯದ ನೋವು ಮತ್ತು ಆಕ್ರೋಶವನ್ನು ವ್ಯಕ್ತಪಡಿಸಿದರು. “ಇದು ನಮ್ಮೆಲ್ಲರನ್ನೂ ತೀವ್ರವಾಗಿ ಬೆಚ್ಚಿಬೀಳಿಸಿದ ದುರಂತ. ರಾಜಾ ನಮ್ಮ ಭೂಮಿಗೆ ಅತಿಥಿಯಾಗಿದ್ದರು. ಸೊಹ್ರಾ ಜನರು ರಾಜಾ ದಂಪತಿಯನ್ನು ಮುಕ್ತ ಹೃದಯದಿಂದ ಸ್ವಾಗತಿಸಿದರು ಮತ್ತು ಅವರಿಗೆ ಏನಾಯಿತೋ ಅದು ಇಲ್ಲಿನ ಜನರ ಕಾರಣಕ್ಕಾಗಿ ನಡೆದಿದ್ದಲ್ಲ” ಎಂದು ಅವರು ಹೇಳಿದರು.

“ಸೊಹ್ರಾ ಮತ್ತು ಅಲ್ಲಿನ ಜನರ ಕುರಿತು ಸುಳ್ಳು ಮತ್ತು ಅವಹೇಳನಕಾರಿ ವಿಷಯವನ್ನು ಹರಡಿದ ರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿರುವ ವ್ಯಕ್ತಿಗಳು ಬೇಷರತ್ತಾದ ಕ್ಷಮೆಯಾಚನೆಯನ್ನು ನಾವು ಒತ್ತಾಯಿಸುತ್ತೇವೆ. ಮುಂದಿನ 24 ಗಂಟೆಗಳಲ್ಲಿ ಯಾವುದೇ ಕ್ಷಮೆಯಾಚನೆಯನ್ನು ನೀಡದಿದ್ದರೆ, ನಾವು ಎಫ್‌ಐಆರ್‌ಗಳನ್ನು ದಾಖಲಿಸಲು ಮತ್ತು ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ” ಎಂದು ಹಿಮಾ ಸೊಹ್ರಾ (ಸಾಂಪ್ರದಾಯಿಕ ಸಂಸ್ಥೆ) ವಕ್ತಾರರು ಹೇಳಿದ್ದಾರೆ.

ಸೋನಮ್ ರಘುವಂಶಿ ಮೇಘಾಲಯದಲ್ಲಿ ರಜೆಯ ಸಮಯದಲ್ಲಿ ತನ್ನ ಪತಿಯ ಕೊಲೆಗೆ ಸಂಚು ರೂಪಿಸಿದ ಆರೋಪ ಹೊರಿಸಲಾಗಿದೆ. ಇಂದೋರ್ ದಂಪತಿಯ ಪ್ರಕರಣದಿಂದ ಪ್ರವಾಸೋದ್ಯಮ ವ್ಯವಹಾರದ ಮೇಲೆ ತಾತ್ಕಾಲಿಕವಾಗಿ ಕೆಟ್ಟ ಪರಿಣಾಮ ಬೀರಿದ ಸೊಹ್ರಾ ಮತ್ತು ಪಕ್ಕದ ಗ್ರಾಮಗಳಲ್ಲಿ ನಡೆದ ಗಂಭೀರ ಘಟನೆಯ ಆರೋಪಿಗಳನ್ನು ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಶಿಲ್ಲಾಂಗ್‌ಗೆ ಬಂಧಿಸಿ ಕರೆ ತರಲಾಗಿದೆ.

ಸೋನಮ್ ರಘುವಂಶಿ ಸೇರಿದಂತೆ ಆರೋಪಿಗಳನ್ನು ಇಂದು (ಬುಧವಾರ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಅಪರಾಧವನ್ನು ಪುನರ್ನಿರ್ಮಿಸಲು ಅವರನ್ನು ಸೊಹ್ರಾಕ್ಕೆ ಕರೆದೊಯ್ಯಲಾಗುವುದು ಎಂದು ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ವಿವೇಕ್ ಸೈಮ್ ಹೇಳಿದರು.

ಮೇಘಾಲಯ ಪೊಲೀಸರು ಇಂದೋರ್ (ಮಧ್ಯಪ್ರದೇಶ) ಮತ್ತು ಲಲಿತಪುರ (ಉತ್ತರಪ್ರದೇಶ)ದಲ್ಲಿ ಸಿಕ್ಕಿಬಿದ್ದ ನಾಲ್ವರು ಆರೋಪಿಗಳನ್ನು ಆರು ದಿನಗಳ ಕಾಲ ವಶಕ್ಕೆ ಪಡೆದರು. ಘಾಜಿಪುರದಲ್ಲಿ ಪೊಲೀಸರಿಗೆ ಶರಣಾದ ಸೋನಮ್ ರಘುವಂಶಿಯ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆಯಲಾಗಿತ್ತು.

ಪ್ರಕರಣದ ಹಿನ್ನೆಲೆ

ಮೇ 23ರಂದು ಮಧ್ಯಪ್ರದೇಶದ ಇಂದೋರ್ ಮೂಲದ ರಾಜಾ ರಘವಂಶಿ ಮತ್ತು ಸೋನಮ್ ರಘುವಂಶಿ  ಹನಿಮೂನ್‌ಗೆ ಹೋಗಿದ್ದರು. ಈ ವೇಳೆ ಸುಪಾರಿ ಕೊಟ್ಟು ತನ್ನ ಪತಿ ರಾಜ ರಘುವಂಶಿಯನ್ನು ಕೊಲೆ ಮಾಡಿಸಿದ ಆರೋಪವನ್ನು ಹೊತ್ತಿರುವ ಪತ್ನಿ ಸೋನಮ್ ರಘುವಂಶಿ “ದರೋಡೆಕೋರರು ನನ್ನ ಪತಿಯನ್ನು ಹತ್ಯೆ ಮಾಡಿದರು. ನನ್ನ ಆಭರಣಗಳನ್ನು ದೋಚಲು ದರೋಡೆಕೋರರು ಯತ್ನಿಸಿದ್ದರು” ಎಂದು ಹೇಳಿಕೊಂಡಿದ್ದರು. ಹನಿಮೂನ್ ಕೊಲೆ ಪ್ರಕರಣ ಎಂದೆ ಕರೆಯಲಾಗುತ್ತಿರುವ ಈ ಪ್ರಕರಣವು ಸದ್ಯ ದೇಶದಾದ್ಯಂತ ಸಂಚಲನ ಮೂಡಿಸಿದೆ.

ಮೇ 11ರಂದು ಇವರ ವಿವಾಹವಾಗಿತ್ತು. ತಮ್ಮ ಹನಿಮೂನ್‌ಗಾಗಿ ಮೇಘಾಲಯದ ಶಿಲ್ಲಾಂಗ್‌ಗೆ ಹೋಗಿದ್ದರು. ಬಳಿಕ ಮೇ 23ರಂದು ಇಬ್ಬರೂ ನಾಪತ್ತೆಯಾಗಿದ್ದರು. ಈ ಪೈಕಿ ರಾಜಾ ಅವರ ಮೃತದೇಹವು ಜೂನ್ 2ರಂದು ಪೂರ್ವ ಖಾಸಿ ಬೆಟ್ಟದ ಜಿಲ್ಲೆಯ ಕಮರಿಯಲ್ಲಿ ಪತ್ತೆಯಾಗಿತ್ತು. ಆದರೆ ಸೋನಮ್ ಪತ್ತೆಯಾಗಿರಲಿಲ್ಲ.

ಸೋನಮ್‌ಗಾಗಿ ಹುಡುಕಾಟ ನಡೆಯುತ್ತಿರುವಾಗಲೇ ಸೋಮವಾರ ಉತ್ತರ ಪ್ರದೇಶ ಗಾಜಿಪುರದ ಪೊಲೀಸರ ಮುಂದೆ ಸೋಮವಾರ ಸೋನಮ್ ಶರಣಾಗಿದ್ದರು. ಆಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮೇಘಾಲಯ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಗಳು ಈ ಕೊಲೆಗೆ ಸೋನಮ್ ಅವರೇ ಸುಪಾರಿ ನೀಡಿದ್ದಾರೆ ಎಂದಿದ್ದಾರೆ.

ಹಾಗಾಗಿ ಪೊಲೀಸರು ಸೋನಮ್ ಬಂಧನ ಮಾಡಿದ್ದಾರೆ. ಢಾಬಾ ಒಂದರಲ್ಲಿ ಸಹಾಯ ಕೋರಿ ಸೋನಮ್ ಬಂದಿದ್ದರು. ಬಳಿಕ ಅಲ್ಲಿಂದಲೇ ತಮ್ಮ ಕುಟುಂಬಸ್ಥರಿಗೆ ಕರೆ ಮಾಡಿದ್ದರು ಎನ್ನಲಾಗಿದೆ. “ಸೋನಮ್ ತುಂಬಾ ದುಖಿಃತರಾಗಿದ್ದರು” ಎಂದು ಢಾಬಾ ಮಾಲೀಕ ಸಾಹಿಲ್ ಹೇಳಿದ್ದಾರೆ.

ಮೇಘಾಲಯ ಪೊಲೀಸರು ಸೋನಮ್ ತನ್ನ ಪತಿಯ ಕೊಲೆಗಾಗಿ ಸುಪಾರಿ ನೀಡಿದ್ದರು ಎಂದು ಹೇಳಿದ್ದಾರೆ. ಈ ಸಂಬಂಧ ಸೋನಂ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇತ್ತ ಘಾಜಿಪುರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಸೋನಮ್ ಯಾವುದೇ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ” ಎಂದಿದ್ದಾರೆ.

ಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ ಭಾರತದ ಸಂತಾನೋತ್ಪತ್ತಿ ದರ: ವಿಶ್ವಸಂಸ್ಥೆ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...