Homeಮುಖಪುಟಹನಿಮೂನ್ ಹತ್ಯೆ: ಮೇಘಾಲಯ ಜನರ ಕುರಿತು ಮಾಧ್ಯಮಗಳಿಂದ ಅಪಪ್ರಚಾರ; ಕ್ಷಮೆಗೆ ಒತ್ತಾಯಿಸಿ ರ‍್ಯಾಲಿ

ಹನಿಮೂನ್ ಹತ್ಯೆ: ಮೇಘಾಲಯ ಜನರ ಕುರಿತು ಮಾಧ್ಯಮಗಳಿಂದ ಅಪಪ್ರಚಾರ; ಕ್ಷಮೆಗೆ ಒತ್ತಾಯಿಸಿ ರ‍್ಯಾಲಿ

- Advertisement -
- Advertisement -

ಉದ್ಯಮಿ ಪತ್ನಿ ಮತ್ತು ಇತರ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು

ಗುವಾಹಟಿ: ತಮ್ಮ ಪಟ್ಟಣ ಮತ್ತು ಮೇಘಾಲಯವನ್ನು ಅಪರಾಧ ಚಟುವಟಿಕೆಗಳಿಂದ ತುಂಬಿರುವ ಮತ್ತು ಪ್ರವಾಸಿಗರಿಗೆ ಅಸುರಕ್ಷಿತ ಸ್ಥಳವೆಂದು ಚಿತ್ರಿಸಲಾಗಿರುವುದರಿಂದ ಬೇಸರಗೊಂಡ ಸೊಹ್ರಾ (ಚಿರಾಪುಂಜಿ) ಜನರು ಮಂಗಳವಾರದಂದು ಹನಿಮೂನ್ ಪ್ರವಾಸದ ಸಮಯದಲ್ಲಿ ಕೊಲೆಯಾದ ಇಂದೋರ್‌ನ ಉದ್ಯಮಿ ರಾಜಾ ರಘುವಂಶಿಗೆ ಶ್ರದ್ದಾಂಜಲಿ ಸಲ್ಲಿಸಿದರು ಮತ್ತು ಮೇಣದಬತ್ತಿಯ ಮೆರವಣಿಗೆ ನಡೆಸಿದರು.

ರಾಜಾ ರಘುವಂಶಿ ಮತ್ತು ಅವರ 24 ವರ್ಷದ ಪತ್ನಿ ಸೋನಮ್ ಅವರ ಜೀವಗಳನ್ನು ಸ್ಥಳೀಯರು ಬಲಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಕ್ಕಾಗಿ ಕೆಲವು ಪ್ರಮುಖ ಮಾಧ್ಯಮ ಸಂಸ್ಥೆಗಳು ಮತ್ತು ವ್ಯಕ್ತಿಗಳಿಂದ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಅವರು ರ‍್ಯಾಲಿಯನ್ನು ಸಹ ಆಯೋಜಿಸಿದ್ದರು. ಜೂನ್ 2ರಂದು ಆಳವಾದ ಕಣಿವೆಯಲ್ಲಿ ರಾಜಾ ಅವರ ದೇಹವು ಪತ್ತೆಯಾಗಿದ್ದು “ಕಾಣೆಯಾದ” ದಂಪತಿಯ ಕಥೆಯಲ್ಲಿ ತಿರುವು ನೀಡಿತ್ತು.

ಸೊಹ್ರಾದಲ್ಲಿ ರಕ್ಷಣಾ ಸಿಬ್ಬಂದಿ “ಕಾಣೆಯಾದ” ಇಂದೋರ್ ದಂಪತಿಗಾಗಿ ಹುಡುಕುತ್ತಿದ್ದಾಗ ಮೇಘಾಲಯದ ಜನರನ್ನು ನಿಂದಿಸುತ್ತಿದ್ದ ರಘುವಂಶಿ ಕುಟುಂಬದವರು ಸೇರಿದಂತೆ ಕೆಲವು ದೂರದರ್ಶನ ವಾಹಿನಿಗಳು, ಆನ್‌ಲೈನ್ ವ್ಯಾಖ್ಯಾನಕಾರರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರ ವಿರುದ್ಧ ಇದೀಗ ಸ್ಥಳೀಯರ ಕೋಪಕ್ಕೆ ತುತ್ತಾಗಿದೆ. ರಘವಂಶಿಯ ಶವ ಪತ್ತೆಯಾದ ನಂತರ ತಮ್ಮ ಕುರಿತು ಅಪಪ್ರಚಾರ ನಡೆಸಲಾಗಿತ್ತು ಎಂದು ಮೇಘಾಲಯದ ಜನತೆ ಆರೋಪಿಸಿದ್ದಾರೆ.

ಸೊಹ್ರಾ ಶಾಸಕ ಗವಿನ್ ಮಿಗುಯೆಲ್ ಮೈಲ್ಲಿಯೆಮ್, ಮೇಣದಬತ್ತಿಯ ಮೆರವಣಿಗೆ ಸಮಯದಲ್ಲಿ ಸಮುದಾಯದ ನೋವು ಮತ್ತು ಆಕ್ರೋಶವನ್ನು ವ್ಯಕ್ತಪಡಿಸಿದರು. “ಇದು ನಮ್ಮೆಲ್ಲರನ್ನೂ ತೀವ್ರವಾಗಿ ಬೆಚ್ಚಿಬೀಳಿಸಿದ ದುರಂತ. ರಾಜಾ ನಮ್ಮ ಭೂಮಿಗೆ ಅತಿಥಿಯಾಗಿದ್ದರು. ಸೊಹ್ರಾ ಜನರು ರಾಜಾ ದಂಪತಿಯನ್ನು ಮುಕ್ತ ಹೃದಯದಿಂದ ಸ್ವಾಗತಿಸಿದರು ಮತ್ತು ಅವರಿಗೆ ಏನಾಯಿತೋ ಅದು ಇಲ್ಲಿನ ಜನರ ಕಾರಣಕ್ಕಾಗಿ ನಡೆದಿದ್ದಲ್ಲ” ಎಂದು ಅವರು ಹೇಳಿದರು.

“ಸೊಹ್ರಾ ಮತ್ತು ಅಲ್ಲಿನ ಜನರ ಕುರಿತು ಸುಳ್ಳು ಮತ್ತು ಅವಹೇಳನಕಾರಿ ವಿಷಯವನ್ನು ಹರಡಿದ ರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿರುವ ವ್ಯಕ್ತಿಗಳು ಬೇಷರತ್ತಾದ ಕ್ಷಮೆಯಾಚನೆಯನ್ನು ನಾವು ಒತ್ತಾಯಿಸುತ್ತೇವೆ. ಮುಂದಿನ 24 ಗಂಟೆಗಳಲ್ಲಿ ಯಾವುದೇ ಕ್ಷಮೆಯಾಚನೆಯನ್ನು ನೀಡದಿದ್ದರೆ, ನಾವು ಎಫ್‌ಐಆರ್‌ಗಳನ್ನು ದಾಖಲಿಸಲು ಮತ್ತು ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ” ಎಂದು ಹಿಮಾ ಸೊಹ್ರಾ (ಸಾಂಪ್ರದಾಯಿಕ ಸಂಸ್ಥೆ) ವಕ್ತಾರರು ಹೇಳಿದ್ದಾರೆ.

ಸೋನಮ್ ರಘುವಂಶಿ ಮೇಘಾಲಯದಲ್ಲಿ ರಜೆಯ ಸಮಯದಲ್ಲಿ ತನ್ನ ಪತಿಯ ಕೊಲೆಗೆ ಸಂಚು ರೂಪಿಸಿದ ಆರೋಪ ಹೊರಿಸಲಾಗಿದೆ. ಇಂದೋರ್ ದಂಪತಿಯ ಪ್ರಕರಣದಿಂದ ಪ್ರವಾಸೋದ್ಯಮ ವ್ಯವಹಾರದ ಮೇಲೆ ತಾತ್ಕಾಲಿಕವಾಗಿ ಕೆಟ್ಟ ಪರಿಣಾಮ ಬೀರಿದ ಸೊಹ್ರಾ ಮತ್ತು ಪಕ್ಕದ ಗ್ರಾಮಗಳಲ್ಲಿ ನಡೆದ ಗಂಭೀರ ಘಟನೆಯ ಆರೋಪಿಗಳನ್ನು ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಶಿಲ್ಲಾಂಗ್‌ಗೆ ಬಂಧಿಸಿ ಕರೆ ತರಲಾಗಿದೆ.

ಸೋನಮ್ ರಘುವಂಶಿ ಸೇರಿದಂತೆ ಆರೋಪಿಗಳನ್ನು ಇಂದು (ಬುಧವಾರ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಅಪರಾಧವನ್ನು ಪುನರ್ನಿರ್ಮಿಸಲು ಅವರನ್ನು ಸೊಹ್ರಾಕ್ಕೆ ಕರೆದೊಯ್ಯಲಾಗುವುದು ಎಂದು ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ವಿವೇಕ್ ಸೈಮ್ ಹೇಳಿದರು.

ಮೇಘಾಲಯ ಪೊಲೀಸರು ಇಂದೋರ್ (ಮಧ್ಯಪ್ರದೇಶ) ಮತ್ತು ಲಲಿತಪುರ (ಉತ್ತರಪ್ರದೇಶ)ದಲ್ಲಿ ಸಿಕ್ಕಿಬಿದ್ದ ನಾಲ್ವರು ಆರೋಪಿಗಳನ್ನು ಆರು ದಿನಗಳ ಕಾಲ ವಶಕ್ಕೆ ಪಡೆದರು. ಘಾಜಿಪುರದಲ್ಲಿ ಪೊಲೀಸರಿಗೆ ಶರಣಾದ ಸೋನಮ್ ರಘುವಂಶಿಯ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆಯಲಾಗಿತ್ತು.

ಪ್ರಕರಣದ ಹಿನ್ನೆಲೆ

ಮೇ 23ರಂದು ಮಧ್ಯಪ್ರದೇಶದ ಇಂದೋರ್ ಮೂಲದ ರಾಜಾ ರಘವಂಶಿ ಮತ್ತು ಸೋನಮ್ ರಘುವಂಶಿ  ಹನಿಮೂನ್‌ಗೆ ಹೋಗಿದ್ದರು. ಈ ವೇಳೆ ಸುಪಾರಿ ಕೊಟ್ಟು ತನ್ನ ಪತಿ ರಾಜ ರಘುವಂಶಿಯನ್ನು ಕೊಲೆ ಮಾಡಿಸಿದ ಆರೋಪವನ್ನು ಹೊತ್ತಿರುವ ಪತ್ನಿ ಸೋನಮ್ ರಘುವಂಶಿ “ದರೋಡೆಕೋರರು ನನ್ನ ಪತಿಯನ್ನು ಹತ್ಯೆ ಮಾಡಿದರು. ನನ್ನ ಆಭರಣಗಳನ್ನು ದೋಚಲು ದರೋಡೆಕೋರರು ಯತ್ನಿಸಿದ್ದರು” ಎಂದು ಹೇಳಿಕೊಂಡಿದ್ದರು. ಹನಿಮೂನ್ ಕೊಲೆ ಪ್ರಕರಣ ಎಂದೆ ಕರೆಯಲಾಗುತ್ತಿರುವ ಈ ಪ್ರಕರಣವು ಸದ್ಯ ದೇಶದಾದ್ಯಂತ ಸಂಚಲನ ಮೂಡಿಸಿದೆ.

ಮೇ 11ರಂದು ಇವರ ವಿವಾಹವಾಗಿತ್ತು. ತಮ್ಮ ಹನಿಮೂನ್‌ಗಾಗಿ ಮೇಘಾಲಯದ ಶಿಲ್ಲಾಂಗ್‌ಗೆ ಹೋಗಿದ್ದರು. ಬಳಿಕ ಮೇ 23ರಂದು ಇಬ್ಬರೂ ನಾಪತ್ತೆಯಾಗಿದ್ದರು. ಈ ಪೈಕಿ ರಾಜಾ ಅವರ ಮೃತದೇಹವು ಜೂನ್ 2ರಂದು ಪೂರ್ವ ಖಾಸಿ ಬೆಟ್ಟದ ಜಿಲ್ಲೆಯ ಕಮರಿಯಲ್ಲಿ ಪತ್ತೆಯಾಗಿತ್ತು. ಆದರೆ ಸೋನಮ್ ಪತ್ತೆಯಾಗಿರಲಿಲ್ಲ.

ಸೋನಮ್‌ಗಾಗಿ ಹುಡುಕಾಟ ನಡೆಯುತ್ತಿರುವಾಗಲೇ ಸೋಮವಾರ ಉತ್ತರ ಪ್ರದೇಶ ಗಾಜಿಪುರದ ಪೊಲೀಸರ ಮುಂದೆ ಸೋಮವಾರ ಸೋನಮ್ ಶರಣಾಗಿದ್ದರು. ಆಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮೇಘಾಲಯ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಗಳು ಈ ಕೊಲೆಗೆ ಸೋನಮ್ ಅವರೇ ಸುಪಾರಿ ನೀಡಿದ್ದಾರೆ ಎಂದಿದ್ದಾರೆ.

ಹಾಗಾಗಿ ಪೊಲೀಸರು ಸೋನಮ್ ಬಂಧನ ಮಾಡಿದ್ದಾರೆ. ಢಾಬಾ ಒಂದರಲ್ಲಿ ಸಹಾಯ ಕೋರಿ ಸೋನಮ್ ಬಂದಿದ್ದರು. ಬಳಿಕ ಅಲ್ಲಿಂದಲೇ ತಮ್ಮ ಕುಟುಂಬಸ್ಥರಿಗೆ ಕರೆ ಮಾಡಿದ್ದರು ಎನ್ನಲಾಗಿದೆ. “ಸೋನಮ್ ತುಂಬಾ ದುಖಿಃತರಾಗಿದ್ದರು” ಎಂದು ಢಾಬಾ ಮಾಲೀಕ ಸಾಹಿಲ್ ಹೇಳಿದ್ದಾರೆ.

ಮೇಘಾಲಯ ಪೊಲೀಸರು ಸೋನಮ್ ತನ್ನ ಪತಿಯ ಕೊಲೆಗಾಗಿ ಸುಪಾರಿ ನೀಡಿದ್ದರು ಎಂದು ಹೇಳಿದ್ದಾರೆ. ಈ ಸಂಬಂಧ ಸೋನಂ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇತ್ತ ಘಾಜಿಪುರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಸೋನಮ್ ಯಾವುದೇ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ” ಎಂದಿದ್ದಾರೆ.

ಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ ಭಾರತದ ಸಂತಾನೋತ್ಪತ್ತಿ ದರ: ವಿಶ್ವಸಂಸ್ಥೆ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...