Homeಮುಖಪುಟಹನಿಮೂನ್ ಹತ್ಯೆ: ಮೇಘಾಲಯ ಜನರ ಕುರಿತು ಮಾಧ್ಯಮಗಳಿಂದ ಅಪಪ್ರಚಾರ; ಕ್ಷಮೆಗೆ ಒತ್ತಾಯಿಸಿ ರ‍್ಯಾಲಿ

ಹನಿಮೂನ್ ಹತ್ಯೆ: ಮೇಘಾಲಯ ಜನರ ಕುರಿತು ಮಾಧ್ಯಮಗಳಿಂದ ಅಪಪ್ರಚಾರ; ಕ್ಷಮೆಗೆ ಒತ್ತಾಯಿಸಿ ರ‍್ಯಾಲಿ

- Advertisement -
- Advertisement -

ಉದ್ಯಮಿ ಪತ್ನಿ ಮತ್ತು ಇತರ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು

ಗುವಾಹಟಿ: ತಮ್ಮ ಪಟ್ಟಣ ಮತ್ತು ಮೇಘಾಲಯವನ್ನು ಅಪರಾಧ ಚಟುವಟಿಕೆಗಳಿಂದ ತುಂಬಿರುವ ಮತ್ತು ಪ್ರವಾಸಿಗರಿಗೆ ಅಸುರಕ್ಷಿತ ಸ್ಥಳವೆಂದು ಚಿತ್ರಿಸಲಾಗಿರುವುದರಿಂದ ಬೇಸರಗೊಂಡ ಸೊಹ್ರಾ (ಚಿರಾಪುಂಜಿ) ಜನರು ಮಂಗಳವಾರದಂದು ಹನಿಮೂನ್ ಪ್ರವಾಸದ ಸಮಯದಲ್ಲಿ ಕೊಲೆಯಾದ ಇಂದೋರ್‌ನ ಉದ್ಯಮಿ ರಾಜಾ ರಘುವಂಶಿಗೆ ಶ್ರದ್ದಾಂಜಲಿ ಸಲ್ಲಿಸಿದರು ಮತ್ತು ಮೇಣದಬತ್ತಿಯ ಮೆರವಣಿಗೆ ನಡೆಸಿದರು.

ರಾಜಾ ರಘುವಂಶಿ ಮತ್ತು ಅವರ 24 ವರ್ಷದ ಪತ್ನಿ ಸೋನಮ್ ಅವರ ಜೀವಗಳನ್ನು ಸ್ಥಳೀಯರು ಬಲಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಕ್ಕಾಗಿ ಕೆಲವು ಪ್ರಮುಖ ಮಾಧ್ಯಮ ಸಂಸ್ಥೆಗಳು ಮತ್ತು ವ್ಯಕ್ತಿಗಳಿಂದ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಅವರು ರ‍್ಯಾಲಿಯನ್ನು ಸಹ ಆಯೋಜಿಸಿದ್ದರು. ಜೂನ್ 2ರಂದು ಆಳವಾದ ಕಣಿವೆಯಲ್ಲಿ ರಾಜಾ ಅವರ ದೇಹವು ಪತ್ತೆಯಾಗಿದ್ದು “ಕಾಣೆಯಾದ” ದಂಪತಿಯ ಕಥೆಯಲ್ಲಿ ತಿರುವು ನೀಡಿತ್ತು.

ಸೊಹ್ರಾದಲ್ಲಿ ರಕ್ಷಣಾ ಸಿಬ್ಬಂದಿ “ಕಾಣೆಯಾದ” ಇಂದೋರ್ ದಂಪತಿಗಾಗಿ ಹುಡುಕುತ್ತಿದ್ದಾಗ ಮೇಘಾಲಯದ ಜನರನ್ನು ನಿಂದಿಸುತ್ತಿದ್ದ ರಘುವಂಶಿ ಕುಟುಂಬದವರು ಸೇರಿದಂತೆ ಕೆಲವು ದೂರದರ್ಶನ ವಾಹಿನಿಗಳು, ಆನ್‌ಲೈನ್ ವ್ಯಾಖ್ಯಾನಕಾರರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರ ವಿರುದ್ಧ ಇದೀಗ ಸ್ಥಳೀಯರ ಕೋಪಕ್ಕೆ ತುತ್ತಾಗಿದೆ. ರಘವಂಶಿಯ ಶವ ಪತ್ತೆಯಾದ ನಂತರ ತಮ್ಮ ಕುರಿತು ಅಪಪ್ರಚಾರ ನಡೆಸಲಾಗಿತ್ತು ಎಂದು ಮೇಘಾಲಯದ ಜನತೆ ಆರೋಪಿಸಿದ್ದಾರೆ.

ಸೊಹ್ರಾ ಶಾಸಕ ಗವಿನ್ ಮಿಗುಯೆಲ್ ಮೈಲ್ಲಿಯೆಮ್, ಮೇಣದಬತ್ತಿಯ ಮೆರವಣಿಗೆ ಸಮಯದಲ್ಲಿ ಸಮುದಾಯದ ನೋವು ಮತ್ತು ಆಕ್ರೋಶವನ್ನು ವ್ಯಕ್ತಪಡಿಸಿದರು. “ಇದು ನಮ್ಮೆಲ್ಲರನ್ನೂ ತೀವ್ರವಾಗಿ ಬೆಚ್ಚಿಬೀಳಿಸಿದ ದುರಂತ. ರಾಜಾ ನಮ್ಮ ಭೂಮಿಗೆ ಅತಿಥಿಯಾಗಿದ್ದರು. ಸೊಹ್ರಾ ಜನರು ರಾಜಾ ದಂಪತಿಯನ್ನು ಮುಕ್ತ ಹೃದಯದಿಂದ ಸ್ವಾಗತಿಸಿದರು ಮತ್ತು ಅವರಿಗೆ ಏನಾಯಿತೋ ಅದು ಇಲ್ಲಿನ ಜನರ ಕಾರಣಕ್ಕಾಗಿ ನಡೆದಿದ್ದಲ್ಲ” ಎಂದು ಅವರು ಹೇಳಿದರು.

“ಸೊಹ್ರಾ ಮತ್ತು ಅಲ್ಲಿನ ಜನರ ಕುರಿತು ಸುಳ್ಳು ಮತ್ತು ಅವಹೇಳನಕಾರಿ ವಿಷಯವನ್ನು ಹರಡಿದ ರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿರುವ ವ್ಯಕ್ತಿಗಳು ಬೇಷರತ್ತಾದ ಕ್ಷಮೆಯಾಚನೆಯನ್ನು ನಾವು ಒತ್ತಾಯಿಸುತ್ತೇವೆ. ಮುಂದಿನ 24 ಗಂಟೆಗಳಲ್ಲಿ ಯಾವುದೇ ಕ್ಷಮೆಯಾಚನೆಯನ್ನು ನೀಡದಿದ್ದರೆ, ನಾವು ಎಫ್‌ಐಆರ್‌ಗಳನ್ನು ದಾಖಲಿಸಲು ಮತ್ತು ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ” ಎಂದು ಹಿಮಾ ಸೊಹ್ರಾ (ಸಾಂಪ್ರದಾಯಿಕ ಸಂಸ್ಥೆ) ವಕ್ತಾರರು ಹೇಳಿದ್ದಾರೆ.

ಸೋನಮ್ ರಘುವಂಶಿ ಮೇಘಾಲಯದಲ್ಲಿ ರಜೆಯ ಸಮಯದಲ್ಲಿ ತನ್ನ ಪತಿಯ ಕೊಲೆಗೆ ಸಂಚು ರೂಪಿಸಿದ ಆರೋಪ ಹೊರಿಸಲಾಗಿದೆ. ಇಂದೋರ್ ದಂಪತಿಯ ಪ್ರಕರಣದಿಂದ ಪ್ರವಾಸೋದ್ಯಮ ವ್ಯವಹಾರದ ಮೇಲೆ ತಾತ್ಕಾಲಿಕವಾಗಿ ಕೆಟ್ಟ ಪರಿಣಾಮ ಬೀರಿದ ಸೊಹ್ರಾ ಮತ್ತು ಪಕ್ಕದ ಗ್ರಾಮಗಳಲ್ಲಿ ನಡೆದ ಗಂಭೀರ ಘಟನೆಯ ಆರೋಪಿಗಳನ್ನು ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಶಿಲ್ಲಾಂಗ್‌ಗೆ ಬಂಧಿಸಿ ಕರೆ ತರಲಾಗಿದೆ.

ಸೋನಮ್ ರಘುವಂಶಿ ಸೇರಿದಂತೆ ಆರೋಪಿಗಳನ್ನು ಇಂದು (ಬುಧವಾರ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಅಪರಾಧವನ್ನು ಪುನರ್ನಿರ್ಮಿಸಲು ಅವರನ್ನು ಸೊಹ್ರಾಕ್ಕೆ ಕರೆದೊಯ್ಯಲಾಗುವುದು ಎಂದು ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ವಿವೇಕ್ ಸೈಮ್ ಹೇಳಿದರು.

ಮೇಘಾಲಯ ಪೊಲೀಸರು ಇಂದೋರ್ (ಮಧ್ಯಪ್ರದೇಶ) ಮತ್ತು ಲಲಿತಪುರ (ಉತ್ತರಪ್ರದೇಶ)ದಲ್ಲಿ ಸಿಕ್ಕಿಬಿದ್ದ ನಾಲ್ವರು ಆರೋಪಿಗಳನ್ನು ಆರು ದಿನಗಳ ಕಾಲ ವಶಕ್ಕೆ ಪಡೆದರು. ಘಾಜಿಪುರದಲ್ಲಿ ಪೊಲೀಸರಿಗೆ ಶರಣಾದ ಸೋನಮ್ ರಘುವಂಶಿಯ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆಯಲಾಗಿತ್ತು.

ಪ್ರಕರಣದ ಹಿನ್ನೆಲೆ

ಮೇ 23ರಂದು ಮಧ್ಯಪ್ರದೇಶದ ಇಂದೋರ್ ಮೂಲದ ರಾಜಾ ರಘವಂಶಿ ಮತ್ತು ಸೋನಮ್ ರಘುವಂಶಿ  ಹನಿಮೂನ್‌ಗೆ ಹೋಗಿದ್ದರು. ಈ ವೇಳೆ ಸುಪಾರಿ ಕೊಟ್ಟು ತನ್ನ ಪತಿ ರಾಜ ರಘುವಂಶಿಯನ್ನು ಕೊಲೆ ಮಾಡಿಸಿದ ಆರೋಪವನ್ನು ಹೊತ್ತಿರುವ ಪತ್ನಿ ಸೋನಮ್ ರಘುವಂಶಿ “ದರೋಡೆಕೋರರು ನನ್ನ ಪತಿಯನ್ನು ಹತ್ಯೆ ಮಾಡಿದರು. ನನ್ನ ಆಭರಣಗಳನ್ನು ದೋಚಲು ದರೋಡೆಕೋರರು ಯತ್ನಿಸಿದ್ದರು” ಎಂದು ಹೇಳಿಕೊಂಡಿದ್ದರು. ಹನಿಮೂನ್ ಕೊಲೆ ಪ್ರಕರಣ ಎಂದೆ ಕರೆಯಲಾಗುತ್ತಿರುವ ಈ ಪ್ರಕರಣವು ಸದ್ಯ ದೇಶದಾದ್ಯಂತ ಸಂಚಲನ ಮೂಡಿಸಿದೆ.

ಮೇ 11ರಂದು ಇವರ ವಿವಾಹವಾಗಿತ್ತು. ತಮ್ಮ ಹನಿಮೂನ್‌ಗಾಗಿ ಮೇಘಾಲಯದ ಶಿಲ್ಲಾಂಗ್‌ಗೆ ಹೋಗಿದ್ದರು. ಬಳಿಕ ಮೇ 23ರಂದು ಇಬ್ಬರೂ ನಾಪತ್ತೆಯಾಗಿದ್ದರು. ಈ ಪೈಕಿ ರಾಜಾ ಅವರ ಮೃತದೇಹವು ಜೂನ್ 2ರಂದು ಪೂರ್ವ ಖಾಸಿ ಬೆಟ್ಟದ ಜಿಲ್ಲೆಯ ಕಮರಿಯಲ್ಲಿ ಪತ್ತೆಯಾಗಿತ್ತು. ಆದರೆ ಸೋನಮ್ ಪತ್ತೆಯಾಗಿರಲಿಲ್ಲ.

ಸೋನಮ್‌ಗಾಗಿ ಹುಡುಕಾಟ ನಡೆಯುತ್ತಿರುವಾಗಲೇ ಸೋಮವಾರ ಉತ್ತರ ಪ್ರದೇಶ ಗಾಜಿಪುರದ ಪೊಲೀಸರ ಮುಂದೆ ಸೋಮವಾರ ಸೋನಮ್ ಶರಣಾಗಿದ್ದರು. ಆಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮೇಘಾಲಯ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಗಳು ಈ ಕೊಲೆಗೆ ಸೋನಮ್ ಅವರೇ ಸುಪಾರಿ ನೀಡಿದ್ದಾರೆ ಎಂದಿದ್ದಾರೆ.

ಹಾಗಾಗಿ ಪೊಲೀಸರು ಸೋನಮ್ ಬಂಧನ ಮಾಡಿದ್ದಾರೆ. ಢಾಬಾ ಒಂದರಲ್ಲಿ ಸಹಾಯ ಕೋರಿ ಸೋನಮ್ ಬಂದಿದ್ದರು. ಬಳಿಕ ಅಲ್ಲಿಂದಲೇ ತಮ್ಮ ಕುಟುಂಬಸ್ಥರಿಗೆ ಕರೆ ಮಾಡಿದ್ದರು ಎನ್ನಲಾಗಿದೆ. “ಸೋನಮ್ ತುಂಬಾ ದುಖಿಃತರಾಗಿದ್ದರು” ಎಂದು ಢಾಬಾ ಮಾಲೀಕ ಸಾಹಿಲ್ ಹೇಳಿದ್ದಾರೆ.

ಮೇಘಾಲಯ ಪೊಲೀಸರು ಸೋನಮ್ ತನ್ನ ಪತಿಯ ಕೊಲೆಗಾಗಿ ಸುಪಾರಿ ನೀಡಿದ್ದರು ಎಂದು ಹೇಳಿದ್ದಾರೆ. ಈ ಸಂಬಂಧ ಸೋನಂ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇತ್ತ ಘಾಜಿಪುರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಸೋನಮ್ ಯಾವುದೇ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ” ಎಂದಿದ್ದಾರೆ.

ಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ ಭಾರತದ ಸಂತಾನೋತ್ಪತ್ತಿ ದರ: ವಿಶ್ವಸಂಸ್ಥೆ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...