Homeಮುಖಪುಟಹನಿಮೂನ್ ಹತ್ಯೆ: ಮೇಘಾಲಯ ಜನರ ಕುರಿತು ಮಾಧ್ಯಮಗಳಿಂದ ಅಪಪ್ರಚಾರ; ಕ್ಷಮೆಗೆ ಒತ್ತಾಯಿಸಿ ರ‍್ಯಾಲಿ

ಹನಿಮೂನ್ ಹತ್ಯೆ: ಮೇಘಾಲಯ ಜನರ ಕುರಿತು ಮಾಧ್ಯಮಗಳಿಂದ ಅಪಪ್ರಚಾರ; ಕ್ಷಮೆಗೆ ಒತ್ತಾಯಿಸಿ ರ‍್ಯಾಲಿ

- Advertisement -
- Advertisement -

ಉದ್ಯಮಿ ಪತ್ನಿ ಮತ್ತು ಇತರ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು

ಗುವಾಹಟಿ: ತಮ್ಮ ಪಟ್ಟಣ ಮತ್ತು ಮೇಘಾಲಯವನ್ನು ಅಪರಾಧ ಚಟುವಟಿಕೆಗಳಿಂದ ತುಂಬಿರುವ ಮತ್ತು ಪ್ರವಾಸಿಗರಿಗೆ ಅಸುರಕ್ಷಿತ ಸ್ಥಳವೆಂದು ಚಿತ್ರಿಸಲಾಗಿರುವುದರಿಂದ ಬೇಸರಗೊಂಡ ಸೊಹ್ರಾ (ಚಿರಾಪುಂಜಿ) ಜನರು ಮಂಗಳವಾರದಂದು ಹನಿಮೂನ್ ಪ್ರವಾಸದ ಸಮಯದಲ್ಲಿ ಕೊಲೆಯಾದ ಇಂದೋರ್‌ನ ಉದ್ಯಮಿ ರಾಜಾ ರಘುವಂಶಿಗೆ ಶ್ರದ್ದಾಂಜಲಿ ಸಲ್ಲಿಸಿದರು ಮತ್ತು ಮೇಣದಬತ್ತಿಯ ಮೆರವಣಿಗೆ ನಡೆಸಿದರು.

ರಾಜಾ ರಘುವಂಶಿ ಮತ್ತು ಅವರ 24 ವರ್ಷದ ಪತ್ನಿ ಸೋನಮ್ ಅವರ ಜೀವಗಳನ್ನು ಸ್ಥಳೀಯರು ಬಲಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಕ್ಕಾಗಿ ಕೆಲವು ಪ್ರಮುಖ ಮಾಧ್ಯಮ ಸಂಸ್ಥೆಗಳು ಮತ್ತು ವ್ಯಕ್ತಿಗಳಿಂದ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಅವರು ರ‍್ಯಾಲಿಯನ್ನು ಸಹ ಆಯೋಜಿಸಿದ್ದರು. ಜೂನ್ 2ರಂದು ಆಳವಾದ ಕಣಿವೆಯಲ್ಲಿ ರಾಜಾ ಅವರ ದೇಹವು ಪತ್ತೆಯಾಗಿದ್ದು “ಕಾಣೆಯಾದ” ದಂಪತಿಯ ಕಥೆಯಲ್ಲಿ ತಿರುವು ನೀಡಿತ್ತು.

ಸೊಹ್ರಾದಲ್ಲಿ ರಕ್ಷಣಾ ಸಿಬ್ಬಂದಿ “ಕಾಣೆಯಾದ” ಇಂದೋರ್ ದಂಪತಿಗಾಗಿ ಹುಡುಕುತ್ತಿದ್ದಾಗ ಮೇಘಾಲಯದ ಜನರನ್ನು ನಿಂದಿಸುತ್ತಿದ್ದ ರಘುವಂಶಿ ಕುಟುಂಬದವರು ಸೇರಿದಂತೆ ಕೆಲವು ದೂರದರ್ಶನ ವಾಹಿನಿಗಳು, ಆನ್‌ಲೈನ್ ವ್ಯಾಖ್ಯಾನಕಾರರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರ ವಿರುದ್ಧ ಇದೀಗ ಸ್ಥಳೀಯರ ಕೋಪಕ್ಕೆ ತುತ್ತಾಗಿದೆ. ರಘವಂಶಿಯ ಶವ ಪತ್ತೆಯಾದ ನಂತರ ತಮ್ಮ ಕುರಿತು ಅಪಪ್ರಚಾರ ನಡೆಸಲಾಗಿತ್ತು ಎಂದು ಮೇಘಾಲಯದ ಜನತೆ ಆರೋಪಿಸಿದ್ದಾರೆ.

ಸೊಹ್ರಾ ಶಾಸಕ ಗವಿನ್ ಮಿಗುಯೆಲ್ ಮೈಲ್ಲಿಯೆಮ್, ಮೇಣದಬತ್ತಿಯ ಮೆರವಣಿಗೆ ಸಮಯದಲ್ಲಿ ಸಮುದಾಯದ ನೋವು ಮತ್ತು ಆಕ್ರೋಶವನ್ನು ವ್ಯಕ್ತಪಡಿಸಿದರು. “ಇದು ನಮ್ಮೆಲ್ಲರನ್ನೂ ತೀವ್ರವಾಗಿ ಬೆಚ್ಚಿಬೀಳಿಸಿದ ದುರಂತ. ರಾಜಾ ನಮ್ಮ ಭೂಮಿಗೆ ಅತಿಥಿಯಾಗಿದ್ದರು. ಸೊಹ್ರಾ ಜನರು ರಾಜಾ ದಂಪತಿಯನ್ನು ಮುಕ್ತ ಹೃದಯದಿಂದ ಸ್ವಾಗತಿಸಿದರು ಮತ್ತು ಅವರಿಗೆ ಏನಾಯಿತೋ ಅದು ಇಲ್ಲಿನ ಜನರ ಕಾರಣಕ್ಕಾಗಿ ನಡೆದಿದ್ದಲ್ಲ” ಎಂದು ಅವರು ಹೇಳಿದರು.

“ಸೊಹ್ರಾ ಮತ್ತು ಅಲ್ಲಿನ ಜನರ ಕುರಿತು ಸುಳ್ಳು ಮತ್ತು ಅವಹೇಳನಕಾರಿ ವಿಷಯವನ್ನು ಹರಡಿದ ರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿರುವ ವ್ಯಕ್ತಿಗಳು ಬೇಷರತ್ತಾದ ಕ್ಷಮೆಯಾಚನೆಯನ್ನು ನಾವು ಒತ್ತಾಯಿಸುತ್ತೇವೆ. ಮುಂದಿನ 24 ಗಂಟೆಗಳಲ್ಲಿ ಯಾವುದೇ ಕ್ಷಮೆಯಾಚನೆಯನ್ನು ನೀಡದಿದ್ದರೆ, ನಾವು ಎಫ್‌ಐಆರ್‌ಗಳನ್ನು ದಾಖಲಿಸಲು ಮತ್ತು ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ” ಎಂದು ಹಿಮಾ ಸೊಹ್ರಾ (ಸಾಂಪ್ರದಾಯಿಕ ಸಂಸ್ಥೆ) ವಕ್ತಾರರು ಹೇಳಿದ್ದಾರೆ.

ಸೋನಮ್ ರಘುವಂಶಿ ಮೇಘಾಲಯದಲ್ಲಿ ರಜೆಯ ಸಮಯದಲ್ಲಿ ತನ್ನ ಪತಿಯ ಕೊಲೆಗೆ ಸಂಚು ರೂಪಿಸಿದ ಆರೋಪ ಹೊರಿಸಲಾಗಿದೆ. ಇಂದೋರ್ ದಂಪತಿಯ ಪ್ರಕರಣದಿಂದ ಪ್ರವಾಸೋದ್ಯಮ ವ್ಯವಹಾರದ ಮೇಲೆ ತಾತ್ಕಾಲಿಕವಾಗಿ ಕೆಟ್ಟ ಪರಿಣಾಮ ಬೀರಿದ ಸೊಹ್ರಾ ಮತ್ತು ಪಕ್ಕದ ಗ್ರಾಮಗಳಲ್ಲಿ ನಡೆದ ಗಂಭೀರ ಘಟನೆಯ ಆರೋಪಿಗಳನ್ನು ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಶಿಲ್ಲಾಂಗ್‌ಗೆ ಬಂಧಿಸಿ ಕರೆ ತರಲಾಗಿದೆ.

ಸೋನಮ್ ರಘುವಂಶಿ ಸೇರಿದಂತೆ ಆರೋಪಿಗಳನ್ನು ಇಂದು (ಬುಧವಾರ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಅಪರಾಧವನ್ನು ಪುನರ್ನಿರ್ಮಿಸಲು ಅವರನ್ನು ಸೊಹ್ರಾಕ್ಕೆ ಕರೆದೊಯ್ಯಲಾಗುವುದು ಎಂದು ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ವಿವೇಕ್ ಸೈಮ್ ಹೇಳಿದರು.

ಮೇಘಾಲಯ ಪೊಲೀಸರು ಇಂದೋರ್ (ಮಧ್ಯಪ್ರದೇಶ) ಮತ್ತು ಲಲಿತಪುರ (ಉತ್ತರಪ್ರದೇಶ)ದಲ್ಲಿ ಸಿಕ್ಕಿಬಿದ್ದ ನಾಲ್ವರು ಆರೋಪಿಗಳನ್ನು ಆರು ದಿನಗಳ ಕಾಲ ವಶಕ್ಕೆ ಪಡೆದರು. ಘಾಜಿಪುರದಲ್ಲಿ ಪೊಲೀಸರಿಗೆ ಶರಣಾದ ಸೋನಮ್ ರಘುವಂಶಿಯ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆಯಲಾಗಿತ್ತು.

ಪ್ರಕರಣದ ಹಿನ್ನೆಲೆ

ಮೇ 23ರಂದು ಮಧ್ಯಪ್ರದೇಶದ ಇಂದೋರ್ ಮೂಲದ ರಾಜಾ ರಘವಂಶಿ ಮತ್ತು ಸೋನಮ್ ರಘುವಂಶಿ  ಹನಿಮೂನ್‌ಗೆ ಹೋಗಿದ್ದರು. ಈ ವೇಳೆ ಸುಪಾರಿ ಕೊಟ್ಟು ತನ್ನ ಪತಿ ರಾಜ ರಘುವಂಶಿಯನ್ನು ಕೊಲೆ ಮಾಡಿಸಿದ ಆರೋಪವನ್ನು ಹೊತ್ತಿರುವ ಪತ್ನಿ ಸೋನಮ್ ರಘುವಂಶಿ “ದರೋಡೆಕೋರರು ನನ್ನ ಪತಿಯನ್ನು ಹತ್ಯೆ ಮಾಡಿದರು. ನನ್ನ ಆಭರಣಗಳನ್ನು ದೋಚಲು ದರೋಡೆಕೋರರು ಯತ್ನಿಸಿದ್ದರು” ಎಂದು ಹೇಳಿಕೊಂಡಿದ್ದರು. ಹನಿಮೂನ್ ಕೊಲೆ ಪ್ರಕರಣ ಎಂದೆ ಕರೆಯಲಾಗುತ್ತಿರುವ ಈ ಪ್ರಕರಣವು ಸದ್ಯ ದೇಶದಾದ್ಯಂತ ಸಂಚಲನ ಮೂಡಿಸಿದೆ.

ಮೇ 11ರಂದು ಇವರ ವಿವಾಹವಾಗಿತ್ತು. ತಮ್ಮ ಹನಿಮೂನ್‌ಗಾಗಿ ಮೇಘಾಲಯದ ಶಿಲ್ಲಾಂಗ್‌ಗೆ ಹೋಗಿದ್ದರು. ಬಳಿಕ ಮೇ 23ರಂದು ಇಬ್ಬರೂ ನಾಪತ್ತೆಯಾಗಿದ್ದರು. ಈ ಪೈಕಿ ರಾಜಾ ಅವರ ಮೃತದೇಹವು ಜೂನ್ 2ರಂದು ಪೂರ್ವ ಖಾಸಿ ಬೆಟ್ಟದ ಜಿಲ್ಲೆಯ ಕಮರಿಯಲ್ಲಿ ಪತ್ತೆಯಾಗಿತ್ತು. ಆದರೆ ಸೋನಮ್ ಪತ್ತೆಯಾಗಿರಲಿಲ್ಲ.

ಸೋನಮ್‌ಗಾಗಿ ಹುಡುಕಾಟ ನಡೆಯುತ್ತಿರುವಾಗಲೇ ಸೋಮವಾರ ಉತ್ತರ ಪ್ರದೇಶ ಗಾಜಿಪುರದ ಪೊಲೀಸರ ಮುಂದೆ ಸೋಮವಾರ ಸೋನಮ್ ಶರಣಾಗಿದ್ದರು. ಆಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮೇಘಾಲಯ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಗಳು ಈ ಕೊಲೆಗೆ ಸೋನಮ್ ಅವರೇ ಸುಪಾರಿ ನೀಡಿದ್ದಾರೆ ಎಂದಿದ್ದಾರೆ.

ಹಾಗಾಗಿ ಪೊಲೀಸರು ಸೋನಮ್ ಬಂಧನ ಮಾಡಿದ್ದಾರೆ. ಢಾಬಾ ಒಂದರಲ್ಲಿ ಸಹಾಯ ಕೋರಿ ಸೋನಮ್ ಬಂದಿದ್ದರು. ಬಳಿಕ ಅಲ್ಲಿಂದಲೇ ತಮ್ಮ ಕುಟುಂಬಸ್ಥರಿಗೆ ಕರೆ ಮಾಡಿದ್ದರು ಎನ್ನಲಾಗಿದೆ. “ಸೋನಮ್ ತುಂಬಾ ದುಖಿಃತರಾಗಿದ್ದರು” ಎಂದು ಢಾಬಾ ಮಾಲೀಕ ಸಾಹಿಲ್ ಹೇಳಿದ್ದಾರೆ.

ಮೇಘಾಲಯ ಪೊಲೀಸರು ಸೋನಮ್ ತನ್ನ ಪತಿಯ ಕೊಲೆಗಾಗಿ ಸುಪಾರಿ ನೀಡಿದ್ದರು ಎಂದು ಹೇಳಿದ್ದಾರೆ. ಈ ಸಂಬಂಧ ಸೋನಂ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇತ್ತ ಘಾಜಿಪುರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಸೋನಮ್ ಯಾವುದೇ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ” ಎಂದಿದ್ದಾರೆ.

ಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ ಭಾರತದ ಸಂತಾನೋತ್ಪತ್ತಿ ದರ: ವಿಶ್ವಸಂಸ್ಥೆ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...