Homeಕರ್ನಾಟಕಹನಿಟ್ರ್ಯಾಪ್ ಆರೋಪ | ಸಚಿವ ರಾಜಣ್ಣ ಇನ್ನೂ ದೂರು ದಾಖಲಿಸಿಲ್ಲ ಎಂದ ಗೃಹ ಸಚಿವ ಪರಮೇಶ್ವರ್

ಹನಿಟ್ರ್ಯಾಪ್ ಆರೋಪ | ಸಚಿವ ರಾಜಣ್ಣ ಇನ್ನೂ ದೂರು ದಾಖಲಿಸಿಲ್ಲ ಎಂದ ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವರು ತಮ್ಮ ಮತ್ತು ಇತರ ರಾಜಕಾರಣಿಗಳ ಹನಿಟ್ರ್ಯಾಪ್ ಪ್ರಯತ್ನದ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಇನ್ನೂ ದೂರು ದಾಖಲಿಸಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಮಂಗಳವಾರ ಹೇಳಿದ್ದಾರೆ. ರಾಜ್ಯದ ವಿರೋಧ ಪಕ್ಷದವರು ಸೇರಿದಂತೆ ರಾಜಕೀಯ ನಾಯಕರ ಫೋನ್ ಕದ್ದಾಲಿಕೆಗೆ ಸಂಬಂಧಿಸಿದಂತೆ ನಿರ್ದಿಷ್ಟ ದೂರು ಇದ್ದರೆ, ಅದನ್ನು ತನಿಖೆ ಮಾಡಲಾಗುವುದು ಎಂದು ಅವರು ಇದೆ ವೇಳೆ ಹೇಳಿದ್ದಾರೆ. ಹನಿಟ್ರ್ಯಾಪ್ ಆರೋಪ

“ಮೊದಲು ದೂರು ನೀಡಬೇಕು. ಅದು ಬಂದ ನಂತರ ತನಿಖೆ ನಡೆಸಲಾಗುವುದು. ನೀವು ಎಷ್ಟು ಬಾರಿ ಕೇಳಿದರೂ ಇದು ನನ್ನ ಪ್ರತಿಕ್ರಿಯೆಯಾಗಿರುತ್ತದೆ” ಎಂದು ಪರಮೇಶ್ವರ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ತನಿಖೆಗೆ ನಿರ್ದೇಶನ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತ ಪ್ರಶ್ನೆಗೆ ಅವರು, “ತೀರ್ಪು ಏನು ಎಂದು ನೋಡೋಣ” ಎಂದು ಹೇಳಿದ್ದಾರೆ. ಹನಿಟ್ರ್ಯಾಪ್ ಆರೋಪ

ಶಾಸಕಾಂಗ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಆರು ದಿನಗಳ ನಂತರವೂ, ಹನಿ ಟ್ರ್ಯಾಪ್ ಪ್ರಯತ್ನಕ್ಕೆ ಸಂಬಂಧಿಸಿದಂತೆ ಸಚಿವ ರಾಜಣ್ಣ ಯಾವುದೇ ದೂರು ದಾಖಲಿಸಿಲ್ಲವೆ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಪ್ರಶ್ನೆಯನ್ನು ನೀವು (ರಾಜಣ್ಣ ಅವರನ್ನು) ಕೇಳಬೇಕು. ಆದರೆ, ಅದರ ಬದಲಾಗಿ ನೀವು ನನ್ನನ್ನು ಕೇಳುತ್ತಿದ್ದೀರಿ. ನಾನು ಅವರಿಂದ ದೂರು ದಾಖಲಿಸಲು ಸಾಧ್ಯವೇ? ಅವರು ಸೂಕ್ತವೆನಿಸಿದಾಗಲೆಲ್ಲಾ ದೂರು ದಾಖಲಿಸಬೇಕು, ನಂತರ ಇಲಾಖೆಯ ಕೆಲಸ ಪ್ರಾರಂಭವಾಗುತ್ತದೆ” ಎಂದು ಹೇಳಿದ್ದಾರೆ.

ರಾಜಣ್ಣ ಅಥವಾ ಅವರ ಮೇಲೆ ಯಾವುದಾದರೂ ಒತ್ತಡವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ,”ನನಗೆ ಗೊತ್ತಿಲ್ಲ, ಈ ಬಗ್ಗೆ ಅವರನ್ನೇ ಕೇಳಿ. ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಯಾವುದೇ ಒತ್ತಡವಿಲ್ಲ. ದೂರು ನೀಡಿದ ನಂತರ ತನಿಖೆ ಆರಂಭವಾಗಲಿದೆ….ನಾನು ಈಗಾಗಲೇ ಉನ್ನತ ಮಟ್ಟದ ತನಿಖೆಯನ್ನು ಘೋಷಿಸಿದ್ದೇನೆ. ಮುಖ್ಯಮಂತ್ರಿ ತನಿಖೆಯ ಸ್ವರೂಪ ಮತ್ತು ಮಟ್ಟವನ್ನು ನಿರ್ಧರಿಸುತ್ತಾರೆ, ಆದರೆ ಕ್ರಮಕ್ಕೆ ಕಾರಣದ ಅವಶ್ಯಕತೆಯಿದೆ, ಆದ್ದರಿಂದ ದೂರು ಬರಬೇಕಾಗಿದೆ” ಎಂದು ಹೇಳಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ಮಾತನಾಡಿದ್ದ ರಾಜಣ್ಣ ಅವರು, ತನ್ನ ಮೇಲೆ ಹನಿ ಟ್ರ್ಯಾಪ್ ಪ್ರಯತ್ನಗಳು ನಡೆದಿವೆ ಮತ್ತು ಬೇರೆ ಪಕ್ಷಗಳು ಸೇರಿದಂತೆ ಕನಿಷ್ಠ 48 ರಾಜಕಾರಣಿಗಳು ಇದಕ್ಕೆ ಬಲಿಯಾಗಿದ್ದಾರೆ ಎಂದು ಹೇಳಿದ್ದರು. ಈ ವಿಷಯ ವಿಧಾನಸಭೆಯಲ್ಲಿ ಗದ್ದಲ ಸೃಷ್ಟಿಸಿತ್ತು. ಗೃಹ ಸಚಿವರು ಇದರ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಘೋಷಿಸಿದ್ದರೂ, ಪ್ರತಿಪಕ್ಷಗಳು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿವೆ.

ಫೋನ್ ಟ್ಯಾಪಿಂಗ್ ಆರೋಪಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಪರಮೇಶ್ವರ ಅವರು, ಈ ಸಂಬಂಧ ತಮಗಾಗಲಿ ಅಥವಾ ಯಾವುದೇ ಪೊಲೀಸ್ ಠಾಣೆಗೆ ಯಾರೂ ದೂರು ನೀಡಿಲ್ಲ ಎಂದು ಹೇಳಿದ್ದಾರೆ.

“ವಿಪಕ್ಷ ನಾಯಕ ಆರ್. ಅಶೋಕ್ ಅವರು ಫೋನ್ ಟ್ಯಾಪಿಂಗ್ ಬಗ್ಗೆ ಮಾತನಾಡಿರುವುದನ್ನು ನಾನು ಗಮನಿಸಿದ್ದೇನೆ. ನನಗೆ ಅಂತಹ ಯಾವುದೇ ವಿಷಯದ ಬಗ್ಗೆ ದೂರು ಬಂದಿಲ್ಲ. ಯಾರಾದರೂ ನಿರ್ದಿಷ್ಟ ದೂರು ನೀಡಿದರೆ, ನಾವು ಅದರ ಬಗ್ಗೆ ಕ್ರಮ ತೆಗೆದುಕೊಂಡು ಅದನ್ನು ಪರಿಶೀಲಿಸಲಿದ್ದೇವೆ” ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಸೋಮವಾರ ಮಾತನಾಡಿದ್ದ ವಿಪಕ್ಷ ನಾಯಕ ಅಶೋಕ್ ಅವರು, ಕಾಂಗ್ರೆಸ್ ಸರ್ಕಾರವು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರು ಸೇರಿದಂತೆ ರಾಜ್ಯದ ಪ್ರಮುಖ ನಾಯಕರ ಫೋನ್‌ಗಳನ್ನು “ಟ್ಯಾಪ್” ಮಾಡಿದೆ ಎಂದು ಆರೋಪಿಸಿದ್ದಾರೆ.

“ಭೋಜನ ಕೂಟ”ಗಳಲ್ಲಿ ಭಾಗಿಯಾಗಿರುವ ಕೆಲವು ಸಚಿವರ ಮೇಲೆ ಕಣ್ಣಿಡಲು ಯಾವುದಾದರೂ ಪ್ರಯತ್ನಗಳು ನಡೆದಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್ ಅವರು, ಗುಪ್ತಚರ ಇಲಾಖೆ ಮುಖ್ಯಮಂತ್ರಿಯೊಂದಿಗೆ ಇತ್ತು ಮತ್ತು ಅವರು ಅಂತಹ ವಿಷಯಗಳ ಬಗ್ಗೆ ಕೇಳಿಲ್ಲ ಅಥವಾ ಅಂತಹ ಯಾವುದೇ ಅನುಮಾನಗಳನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಭೋಜನ ಸಭೆಗಳಲ್ಲಿ ಭಾಗಿಯಾಗಿರುವ ಸಚಿವರ ಮೇಲೆ “ಬಾಹ್ಯ ಗುಪ್ತಚರ” ಬೇಹುಗಾರಿಕೆ ನಡೆಸುತ್ತಿದೆ ಎಂಬ ಊಹಾಪೋಹಗಳ ಬಗ್ಗೆ ಉತ್ತರಿಸಿದ ಅವರು, “ಯಾರಾದರೂ ನಿಗಾ ಇಡಲಿ, ಯಾವುದೇ ಸಮಸ್ಯೆ ಇಲ್ಲ” ಎಂದು ಹೇಳಿದ್ದಾರೆ.

“ನಾವು ಅಂತಹ ಸಭೆಗಳನ್ನು ಅಡಗಿಕೊಂಡು ನಡೆಸುತ್ತಿಲ್ಲ. ಆಂತರಿಕ ಮೀಸಲಾತಿ (ಎಸ್‌ಸಿಗಳಲ್ಲಿ) ಕುರಿತು ಚರ್ಚಿಸಲು ನಾವು ಸಚಿವ ಮಹಾದೇವಪ್ಪ ಅವರ ಮನೆಯಲ್ಲಿ ಭೇಟಿಯಾಗಿದ್ದೆವು. ನಿನ್ನೆ ನಾವು ಈ ವಿಷಯದ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದೆವು. ಸಿಎಂ ಜೊತೆಗಿನ ಸಭೆಯ ಸಿದ್ಧತೆಯ ಭಾಗವಾಗಿ, ನಾವೆಲ್ಲರೂ ಮೊದಲೇ (ಮಹದೇವಪ್ಪ ಅವರ ನಿವಾಸದಲ್ಲಿ) ಭೇಟಿಯಾಗಿದ್ದೆವು” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತನ್ನ ವಿರುದ್ಧ ‘ಅವಹೇಳನಕಾರಿ’ ಉಲ್ಲೇಖ ಮಾಡದಂತೆ ಸ್ಪೀಕರ್ ರಕ್ಷಣೆ ಕೋರಿದ ಗುಜರಾತ್‌ನ ಏಕೈಕ ಮುಸ್ಲಿಂ ಶಾಸಕ

ತನ್ನ ವಿರುದ್ಧ ‘ಅವಹೇಳನಕಾರಿ’ ಉಲ್ಲೇಖ ಮಾಡದಂತೆ ಸ್ಪೀಕರ್ ರಕ್ಷಣೆ ಕೋರಿದ ಗುಜರಾತ್‌ನ ಏಕೈಕ ಮುಸ್ಲಿಂ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...