Homeಕರ್ನಾಟಕಹನಿಟ್ರ್ಯಾಪ್ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಪಿಐಎಲ್‌ ವಿಚಾರಣೆ

ಹನಿಟ್ರ್ಯಾಪ್ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಪಿಐಎಲ್‌ ವಿಚಾರಣೆ

- Advertisement -
- Advertisement -

ಕರ್ನಾಟಕ ಸರ್ಕಾರದ ಹಿರಿಯ ಸಚಿವರು ಮತ್ತು ನ್ಯಾಯಾಧೀಶರು ಸೇರಿದಂತೆ ಹಲವರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ಆರೋಪದ ಕುರಿತು ತನಿಖೆಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಬುಧವಾರ (ಮಾ.26) ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಮಾರ್ಚ್ 26 ರಂದು ಬಿನಯ್ ಕುಮಾರ್ ಸಿಂಗ್ ಎಂಬವರು ವಕೀಲ ಬರುಣ್ ಕುಮಾರ್ ಸಿನ್ಹಾ ಮೂಲಕ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲಿದೆ.

“ಕರ್ನಾಟಕದ ಮುಖ್ಯಮಂತ್ರಿಯಾಗಲು ಆಕಾಂಕ್ಷಿಯಾಗಿರುವ ವ್ಯಕ್ತಿಯೊಬ್ಬರು ನ್ಯಾಯಾಧೀಶರು ಸೇರಿದಂತೆ ಹಲವಾರು ವ್ಯಕ್ತಿಗಳನ್ನು ಹನಿಟ್ರ್ಯಾಪ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

“ಈ ಆರೋಪಗಳನ್ನು ಹಾಲಿ ಸಚಿವರೊಬ್ಬರು ಮಾಡಿದ್ದಾರೆ. ಅವರು ತಮ್ಮನ್ನು ಬಲಿಪಶು ಎಂದು ಹೇಳಿಕೊಂಡಿದ್ದಾರೆ. ಇದು ಆರೋಪವನ್ನು ಪುಷ್ಠೀಕರಿಸುತ್ತದೆ. ಅಷ್ಟೇ ಅಲ್ಲ, ಸರ್ಕಾರದ ಮತ್ತೊಬ್ಬರು ಸಚಿವರು ಈ ಆರೋಪಕ್ಕೆ ಧ್ವನಿಗೂಡಿಸಿದ್ದಾರೆ. ಈ ಪ್ರಕರಣವು ಈಗ ಮಾಡಿರುವ ಆರೋಪಕ್ಕಿಂತ ಹತ್ತು ಪಟ್ಟು ದೊಡ್ಡದಿದೆ” ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾಗಿ ವರದಿ ವಿವರಿಸಿದೆ.

“ಹನಿಟ್ರ್ಯಾಪ್‌ನಂತಹ ವಿಧಾನಗಳಿಂದ ನ್ಯಾಯಾಧೀಶರು ರಾಜಿ ಮಾಡಿಕೊಳ್ಳುವುದರಿಂದ ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಗಂಭೀರ ಅಪಾಯ ಎದುರಾಗುತ್ತದೆ ಮತ್ತು ನ್ಯಾಯಾಂಗದ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೆ ಗಂಭೀರ ಹಾನಿಯಾಗುತ್ತದೆ” ಎಂದು ಅರ್ಜಿದಾರರು ಹೇಳಿದ್ದಾರೆ.

“ಹಲವಾರು ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಮಾಧ್ಯಮಗಳಿಂದ, ಈ ಪ್ರಕರಣದ ಸಂಬಂಧ ಜನರಲ್ಲಿ  ಈಗಾಗಲೇ ಸಾಕಷ್ಟು ಆಕ್ರೋಶ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿನ ಖ್ಯಾತಿ ಮತ್ತು ಸಾರ್ವಜನಿಕ ವಿಶ್ವಾಸವನ್ನು ಉಳಿಸಲು ನ್ಯಾಯಾಲಯವು ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸುವುದು ಅತ್ಯಗತ್ಯ” ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಧನ್ಬಾದ್ ನಿವಾಸಿಯಾಗಿರುವ ಅರ್ಜಿದಾರರು ಮಾಧ್ಯಮ ವರದಿಗಳ ಆಧಾರದ ಮೇಲೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿ ಹೇಳಿದೆ. ರಾಜಿ ಮಾಡಿಕೊಂಡ ನ್ಯಾಯಾಂಗವು ಪ್ರಜಾಪ್ರಭುತ್ವಕ್ಕೆ ಗಂಭೀರ ಬೆದರಿಕೆಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ ಎಂದಿದೆ.

“ನ್ಯಾಯಾಧೀಶರನ್ನು ಬ್ಲ್ಯಾಕ್‌ಮೇಲ್ ಮಾಡಲು ಅಥವಾ ಪಕ್ಷಪಾತದ ತೀರ್ಪುಗಳನ್ನು ನೀಡುವಂತೆ ಒತ್ತಾಯಿಸಲು ಸಾಧ್ಯವಾದರೆ, ಕಾನೂನಿನ ನಿಯಮವೇ ಕುಸಿಯುತ್ತದೆ. ಇದು ದಬ್ಬಾಳಿಕೆ, ಭ್ರಷ್ಟಾಚಾರ ಮತ್ತು ಅನ್ಯಾಯಕ್ಕೆ ದಾರಿ ಮಾಡಿಕೊಡುತ್ತದೆ. ನ್ಯಾಯಾಂಗದ ಮೇಲಿನ ಜನರ ನಂಬಿಕೆಯು ಈ ಆರೋಪಗಳಿಗೆ ತ್ವರಿತ ಮತ್ತು ರಾಜಿಯಾಗದ ಕ್ರಮದ ಮೇಲೆ ಅವಲಂಬಿತವಾಗಿದೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

“ಸತ್ಯವನ್ನು ಬಯಲು ಮಾಡಲು ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತಟಸ್ಥ ಮತ್ತು ಸ್ವತಂತ್ರ ಸಂಸ್ಥೆಯ ನೇತೃತ್ವದಲ್ಲಿ ತನಿಖೆ ನಡೆಸುವುದು ಏಕೈಕ ಮಾರ್ಗವಾಗಿದೆ” ಎಂದು ಅರ್ಜಿದಾರರು ಹೇಳಿದ್ದಾರೆ.

ಈ ಪ್ರಕರಣವನ್ನು ಸ್ವತಂತ್ರ ಸಂಸ್ಥೆಯಿಂದ, ಅಂದರೆ ಕೇಂದ್ರ ತನಿಖಾ ದಳ ಅಥವಾ ಕರ್ನಾಟಕ ರಾಜ್ಯದ ನಿಯಂತ್ರಣ ಅಥವಾ ಪ್ರಭಾವಕ್ಕೆ ಒಳಪಡದ ಸಮಗ್ರತೆಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ, ಈ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸುವಂತೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ತನಿಖೆಯನ್ನು ಸುಪ್ರೀಂ ಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ಮೇಲ್ವಿಚಾರಣಾ ಸಮಿತಿಯು ಮೇಲ್ವಿಚಾರಣೆ ಮಾಡಬೇಕು ಎಂದು ಮನವಿ ಮಾಡಲಾಗಿದೆ.

“ಪ್ರಕರಣದಿಂದ (ಹನಿಟ್ರ್ಯಾಪ್‌) ನೇರವಾಗಿ/ಪರೋಕ್ಷವಾಗಿ ಲಾಭ ಪಡೆದ ಎಲ್ಲಾ ಅಧಿಕಾರಿಗಳು/ವ್ಯಕ್ತಿಗಳ ಪಾತ್ರದ ಬಗ್ಗೆಯೂ ಮೇಲ್ವಿಚಾರಣಾ ಸಮಿತಿಯು ತನಿಖೆ ನಡೆಸಬೇಕು” ಎಂದು ಕೋರಲಾಗಿದೆ.

ಕರ್ನಾಟಕ ಸರ್ಕಾರದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ವಿಧಾನಸಭೆಯಲ್ಲಿ ಇತ್ತೀಚೆಗೆ ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದ್ದು, ತಾನು ಮಾತ್ರ ಅಲ್ಲದೆ ವಿವಿಧ ಪಕ್ಷಗಳ 48 ನಾಯಕರನ್ನು ಹನಿಟ್ರ್ಯಾಪ್ ಜಾಲ ಗುರಿಯಾಗಿಸಿಕೊಂಡಿದೆ ಎಂದು ಹೇಳಿಕೊಂಡಿದ್ದರು. ಅದು ಈಗ ರಾಷ್ಟ್ರ ಮಟ್ಟದಲ್ಲಿ ಚರ್ಚಾ ವಿಷಯವಾಗಿ ಮಾರ್ಪಟ್ಟಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಹಕಾರ ಸಚಿವರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ವಿಧಾನಸಭೆಯ ಬಜೆಟ್‌ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ್ದರು. ಅದಕ್ಕೆ ಬಿಜೆಪಿ ಶಾಸಕರಾದ ಸುನಿಲ್ ಕುಮಾರ್ ಮತ್ತು ಮುನಿರತ್ನ ಧ್ವನಿಗೂಡಿಸಿದ್ದರು.

ಈ ಸಂಬಂಧ ಪ್ರತಿಕ್ರಿಯಿಸಿದ್ದ ಸಚಿವ ರಾಜಣ್ಣ ಅವರು, ಹನಿಟ್ರ್ಯಾಪ್ ಯತ್ನ ನಡೆದಿರುವುದನ್ನು ಒಪ್ಪಿಕೊಂಡಿದ್ದರು. ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವ ಭರವಸೆ ನೀಡಿದ್ದಾರೆ.

‘ಸ್ತನ ಹಿಡಿಯುವುದು ಅತ್ಯಾಚಾರವಲ್ಲ’; ವಿವಾದಾತ್ಮಕ ತೀರ್ಪಿನ ಕುರಿತು ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...