Homeಕರ್ನಾಟಕಹನಿಟ್ರ್ಯಾಪ್ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಪಿಐಎಲ್‌ ವಿಚಾರಣೆ

ಹನಿಟ್ರ್ಯಾಪ್ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಪಿಐಎಲ್‌ ವಿಚಾರಣೆ

- Advertisement -
- Advertisement -

ಕರ್ನಾಟಕ ಸರ್ಕಾರದ ಹಿರಿಯ ಸಚಿವರು ಮತ್ತು ನ್ಯಾಯಾಧೀಶರು ಸೇರಿದಂತೆ ಹಲವರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ಆರೋಪದ ಕುರಿತು ತನಿಖೆಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಬುಧವಾರ (ಮಾ.26) ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಮಾರ್ಚ್ 26 ರಂದು ಬಿನಯ್ ಕುಮಾರ್ ಸಿಂಗ್ ಎಂಬವರು ವಕೀಲ ಬರುಣ್ ಕುಮಾರ್ ಸಿನ್ಹಾ ಮೂಲಕ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲಿದೆ.

“ಕರ್ನಾಟಕದ ಮುಖ್ಯಮಂತ್ರಿಯಾಗಲು ಆಕಾಂಕ್ಷಿಯಾಗಿರುವ ವ್ಯಕ್ತಿಯೊಬ್ಬರು ನ್ಯಾಯಾಧೀಶರು ಸೇರಿದಂತೆ ಹಲವಾರು ವ್ಯಕ್ತಿಗಳನ್ನು ಹನಿಟ್ರ್ಯಾಪ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

“ಈ ಆರೋಪಗಳನ್ನು ಹಾಲಿ ಸಚಿವರೊಬ್ಬರು ಮಾಡಿದ್ದಾರೆ. ಅವರು ತಮ್ಮನ್ನು ಬಲಿಪಶು ಎಂದು ಹೇಳಿಕೊಂಡಿದ್ದಾರೆ. ಇದು ಆರೋಪವನ್ನು ಪುಷ್ಠೀಕರಿಸುತ್ತದೆ. ಅಷ್ಟೇ ಅಲ್ಲ, ಸರ್ಕಾರದ ಮತ್ತೊಬ್ಬರು ಸಚಿವರು ಈ ಆರೋಪಕ್ಕೆ ಧ್ವನಿಗೂಡಿಸಿದ್ದಾರೆ. ಈ ಪ್ರಕರಣವು ಈಗ ಮಾಡಿರುವ ಆರೋಪಕ್ಕಿಂತ ಹತ್ತು ಪಟ್ಟು ದೊಡ್ಡದಿದೆ” ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾಗಿ ವರದಿ ವಿವರಿಸಿದೆ.

“ಹನಿಟ್ರ್ಯಾಪ್‌ನಂತಹ ವಿಧಾನಗಳಿಂದ ನ್ಯಾಯಾಧೀಶರು ರಾಜಿ ಮಾಡಿಕೊಳ್ಳುವುದರಿಂದ ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಗಂಭೀರ ಅಪಾಯ ಎದುರಾಗುತ್ತದೆ ಮತ್ತು ನ್ಯಾಯಾಂಗದ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೆ ಗಂಭೀರ ಹಾನಿಯಾಗುತ್ತದೆ” ಎಂದು ಅರ್ಜಿದಾರರು ಹೇಳಿದ್ದಾರೆ.

“ಹಲವಾರು ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಮಾಧ್ಯಮಗಳಿಂದ, ಈ ಪ್ರಕರಣದ ಸಂಬಂಧ ಜನರಲ್ಲಿ  ಈಗಾಗಲೇ ಸಾಕಷ್ಟು ಆಕ್ರೋಶ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿನ ಖ್ಯಾತಿ ಮತ್ತು ಸಾರ್ವಜನಿಕ ವಿಶ್ವಾಸವನ್ನು ಉಳಿಸಲು ನ್ಯಾಯಾಲಯವು ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸುವುದು ಅತ್ಯಗತ್ಯ” ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಧನ್ಬಾದ್ ನಿವಾಸಿಯಾಗಿರುವ ಅರ್ಜಿದಾರರು ಮಾಧ್ಯಮ ವರದಿಗಳ ಆಧಾರದ ಮೇಲೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿ ಹೇಳಿದೆ. ರಾಜಿ ಮಾಡಿಕೊಂಡ ನ್ಯಾಯಾಂಗವು ಪ್ರಜಾಪ್ರಭುತ್ವಕ್ಕೆ ಗಂಭೀರ ಬೆದರಿಕೆಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ ಎಂದಿದೆ.

“ನ್ಯಾಯಾಧೀಶರನ್ನು ಬ್ಲ್ಯಾಕ್‌ಮೇಲ್ ಮಾಡಲು ಅಥವಾ ಪಕ್ಷಪಾತದ ತೀರ್ಪುಗಳನ್ನು ನೀಡುವಂತೆ ಒತ್ತಾಯಿಸಲು ಸಾಧ್ಯವಾದರೆ, ಕಾನೂನಿನ ನಿಯಮವೇ ಕುಸಿಯುತ್ತದೆ. ಇದು ದಬ್ಬಾಳಿಕೆ, ಭ್ರಷ್ಟಾಚಾರ ಮತ್ತು ಅನ್ಯಾಯಕ್ಕೆ ದಾರಿ ಮಾಡಿಕೊಡುತ್ತದೆ. ನ್ಯಾಯಾಂಗದ ಮೇಲಿನ ಜನರ ನಂಬಿಕೆಯು ಈ ಆರೋಪಗಳಿಗೆ ತ್ವರಿತ ಮತ್ತು ರಾಜಿಯಾಗದ ಕ್ರಮದ ಮೇಲೆ ಅವಲಂಬಿತವಾಗಿದೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

“ಸತ್ಯವನ್ನು ಬಯಲು ಮಾಡಲು ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತಟಸ್ಥ ಮತ್ತು ಸ್ವತಂತ್ರ ಸಂಸ್ಥೆಯ ನೇತೃತ್ವದಲ್ಲಿ ತನಿಖೆ ನಡೆಸುವುದು ಏಕೈಕ ಮಾರ್ಗವಾಗಿದೆ” ಎಂದು ಅರ್ಜಿದಾರರು ಹೇಳಿದ್ದಾರೆ.

ಈ ಪ್ರಕರಣವನ್ನು ಸ್ವತಂತ್ರ ಸಂಸ್ಥೆಯಿಂದ, ಅಂದರೆ ಕೇಂದ್ರ ತನಿಖಾ ದಳ ಅಥವಾ ಕರ್ನಾಟಕ ರಾಜ್ಯದ ನಿಯಂತ್ರಣ ಅಥವಾ ಪ್ರಭಾವಕ್ಕೆ ಒಳಪಡದ ಸಮಗ್ರತೆಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ, ಈ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸುವಂತೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ತನಿಖೆಯನ್ನು ಸುಪ್ರೀಂ ಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ಮೇಲ್ವಿಚಾರಣಾ ಸಮಿತಿಯು ಮೇಲ್ವಿಚಾರಣೆ ಮಾಡಬೇಕು ಎಂದು ಮನವಿ ಮಾಡಲಾಗಿದೆ.

“ಪ್ರಕರಣದಿಂದ (ಹನಿಟ್ರ್ಯಾಪ್‌) ನೇರವಾಗಿ/ಪರೋಕ್ಷವಾಗಿ ಲಾಭ ಪಡೆದ ಎಲ್ಲಾ ಅಧಿಕಾರಿಗಳು/ವ್ಯಕ್ತಿಗಳ ಪಾತ್ರದ ಬಗ್ಗೆಯೂ ಮೇಲ್ವಿಚಾರಣಾ ಸಮಿತಿಯು ತನಿಖೆ ನಡೆಸಬೇಕು” ಎಂದು ಕೋರಲಾಗಿದೆ.

ಕರ್ನಾಟಕ ಸರ್ಕಾರದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ವಿಧಾನಸಭೆಯಲ್ಲಿ ಇತ್ತೀಚೆಗೆ ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದ್ದು, ತಾನು ಮಾತ್ರ ಅಲ್ಲದೆ ವಿವಿಧ ಪಕ್ಷಗಳ 48 ನಾಯಕರನ್ನು ಹನಿಟ್ರ್ಯಾಪ್ ಜಾಲ ಗುರಿಯಾಗಿಸಿಕೊಂಡಿದೆ ಎಂದು ಹೇಳಿಕೊಂಡಿದ್ದರು. ಅದು ಈಗ ರಾಷ್ಟ್ರ ಮಟ್ಟದಲ್ಲಿ ಚರ್ಚಾ ವಿಷಯವಾಗಿ ಮಾರ್ಪಟ್ಟಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಹಕಾರ ಸಚಿವರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ವಿಧಾನಸಭೆಯ ಬಜೆಟ್‌ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ್ದರು. ಅದಕ್ಕೆ ಬಿಜೆಪಿ ಶಾಸಕರಾದ ಸುನಿಲ್ ಕುಮಾರ್ ಮತ್ತು ಮುನಿರತ್ನ ಧ್ವನಿಗೂಡಿಸಿದ್ದರು.

ಈ ಸಂಬಂಧ ಪ್ರತಿಕ್ರಿಯಿಸಿದ್ದ ಸಚಿವ ರಾಜಣ್ಣ ಅವರು, ಹನಿಟ್ರ್ಯಾಪ್ ಯತ್ನ ನಡೆದಿರುವುದನ್ನು ಒಪ್ಪಿಕೊಂಡಿದ್ದರು. ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವ ಭರವಸೆ ನೀಡಿದ್ದಾರೆ.

‘ಸ್ತನ ಹಿಡಿಯುವುದು ಅತ್ಯಾಚಾರವಲ್ಲ’; ವಿವಾದಾತ್ಮಕ ತೀರ್ಪಿನ ಕುರಿತು ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...